AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಾಮೆಂಟ್ರಿ ಮಾಡ್ತಿದ್ದ ಕೇದಾರ್ ಜಾಧವ್​ನ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ RCB..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ.

TV9 Web
| Updated By: ಝಾಹಿರ್ ಯೂಸುಫ್|

Updated on: May 01, 2023 | 11:43 PM

Share
IPL 2023: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವು 8 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿ, 4 ರಲ್ಲಿ ಸೋಲನುಭವಿಸಿದೆ. ಈ ನಾಲ್ಕು ಪಂದ್ಯಗಳ ಸೋಲಿಗೆ ಬಹುಮುಖ್ಯ ಕಾರಣ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ. ಈ ವೈಫಲ್ಯವನ್ನು ಸರಿದೂಗಿಸುವ ಉತ್ತಮ ಅವಕಾಶ ಲಭಿಸಿದರೂ ಆರ್​ಸಿಬಿ ತಂಡವು 38 ವರ್ಷದ ಆಟಗಾರನನ್ನು ಖರೀದಿಸಿ ಅಚ್ಚರಿ ಮೂಡಿಸಿದೆ.

IPL 2023: ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವು 8 ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿ, 4 ರಲ್ಲಿ ಸೋಲನುಭವಿಸಿದೆ. ಈ ನಾಲ್ಕು ಪಂದ್ಯಗಳ ಸೋಲಿಗೆ ಬಹುಮುಖ್ಯ ಕಾರಣ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ. ಈ ವೈಫಲ್ಯವನ್ನು ಸರಿದೂಗಿಸುವ ಉತ್ತಮ ಅವಕಾಶ ಲಭಿಸಿದರೂ ಆರ್​ಸಿಬಿ ತಂಡವು 38 ವರ್ಷದ ಆಟಗಾರನನ್ನು ಖರೀದಿಸಿ ಅಚ್ಚರಿ ಮೂಡಿಸಿದೆ.

1 / 7
ಹೌದು, ಗಾಯದ ಕಾರಣ ಐಪಿಎಲ್​ನಿಂದ ಆರ್​ಸಿಬಿ ಆಟಗಾರ ಡೇವಿಡ್ ವಿಲ್ಲಿ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಆರ್​ಸಿಬಿ ಆಯ್ಕೆ ಮಾಡಿರುವುದು 38 ವರ್ಷದ ಕೇದಾರ್ ಜಾಧವ್​ ಅವರನ್ನು ಎಂಬುದೇ ಅಚ್ಚರಿ. ಏಕೆಂದರೆ ಜಾಧವ್ ಅಂತಹ ಅದ್ಭುತ ಬ್ಯಾಟ್ಸ್​ಮನ್​ ಅಂತು ಅಲ್ಲ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು...

ಹೌದು, ಗಾಯದ ಕಾರಣ ಐಪಿಎಲ್​ನಿಂದ ಆರ್​ಸಿಬಿ ಆಟಗಾರ ಡೇವಿಡ್ ವಿಲ್ಲಿ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿಗೆ ಆರ್​ಸಿಬಿ ಆಯ್ಕೆ ಮಾಡಿರುವುದು 38 ವರ್ಷದ ಕೇದಾರ್ ಜಾಧವ್​ ಅವರನ್ನು ಎಂಬುದೇ ಅಚ್ಚರಿ. ಏಕೆಂದರೆ ಜಾಧವ್ ಅಂತಹ ಅದ್ಭುತ ಬ್ಯಾಟ್ಸ್​ಮನ್​ ಅಂತು ಅಲ್ಲ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು...

2 / 7
ಕೇದಾರ್ ಜಾಧವ್ ಐಪಿಎಲ್​ನಲ್ಲಿ ಇದುವರೆಗೆ 93 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 1196 ರನ್​ಗಳು ಮಾತ್ರ. ಇನ್ನು ಬಾರಿಸಿರುವುದು ಕೇವಲ 4 ಅರ್ಧಶತಕಗಳು. ಅಷ್ಟೇ ಅಲ್ಲದೆ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರ ಉಳಿದಿದ್ದ ಕಾರಣ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಕೇದಾರ್ ಜಾಧವ್ ಐಪಿಎಲ್​ನಲ್ಲಿ ಇದುವರೆಗೆ 93 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಕಲೆಹಾಕಿರುವುದು ಕೇವಲ 1196 ರನ್​ಗಳು ಮಾತ್ರ. ಇನ್ನು ಬಾರಿಸಿರುವುದು ಕೇವಲ 4 ಅರ್ಧಶತಕಗಳು. ಅಷ್ಟೇ ಅಲ್ಲದೆ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರ ಉಳಿದಿದ್ದ ಕಾರಣ ಅವರನ್ನು ಈ ಬಾರಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

3 / 7
ಇನ್ನು ಕೊನೆಯ ಬಾರಿ ಐಪಿಎಲ್​ನಲ್ಲಿ ಆಡಿದ್ದು 2021 ರಲ್ಲಿ. ಅಂದು SRH ತಂಡದಲ್ಲಿದ್ದ ಜಾಧವ್ 6 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 55 ರನ್​ ಮಾತ್ರ. ಈ ಕಳಪೆ ಪ್ರದರ್ಶನದ ಕಾರಣ 10 ಫ್ರಾಂಚೈಸಿಗಳು ಈ ಬಾರಿ ಜಾಧವ್ ಅವರನ್ನು ಖರೀದಿಸಿರಲಿಲ್ಲ.

ಇನ್ನು ಕೊನೆಯ ಬಾರಿ ಐಪಿಎಲ್​ನಲ್ಲಿ ಆಡಿದ್ದು 2021 ರಲ್ಲಿ. ಅಂದು SRH ತಂಡದಲ್ಲಿದ್ದ ಜಾಧವ್ 6 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 55 ರನ್​ ಮಾತ್ರ. ಈ ಕಳಪೆ ಪ್ರದರ್ಶನದ ಕಾರಣ 10 ಫ್ರಾಂಚೈಸಿಗಳು ಈ ಬಾರಿ ಜಾಧವ್ ಅವರನ್ನು ಖರೀದಿಸಿರಲಿಲ್ಲ.

4 / 7
ಇತ್ತ ಸತತ ಎರಡು ಸೀಸನ್​ಗಳಲ್ಲಿ ಅವಕಾಶ ಕೈ ತಪ್ಪಿದ ಪರಿಣಾಮ ಕೇದಾರ್ ಜಾಧವ್ ಹೊಸ ಇನಿಂಗ್ಸ್​ ಆರಂಭಿಸಿದ್ದರು. ಅದರಂತೆ ಜಿಯೋ ಸಿನಿಮಾದಲ್ಲಿ ಈ ಬಾರಿ ಐಪಿಎಲ್ ಕಾಮೆಂಟ್ರಿ ಮಾಡುತ್ತಿದ್ದರು. ಮರಾಠಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೇದಾರ್ ಜಾಧವ್​ ಅವರನ್ನು ಆರ್​ಸಿಬಿ ಆಯ್ಕೆ ಮಾಡಿದೆ.

ಇತ್ತ ಸತತ ಎರಡು ಸೀಸನ್​ಗಳಲ್ಲಿ ಅವಕಾಶ ಕೈ ತಪ್ಪಿದ ಪರಿಣಾಮ ಕೇದಾರ್ ಜಾಧವ್ ಹೊಸ ಇನಿಂಗ್ಸ್​ ಆರಂಭಿಸಿದ್ದರು. ಅದರಂತೆ ಜಿಯೋ ಸಿನಿಮಾದಲ್ಲಿ ಈ ಬಾರಿ ಐಪಿಎಲ್ ಕಾಮೆಂಟ್ರಿ ಮಾಡುತ್ತಿದ್ದರು. ಮರಾಠಿ ಕಾಮೆಂಟ್ರಿ ಪ್ಯಾನೆಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೇದಾರ್ ಜಾಧವ್​ ಅವರನ್ನು ಆರ್​ಸಿಬಿ ಆಯ್ಕೆ ಮಾಡಿದೆ.

5 / 7
ಅಂದರೆ ಕಳೆದ ಎರಡು ವರ್ಷಗಳಿಂದ ಐಪಿಎಲ್​ನಲ್ಲಿ ಕಾಣಿಸಿಕೊಳ್ಳದ ಹಾಗೂ ಕ್ರಿಕೆಟ್​ನಿಂದ ದೂರ ಉಳಿದು ಕಾಮೆಂಟ್ರಿ ವೃತ್ತಿ ಆರಂಭಿಸಿದ್ದ 38 ವರ್ಷದ ಕೇದಾರ್ ಜಾಧವ್ ಅವರನ್ನು ಆರ್​ಸಿಬಿ ಯಾಕಾಗಿ ಆಯ್ಕೆ ಮಾಡಿದ್ದಾರೆ ಎಂಬುದೇ ಯಕ್ಷ ಪ್ರಶ್ನೆ.

ಅಂದರೆ ಕಳೆದ ಎರಡು ವರ್ಷಗಳಿಂದ ಐಪಿಎಲ್​ನಲ್ಲಿ ಕಾಣಿಸಿಕೊಳ್ಳದ ಹಾಗೂ ಕ್ರಿಕೆಟ್​ನಿಂದ ದೂರ ಉಳಿದು ಕಾಮೆಂಟ್ರಿ ವೃತ್ತಿ ಆರಂಭಿಸಿದ್ದ 38 ವರ್ಷದ ಕೇದಾರ್ ಜಾಧವ್ ಅವರನ್ನು ಆರ್​ಸಿಬಿ ಯಾಕಾಗಿ ಆಯ್ಕೆ ಮಾಡಿದ್ದಾರೆ ಎಂಬುದೇ ಯಕ್ಷ ಪ್ರಶ್ನೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್, ಕೇದಾರ್ ಜಾಧವ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್, ಕೇದಾರ್ ಜಾಧವ್.

7 / 7
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ