AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಸೋಲನ್ನು ಸಂಭ್ರಮಿಸಿದ್ರಾ ನವೀನ್ ಉಲ್ ಹಕ್?

IPL 2023 Kannada: ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು.

TV9 Web
| Edited By: |

Updated on: May 22, 2023 | 3:21 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್​ನಿಂದ ಹೊರಬಿದ್ದಿದೆ. ಪ್ಲೇಆಫ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಆರ್​ಸಿಬಿ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್​ನಿಂದ ಹೊರಬಿದ್ದಿದೆ. ಪ್ಲೇಆಫ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಆರ್​ಸಿಬಿ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

1 / 8
ಇತ್ತ ಆರ್​ಸಿಬಿ ತಂಡ ಸೋಲುತ್ತಿದ್ದಂತೆ ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ.

ಇತ್ತ ಆರ್​ಸಿಬಿ ತಂಡ ಸೋಲುತ್ತಿದ್ದಂತೆ ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ.

2 / 8
ತಮಾಷೆಯಿಂದ ಕೂಡಿರುವ ಪೋಸ್ಟ್​ನಲ್ಲಿ ವ್ಯಕ್ತಿಯೊಬ್ಬರು ಸಖತ್ ಸಂತಸದಿಂದ ನಗುತ್ತಿರುವುದನ್ನು ಕಾಣಬಹುದು. ಇತ್ತ ಆರ್​ಸಿಬಿ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುತ್ತಿದ್ದಂತೆ ನವೀನ್ ಇಂತಹದೊಂದು ಪೋಸ್ಟ್ ಹಂಚಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ತಮಾಷೆಯಿಂದ ಕೂಡಿರುವ ಪೋಸ್ಟ್​ನಲ್ಲಿ ವ್ಯಕ್ತಿಯೊಬ್ಬರು ಸಖತ್ ಸಂತಸದಿಂದ ನಗುತ್ತಿರುವುದನ್ನು ಕಾಣಬಹುದು. ಇತ್ತ ಆರ್​ಸಿಬಿ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುತ್ತಿದ್ದಂತೆ ನವೀನ್ ಇಂತಹದೊಂದು ಪೋಸ್ಟ್ ಹಂಚಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

3 / 8
ಅದರಲ್ಲೂ ಆರ್​ಸಿಬಿ ತಂಡದ ಸೋಲನ್ನು ನವೀನ್ ಉಲ್ ಹಕ್ ಈ ರೀತಿಯಾಗಿ ಸಂಭ್ರಮಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾದಾಗ ನವೀನ್ ಸ್ವೀಟ್ ಮ್ಯಾಂಗೋ ಎಂದು ಪೋಸ್ಟ್ ಹಾಕಿ ಕಿಚಾಯಿಸಿದ್ದರು.

ಅದರಲ್ಲೂ ಆರ್​ಸಿಬಿ ತಂಡದ ಸೋಲನ್ನು ನವೀನ್ ಉಲ್ ಹಕ್ ಈ ರೀತಿಯಾಗಿ ಸಂಭ್ರಮಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾದಾಗ ನವೀನ್ ಸ್ವೀಟ್ ಮ್ಯಾಂಗೋ ಎಂದು ಪೋಸ್ಟ್ ಹಾಕಿ ಕಿಚಾಯಿಸಿದ್ದರು.

4 / 8
ಇದೀಗ ಹೀಯಾಳಿಸುವ ನಗುವನ್ನು ಹೊಂದಿರುವ ಪೋಸ್ಟ್​ವೊಂದನ್ನು ಹಾಕಿ ನವೀನ್ ಉಲ್ ಹಕ್ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೀಗ ಹೀಯಾಳಿಸುವ ನಗುವನ್ನು ಹೊಂದಿರುವ ಪೋಸ್ಟ್​ವೊಂದನ್ನು ಹಾಕಿ ನವೀನ್ ಉಲ್ ಹಕ್ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

5 / 8
ಅಂದಹಾಗೆ ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೆ ಹಸ್ತಲಾಘವ ನೀಡುವ ವೇಳೆಯು ಕೊಹ್ಲಿ ಜೊತೆ ನವೀನ್ ಕಿತ್ತಾಡಿಕೊಂಡಿದ್ದರು.

ಅಂದಹಾಗೆ ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೆ ಹಸ್ತಲಾಘವ ನೀಡುವ ವೇಳೆಯು ಕೊಹ್ಲಿ ಜೊತೆ ನವೀನ್ ಕಿತ್ತಾಡಿಕೊಂಡಿದ್ದರು.

6 / 8
ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್​ ಹಕ್​ಗೆ ಬಿಸಿಸಿಐ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಅಲ್ಲಿಗೆ ಮುಕ್ತಾಯವಾಗಬೇಕಿದ್ದ ಆಟಗಾರರ ನಡುವಣ ಜಿದ್ದಾಜಿದ್ದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿದೆ.

ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್​ ಹಕ್​ಗೆ ಬಿಸಿಸಿಐ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಅಲ್ಲಿಗೆ ಮುಕ್ತಾಯವಾಗಬೇಕಿದ್ದ ಆಟಗಾರರ ನಡುವಣ ಜಿದ್ದಾಜಿದ್ದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿದೆ.

7 / 8
ಇದರ ನಡುವೆ ಮತ್ತೊಮ್ಮೆ ಅಭಿಮಾನಿಗಳನ್ನು ಕೆಣಕುವಂತಹ ಪೋಸ್ಟ್ ಹಾಕುವ ಮೂಲಕ ನವೀನ್ ಉಲ್ ಹಕ್ ಆರ್​ಸಿಬಿ ಫ್ಯಾನ್ಸ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದರ ನಡುವೆ ಮತ್ತೊಮ್ಮೆ ಅಭಿಮಾನಿಗಳನ್ನು ಕೆಣಕುವಂತಹ ಪೋಸ್ಟ್ ಹಾಕುವ ಮೂಲಕ ನವೀನ್ ಉಲ್ ಹಕ್ ಆರ್​ಸಿಬಿ ಫ್ಯಾನ್ಸ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

8 / 8
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ