AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕನ್ನಡಿಗನನ್ನು ಬೌಲಿಂಗ್ ಕೋಚ್ ಆಗಿ ಆಯ್ಕೆ ಮಾಡಿದ ಪಂಜಾಬ್ ಕಿಂಗ್ಸ್

IPL 2023 Kannada: ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Jan 16, 2023 | 6:28 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು ಭರ್ಜರಿ ತಯಾರಿಯಲ್ಲಿದೆ. ಈಗಾಗಲೇ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಟ್ರೆವರ್ ಬೇಲಿಸ್ ಅವರನ್ನು ನೇಮಿಸಲಾಗಿದೆ. ಇದೀಗ ತಂಡದ ಸ್ಪಿನ್ ಬೌಲಿಂಗ್ ಕೋಚ್ ಸ್ಥಾನಕ್ಕೆ ಕನ್ನಡಿಗ ಸುನೀಲ್ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು ಭರ್ಜರಿ ತಯಾರಿಯಲ್ಲಿದೆ. ಈಗಾಗಲೇ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಟ್ರೆವರ್ ಬೇಲಿಸ್ ಅವರನ್ನು ನೇಮಿಸಲಾಗಿದೆ. ಇದೀಗ ತಂಡದ ಸ್ಪಿನ್ ಬೌಲಿಂಗ್ ಕೋಚ್ ಸ್ಥಾನಕ್ಕೆ ಕನ್ನಡಿಗ ಸುನೀಲ್ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ.

1 / 5
ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಕಾಣಿಸಿಕೊಂಡಿದ್ದರು. ಅಲ್ಲದೆ ಬೌಲಿಂಗ್ ವಿಭಾಗದ ಉಸ್ತುವಾರಿಯನ್ನೂ ಕೂಡ ಕುಂಬ್ಳೆ ನೋಡಿಕೊಳ್ಳುತ್ತಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಕೋಚಿಂಗ್ ಸಿಬ್ಬಂದಿಗಳು ಬದಲಾಗಿದ್ದಾರೆ.

ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಕಾಣಿಸಿಕೊಂಡಿದ್ದರು. ಅಲ್ಲದೆ ಬೌಲಿಂಗ್ ವಿಭಾಗದ ಉಸ್ತುವಾರಿಯನ್ನೂ ಕೂಡ ಕುಂಬ್ಳೆ ನೋಡಿಕೊಳ್ಳುತ್ತಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಕೋಚಿಂಗ್ ಸಿಬ್ಬಂದಿಗಳು ಬದಲಾಗಿದ್ದಾರೆ.

2 / 5
ಹೀಗಾಗಿ ಹೊಸ ಸ್ಪಿನ್ ಬೌಲಿಂಗ್ ಕೋಚ್ ಆಗಿ ಸುನಿಲ್ ಜೋಶಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನಾಡಿದ್ದ ಜೋಶಿ 1 ವಿಕೆಟ್ ಪಡೆದಿದ್ದರು. 2008 ರ ಬಳಿಕ ಐಪಿಎಲ್​ನಿಂದ ಹೊರಗುಳಿದ ಜೋಶಿ ಟೀಮ್ ಇಂಡಿಯಾ ಆಯ್ಕೆ ಸಮಿತಿಯಲ್ಲೂ ಕಾಣಿಸಿಕೊಂಡಿದ್ದರು. ಆದರೆ ದಕ್ಷಿಣ ವಲಯ ಆಯ್ಕೆಗಾರ ಸ್ಥಾನದಿಂದ ಕೆಳಗಿಳಿದ ಬಳಿಕ ಜೋಶಿ ಇದೀಗ ಐಪಿಎಲ್​ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.

ಹೀಗಾಗಿ ಹೊಸ ಸ್ಪಿನ್ ಬೌಲಿಂಗ್ ಕೋಚ್ ಆಗಿ ಸುನಿಲ್ ಜೋಶಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಐಪಿಎಲ್​ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನಾಡಿದ್ದ ಜೋಶಿ 1 ವಿಕೆಟ್ ಪಡೆದಿದ್ದರು. 2008 ರ ಬಳಿಕ ಐಪಿಎಲ್​ನಿಂದ ಹೊರಗುಳಿದ ಜೋಶಿ ಟೀಮ್ ಇಂಡಿಯಾ ಆಯ್ಕೆ ಸಮಿತಿಯಲ್ಲೂ ಕಾಣಿಸಿಕೊಂಡಿದ್ದರು. ಆದರೆ ದಕ್ಷಿಣ ವಲಯ ಆಯ್ಕೆಗಾರ ಸ್ಥಾನದಿಂದ ಕೆಳಗಿಳಿದ ಬಳಿಕ ಜೋಶಿ ಇದೀಗ ಐಪಿಎಲ್​ ಮೂಲಕ ಹೊಸ ಇನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ.

3 / 5
ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ ಚೊಚ್ಚಲ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲೂ ಕಾಣಿಸಿಕೊಂಡಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಬೌಲಿಂಗ್ ಕೋಚ್ ಆಗಿ ಮತ್ತೆ ಐಪಿಎಲ್​ಗೆ ಹಿಂತಿರುಗುತ್ತಿರುವುದು ವಿಶೇಷ.

ಟೀಮ್ ಇಂಡಿಯಾ ಪರ 15 ಟೆಸ್ಟ್ ಪಂದ್ಯಗಳನ್ನಾಡಿರುವ ಸುನಿಲ್ ಜೋಶಿ ಒಟ್ಟು 41 ವಿಕೆಟ್ ಪಡೆದಿದ್ದಾರೆ. ಹಾಗೆಯೇ 69 ಏಕದಿನ ಪಂದ್ಯಗಳಿಂದ 69 ವಿಕೆಟ್ ಕಬಳಿಸಿದ್ದಾರೆ. ಅಷ್ಟೇ ಅಲ್ಲದೆ ಚೊಚ್ಚಲ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲೂ ಕಾಣಿಸಿಕೊಂಡಿದ್ದರು. ಇದೀಗ ಪಂಜಾಬ್ ಕಿಂಗ್ಸ್​ ಬೌಲಿಂಗ್ ಕೋಚ್ ಆಗಿ ಮತ್ತೆ ಐಪಿಎಲ್​ಗೆ ಹಿಂತಿರುಗುತ್ತಿರುವುದು ವಿಶೇಷ.

4 / 5
ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಶಾರುಖ್ ಖಾನ್, ಜಾನಿ ಬೈರ್‌ಸ್ಟೋವ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ , ಸಿಕಂದರ್ ರಾಜಾ, ಸ್ಯಾಮ್ ಕರನ್, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್.

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಶಾರುಖ್ ಖಾನ್, ಜಾನಿ ಬೈರ್‌ಸ್ಟೋವ್, ಪ್ರಭ್​ ಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಶಿವಂ ಸಿಂಗ್, ಮೋಹಿತ್ ರಥಿ, ವಿದ್ವತ್ ಕಾವೇರಪ್ಪ, ಹರ್‌ಪ್ರೀತ್ ಭಾಟಿಯಾ , ಸಿಕಂದರ್ ರಾಜಾ, ಸ್ಯಾಮ್ ಕರನ್, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಥೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ