IPL 2023 Playoffs: ಪ್ಲೇಆಫ್​ಗೆ LSG ಲಗ್ಗೆ: ಇನ್ನು RCB ಮತ್ತು MI ನಡುವೆ ಪೈಪೋಟಿ

IPL 2023 Kannada: ನವೀನ್ ಉಲ್ ಹಕ್ ಎಸೆದ 19ನೇ ಓವರ್​ನಲ್ಲಿ 3 ಫೋರ್​ ಹಾಗೂ 1 ಸಿಕ್ಸ್​ನೊಂದಿಗೆ ರಿಂಕು ಸಿಂಗ್ 20 ರನ್ ಚಚ್ಚಿ ಅರ್ಧಶತಕ ಪೂರೈಸಿದರು.

| Updated By: ಝಾಹಿರ್ ಯೂಸುಫ್

Updated on: May 20, 2023 | 11:32 PM

IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ 68ನೇ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್​ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

IPL 2023: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ 68ನೇ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಲಕ್ನೋ ಸೂಪರ್ ಜೈಂಟ್ಸ್​ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ.

1 / 12
ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡವು ಲಕ್ನೋ ಸೂಪರ್ ಜೈಂಟ್ಸ್​ ಅನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಲ್​​ಎಸ್​ಜಿ ನಿಕೋಲಸ್ ಪೂರನ್ (58) ಅವರ ಅರ್ಧಶತಕದ ನೆರವಿನೊಂದಿಗೆ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡವು ಲಕ್ನೋ ಸೂಪರ್ ಜೈಂಟ್ಸ್​ ಅನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಲ್​​ಎಸ್​ಜಿ ನಿಕೋಲಸ್ ಪೂರನ್ (58) ಅವರ ಅರ್ಧಶತಕದ ನೆರವಿನೊಂದಿಗೆ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 176 ರನ್ ಕಲೆಹಾಕಿತು.

2 / 12
177 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಕೆಕೆಆರ್ ತಂಡಕ್ಕೆ ಜೇಸನ್ ರಾಯ್ (44) ಉತ್ತಮ ಆರಂಭ ಒದಗಿಸಿದ್ದರು. ಇದರ ನಡುವೆ ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡಿತು. ಇದಾಗ್ಯೂ ಕೊನೆಯ 5 ಓವರ್​ಗಳಲ್ಲಿ ಗೆಲ್ಲಲು ಕೆಕೆಆರ್​ಗೆ 63 ರನ್​ಗಳ ಅವಶ್ಯಕೆಯಿತ್ತು.

177 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಕೆಕೆಆರ್ ತಂಡಕ್ಕೆ ಜೇಸನ್ ರಾಯ್ (44) ಉತ್ತಮ ಆರಂಭ ಒದಗಿಸಿದ್ದರು. ಇದರ ನಡುವೆ ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡಿತು. ಇದಾಗ್ಯೂ ಕೊನೆಯ 5 ಓವರ್​ಗಳಲ್ಲಿ ಗೆಲ್ಲಲು ಕೆಕೆಆರ್​ಗೆ 63 ರನ್​ಗಳ ಅವಶ್ಯಕೆಯಿತ್ತು.

3 / 12
ಈ ಹಂತದಲ್ಲಿ ರಿಂಕು ಸಿಂಗ್ ಜೊತೆಗಿದ್ದ  ಆ್ಯಂಡ್ರೆ ರಸೆಲ್ (7) ರವಿ ಬಿಷ್ಣೋಯ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾಗ್ಯೂ ರಿಂಕು ಸಿಂಗ್ ಏಕಾಂಗಿ ಹೋರಾಟ ಮುಂದುವರೆಸಿದ್ದರು.

ಈ ಹಂತದಲ್ಲಿ ರಿಂಕು ಸಿಂಗ್ ಜೊತೆಗಿದ್ದ ಆ್ಯಂಡ್ರೆ ರಸೆಲ್ (7) ರವಿ ಬಿಷ್ಣೋಯ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾಗ್ಯೂ ರಿಂಕು ಸಿಂಗ್ ಏಕಾಂಗಿ ಹೋರಾಟ ಮುಂದುವರೆಸಿದ್ದರು.

4 / 12
ಅದರಲ್ಲೂ ನವೀನ್ ಉಲ್ ಹಕ್ ಎಸೆದ 19ನೇ ಓವರ್​ನಲ್ಲಿ 3 ಫೋರ್​ ಹಾಗೂ 1 ಸಿಕ್ಸ್​ನೊಂದಿಗೆ ರಿಂಕು ಸಿಂಗ್ 20 ರನ್ ಚಚ್ಚಿ ಅರ್ಧಶತಕ ಪೂರೈಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 21 ರನ್​ಗಳ ಟಾರ್ಗೆಟ್ ಪಡೆಯಿತು.

ಅದರಲ್ಲೂ ನವೀನ್ ಉಲ್ ಹಕ್ ಎಸೆದ 19ನೇ ಓವರ್​ನಲ್ಲಿ 3 ಫೋರ್​ ಹಾಗೂ 1 ಸಿಕ್ಸ್​ನೊಂದಿಗೆ ರಿಂಕು ಸಿಂಗ್ 20 ರನ್ ಚಚ್ಚಿ ಅರ್ಧಶತಕ ಪೂರೈಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 21 ರನ್​ಗಳ ಟಾರ್ಗೆಟ್ ಪಡೆಯಿತು.

5 / 12
ಆದರೆ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್ (67) 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 19 ರನ್ ಬಾರಿಸಲಷ್ಟೇ ಶಕ್ತರಾದರು. ಇದರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ನಿಂದ ರೋಚಕ ಜಯ ಸಾಧಿಸಿತು.

ಆದರೆ ಅಂತಿಮ ಓವರ್​ನಲ್ಲಿ ರಿಂಕು ಸಿಂಗ್ (67) 2 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 19 ರನ್ ಬಾರಿಸಲಷ್ಟೇ ಶಕ್ತರಾದರು. ಇದರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ರನ್​ನಿಂದ ರೋಚಕ ಜಯ ಸಾಧಿಸಿತು.

6 / 12
ಈ ಗೆಲುವಿನೊಂದಿಗೆ ಒಟ್ಟು 17 ಪಾಯಿಂಟ್ಸ್ ಕಲೆಹಾಕಿರುವ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್​ಗೆ ಪ್ರವೇಶಿಸಿದೆ. ಇದರೊಂದಿಗೆ ಪ್ಲೇಆಫ್​ ಆಡಳಿರುವ ಅಗ್ರ ಮೂರು ತಂಡಗಳು ಖಚಿತವಾಗಿದೆ.

ಈ ಗೆಲುವಿನೊಂದಿಗೆ ಒಟ್ಟು 17 ಪಾಯಿಂಟ್ಸ್ ಕಲೆಹಾಕಿರುವ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್​ಗೆ ಪ್ರವೇಶಿಸಿದೆ. ಇದರೊಂದಿಗೆ ಪ್ಲೇಆಫ್​ ಆಡಳಿರುವ ಅಗ್ರ ಮೂರು ತಂಡಗಳು ಖಚಿತವಾಗಿದೆ.

7 / 12
ಇದಕ್ಕೂ ಮುನ್ನ 13 ಪಂದ್ಯಗಳಲ್ಲಿ 9 ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್​ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಪ್ಲೇಆಫ್ ಪ್ರವೇಶಿಸಿತ್ತು. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು 17 ಪಾಯಿಂಟ್ಸ್​ನೊಂದಿಗೆ ಸಿಎಸ್​ಕೆ ತಂಡವು ಪ್ಲೇಆಫ್ ಪ್ರವೇಶಿಸಿದೆ.

ಇದಕ್ಕೂ ಮುನ್ನ 13 ಪಂದ್ಯಗಳಲ್ಲಿ 9 ಜಯ ಸಾಧಿಸಿರುವ ಗುಜರಾತ್ ಟೈಟಾನ್ಸ್​ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಪ್ಲೇಆಫ್ ಪ್ರವೇಶಿಸಿತ್ತು. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು 17 ಪಾಯಿಂಟ್ಸ್​ನೊಂದಿಗೆ ಸಿಎಸ್​ಕೆ ತಂಡವು ಪ್ಲೇಆಫ್ ಪ್ರವೇಶಿಸಿದೆ.

8 / 12
ಇದೀಗ 17 ಪಾಯಿಂಟ್ಸ್​ಗಳೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ನಾಲ್ಕನೇ ಸ್ಥಾನ ಮಾತ್ರ ಉಳಿದಿದ್ದು, ಈ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​​ಸಿಬಿ ನಡುವೆ ಪೈಪೋಟಿ ಇದೆ.

ಇದೀಗ 17 ಪಾಯಿಂಟ್ಸ್​ಗಳೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಅಲಂಕರಿಸಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನು ನಾಲ್ಕನೇ ಸ್ಥಾನ ಮಾತ್ರ ಉಳಿದಿದ್ದು, ಈ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​​ಸಿಬಿ ನಡುವೆ ಪೈಪೋಟಿ ಇದೆ.

9 / 12
ಅದರಂತೆ ಭಾನುವಾರ ಮಧ್ಯಾಹ್ನ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

ಅದರಂತೆ ಭಾನುವಾರ ಮಧ್ಯಾಹ್ನ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

10 / 12
ಹಾಗೆಯೇ ಭಾನುವಾರ ರಾತ್ರಿ ನಡೆಯಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಉತ್ತಮ ನೆಟ್​ ರನ್​ ರೇಟ್​ನೊಂದಿಗೆ ನಾಲ್ಕನೇ ಸ್ಥಾನಕ್ಕೇರಬಹುದು. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗಿದೆ.

ಹಾಗೆಯೇ ಭಾನುವಾರ ರಾತ್ರಿ ನಡೆಯಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಉತ್ತಮ ನೆಟ್​ ರನ್​ ರೇಟ್​ನೊಂದಿಗೆ ನಾಲ್ಕನೇ ಸ್ಥಾನಕ್ಕೇರಬಹುದು. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗಿದೆ.

11 / 12
ಅಂದರೆ ನಾಳಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಗೆದ್ದರೆ ಉಭಯ ತಂಡಗಳು ಒಟ್ಟು 16 ಅಂಕಗಳನ್ನು ಗಳಿಸಲಿದೆ. ಇಲ್ಲಿ ಯಾವ ತಂಡವು ಹೆಚ್ಚಿನ ರನ್ ರೇಟ್ ಹೊಂದಿರುತ್ತೆ ಆ ತಂಡಕ್ಕೆ ಪ್ಲೇಆಫ್ ಅವಕಾಶ ಸಿಗಲಿದೆ. ಹೀಗಾಗಿಯೇ ಭಾನುವಾರ ನಡೆಯಲಿರುವ ಲೀಗ್ ಹಂತದ ಕೊನೆಯ 2 ಪಂದ್ಯಗಳು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಅಂದರೆ ನಾಳಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಗೆದ್ದರೆ ಉಭಯ ತಂಡಗಳು ಒಟ್ಟು 16 ಅಂಕಗಳನ್ನು ಗಳಿಸಲಿದೆ. ಇಲ್ಲಿ ಯಾವ ತಂಡವು ಹೆಚ್ಚಿನ ರನ್ ರೇಟ್ ಹೊಂದಿರುತ್ತೆ ಆ ತಂಡಕ್ಕೆ ಪ್ಲೇಆಫ್ ಅವಕಾಶ ಸಿಗಲಿದೆ. ಹೀಗಾಗಿಯೇ ಭಾನುವಾರ ನಡೆಯಲಿರುವ ಲೀಗ್ ಹಂತದ ಕೊನೆಯ 2 ಪಂದ್ಯಗಳು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

12 / 12
Follow us
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?