Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೇವಲ 8 ಬೌಂಡರಿಗಳು: RCB ತಂಡದ ಕಳಪೆ ಬ್ಯಾಟಿಂಗ್

IPL 2023 Kannada: ಪವರ್​ಪ್ಲೇ ಬಳಿಕ ಕೂಡ ನಿಧಾನಗತಿಯಲ್ಲೇ ರನ್​ ಕಲೆಹಾಕಿದರು. ಅಲ್ಲದೆ 50 ರನ್​ಗಳಿಸಲು ಬರೋಬ್ಬರಿ 44 ಎಸೆತಗಳನ್ನು ತೆಗೆದುಕೊಂಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: May 01, 2023 | 9:42 PM

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್ ವಿರುದ್ಧ ಆರ್​ಸಿಬಿ ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದರು.

IPL 2023: ಐಪಿಎಲ್​ನ 43ನೇ ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್ ವಿರುದ್ಧ ಆರ್​ಸಿಬಿ ಆರಂಭಿಕರಾದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 11
ಅದರಂತೆ ಇನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಮೊದಲ 6 ಓವರ್​ಗಳಲ್ಲಿ ಆರ್​ಸಿಬಿ ಕಲೆಹಾಕಿದ್ದು ಕೇವಲ 42 ರನ್​ಗಳು ಮಾತ್ರ.

ಅದರಂತೆ ಇನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ಮೊದಲ 6 ಓವರ್​ಗಳಲ್ಲಿ ಆರ್​ಸಿಬಿ ಕಲೆಹಾಕಿದ್ದು ಕೇವಲ 42 ರನ್​ಗಳು ಮಾತ್ರ.

2 / 11
ಅದರಲ್ಲೂ ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಬೇಕಿದ್ದ ಪವರ್​ಪ್ಲೇನಲ್ಲಿ ಆರ್​ಸಿಬಿ ಆರಂಭಿಕರಿಂದ ಮೂಡಿಬಂದಿದ್ದು 3 ಫೋರ್ ಹಾಗೂ 1 ಸಿಕ್ಸ್ ಮಾತ್ರ. ಇಲ್ಲಿ ವಿರಾಟ್ ಕೊಹ್ಲಿ 2 ಫೋರ್ ಬಾರಿಸಿದರೆ, ಡುಪ್ಲೆಸಿಸ್ 1 ಸಿಕ್ಸ್ ಹಾಗೂ 1 ಫೋರ್ ಮಾತ್ರ ಬಾರಿಸಿದ್ದರು.

ಅದರಲ್ಲೂ ಬಿರುಸಿನ ಬ್ಯಾಟಿಂಗ್​ ಪ್ರದರ್ಶಿಸಬೇಕಿದ್ದ ಪವರ್​ಪ್ಲೇನಲ್ಲಿ ಆರ್​ಸಿಬಿ ಆರಂಭಿಕರಿಂದ ಮೂಡಿಬಂದಿದ್ದು 3 ಫೋರ್ ಹಾಗೂ 1 ಸಿಕ್ಸ್ ಮಾತ್ರ. ಇಲ್ಲಿ ವಿರಾಟ್ ಕೊಹ್ಲಿ 2 ಫೋರ್ ಬಾರಿಸಿದರೆ, ಡುಪ್ಲೆಸಿಸ್ 1 ಸಿಕ್ಸ್ ಹಾಗೂ 1 ಫೋರ್ ಮಾತ್ರ ಬಾರಿಸಿದ್ದರು.

3 / 11
ಪವರ್​ಪ್ಲೇ ಬಳಿಕ ಕೂಡ ನಿಧಾನಗತಿಯಲ್ಲೇ ರನ್​ ಕಲೆಹಾಕಿದರು. ಅಲ್ಲದೆ 50 ರನ್​ಗಳಿಸಲು ಬರೋಬ್ಬರಿ 44 ಎಸೆತಗಳನ್ನು ತೆಗೆದುಕೊಂಡಿದ್ದರು. ಇನ್ನು 9ನೇ ಓವರ್​ನ 6ನೇ ಎಸೆತದಲ್ಲಿ ವಿರಾಟ್ ಕೊಹ್ಲಿ ರವಿ ಬಿಷ್ಣೋಯ್ ಎಸೆತದಲ್ಲಿ ಸ್ಟಂಪ್ ಔಟಾದರು.

ಪವರ್​ಪ್ಲೇ ಬಳಿಕ ಕೂಡ ನಿಧಾನಗತಿಯಲ್ಲೇ ರನ್​ ಕಲೆಹಾಕಿದರು. ಅಲ್ಲದೆ 50 ರನ್​ಗಳಿಸಲು ಬರೋಬ್ಬರಿ 44 ಎಸೆತಗಳನ್ನು ತೆಗೆದುಕೊಂಡಿದ್ದರು. ಇನ್ನು 9ನೇ ಓವರ್​ನ 6ನೇ ಎಸೆತದಲ್ಲಿ ವಿರಾಟ್ ಕೊಹ್ಲಿ ರವಿ ಬಿಷ್ಣೋಯ್ ಎಸೆತದಲ್ಲಿ ಸ್ಟಂಪ್ ಔಟಾದರು.

4 / 11
ಆದರೆ ಅದಾಗಲೇ 30 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ ಕಲೆಹಾಕಿದ್ದು ಮಾತ್ರ 31 ರನ್​ಗಳು. ಇನ್ನು ಮೊದಲ 10 ಓವರ್​ಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಗಳಿಸಿದ್ದು ಕೇವಲ 65 ರನ್​ಗಳು ಮಾತ್ರ. ಅಂದರೆ ಪ್ರತಿ ಓವರ್​​ಗೆ 6.5 ರ ಸರಾಸರಿಯಲ್ಲಿ ಮಾತ್ರ ರನ್​ಗಳಿಸಿದ್ದರು.

ಆದರೆ ಅದಾಗಲೇ 30 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ ಕಲೆಹಾಕಿದ್ದು ಮಾತ್ರ 31 ರನ್​ಗಳು. ಇನ್ನು ಮೊದಲ 10 ಓವರ್​ಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಗಳಿಸಿದ್ದು ಕೇವಲ 65 ರನ್​ಗಳು ಮಾತ್ರ. ಅಂದರೆ ಪ್ರತಿ ಓವರ್​​ಗೆ 6.5 ರ ಸರಾಸರಿಯಲ್ಲಿ ಮಾತ್ರ ರನ್​ಗಳಿಸಿದ್ದರು.

5 / 11
ವಿರಾಟ್ ಕೊಹ್ಲಿಯ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ಅನೂಜ್ ರಾವತ್ 11 ಎಸೆತಗಳಲ್ಲಿ 9 ರನ್​ಗಳಿಸಿ ಕೃಷ್ಣಪ್ಪ ಗೌತಮ್​ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಇಲ್ಲಿ ಮತ್ತೊಂದು ಅಚ್ಚರಿ ಎಂದರೆ 8ನೇ ಓವರ್​ ಬಳಿಕ ಆರ್​ಸಿಬಿ 15ನೇ ಓವರ್​ವರೆಗೆ ಒಂದೇ ಒಂದು ಬೌಂಡರಿ ಬಾರಿಸಿಲ್ಲ ಎಂಬುದು.

ವಿರಾಟ್ ಕೊಹ್ಲಿಯ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ಅನೂಜ್ ರಾವತ್ 11 ಎಸೆತಗಳಲ್ಲಿ 9 ರನ್​ಗಳಿಸಿ ಕೃಷ್ಣಪ್ಪ ಗೌತಮ್​ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಇಲ್ಲಿ ಮತ್ತೊಂದು ಅಚ್ಚರಿ ಎಂದರೆ 8ನೇ ಓವರ್​ ಬಳಿಕ ಆರ್​ಸಿಬಿ 15ನೇ ಓವರ್​ವರೆಗೆ ಒಂದೇ ಒಂದು ಬೌಂಡರಿ ಬಾರಿಸಿಲ್ಲ ಎಂಬುದು.

6 / 11
ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ (4) ರವಿ ಬಿಷ್ಣೋಯ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದರು. ಹಾಗೆಯೇ ಸುಯಶ್ ಪ್ರಭುದೇಸಾಯಿ 7 ಎಸೆತಗಳಲ್ಲಿ 6 ರನ್​ಗಳಿಸಿ ಕ್ಯಾಚ್ ನೀಡಿ ಬಂದ ವೇಗದಲ್ಲೇ ಹಿಂತಿರುಗಿದರು. 15 ಓವರ್​ ಮುಕ್ತಾಯದ ವೇಳೆಗೆ ಆರ್​ಸಿಬಿ ಕಲೆಹಾಕಿದ್ದು  4 ವಿಕೆಟ್ ನಷ್ಟಕ್ಕೆ ಕೇವಲ 92 ರನ್​ಗಳು. ಅಂದರೆ 90 ಎಸೆತಗಳಲ್ಲಿ 92 ರನ್​ ಅಷ್ಟೇ.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ (4) ರವಿ ಬಿಷ್ಣೋಯ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದರು. ಹಾಗೆಯೇ ಸುಯಶ್ ಪ್ರಭುದೇಸಾಯಿ 7 ಎಸೆತಗಳಲ್ಲಿ 6 ರನ್​ಗಳಿಸಿ ಕ್ಯಾಚ್ ನೀಡಿ ಬಂದ ವೇಗದಲ್ಲೇ ಹಿಂತಿರುಗಿದರು. 15 ಓವರ್​ ಮುಕ್ತಾಯದ ವೇಳೆಗೆ ಆರ್​ಸಿಬಿ ಕಲೆಹಾಕಿದ್ದು 4 ವಿಕೆಟ್ ನಷ್ಟಕ್ಕೆ ಕೇವಲ 92 ರನ್​ಗಳು. ಅಂದರೆ 90 ಎಸೆತಗಳಲ್ಲಿ 92 ರನ್​ ಅಷ್ಟೇ.

7 / 11
ಅಲ್ಲದೆ 17ನೇ ಓವರ್​ನಲ್ಲಿ ಆರ್​ಸಿಬಿ ನೂರು ರನ್ ಪೂರೈಸಿತು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಫಾಫ್ ಡುಪ್ಲೆಸಿಸ್ ಅಮಿತ್ ಮಿಶ್ರಾಗೆ ವಿಕೆಟ್ ಒಪ್ಪಿಸಿದರು. ಆದರೆ ಫಾಫ್ 44 ರನ್​ಗಳಿಸಲು ತೆಗೆದುಕೊಂಡಿದ್ದು ಬರೋಬ್ಬರಿ 40 ಎಸೆತಗಳನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ.

ಅಲ್ಲದೆ 17ನೇ ಓವರ್​ನಲ್ಲಿ ಆರ್​ಸಿಬಿ ನೂರು ರನ್ ಪೂರೈಸಿತು. ಈ ಹಂತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಫಾಫ್ ಡುಪ್ಲೆಸಿಸ್ ಅಮಿತ್ ಮಿಶ್ರಾಗೆ ವಿಕೆಟ್ ಒಪ್ಪಿಸಿದರು. ಆದರೆ ಫಾಫ್ 44 ರನ್​ಗಳಿಸಲು ತೆಗೆದುಕೊಂಡಿದ್ದು ಬರೋಬ್ಬರಿ 40 ಎಸೆತಗಳನ್ನು ಎಂಬುದು ಇಲ್ಲಿ ಉಲ್ಲೇಖಾರ್ಹ.

8 / 11
ಇದರ ಬೆನ್ನಲ್ಲೇ 4 ಎಸೆತಗಳಲ್ಲಿ 3 ರನ್​ಗಳಿಸಿ ಮಹಿಪಾಲ್ ಲೋಮ್ರರ್ ನವೀನ್ ಉಲ್ ಹಕ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದರು. ಇನ್ನು 19ನೇ ಓವರ್​ನ 4ನೇ ಎಸೆತದಲ್ಲಿ ಬೌಲರ್ ಯಶ್ ಠಾಕೂರ್​ ದಿನೇಶ್ ಕಾರ್ತಿಕ್ (16) ಅವರನ್ನು ರನೌಟ್ ಮಾಡಿದರು. ಹಾಗೆಯೇ 20ನೇ ಓವರ್​ನ 2ನೇ ಎಸೆತದಲ್ಲಿ ಕರ್ಣ್ ಶರ್ಮಾ (2) ಹಾಗೂ ಇದರ ಬೆನ್ನಲ್ಲೇ ಸಿರಾಜ್ (0) ನವೀನ್ ಉಲ್ ಹಕ್​ಗೆ ವಿಕೆಟ್​ ಒಪ್ಪಿಸಿದರು.

ಇದರ ಬೆನ್ನಲ್ಲೇ 4 ಎಸೆತಗಳಲ್ಲಿ 3 ರನ್​ಗಳಿಸಿ ಮಹಿಪಾಲ್ ಲೋಮ್ರರ್ ನವೀನ್ ಉಲ್ ಹಕ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದರು. ಇನ್ನು 19ನೇ ಓವರ್​ನ 4ನೇ ಎಸೆತದಲ್ಲಿ ಬೌಲರ್ ಯಶ್ ಠಾಕೂರ್​ ದಿನೇಶ್ ಕಾರ್ತಿಕ್ (16) ಅವರನ್ನು ರನೌಟ್ ಮಾಡಿದರು. ಹಾಗೆಯೇ 20ನೇ ಓವರ್​ನ 2ನೇ ಎಸೆತದಲ್ಲಿ ಕರ್ಣ್ ಶರ್ಮಾ (2) ಹಾಗೂ ಇದರ ಬೆನ್ನಲ್ಲೇ ಸಿರಾಜ್ (0) ನವೀನ್ ಉಲ್ ಹಕ್​ಗೆ ವಿಕೆಟ್​ ಒಪ್ಪಿಸಿದರು.

9 / 11
ಅಂತಿಮವಾಗಿ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್​ಗಳಿಸಲಷ್ಟೇ ಶಕ್ತರಾದರು.

ಅಂತಿಮವಾಗಿ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 126 ರನ್​ಗಳಿಸಲಷ್ಟೇ ಶಕ್ತರಾದರು.

10 / 11
ಅಂದಹಾಗೆ ಈ ಪಂದ್ಯದಲ್ಲಿ ಆರ್​ಸಿಬಿ ಬ್ಯಾಟ್ಸ್​ಮನ್​ಗಳು ಬಾರಿಸಿದ್ದು ಕೇವಲ 8 ಬೌಂಡರಿಗಳು ಮಾತ್ರ. ಇದರಲ್ಲಿ 6 ಫೋರ್​ಗಳು ಹಾಗೂ ಫಾಫ್ ಮತ್ತು ಡಿಕೆ ಬ್ಯಾಟ್​ನಿಂದ ಮೂಡಿಬಂದ 2 ಸಿಕ್ಸ್​ಗಳು ಸೇರಿವೆ.

ಅಂದಹಾಗೆ ಈ ಪಂದ್ಯದಲ್ಲಿ ಆರ್​ಸಿಬಿ ಬ್ಯಾಟ್ಸ್​ಮನ್​ಗಳು ಬಾರಿಸಿದ್ದು ಕೇವಲ 8 ಬೌಂಡರಿಗಳು ಮಾತ್ರ. ಇದರಲ್ಲಿ 6 ಫೋರ್​ಗಳು ಹಾಗೂ ಫಾಫ್ ಮತ್ತು ಡಿಕೆ ಬ್ಯಾಟ್​ನಿಂದ ಮೂಡಿಬಂದ 2 ಸಿಕ್ಸ್​ಗಳು ಸೇರಿವೆ.

11 / 11
Follow us
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ