AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಫೈನಲ್​ಗೆ ಎಂಟ್ರಿ ಕೊಟ್ಟ ಚೆನ್ನೈ ಸೂಪರ್ ಕಿಂಗ್ಸ್​

IPL 2023 CSK Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on:May 23, 2023 | 11:30 PM

Share
IPL 2023 GT vs CSK: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​​ಗೆ ಸೋಲುಣಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.

IPL 2023 GT vs CSK: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​​ಗೆ ಸೋಲುಣಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.

1 / 9
ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡಕ್ಕೆ ಆರಂಭಿಕರಾದ ಡೆವೊನ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ಒದಗಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡಕ್ಕೆ ಆರಂಭಿಕರಾದ ಡೆವೊನ್ ಕಾನ್ವೆ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ಒದಗಿಸಿದ್ದರು.

2 / 9
ಮೊದಲ ವಿಕೆಟ್​ಗೆ 87 ರನ್ ಪೇರಿಸಿದ ಈ ಜೋಡಿಯನ್ನು ಮೋಹಿತ್ ಶರ್ಮಾ ಬೇರ್ಪಡಿಸಿದರು. ಅದರಂತೆ 60 ರನ್ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ಮೊದಲು ನಿರ್ಗಮಿಸಿದರು. ಆ ಬಳಿಕ ಕಾನ್ವೆ (40) ಕೂಡ ವಿಕೆಟ್ ಕೈಚೆಲ್ಲಿದರು.

ಮೊದಲ ವಿಕೆಟ್​ಗೆ 87 ರನ್ ಪೇರಿಸಿದ ಈ ಜೋಡಿಯನ್ನು ಮೋಹಿತ್ ಶರ್ಮಾ ಬೇರ್ಪಡಿಸಿದರು. ಅದರಂತೆ 60 ರನ್ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ಮೊದಲು ನಿರ್ಗಮಿಸಿದರು. ಆ ಬಳಿಕ ಕಾನ್ವೆ (40) ಕೂಡ ವಿಕೆಟ್ ಕೈಚೆಲ್ಲಿದರು.

3 / 9
ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಸಿಎಸ್​ಕೆ ತಂಡವು ಕುಸಿತಕ್ಕೊಳಗಾದರೂ ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್​ ಪೇರಿಸುವಲ್ಲಿ ಯಶಸ್ವಿಯಾದರು.

ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಸಿಎಸ್​ಕೆ ತಂಡವು ಕುಸಿತಕ್ಕೊಳಗಾದರೂ ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 172 ರನ್​ ಪೇರಿಸುವಲ್ಲಿ ಯಶಸ್ವಿಯಾದರು.

4 / 9
173 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಪವರ್​ಪ್ಲೇನಲ್ಲೇ ವೃದ್ದಿಮಾನ್ ಸಾಹ ಹಾಗೂ ಹಾರ್ದಿಕ್ ಪಾಂಡ್ಯ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

173 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಪವರ್​ಪ್ಲೇನಲ್ಲೇ ವೃದ್ದಿಮಾನ್ ಸಾಹ ಹಾಗೂ ಹಾರ್ದಿಕ್ ಪಾಂಡ್ಯ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

5 / 9
ಇದಾಗ್ಯೂ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ ಶುಭ್​ಮನ್ ಗಿಲ್ 40 ರನ್ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಆದರೆ ಗಿಲ್ ನಿರ್ಗಮನದ ಬೆನ್ನಲ್ಲೇ ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ ಕೂಡ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ ಶುಭ್​ಮನ್ ಗಿಲ್ 40 ರನ್ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಆದರೆ ಗಿಲ್ ನಿರ್ಗಮನದ ಬೆನ್ನಲ್ಲೇ ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ ಕೂಡ ವಿಕೆಟ್ ಒಪ್ಪಿಸಿದರು.

6 / 9
ಕೊನೆಯ 4 ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್​ಗೆ ಗೆಲ್ಲಲು 58 ರನ್​ಗಳು ಬೇಕಿತ್ತು. ಈ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ರಶೀದ್ ಖಾನ್ 30 ರನ್ ಬಾರಿಸಿ ಔಟಾದರು. ಇದಾಗ್ಯೂ ಕೊನೆಯ ಓವರ್​ನಲ್ಲಿ 27 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡವು 157 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಸ್​ಕೆ 15 ರನ್​ಗಳ ಭರ್ಜರಿ ಜಯ ಸಾಧಿಸಿತು.

ಕೊನೆಯ 4 ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್​ಗೆ ಗೆಲ್ಲಲು 58 ರನ್​ಗಳು ಬೇಕಿತ್ತು. ಈ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ರಶೀದ್ ಖಾನ್ 30 ರನ್ ಬಾರಿಸಿ ಔಟಾದರು. ಇದಾಗ್ಯೂ ಕೊನೆಯ ಓವರ್​ನಲ್ಲಿ 27 ರನ್​ಗಳ ಗುರಿ ಪಡೆದ ಗುಜರಾತ್ ಟೈಟಾನ್ಸ್ ತಂಡವು 157 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಸಿಎಸ್​ಕೆ 15 ರನ್​ಗಳ ಭರ್ಜರಿ ಜಯ ಸಾಧಿಸಿತು.

7 / 9
ಅಂದಹಾಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್​ನಲ್ಲಿ ಫೈನಲ್ ಪ್ರವೇಶಿಸುತ್ತಿರುವುದು ಇದು 10ನೇ ಬಾರಿ. ಅಂದರೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಐಪಿಎಲ್ ಫೈನಲ್ ಆಡಿದ ದಾಖಲೆ ಸಿಎಸ್​ಕೆ ತಂಡದ ಹೆಸರಿನಲ್ಲಿದೆ. 2ನೇ ಸ್ಥಾನದಲ್ಲಿ 6 ಫೈನಲ್ ಪಂದ್ಯವಾಡಿದ ಮುಂಬೈ ಇಂಡಿಯನ್ಸ್ ಇದೆ.

ಅಂದಹಾಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್​ನಲ್ಲಿ ಫೈನಲ್ ಪ್ರವೇಶಿಸುತ್ತಿರುವುದು ಇದು 10ನೇ ಬಾರಿ. ಅಂದರೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಐಪಿಎಲ್ ಫೈನಲ್ ಆಡಿದ ದಾಖಲೆ ಸಿಎಸ್​ಕೆ ತಂಡದ ಹೆಸರಿನಲ್ಲಿದೆ. 2ನೇ ಸ್ಥಾನದಲ್ಲಿ 6 ಫೈನಲ್ ಪಂದ್ಯವಾಡಿದ ಮುಂಬೈ ಇಂಡಿಯನ್ಸ್ ಇದೆ.

8 / 9
ಈ ಸೋಲಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 2ನೇ ಕ್ವಾಲಿಫೈಯರ್ ಆಡಬೇಕಿದೆ. ಅಂದರೆ ಬುಧವಾರ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ಗೆಲ್ಲುವ ತಂಡದೊಡನೆ ಗುಜರಾತ್ ಟೈಟಾನ್ಸ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಸಿಎಸ್​ಕೆ ವಿರುದ್ಧ ಫೈನಲ್ ಆಡಲಿದೆ.

ಈ ಸೋಲಿನೊಂದಿಗೆ ಗುಜರಾತ್ ಟೈಟಾನ್ಸ್ ತಂಡವು 2ನೇ ಕ್ವಾಲಿಫೈಯರ್ ಆಡಬೇಕಿದೆ. ಅಂದರೆ ಬುಧವಾರ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ಗೆಲ್ಲುವ ತಂಡದೊಡನೆ ಗುಜರಾತ್ ಟೈಟಾನ್ಸ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡ ಸಿಎಸ್​ಕೆ ವಿರುದ್ಧ ಫೈನಲ್ ಆಡಲಿದೆ.

9 / 9

Published On - 11:24 pm, Tue, 23 May 23

ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!