AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸ್ಟಾರ್ ಆಲ್​ರೌಂಡರ್​ ತಂಡದಲ್ಲಿದ್ದರೂ ಕಣಕ್ಕಿಳಿಸದ RCB

IPL 2023 Kannada: ಅಗ್ರ ಕ್ರಮಾಂಕದ ಬ್ಯಾಟರ್​ಗಳಾದ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಉತ್ತಮ ಪ್ರದರ್ಶನ ನೀಡಿದರೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸಂಪೂರ್ಣ ವಿಫಲರಾಗುತ್ತಿದ್ದಾರೆ.

TV9 Web
| Edited By: |

Updated on:Apr 27, 2023 | 10:17 PM

Share
IPL 2023: RCB ತಂಡವು ಐಪಿಎಲ್​ನಲ್ಲಿ ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ, ನಾಲ್ಕು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇಲ್ಲಿ ಆರ್​ಸಿಬಿ ಸೋಲಿಗೆ ಮುಖ್ಯ ಕಾರಣವಾಗಿರುವುದು ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ.

IPL 2023: RCB ತಂಡವು ಐಪಿಎಲ್​ನಲ್ಲಿ ಈಗಾಗಲೇ 8 ಪಂದ್ಯಗಳನ್ನಾಡಿದೆ. ಈ ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ, ನಾಲ್ಕು ಪಂದ್ಯಗಳಲ್ಲಿ ಸೋಲನುಭವಿಸಿದೆ. ಇಲ್ಲಿ ಆರ್​ಸಿಬಿ ಸೋಲಿಗೆ ಮುಖ್ಯ ಕಾರಣವಾಗಿರುವುದು ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ.

1 / 9
ಅಗ್ರ ಕ್ರಮಾಂಕದ ಬ್ಯಾಟರ್​ಗಳಾದ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಉತ್ತಮ ಪ್ರದರ್ಶನ ನೀಡಿದರೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸಂಪೂರ್ಣ ವಿಫಲರಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಮಿಡಲ್ ಆರ್ಡರ್ ಬ್ಯಾಟರ್​ಗಳು ಕಲೆಹಾಕಿದ ರನ್​ಗಳು.

ಅಗ್ರ ಕ್ರಮಾಂಕದ ಬ್ಯಾಟರ್​ಗಳಾದ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಉತ್ತಮ ಪ್ರದರ್ಶನ ನೀಡಿದರೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸಂಪೂರ್ಣ ವಿಫಲರಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿಯೇ ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಮಿಡಲ್ ಆರ್ಡರ್ ಬ್ಯಾಟರ್​ಗಳು ಕಲೆಹಾಕಿದ ರನ್​ಗಳು.

2 / 9
ಇಲ್ಲಿ ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ಮಹಿಪಾಲ್ ಲೋಮ್ರೊರ್ ಇದುವರೆಗೆ ಕೇವಲ 75 ರನ್​ ಕಲೆಹಾಕಿದರೆ, ಫಿನಿಶರ್ ಎನಿಸಿಕೊಂಡಿರುವ ದಿನೇಶ್ ಕಾರ್ತಿಕ್ ಇದುವರೆಗೆ 83 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹಾಗೆಯೇ ಆಲ್​ರೌಂಡರ್​ ಶಹಬಾಝ್ ಅಹ್ಮದ್ ಕೇವಲ 42 ರನ್ ಗಳಿಸಿದ್ದಾರೆ. ಇನ್ನು  ಸುಯಶ್ ಪ್ರಭುದೇಸಾಯಿ ಇದುವರೆಗೆ ಕಲೆಹಾಕಿರುವುದು ಕೇವಲ 29 ರನ್ ಮಾತ್ರ. ಇದಲ್ಲದೆ ಇಂಪ್ಯಾಕ್ಟ್ ಪ್ಲೇಯರ್​ ಆಗಿ ಕಣಕ್ಕಿಳಿದಿರುವ ಅನೂಜ್ ರಾವತ್ 3 ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 16 ರನ್ ಅಷ್ಟೇ.

ಇಲ್ಲಿ ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ಮಹಿಪಾಲ್ ಲೋಮ್ರೊರ್ ಇದುವರೆಗೆ ಕೇವಲ 75 ರನ್​ ಕಲೆಹಾಕಿದರೆ, ಫಿನಿಶರ್ ಎನಿಸಿಕೊಂಡಿರುವ ದಿನೇಶ್ ಕಾರ್ತಿಕ್ ಇದುವರೆಗೆ 83 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹಾಗೆಯೇ ಆಲ್​ರೌಂಡರ್​ ಶಹಬಾಝ್ ಅಹ್ಮದ್ ಕೇವಲ 42 ರನ್ ಗಳಿಸಿದ್ದಾರೆ. ಇನ್ನು ಸುಯಶ್ ಪ್ರಭುದೇಸಾಯಿ ಇದುವರೆಗೆ ಕಲೆಹಾಕಿರುವುದು ಕೇವಲ 29 ರನ್ ಮಾತ್ರ. ಇದಲ್ಲದೆ ಇಂಪ್ಯಾಕ್ಟ್ ಪ್ಲೇಯರ್​ ಆಗಿ ಕಣಕ್ಕಿಳಿದಿರುವ ಅನೂಜ್ ರಾವತ್ 3 ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 16 ರನ್ ಅಷ್ಟೇ.

3 / 9
ಇನ್ನು 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವನಿಂದು ಹಸರಂಗ ಕಡೆಯಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿಲ್ಲ. ಏಕೆಂದರೆ ಹಸರಂಗ ಬೌಲಿಂಗ್​ನಲ್ಲಿ 6 ವಿಕೆಟ್ ಪಡೆದರೆ, ಬ್ಯಾಟಿಂಗ್​ನಲ್ಲಿ ಕೇವಲ 13 ರನ್​ ಮಾತ್ರ ಕಲೆಹಾಕಿದ್ದಾರೆ. ಅಂದರೆ ಆಲ್​ರೌಂಡರ್ ಪ್ರದರ್ಶನ ನೀಡುವಲ್ಲಿ ಲಂಕಾ ಸ್ಪಿನ್ನರ್ ಸಂಪೂರ್ಣ ವಿಫಲರಾಗಿದ್ದಾರೆ ಎನ್ನಬಹುದು.

ಇನ್ನು 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವನಿಂದು ಹಸರಂಗ ಕಡೆಯಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿಲ್ಲ. ಏಕೆಂದರೆ ಹಸರಂಗ ಬೌಲಿಂಗ್​ನಲ್ಲಿ 6 ವಿಕೆಟ್ ಪಡೆದರೆ, ಬ್ಯಾಟಿಂಗ್​ನಲ್ಲಿ ಕೇವಲ 13 ರನ್​ ಮಾತ್ರ ಕಲೆಹಾಕಿದ್ದಾರೆ. ಅಂದರೆ ಆಲ್​ರೌಂಡರ್ ಪ್ರದರ್ಶನ ನೀಡುವಲ್ಲಿ ಲಂಕಾ ಸ್ಪಿನ್ನರ್ ಸಂಪೂರ್ಣ ವಿಫಲರಾಗಿದ್ದಾರೆ ಎನ್ನಬಹುದು.

4 / 9
ಇತ್ತ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಬಲ್ಲ ಆಟಗಾರನಾಗಿ ಮೈಕೆಲ್ ಬ್ರೇಸ್​ವೆಲ್ ಇದ್ದರೂ ಆರ್​ಸಿಬಿ ಅವಕಾಶ ನೀಡಿಲ್ಲ ಎಂಬುದೇ ಅಚ್ಚರಿ. ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಪಡೆದಿದ್ದ ಬ್ರೇಸ್​ವೆಲ್ 2 ವಿಕೆಟ್ ಪಡೆದಿದ್ದರು. ಅಲ್ಲದೆ ಒಂದು ಬಾರಿ ಬ್ಯಾಟ್ ಬೀಸಿ 19 ರನ್​ ಗಳಿಸಿದ್ದರು.

ಇತ್ತ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಬಲ್ಲ ಆಟಗಾರನಾಗಿ ಮೈಕೆಲ್ ಬ್ರೇಸ್​ವೆಲ್ ಇದ್ದರೂ ಆರ್​ಸಿಬಿ ಅವಕಾಶ ನೀಡಿಲ್ಲ ಎಂಬುದೇ ಅಚ್ಚರಿ. ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಪಡೆದಿದ್ದ ಬ್ರೇಸ್​ವೆಲ್ 2 ವಿಕೆಟ್ ಪಡೆದಿದ್ದರು. ಅಲ್ಲದೆ ಒಂದು ಬಾರಿ ಬ್ಯಾಟ್ ಬೀಸಿ 19 ರನ್​ ಗಳಿಸಿದ್ದರು.

5 / 9
ಆದರೆ ವನಿಂದು ಹಸರಂಗ ಆಗಮನದ ಬೆನ್ನಲ್ಲೇ ಮೈಕೆಲ್ ಬ್ರೇಸ್​ವೆಲ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಾಯಿತು. ಇತ್ತ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸತತ ವೈಫಲ್ಯ ಹೊಂದುತ್ತಿದ್ದರೂ, ಅತ್ಯುತ್ತಮ ಸ್ಪೋಟಕ ಬ್ಯಾಟ್ಸ್​ಮನ್ ಎನಿಸಿಕೊಂಡಿರುವ ಬ್ರೇಸ್​ವೆಲ್​ಗೆ ಮಾತ್ರ ಅವಕಾಶ ನೀಡಿರಲಿಲ್ಲ.

ಆದರೆ ವನಿಂದು ಹಸರಂಗ ಆಗಮನದ ಬೆನ್ನಲ್ಲೇ ಮೈಕೆಲ್ ಬ್ರೇಸ್​ವೆಲ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಾಯಿತು. ಇತ್ತ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಸತತ ವೈಫಲ್ಯ ಹೊಂದುತ್ತಿದ್ದರೂ, ಅತ್ಯುತ್ತಮ ಸ್ಪೋಟಕ ಬ್ಯಾಟ್ಸ್​ಮನ್ ಎನಿಸಿಕೊಂಡಿರುವ ಬ್ರೇಸ್​ವೆಲ್​ಗೆ ಮಾತ್ರ ಅವಕಾಶ ನೀಡಿರಲಿಲ್ಲ.

6 / 9
ಅದರಲ್ಲೂ ಚಿನ್ನಸ್ವಾಮಿ ಮೈದಾನವು ಬ್ಯಾಟ್ಸ್​ಮನ್​ಗಳ ಸ್ವರ್ಗ. ಇಲ್ಲೂ ಕೂಡ ಆರ್​ಸಿಬಿ ವನಿಂದು ಹಸರಂಗ ಹಾಗೂ ಡೇವಿಡ್ ವಿಲ್ಲಿಯನ್ನು ಕಣಕ್ಕಿಳಿಸಿ ಹೊಡಿಬಡಿ ದಾಂಡಿಗ ಎನಿಸಿಕೊಂಡಿರುವ ಬ್ರೇಸ್​ವೆಲ್​ರನ್ನು ಹೊರಗಿಟ್ಟಿರುವುದೇ ಅಚ್ಚರಿ.

ಅದರಲ್ಲೂ ಚಿನ್ನಸ್ವಾಮಿ ಮೈದಾನವು ಬ್ಯಾಟ್ಸ್​ಮನ್​ಗಳ ಸ್ವರ್ಗ. ಇಲ್ಲೂ ಕೂಡ ಆರ್​ಸಿಬಿ ವನಿಂದು ಹಸರಂಗ ಹಾಗೂ ಡೇವಿಡ್ ವಿಲ್ಲಿಯನ್ನು ಕಣಕ್ಕಿಳಿಸಿ ಹೊಡಿಬಡಿ ದಾಂಡಿಗ ಎನಿಸಿಕೊಂಡಿರುವ ಬ್ರೇಸ್​ವೆಲ್​ರನ್ನು ಹೊರಗಿಟ್ಟಿರುವುದೇ ಅಚ್ಚರಿ.

7 / 9
ಇಲ್ಲಿ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ವಿಫಲರಾಗುತ್ತಿದ್ದ ಕಾರಣ ಬ್ಯಾಟಿಂಗ್ ಆಲ್​ರೌಂಡರ್ ಎನಿಸಿಕೊಂಡಿರುವ ಬ್ರೇಸ್​ವೆಲ್ ಉತ್ತಮ ಆಯ್ಕೆಯಾಗಿದ್ದರು. ಅಲ್ಲದೆ ಅವರನ್ನು ಪಾರ್ಟ್ ಟೈಮ್ ಬೌಲರ್ ಆಗಿಯೂ ಕೂಡ ಬಳಸಿಕೊಳ್ಳಬಹುದಿತ್ತು. ಅಷ್ಟೇ ಅಲ್ಲದೆ ಮ್ಯಾಕ್ಸ್​ವೆಲ್ ಅವರನ್ನು ಸಹ ಹೆಚ್ಚುವರಿ ಸ್ಪಿನ್ನರ್ ಆಗಿ ಬಳಸಿಕೊಳ್ಳುವ ಉತ್ತಮ ಅವಕಾಶವಿತ್ತು.

ಇಲ್ಲಿ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ವಿಫಲರಾಗುತ್ತಿದ್ದ ಕಾರಣ ಬ್ಯಾಟಿಂಗ್ ಆಲ್​ರೌಂಡರ್ ಎನಿಸಿಕೊಂಡಿರುವ ಬ್ರೇಸ್​ವೆಲ್ ಉತ್ತಮ ಆಯ್ಕೆಯಾಗಿದ್ದರು. ಅಲ್ಲದೆ ಅವರನ್ನು ಪಾರ್ಟ್ ಟೈಮ್ ಬೌಲರ್ ಆಗಿಯೂ ಕೂಡ ಬಳಸಿಕೊಳ್ಳಬಹುದಿತ್ತು. ಅಷ್ಟೇ ಅಲ್ಲದೆ ಮ್ಯಾಕ್ಸ್​ವೆಲ್ ಅವರನ್ನು ಸಹ ಹೆಚ್ಚುವರಿ ಸ್ಪಿನ್ನರ್ ಆಗಿ ಬಳಸಿಕೊಳ್ಳುವ ಉತ್ತಮ ಅವಕಾಶವಿತ್ತು.

8 / 9
ಇದಾಗ್ಯೂ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಇಬ್ಬರು ಬೌಲಿಂಗ್ ಆಲ್​ರೌಂಡರ್​ಗಳನ್ನು ಕಣಕ್ಕಿಳಿಸಿ ಚೇಸಿಂಗ್​ಗೆ ಮುಂದಾಗಿರುವುದೇ ಅಚ್ಚರಿ. ಒಟ್ಟಿನಲ್ಲಿ ಮೈಕೆಲ್ ಬ್ರೇಸ್​ವೆಲ್​ನಂತಹ ಸ್ಪೋಟಕ ಬ್ಯಾಟರ್ ತಂಡದಲ್ಲಿದ್ದರೂ ಮಧ್ಯಮ ಕ್ರಮಾಂಕದಲ್ಲಿ ಸರಿಯಾಗಿ ಬಳಸಿಕೊಳ್ಳದಿರುವುದು ವಿಪರ್ಯಾಸವೇ ಸರಿ.

ಇದಾಗ್ಯೂ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಇಬ್ಬರು ಬೌಲಿಂಗ್ ಆಲ್​ರೌಂಡರ್​ಗಳನ್ನು ಕಣಕ್ಕಿಳಿಸಿ ಚೇಸಿಂಗ್​ಗೆ ಮುಂದಾಗಿರುವುದೇ ಅಚ್ಚರಿ. ಒಟ್ಟಿನಲ್ಲಿ ಮೈಕೆಲ್ ಬ್ರೇಸ್​ವೆಲ್​ನಂತಹ ಸ್ಪೋಟಕ ಬ್ಯಾಟರ್ ತಂಡದಲ್ಲಿದ್ದರೂ ಮಧ್ಯಮ ಕ್ರಮಾಂಕದಲ್ಲಿ ಸರಿಯಾಗಿ ಬಳಸಿಕೊಳ್ಳದಿರುವುದು ವಿಪರ್ಯಾಸವೇ ಸರಿ.

9 / 9

Published On - 10:10 pm, Thu, 27 April 23

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ