IPL 2023: ಮೈದಾನದಲ್ಲೇ ಧೋನಿ-ಜಡೇಜಾ ನಡುವೆ ಮಾತಿನ ಚಕಮಕಿ..!

Edited By:

Updated on: May 22, 2023 | 3:58 PM

IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಎಲ್ಲಾ ಆಟಗಾರರು ಸಂಭ್ರಮದಲ್ಲಿದ್ದರೆ, ಇತ್ತ ಮಹೇಂದ್ರ ಸಿಂಗ್ ಧೋನಿ ರವೀಂದ್ರ ಜಡೇಜಾ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು.

1 / 6
IPL 2023: ಐಪಿಎಲ್​ ಸೀಸನ್ 16 ರಲ್ಲಿ ಪ್ಲೇಆಫ್ ಪ್ರವೇಶಿಸಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವಣ ವಾಕ್ಸಮರ.

IPL 2023: ಐಪಿಎಲ್​ ಸೀಸನ್ 16 ರಲ್ಲಿ ಪ್ಲೇಆಫ್ ಪ್ರವೇಶಿಸಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಕಾರಣ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವಣ ವಾಕ್ಸಮರ.

2 / 6

ಹೌದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನ ಬಳಿಕ ಸಿಎಸ್​ಕೆ ತಂಡದ ಎಲ್ಲಾ ಆಟಗಾರರು ಸಂಭ್ರಮದಲ್ಲಿದ್ದರೆ, ಇತ್ತ ಮಹೇಂದ್ರ ಸಿಂಗ್ ಧೋನಿ ರವೀಂದ್ರ ಜಡೇಜಾ ಅವರೊಂದಿಗೆ ವಾಗ್ವಾದಕ್ಕಿಳಿದಿದ್ದರು.

3 / 6

ಸಿಎಸ್​ಕೆ ತಂಡದ ನಾಯಕನ ಮಾತನ್ನು ಆಲಿಸಿದ್ದ ಜಡೇಜಾ ಅವರ ಮುಖದಲ್ಲಿ ನಿರಾಶಭಾವ ಎದ್ದು ಕಾಣುತ್ತಿತ್ತು. ಅಲ್ಲದೆ ಈ ಮಾತುಕತೆಯೊಂದಿಗೆ ಧೋನಿ ಜಡೇಜಾರನ್ನು ಡಗೌಟ್​ಗೆ ಕರೆದೊಯ್ದಿದ್ದರು. ಇದಾಗ್ಯೂ ಜಡೇಜಾ ಅವರ ಮುಖದಲ್ಲಿ ಯಾವುದೇ ಗೆಲುವಿನ ನಗು ಮಾತ್ರ ಬಂದಿರಲಿಲ್ಲ.

4 / 6

ಇದರ ಬೆನ್ನಲ್ಲೇ ಧೋನಿ ಹಾಗೂ ಜಡೇಜಾ ನಡುವಣ ವಾಕ್ಸಮರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಇಬ್ಬರ ನಡುವೆ ಬಿರುಕು ಮೂಡಿದ್ಯಾ ಎಂಬ ಅನುಮಾನಗಳು ಕೂಡ ಹುಟ್ಟಿಕೊಂಡಿದೆ.

5 / 6

ಏಕೆಂದರೆ ಕಳೆದ ಸೀಸನ್​ನಲ್ಲಿ ಜಡೇಜಾ ಅವರನ್ನು ನಾಯಕರನ್ನಾಗಿಸಿದ ಸಿಎಸ್​ಕೆ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದರು. ಅಲ್ಲದೆ ಈ ಬಾರಿ ಜಡೇಜಾ ಸಿಎಸ್​ಕೆ ಪರ ಆಡುವುದಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು.

6 / 6

ಆದರೆ ಅಂತಿಮ ಕ್ಷಣದಲ್ಲಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಜಡೇಜಾ ಸಿಎಸ್​ಕೆ ತಂಡದಲ್ಲೇ ಮುಂದುವರೆಯುವುದಾಗಿ ತಿಳಿಸಿದ್ದರು. ಇದೀಗ ಮೈದಾನದಲ್ಲೇ ಧೋನಿ ಜಡೇಜಾಗೆ ಕ್ಲಾಸ್ ತೆಗೆದುಕೊಂಡಿರುವುದು ಸಿಎಸ್​ಕೆ ತಂಡದ ಸ್ಟಾರ್ ಆಟಗಾರರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

Loading...
Unable to load recommendations.
Follow Us