AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಸೋಲನ್ನು ಸಂಭ್ರಮಿಸಿದ್ರಾ ನವೀನ್ ಉಲ್ ಹಕ್?

IPL 2023 Kannada: ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: May 22, 2023 | 3:21 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್​ನಿಂದ ಹೊರಬಿದ್ದಿದೆ. ಪ್ಲೇಆಫ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಆರ್​ಸಿಬಿ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್​ನಿಂದ ಹೊರಬಿದ್ದಿದೆ. ಪ್ಲೇಆಫ್ ಪ್ರವೇಶಿಸಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಆರ್​ಸಿಬಿ 6 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿತು.

1 / 8
ಇತ್ತ ಆರ್​ಸಿಬಿ ತಂಡ ಸೋಲುತ್ತಿದ್ದಂತೆ ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ.

ಇತ್ತ ಆರ್​ಸಿಬಿ ತಂಡ ಸೋಲುತ್ತಿದ್ದಂತೆ ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ನವೀನ್ ಉಲ್ ಹಕ್ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ.

2 / 8
ತಮಾಷೆಯಿಂದ ಕೂಡಿರುವ ಪೋಸ್ಟ್​ನಲ್ಲಿ ವ್ಯಕ್ತಿಯೊಬ್ಬರು ಸಖತ್ ಸಂತಸದಿಂದ ನಗುತ್ತಿರುವುದನ್ನು ಕಾಣಬಹುದು. ಇತ್ತ ಆರ್​ಸಿಬಿ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುತ್ತಿದ್ದಂತೆ ನವೀನ್ ಇಂತಹದೊಂದು ಪೋಸ್ಟ್ ಹಂಚಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

ತಮಾಷೆಯಿಂದ ಕೂಡಿರುವ ಪೋಸ್ಟ್​ನಲ್ಲಿ ವ್ಯಕ್ತಿಯೊಬ್ಬರು ಸಖತ್ ಸಂತಸದಿಂದ ನಗುತ್ತಿರುವುದನ್ನು ಕಾಣಬಹುದು. ಇತ್ತ ಆರ್​ಸಿಬಿ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲುತ್ತಿದ್ದಂತೆ ನವೀನ್ ಇಂತಹದೊಂದು ಪೋಸ್ಟ್ ಹಂಚಿಕೊಂಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.

3 / 8
ಅದರಲ್ಲೂ ಆರ್​ಸಿಬಿ ತಂಡದ ಸೋಲನ್ನು ನವೀನ್ ಉಲ್ ಹಕ್ ಈ ರೀತಿಯಾಗಿ ಸಂಭ್ರಮಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾದಾಗ ನವೀನ್ ಸ್ವೀಟ್ ಮ್ಯಾಂಗೋ ಎಂದು ಪೋಸ್ಟ್ ಹಾಕಿ ಕಿಚಾಯಿಸಿದ್ದರು.

ಅದರಲ್ಲೂ ಆರ್​ಸಿಬಿ ತಂಡದ ಸೋಲನ್ನು ನವೀನ್ ಉಲ್ ಹಕ್ ಈ ರೀತಿಯಾಗಿ ಸಂಭ್ರಮಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಏಕೆಂದರೆ ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಔಟಾದಾಗ ನವೀನ್ ಸ್ವೀಟ್ ಮ್ಯಾಂಗೋ ಎಂದು ಪೋಸ್ಟ್ ಹಾಕಿ ಕಿಚಾಯಿಸಿದ್ದರು.

4 / 8
ಇದೀಗ ಹೀಯಾಳಿಸುವ ನಗುವನ್ನು ಹೊಂದಿರುವ ಪೋಸ್ಟ್​ವೊಂದನ್ನು ಹಾಕಿ ನವೀನ್ ಉಲ್ ಹಕ್ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೀಗ ಹೀಯಾಳಿಸುವ ನಗುವನ್ನು ಹೊಂದಿರುವ ಪೋಸ್ಟ್​ವೊಂದನ್ನು ಹಾಕಿ ನವೀನ್ ಉಲ್ ಹಕ್ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

5 / 8
ಅಂದಹಾಗೆ ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೆ ಹಸ್ತಲಾಘವ ನೀಡುವ ವೇಳೆಯು ಕೊಹ್ಲಿ ಜೊತೆ ನವೀನ್ ಕಿತ್ತಾಡಿಕೊಂಡಿದ್ದರು.

ಅಂದಹಾಗೆ ನವೀನ್ ಉಲ್ ಹಕ್ ಈಗಾಗಲೇ ಆರ್​ಸಿಬಿ ಹಾಗೂ ವಿರಾಟ್ ಕೊಹ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೇ 1 ರಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ನವೀನ್ ಉಲ್ ಹಕ್ ನಡುವೆ ವಾಕ್ಸಮರ ನಡೆದಿತ್ತು. ಅಲ್ಲದೆ ಹಸ್ತಲಾಘವ ನೀಡುವ ವೇಳೆಯು ಕೊಹ್ಲಿ ಜೊತೆ ನವೀನ್ ಕಿತ್ತಾಡಿಕೊಂಡಿದ್ದರು.

6 / 8
ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್​ ಹಕ್​ಗೆ ಬಿಸಿಸಿಐ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಅಲ್ಲಿಗೆ ಮುಕ್ತಾಯವಾಗಬೇಕಿದ್ದ ಆಟಗಾರರ ನಡುವಣ ಜಿದ್ದಾಜಿದ್ದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿದೆ.

ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಹಾಗೂ ನವೀನ್ ಉಲ್​ ಹಕ್​ಗೆ ಬಿಸಿಸಿಐ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಅಲ್ಲಿಗೆ ಮುಕ್ತಾಯವಾಗಬೇಕಿದ್ದ ಆಟಗಾರರ ನಡುವಣ ಜಿದ್ದಾಜಿದ್ದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮುಂದುವರೆದಿದೆ.

7 / 8
ಇದರ ನಡುವೆ ಮತ್ತೊಮ್ಮೆ ಅಭಿಮಾನಿಗಳನ್ನು ಕೆಣಕುವಂತಹ ಪೋಸ್ಟ್ ಹಾಕುವ ಮೂಲಕ ನವೀನ್ ಉಲ್ ಹಕ್ ಆರ್​ಸಿಬಿ ಫ್ಯಾನ್ಸ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದರ ನಡುವೆ ಮತ್ತೊಮ್ಮೆ ಅಭಿಮಾನಿಗಳನ್ನು ಕೆಣಕುವಂತಹ ಪೋಸ್ಟ್ ಹಾಕುವ ಮೂಲಕ ನವೀನ್ ಉಲ್ ಹಕ್ ಆರ್​ಸಿಬಿ ಫ್ಯಾನ್ಸ್​ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

8 / 8
Follow us
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​