AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬ್ಯಾಟರ್​ ಬದಲಿಗೆ ಬೌಲರ್: RCB ತಂಡದ ಮಾಸ್ಟರ್ ಪ್ಲ್ಯಾನ್

IPL 2023 RCB vs LSG: ಏಪ್ರಿಲ್ 10 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 09, 2023 | 7:23 PM

IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡಿದ್ದ ಆರ್​ಸಿಬಿ (RCB) ತಂಡವು 2ನೇ ಪಂದ್ಯದಲ್ಲಿ ಕೆಕೆಆರ್ (KKR) ವಿರುದ್ಧ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲೂ 2 ಮಹತ್ವದ ಬದಲಾವಣೆಗಳಾಗಿವೆ.

IPL 2023: ಐಪಿಎಲ್​ನ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗು ಬಡಿದು ಶುಭಾರಂಭ ಮಾಡಿದ್ದ ಆರ್​ಸಿಬಿ (RCB) ತಂಡವು 2ನೇ ಪಂದ್ಯದಲ್ಲಿ ಕೆಕೆಆರ್ (KKR) ವಿರುದ್ಧ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲೂ 2 ಮಹತ್ವದ ಬದಲಾವಣೆಗಳಾಗಿವೆ.

1 / 11
ತಂಡದಲ್ಲಿದ್ದ ಪ್ರಮುಖ ವೇಗಿ ರೀಸ್ ಟೋಪ್ಲಿ ಗಾಯಗೊಂಡು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿ ಬದಲಿ ಆಟಗಾರನಾಗಿ ಸೌತ್ ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

ತಂಡದಲ್ಲಿದ್ದ ಪ್ರಮುಖ ವೇಗಿ ರೀಸ್ ಟೋಪ್ಲಿ ಗಾಯಗೊಂಡು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿ ಬದಲಿ ಆಟಗಾರನಾಗಿ ಸೌತ್ ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

2 / 11
ಹಾಗೆಯೇ ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್​ ರಜತ್ ಪಾಟಿದಾರ್ ಕೂಡ ಟೂರ್ನಿಯಿಂದ ಹೊರಗುಳಿದಿದ್ದಾರೆ. ಆದರೆ ಇಲ್ಲಿ ಆರ್​ಸಿಬಿ ಮತ್ತೋರ್ವ ಬ್ಯಾಟರ್​ನನ್ನು ಆಯ್ಕೆ ಮಾಡುವ ಬದಲು ಬೌಲರ್​ನನ್ನು ಆಯ್ಕೆ ಮಾಡಿರುವುದು ವಿಶೇಷ.

ಹಾಗೆಯೇ ಪಾದದ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್​ ರಜತ್ ಪಾಟಿದಾರ್ ಕೂಡ ಟೂರ್ನಿಯಿಂದ ಹೊರಗುಳಿದಿದ್ದಾರೆ. ಆದರೆ ಇಲ್ಲಿ ಆರ್​ಸಿಬಿ ಮತ್ತೋರ್ವ ಬ್ಯಾಟರ್​ನನ್ನು ಆಯ್ಕೆ ಮಾಡುವ ಬದಲು ಬೌಲರ್​ನನ್ನು ಆಯ್ಕೆ ಮಾಡಿರುವುದು ವಿಶೇಷ.

3 / 11
ಅಂದರೆ ರಜತ್ ಪಾಟಿದಾರ್ ಬದಲಿಗೆ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿರುವುದು ಕರ್ನಾಟಕದ ವೇಗಿ ವೈಶಾಖ್ ವಿಜಯಕುಮಾರ್. ಆರ್​ಸಿಬಿ ಇಂತಹದೊಂದು ಮಹತ್ವದ ಬದಲಾವಣೆ ಮಾಡಿಕೊಳ್ಳಲು ಮುಖ್ಯ ಕಾರಣ ಪ್ರಸ್ತುತ ತಂಡದ ಬೌಲಿಂಗ್ ಲೈನಪ್.

ಅಂದರೆ ರಜತ್ ಪಾಟಿದಾರ್ ಬದಲಿಗೆ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿರುವುದು ಕರ್ನಾಟಕದ ವೇಗಿ ವೈಶಾಖ್ ವಿಜಯಕುಮಾರ್. ಆರ್​ಸಿಬಿ ಇಂತಹದೊಂದು ಮಹತ್ವದ ಬದಲಾವಣೆ ಮಾಡಿಕೊಳ್ಳಲು ಮುಖ್ಯ ಕಾರಣ ಪ್ರಸ್ತುತ ತಂಡದ ಬೌಲಿಂಗ್ ಲೈನಪ್.

4 / 11
ಆರ್​ಸಿಬಿ ತಂಡವು ಮೊದಲ ಪಂದ್ಯದಲ್ಲಿ ಜಯ ಸಾಧಿಸಿದರೂ ಬೌಲರ್​ಗಳಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಕ್ಕೆ ಸಾಕ್ಷಿಯೇ 48 ರನ್​ಗೆ 4 ವಿಕೆಟ್ ಕಳೆದುಕೊಂಡ ಮುಂಬೈ ಇಂಡಿಯನ್ಸ್ ಆ ಬಳಿಕ 7 ವಿಕೆಟ್ ನಷ್ಟಕ್ಕೆ 171 ರನ್​ ಪೇರಿಸಿರುವುದು.

ಆರ್​ಸಿಬಿ ತಂಡವು ಮೊದಲ ಪಂದ್ಯದಲ್ಲಿ ಜಯ ಸಾಧಿಸಿದರೂ ಬೌಲರ್​ಗಳಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಕ್ಕೆ ಸಾಕ್ಷಿಯೇ 48 ರನ್​ಗೆ 4 ವಿಕೆಟ್ ಕಳೆದುಕೊಂಡ ಮುಂಬೈ ಇಂಡಿಯನ್ಸ್ ಆ ಬಳಿಕ 7 ವಿಕೆಟ್ ನಷ್ಟಕ್ಕೆ 171 ರನ್​ ಪೇರಿಸಿರುವುದು.

5 / 11
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲೂ ಇದೇ ಕಥೆ. 47 ರನ್​ಗೆ 3 ವಿಕೆಟ್​ ಕಬಳಿಸಿದ ಆರ್​ಸಿಬಿ ಬೌಲರ್​ಗಳು ಆ ಬಳಿಕ ದುಬಾರಿಯಾದರು. ಪರಿಣಾಮ ಕೆಕೆಆರ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತು. ಇದೀಗ ತಂಡದ ಬೌಲಿಂಗ್ ಲೈನಪ್​ ಆರ್​ಸಿಬಿಯ ಚಿಂತೆಯನ್ನು ಹೆಚ್ಚಿಸಿದೆ.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲೂ ಇದೇ ಕಥೆ. 47 ರನ್​ಗೆ 3 ವಿಕೆಟ್​ ಕಬಳಿಸಿದ ಆರ್​ಸಿಬಿ ಬೌಲರ್​ಗಳು ಆ ಬಳಿಕ ದುಬಾರಿಯಾದರು. ಪರಿಣಾಮ ಕೆಕೆಆರ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತು. ಇದೀಗ ತಂಡದ ಬೌಲಿಂಗ್ ಲೈನಪ್​ ಆರ್​ಸಿಬಿಯ ಚಿಂತೆಯನ್ನು ಹೆಚ್ಚಿಸಿದೆ.

6 / 11
ಅದರಲ್ಲೂ ಆಕಾಶ್ ದೀಪ್ ಹಾಗೂ ಹರ್ಷಲ್ ಪಟೇಲ್ ಮೊನಚಿಲ್ಲದ ದಾಳಿ ಸಂಘಟಿಸುತ್ತಿದ್ದಾರೆ. ಇನ್ನು ಮೊದಲ ಪಂದ್ಯದಲ್ಲಿ ಮಿಂಚಿದ ಮೊಹಮ್ಮದ್ ಸಿರಾಜ್ 2ನೇ ಪಂದ್ಯದಲ್ಲಿ ದುಬಾರಿಯಾಗಿದ್ದರು. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿಯು ರಜತ್ ಪಾಟಿದಾರ್ ಬದಲಿಗೆ ಕರ್ನಾಟಕದ ವೇಗಿಯನ್ನು ಆಯ್ಕೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

ಅದರಲ್ಲೂ ಆಕಾಶ್ ದೀಪ್ ಹಾಗೂ ಹರ್ಷಲ್ ಪಟೇಲ್ ಮೊನಚಿಲ್ಲದ ದಾಳಿ ಸಂಘಟಿಸುತ್ತಿದ್ದಾರೆ. ಇನ್ನು ಮೊದಲ ಪಂದ್ಯದಲ್ಲಿ ಮಿಂಚಿದ ಮೊಹಮ್ಮದ್ ಸಿರಾಜ್ 2ನೇ ಪಂದ್ಯದಲ್ಲಿ ದುಬಾರಿಯಾಗಿದ್ದರು. ಹೀಗಾಗಿಯೇ ಆರ್​ಸಿಬಿ ಫ್ರಾಂಚೈಸಿಯು ರಜತ್ ಪಾಟಿದಾರ್ ಬದಲಿಗೆ ಕರ್ನಾಟಕದ ವೇಗಿಯನ್ನು ಆಯ್ಕೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

7 / 11
ಇದಕ್ಕೆ ಮುಖ್ಯ ಕಾರಣ ಆರ್​ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ನೂ 6 ಪಂದ್ಯಗಳನ್ನಾಡಬೇಕಿದೆ. ಇದೇ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಹರ್ಷಲ್ ಪಟೇಲ್ ಹಾಗೂ ಆಕಾಶ್ ದೀಪ್ ಹೆಚ್ಚಿನ ರನ್​ ಬಿಟ್ಟುಕೊಟ್ಟಿದ್ದರು. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಕನ್ನಡಿಗನನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ.

ಇದಕ್ಕೆ ಮುಖ್ಯ ಕಾರಣ ಆರ್​ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇನ್ನೂ 6 ಪಂದ್ಯಗಳನ್ನಾಡಬೇಕಿದೆ. ಇದೇ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಹರ್ಷಲ್ ಪಟೇಲ್ ಹಾಗೂ ಆಕಾಶ್ ದೀಪ್ ಹೆಚ್ಚಿನ ರನ್​ ಬಿಟ್ಟುಕೊಟ್ಟಿದ್ದರು. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಕನ್ನಡಿಗನನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ.

8 / 11
ಅಂದರೆ ಇಲ್ಲಿ ವೈಶಾಖ್ ವಿಜಯಕುಮಾರ್​ ಅವರಿಗೆ ಚಿನ್ನಸ್ವಾಮಿ ಸ್ಟೇಡಿಯಂ ತವರು ಮೈದಾನ. ಇಲ್ಲೇ ಕ್ರಿಕೆಟ್ ಕೆರಿಯರ್ ಆರಂಭಿಸಿರುವ ಕನ್ನಡಿಗನಿಗೆ ಬೆಂಗಳೂರು ಪಿಚ್​ನ ಸ್ಥಿತಿಗತಿಗಳ ಬಗ್ಗೆ ಹೆಚ್ಚಿನ ಅರಿವಿದೆ. ಹೀಗಾಗಿ ರಜತ್ ಪಾಟಿದಾರ್ ಬದಲಿಗೆ ಬ್ಯಾಟರ್​ನನ್ನು ಆಯ್ಕೆ ಮಾಡುವ ಬದಲು ಆರ್​ಸಿಬಿ ಫ್ರಾಂಚೈಸಿ ಕರ್ನಾಟಕದ ಬೌಲರ್​ಗೆ ಮಣೆ ಹಾಕಿದೆ.

ಅಂದರೆ ಇಲ್ಲಿ ವೈಶಾಖ್ ವಿಜಯಕುಮಾರ್​ ಅವರಿಗೆ ಚಿನ್ನಸ್ವಾಮಿ ಸ್ಟೇಡಿಯಂ ತವರು ಮೈದಾನ. ಇಲ್ಲೇ ಕ್ರಿಕೆಟ್ ಕೆರಿಯರ್ ಆರಂಭಿಸಿರುವ ಕನ್ನಡಿಗನಿಗೆ ಬೆಂಗಳೂರು ಪಿಚ್​ನ ಸ್ಥಿತಿಗತಿಗಳ ಬಗ್ಗೆ ಹೆಚ್ಚಿನ ಅರಿವಿದೆ. ಹೀಗಾಗಿ ರಜತ್ ಪಾಟಿದಾರ್ ಬದಲಿಗೆ ಬ್ಯಾಟರ್​ನನ್ನು ಆಯ್ಕೆ ಮಾಡುವ ಬದಲು ಆರ್​ಸಿಬಿ ಫ್ರಾಂಚೈಸಿ ಕರ್ನಾಟಕದ ಬೌಲರ್​ಗೆ ಮಣೆ ಹಾಕಿದೆ.

9 / 11
ಹೀಗಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಮುಂಬರುವ ಪಂದ್ಯಗಳಲ್ಲಿ ಆಕಾಶ್​ ದೀಪ್ ಬದಲಿಗೆ ವೈಶಾಖ್ ವಿಜಯಕುಮಾರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಈ ಮೂಲಕ ಚಿನ್ನಸ್ವಾಮಿ ಪಿಚ್​ನಲ್ಲಿ ಕನ್ನಡಿಗನ ವೇಗದ ಅಸ್ತ್ರವನ್ನು ಬಳಸಿ ಜಯ ಸಾಧಿಸಲು ಆರ್​ಸಿಬಿ ತಂಡ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಪ್ಲ್ಯಾನ್ ವರ್ಕ್ ಆಗಲಿದೆಯಾ ಎಂಬುದು ಮುಂದಿನ ಪಂದ್ಯಗಳಲ್ಲಿ ಗೊತ್ತಾಗಲಿದೆ.

ಹೀಗಾಗಿ ಬೆಂಗಳೂರಿನಲ್ಲಿ ನಡೆಯಲಿರುವ ಮುಂಬರುವ ಪಂದ್ಯಗಳಲ್ಲಿ ಆಕಾಶ್​ ದೀಪ್ ಬದಲಿಗೆ ವೈಶಾಖ್ ವಿಜಯಕುಮಾರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಈ ಮೂಲಕ ಚಿನ್ನಸ್ವಾಮಿ ಪಿಚ್​ನಲ್ಲಿ ಕನ್ನಡಿಗನ ವೇಗದ ಅಸ್ತ್ರವನ್ನು ಬಳಸಿ ಜಯ ಸಾಧಿಸಲು ಆರ್​ಸಿಬಿ ತಂಡ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಈ ಪ್ಲ್ಯಾನ್ ವರ್ಕ್ ಆಗಲಿದೆಯಾ ಎಂಬುದು ಮುಂದಿನ ಪಂದ್ಯಗಳಲ್ಲಿ ಗೊತ್ತಾಗಲಿದೆ.

10 / 11
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವಿಜಯಕುಮಾರ್ ವೈಶಾಖ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವಿಜಯಕುಮಾರ್ ವೈಶಾಖ್.

11 / 11
Follow us
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ