AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬರೆದಿಟ್ಕೊಳ್ಳಿ…RCB ಟಾಪ್-3 ಗೂ ಬರಲ್ಲ ಎಂದ ಮಾಜಿ ಆಟಗಾರ

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Edited By: |

Updated on:Mar 26, 2023 | 11:22 PM

Share
ಚುಟುಕು ಕ್ರಿಕೆಟ್ ಕದನ ಐಪಿಎಲ್ ಸೀಸನ್ 16 ರಂಗೇರಲು ಇನ್ನು ದಿನಗಳು ಮಾತ್ರ ಉಳಿದಿವೆ. ಇತ್ತ ಆರ್​ಸಿಬಿ ಅಭಿಮಾನಿಗಳು ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಇದರ ನಡುವೆ ಈ ಬಾರಿಯ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವವರು ಯಾರು ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಯ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ನೀಡಿರುವ ಹೇಳಿಕೆಯು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಚುಟುಕು ಕ್ರಿಕೆಟ್ ಕದನ ಐಪಿಎಲ್ ಸೀಸನ್ 16 ರಂಗೇರಲು ಇನ್ನು ದಿನಗಳು ಮಾತ್ರ ಉಳಿದಿವೆ. ಇತ್ತ ಆರ್​ಸಿಬಿ ಅಭಿಮಾನಿಗಳು ಈ ಸಲ ಕಪ್ ನಮ್ದೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಇದರ ನಡುವೆ ಈ ಬಾರಿಯ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವವರು ಯಾರು ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಯ ನಡುವೆ ಟೀಮ್ ಇಂಡಿಯಾದ ಮಾಜಿ ಆಟಗಾರ ನೀಡಿರುವ ಹೇಳಿಕೆಯು ಇದೀಗ ಚರ್ಚೆಗೆ ಗ್ರಾಸವಾಗಿದೆ.

1 / 7
ಹೌದು, ಭಾರತ ತಂಡದ ಮಾಜಿ ಆಟಗಾರ, ವೀಕ್ಷಕ ವಿವರಣೆಗಾರ ಆಕಾಶ್ ಚೋಪ್ರಾ ಆರ್​ಸಿಬಿ ತಂಡದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಆದರೆ ಅದು ಕಪ್ ಗೆಲ್ಲುತ್ತೆ ಎಂದಲ್ಲ, ಬದಲಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಪ್-3 ಗೂ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

ಹೌದು, ಭಾರತ ತಂಡದ ಮಾಜಿ ಆಟಗಾರ, ವೀಕ್ಷಕ ವಿವರಣೆಗಾರ ಆಕಾಶ್ ಚೋಪ್ರಾ ಆರ್​ಸಿಬಿ ತಂಡದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಆದರೆ ಅದು ಕಪ್ ಗೆಲ್ಲುತ್ತೆ ಎಂದಲ್ಲ, ಬದಲಾಗಿ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಪ್-3 ಗೂ ಪ್ರವೇಶಿಸುವುದಿಲ್ಲ ಎಂದಿದ್ದಾರೆ.

2 / 7
ಆರ್​ಸಿಬಿ ಉತ್ತಮ ತಂಡವನ್ನೇ ಹೊಂದಿದೆ. ಆದರೆ ಹೋಮ್​ ಗ್ರೌಂಡ್​ನಲ್ಲಿ ಆಡವುದು ಆರ್​ಸಿಬಿಗೆ ಸಮಸ್ಯೆಯನ್ನು ಉಂಟು ಮಾಡಲಿದೆ. ಇದುವೇ ತಂಡಕ್ಕೆ ವಿಭಿನ್ನ ರೀತಿಯ ಸವಾಲಾಗಿರುತ್ತದೆ. ಹೀಗಾಗಿ ಈ ಬಾರಿ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ 4 ರಿಂದ 6 ರ ನಡುವೆ ಸ್ಥಾನ ಪಡೆದು ಟೂರ್ನಿಯನ್ನು ಅಂತ್ಯಗೊಳಿಸಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಆರ್​ಸಿಬಿ ಉತ್ತಮ ತಂಡವನ್ನೇ ಹೊಂದಿದೆ. ಆದರೆ ಹೋಮ್​ ಗ್ರೌಂಡ್​ನಲ್ಲಿ ಆಡವುದು ಆರ್​ಸಿಬಿಗೆ ಸಮಸ್ಯೆಯನ್ನು ಉಂಟು ಮಾಡಲಿದೆ. ಇದುವೇ ತಂಡಕ್ಕೆ ವಿಭಿನ್ನ ರೀತಿಯ ಸವಾಲಾಗಿರುತ್ತದೆ. ಹೀಗಾಗಿ ಈ ಬಾರಿ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ 4 ರಿಂದ 6 ರ ನಡುವೆ ಸ್ಥಾನ ಪಡೆದು ಟೂರ್ನಿಯನ್ನು ಅಂತ್ಯಗೊಳಿಸಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

3 / 7
ಇನ್ನು ಆರ್​ಸಿಬಿ ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡಿದ ಆಕಾಶ್ ಚೋಪ್ರಾ, ಜೋಶ್ ಹ್ಯಾಝಲ್‌ವುಡ್ ಐಪಿಎಲ್‌ನಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎಂಬುದರ ಬಗ್ಗೆ ಖಚಿತತೆ ಇಲ್ಲ. ಇದೊಂದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಹ್ಯಾಝಲ್​ವುಡ್ ಇಲ್ಲದಿದ್ದರೆ ಆರ್​ಸಿಬಿ ಬೌಲಿಂಗ್ ವಿಭಾಗವು ಅತ್ಯಂತ ದುರ್ಬಲವಾಗಲಿದೆ ಎಂದು ಚೋಪ್ರಾ ಹೇಳಲಿದ್ದಾರೆ.

ಇನ್ನು ಆರ್​ಸಿಬಿ ಬೌಲಿಂಗ್ ವಿಭಾಗದ ಬಗ್ಗೆ ಮಾತನಾಡಿದ ಆಕಾಶ್ ಚೋಪ್ರಾ, ಜೋಶ್ ಹ್ಯಾಝಲ್‌ವುಡ್ ಐಪಿಎಲ್‌ನಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎಂಬುದರ ಬಗ್ಗೆ ಖಚಿತತೆ ಇಲ್ಲ. ಇದೊಂದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಹ್ಯಾಝಲ್​ವುಡ್ ಇಲ್ಲದಿದ್ದರೆ ಆರ್​ಸಿಬಿ ಬೌಲಿಂಗ್ ವಿಭಾಗವು ಅತ್ಯಂತ ದುರ್ಬಲವಾಗಲಿದೆ ಎಂದು ಚೋಪ್ರಾ ಹೇಳಲಿದ್ದಾರೆ.

4 / 7
ಒಟ್ಟಿನಲ್ಲಿ ಆಕಾಶ್ ಚೋಪ್ರಾ ಅವರ ಈ ಹೇಳಿಕೆ ವಿರುದ್ಧ ಇದೀಗ ಆರ್​ಸಿಬಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದ್ದು, ಈ ಸಲ ಕಪ್ ನಮ್ದೆ ನೋಡ್ತಾಯಿರಿ ಎಂದು ಪ್ರತಿಕ್ರಿಯಿಸಿದ್ದಾರೆ.

ಒಟ್ಟಿನಲ್ಲಿ ಆಕಾಶ್ ಚೋಪ್ರಾ ಅವರ ಈ ಹೇಳಿಕೆ ವಿರುದ್ಧ ಇದೀಗ ಆರ್​ಸಿಬಿ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದ್ದು, ಈ ಸಲ ಕಪ್ ನಮ್ದೆ ನೋಡ್ತಾಯಿರಿ ಎಂದು ಪ್ರತಿಕ್ರಿಯಿಸಿದ್ದಾರೆ.

5 / 7
ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ತನ್ನ ಮೊದಲ ಪಂದ್ಯವನ್ನು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್.

7 / 7

Published On - 12:10 am, Fri, 24 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ