AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಸೋಲನ್ನು ಸಂಭ್ರಮಿಸಿದ್ರಾ ನವೀನ್ ಉಲ್ ಹಕ್?

IPL 2023 Kannada: ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು.

TV9 Web
| Updated By: ಝಾಹಿರ್ ಯೂಸುಫ್|

Updated on: May 22, 2023 | 3:21 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್​ನಿಂದ ಹೊರಬಿದ್ದಿದೆ. ಪ್ಲೇಆಫ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಆರ್​ಸಿಬಿ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್​ನಿಂದ ಹೊರಬಿದ್ದಿದೆ. ಪ್ಲೇಆಫ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಆರ್​ಸಿಬಿ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

1 / 8
ಇತ್ತ ಆರ್​ಸಿಬಿ ತಂಡ ಸೋಲುತ್ತಿದ್ದಂತೆ ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ.

ಇತ್ತ ಆರ್​ಸಿಬಿ ತಂಡ ಸೋಲುತ್ತಿದ್ದಂತೆ ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ.

2 / 8
ತಮಾಷೆಯಿಂದ ಕೂಡಿರುವ ಪೋಸ್ಟ್​ನಲ್ಲಿ ವ್ಯಕ್ತಿಯೊಬ್ಬರು ಸಖತ್ ಸಂತಸದಿಂದ ನಗುತ್ತಿರುವುದನ್ನು ಕಾಣಬಹುದು. ಇತ್ತ ಆರ್​ಸಿಬಿ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುತ್ತಿದ್ದಂತೆ ನವೀನ್ ಇಂತಹದೊಂದು ಪೋಸ್ಟ್ ಹಂಚಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ತಮಾಷೆಯಿಂದ ಕೂಡಿರುವ ಪೋಸ್ಟ್​ನಲ್ಲಿ ವ್ಯಕ್ತಿಯೊಬ್ಬರು ಸಖತ್ ಸಂತಸದಿಂದ ನಗುತ್ತಿರುವುದನ್ನು ಕಾಣಬಹುದು. ಇತ್ತ ಆರ್​ಸಿಬಿ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುತ್ತಿದ್ದಂತೆ ನವೀನ್ ಇಂತಹದೊಂದು ಪೋಸ್ಟ್ ಹಂಚಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

3 / 8
ಅದರಲ್ಲೂ ಆರ್​ಸಿಬಿ ತಂಡದ ಸೋಲನ್ನು ನವೀನ್ ಉಲ್ ಹಕ್ ಈ ರೀತಿಯಾಗಿ ಸಂಭ್ರಮಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾದಾಗ ನವೀನ್ ಸ್ವೀಟ್ ಮ್ಯಾಂಗೋ ಎಂದು ಪೋಸ್ಟ್ ಹಾಕಿ ಕಿಚಾಯಿಸಿದ್ದರು.

ಅದರಲ್ಲೂ ಆರ್​ಸಿಬಿ ತಂಡದ ಸೋಲನ್ನು ನವೀನ್ ಉಲ್ ಹಕ್ ಈ ರೀತಿಯಾಗಿ ಸಂಭ್ರಮಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾದಾಗ ನವೀನ್ ಸ್ವೀಟ್ ಮ್ಯಾಂಗೋ ಎಂದು ಪೋಸ್ಟ್ ಹಾಕಿ ಕಿಚಾಯಿಸಿದ್ದರು.

4 / 8
ಇದೀಗ ಹೀಯಾಳಿಸುವ ನಗುವನ್ನು ಹೊಂದಿರುವ ಪೋಸ್ಟ್​ವೊಂದನ್ನು ಹಾಕಿ ನವೀನ್ ಉಲ್ ಹಕ್ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೀಗ ಹೀಯಾಳಿಸುವ ನಗುವನ್ನು ಹೊಂದಿರುವ ಪೋಸ್ಟ್​ವೊಂದನ್ನು ಹಾಕಿ ನವೀನ್ ಉಲ್ ಹಕ್ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

5 / 8
ಅಂದಹಾಗೆ ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೆ ಹಸ್ತಲಾಘವ ನೀಡುವ ವೇಳೆಯು ಕೊಹ್ಲಿ ಜೊತೆ ನವೀನ್ ಕಿತ್ತಾಡಿಕೊಂಡಿದ್ದರು.

ಅಂದಹಾಗೆ ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೆ ಹಸ್ತಲಾಘವ ನೀಡುವ ವೇಳೆಯು ಕೊಹ್ಲಿ ಜೊತೆ ನವೀನ್ ಕಿತ್ತಾಡಿಕೊಂಡಿದ್ದರು.

6 / 8
ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್​ ಹಕ್​ಗೆ ಬಿಸಿಸಿಐ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಅಲ್ಲಿಗೆ ಮುಕ್ತಾಯವಾಗಬೇಕಿದ್ದ ಆಟಗಾರರ ನಡುವಣ ಜಿದ್ದಾಜಿದ್ದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿದೆ.

ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್​ ಹಕ್​ಗೆ ಬಿಸಿಸಿಐ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಅಲ್ಲಿಗೆ ಮುಕ್ತಾಯವಾಗಬೇಕಿದ್ದ ಆಟಗಾರರ ನಡುವಣ ಜಿದ್ದಾಜಿದ್ದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿದೆ.

7 / 8
ಇದರ ನಡುವೆ ಮತ್ತೊಮ್ಮೆ ಅಭಿಮಾನಿಗಳನ್ನು ಕೆಣಕುವಂತಹ ಪೋಸ್ಟ್ ಹಾಕುವ ಮೂಲಕ ನವೀನ್ ಉಲ್ ಹಕ್ ಆರ್​ಸಿಬಿ ಫ್ಯಾನ್ಸ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದರ ನಡುವೆ ಮತ್ತೊಮ್ಮೆ ಅಭಿಮಾನಿಗಳನ್ನು ಕೆಣಕುವಂತಹ ಪೋಸ್ಟ್ ಹಾಕುವ ಮೂಲಕ ನವೀನ್ ಉಲ್ ಹಕ್ ಆರ್​ಸಿಬಿ ಫ್ಯಾನ್ಸ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

8 / 8
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?