AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಅಭಿಮಾನಿಗಳಿಗೆ ಖಡಕ್ ಸೂಚನೆ ನೀಡಿದ ಗಂಭೀರ್..!

IPL 2023 Kannada: ಮೊದಲ ವಿಕೆಟ್​ಗೆ 96 ರನ್​ಗಳ ಜೊತೆಯಾಟವಾಡಿದ ಕಿಂಗ್ ಕೊಹ್ಲಿ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 61 ರನ್​ ಬಾರಿಸಿ ಔಟಾದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 11, 2023 | 5:30 PM

IPL 2023: RCB vs LSG: ಏಪ್ರಿಲ್ 10, 2023..ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು.

IPL 2023: RCB vs LSG: ಏಪ್ರಿಲ್ 10, 2023..ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು.

1 / 9
ಮೊದಲ ವಿಕೆಟ್​ಗೆ 96 ರನ್​ಗಳ ಜೊತೆಯಾಟವಾಡಿದ ಕಿಂಗ್ ಕೊಹ್ಲಿ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 61 ರನ್​ ಬಾರಿಸಿ ಔಟಾದರು. ಆ ಬಳಿಕ ಬಂದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿರುಸಿನ ಬ್ಯಾಟಿಂಗ್ ಮೂಲಕ 115 ರನ್​ಗಳ ಜೊತೆಯಾಟವಾಡಿದರು.

ಮೊದಲ ವಿಕೆಟ್​ಗೆ 96 ರನ್​ಗಳ ಜೊತೆಯಾಟವಾಡಿದ ಕಿಂಗ್ ಕೊಹ್ಲಿ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 61 ರನ್​ ಬಾರಿಸಿ ಔಟಾದರು. ಆ ಬಳಿಕ ಬಂದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಬಿರುಸಿನ ಬ್ಯಾಟಿಂಗ್ ಮೂಲಕ 115 ರನ್​ಗಳ ಜೊತೆಯಾಟವಾಡಿದರು.

2 / 9
ಈ ವೇಳೆ ಡುಪ್ಲೆಸಿಸ್ 46 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ಅಜೇಯ 76 ರನ್​ ಬಾರಿಸಿದರೆ, ಗ್ಲೆನ್ ಮ್ಯಾಕ್ಸ್​ವೆಲ್ 29 ಎಸೆತಗಳಲ್ಲಿ 6 ಸಿಡಿಲಬ್ಬರದ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ 59 ರನ್​ ಕಲೆಹಾಕಿದರು. ಪರಿಣಾಮ ಆರ್​ಸಿಬಿ ತಂಡದ ಮೊತ್ತವು 212 ಕ್ಕೆ ಬಂದು ನಿಂತಿತು.

ಈ ವೇಳೆ ಡುಪ್ಲೆಸಿಸ್ 46 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ಅಜೇಯ 76 ರನ್​ ಬಾರಿಸಿದರೆ, ಗ್ಲೆನ್ ಮ್ಯಾಕ್ಸ್​ವೆಲ್ 29 ಎಸೆತಗಳಲ್ಲಿ 6 ಸಿಡಿಲಬ್ಬರದ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ 59 ರನ್​ ಕಲೆಹಾಕಿದರು. ಪರಿಣಾಮ ಆರ್​ಸಿಬಿ ತಂಡದ ಮೊತ್ತವು 212 ಕ್ಕೆ ಬಂದು ನಿಂತಿತು.

3 / 9
ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆರ್​ಸಿಬಿ ಬೌಲರ್ ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದ್ದರು. ಕೇವಲ 23 ರನ್​ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಲಕ್ನೋ ತಂಡಕ್ಕೆ ಆ ಬಳಿಕ ನೆರವಾಗಿದ್ದು ಮಾರ್ಕಸ್ ಸ್ಟೋಯಿನಿಸ್. ಕೇವಲ 30 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 5 ಫೋರ್​ನೊಂದಿಗೆ ಸ್ಟೋಯಿನಿಸ್ 65 ರನ್​ ಬಾರಿಸಿದರು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆರ್​ಸಿಬಿ ಬೌಲರ್ ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದ್ದರು. ಕೇವಲ 23 ರನ್​ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಲಕ್ನೋ ತಂಡಕ್ಕೆ ಆ ಬಳಿಕ ನೆರವಾಗಿದ್ದು ಮಾರ್ಕಸ್ ಸ್ಟೋಯಿನಿಸ್. ಕೇವಲ 30 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 5 ಫೋರ್​ನೊಂದಿಗೆ ಸ್ಟೋಯಿನಿಸ್ 65 ರನ್​ ಬಾರಿಸಿದರು.

4 / 9
ಆ ನಂತರ ಬಂದ ನಿಕೋಲಸ್ ಪೂರನ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಪೂರನ್ ಅಂತಿಮವಾಗಿ 19 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 62 ರನ್​ ಚಚ್ಚಿದರು. ಅಲ್ಲಿಗೆ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್​ ಕಡೆ ವಾಲಿತು.

ಆ ನಂತರ ಬಂದ ನಿಕೋಲಸ್ ಪೂರನ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಪೂರನ್ ಅಂತಿಮವಾಗಿ 19 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 62 ರನ್​ ಚಚ್ಚಿದರು. ಅಲ್ಲಿಗೆ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್​ ಕಡೆ ವಾಲಿತು.

5 / 9
ಇನ್ನು ಆಯುಷ್ ಬದೋನಿಯ 30 ರನ್​ಗಳ ನೆರವಿನಿಂದ ಪಂದ್ಯವು ಅಂತಿಮ ಓವರ್​ನತ್ತ ಸಾಗಿತು. ಕೊನೆಯ ಓವರ್​ನಲ್ಲಿ 5 ರನ್​ಗಳ ಅವಶ್ಯಕತೆಯಿತ್ತು. ಮೊದಲ ಎಸೆತದಲ್ಲಿ ಉನಾದ್ಕಟ್ 1 ರನ್​ ತೆಗೆದರು. 2ನೇ ಎಸೆತದಲ್ಲಿ ಮಾರ್ಕ್​ ವುಡ್ ಬೌಲ್ಡ್ ಆದರು. ಇನ್ನು 3ನೇ ಎಸೆತದಲ್ಲಿ ರವಿ ಬಿಷ್ಣೋಯ್ 2 ರನ್ ಕಲೆಹಾಕಿದರು. 4ನೇ ಎಸೆತದಲ್ಲಿ 1 ರನ್​. ಅಲ್ಲಿಗೆ ಸ್ಕೋರ್ ಸಮಗೊಂಡಿತು. ಆದರೆ 5ನೇ ಎಸೆತದಲ್ಲಿ ಉನಾದ್ಕಟ್ ಔಟ್ ಆಗುವುದರೊಂದಿಗೆ ಪಂದ್ಯವು ಮತ್ತೆ ರೋಚಕತೆಯತ್ತ ಸಾಗಿತು.

ಇನ್ನು ಆಯುಷ್ ಬದೋನಿಯ 30 ರನ್​ಗಳ ನೆರವಿನಿಂದ ಪಂದ್ಯವು ಅಂತಿಮ ಓವರ್​ನತ್ತ ಸಾಗಿತು. ಕೊನೆಯ ಓವರ್​ನಲ್ಲಿ 5 ರನ್​ಗಳ ಅವಶ್ಯಕತೆಯಿತ್ತು. ಮೊದಲ ಎಸೆತದಲ್ಲಿ ಉನಾದ್ಕಟ್ 1 ರನ್​ ತೆಗೆದರು. 2ನೇ ಎಸೆತದಲ್ಲಿ ಮಾರ್ಕ್​ ವುಡ್ ಬೌಲ್ಡ್ ಆದರು. ಇನ್ನು 3ನೇ ಎಸೆತದಲ್ಲಿ ರವಿ ಬಿಷ್ಣೋಯ್ 2 ರನ್ ಕಲೆಹಾಕಿದರು. 4ನೇ ಎಸೆತದಲ್ಲಿ 1 ರನ್​. ಅಲ್ಲಿಗೆ ಸ್ಕೋರ್ ಸಮಗೊಂಡಿತು. ಆದರೆ 5ನೇ ಎಸೆತದಲ್ಲಿ ಉನಾದ್ಕಟ್ ಔಟ್ ಆಗುವುದರೊಂದಿಗೆ ಪಂದ್ಯವು ಮತ್ತೆ ರೋಚಕತೆಯತ್ತ ಸಾಗಿತು.

6 / 9
ಇತ್ತ ಸೂಪರ್ ಓವರ್ ನಿರೀಕ್ಷೆಯಲ್ಲಿ ಆರ್​ಸಿಬಿ ತಂಡವು ಫೀಲ್ಡಿಂಗ್ ಸೆಟ್ ಮಾಡಿತು. ಆದರೆ ಅಂತಿಮ ಎಸೆತದಲ್ಲಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಚೆಂಡು ಹಿಡಿಯಲು ವಿಫಲರಾದ ಕಾರಣ ಅವೇಶ್ ಖಾನ್ 1 ಬೈ ರನ್ ಓಡಿದರು. ಇದರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ಗೆಲುವು ದಾಖಲಿಸಿತು.

ಇತ್ತ ಸೂಪರ್ ಓವರ್ ನಿರೀಕ್ಷೆಯಲ್ಲಿ ಆರ್​ಸಿಬಿ ತಂಡವು ಫೀಲ್ಡಿಂಗ್ ಸೆಟ್ ಮಾಡಿತು. ಆದರೆ ಅಂತಿಮ ಎಸೆತದಲ್ಲಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಚೆಂಡು ಹಿಡಿಯಲು ವಿಫಲರಾದ ಕಾರಣ ಅವೇಶ್ ಖಾನ್ 1 ಬೈ ರನ್ ಓಡಿದರು. ಇದರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ಗೆಲುವು ದಾಖಲಿಸಿತು.

7 / 9
ಇಡೀ ಪ್ರೇಕ್ಷಕರನ್ನು ತುದಿಗಾಲಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಗಾಂಭೀರ್ಯತೆಗೆ ಒಳಗಾಗಿದ್ದರು. ಕೊನೆಯ ಎಸೆತದವರೆಗೂ ಫುಲ್ ಟೆನ್ಶನ್​ನಲ್ಲಿ ಕಾಣಿಸಿಕೊಂಡ ಗಂಭೀರ್ ಲಕ್ನೋ ಗೆಲ್ಲುತ್ತಿದ್ದಂತೆ ಭರ್ಜರಿಯಾಗಿ ಸಂಭ್ರಮಿಸಿದರು.

ಇಡೀ ಪ್ರೇಕ್ಷಕರನ್ನು ತುದಿಗಾಲಲ್ಲಿ ಕೂರಿಸಿದ್ದ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಗಾಂಭೀರ್ಯತೆಗೆ ಒಳಗಾಗಿದ್ದರು. ಕೊನೆಯ ಎಸೆತದವರೆಗೂ ಫುಲ್ ಟೆನ್ಶನ್​ನಲ್ಲಿ ಕಾಣಿಸಿಕೊಂಡ ಗಂಭೀರ್ ಲಕ್ನೋ ಗೆಲ್ಲುತ್ತಿದ್ದಂತೆ ಭರ್ಜರಿಯಾಗಿ ಸಂಭ್ರಮಿಸಿದರು.

8 / 9
ಅಷ್ಟೇ ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದರು. ಗಂಭೀರ್ ಅವರ ಈ ಅತಿರೇಕದ ವರ್ತನೆಯ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅಲ್ಲದೆ ಈ ಬಗ್ಗೆ ಆರ್​ಸಿಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

ಅಷ್ಟೇ ಅಲ್ಲದೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದರು. ಗಂಭೀರ್ ಅವರ ಈ ಅತಿರೇಕದ ವರ್ತನೆಯ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅಲ್ಲದೆ ಈ ಬಗ್ಗೆ ಆರ್​ಸಿಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

9 / 9
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ