IPL 2023: ಪಂಜಾಬ್ ಕಿಂಗ್ಸ್​ ಸೋಲು RCBಗೆ ಪ್ಲಸ್ ಪಾಯಿಂಟ್

IPL 2023 Kannada: ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

| Updated By: ಝಾಹಿರ್ ಯೂಸುಫ್

Updated on: May 18, 2023 | 4:57 PM

IPL 2023: ಐಪಿಎಲ್​ನ 64ನೇ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಹಿಂದುಳಿದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿ ಮಾರ್ಪಟ್ಟಿದೆ.

IPL 2023: ಐಪಿಎಲ್​ನ 64ನೇ ಪಂದ್ಯದಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಲ್ಲಿ ಹಿಂದುಳಿದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿ ಮಾರ್ಪಟ್ಟಿದೆ.

1 / 8
ಏಕೆಂದರೆ 64ನೇ ಪಂದ್ಯಕ್ಕೂ ಮುನ್ನ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

ಏಕೆಂದರೆ 64ನೇ ಪಂದ್ಯಕ್ಕೂ ಮುನ್ನ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಪ್ಲೇಆಫ್ ರೇಸ್​ನಲ್ಲಿ ಸಮಬಲದಲ್ಲಿದ್ದರು. ಉಭಯ ತಂಡಗಳು 12 ಅಂಕಗಳನ್ನು ಪಡೆದಿದ್ದರಿಂದ ಕೊನೆಯ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇತ್ತು.

2 / 8
ಆದರೀಗ ಪಂಜಾಬ್ ಕಿಂಗ್ಸ್ ಸೋತಿದ್ದರಿಂದ ಆರ್​ಸಿಬಿ ತಂಡದ ಹಾದಿ ಮತ್ತಷ್ಟು ಸುಗಮವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ತಂಡ ಕೊನೆಯ ಪಂದ್ಯದಲ್ಲಿ ಗೆದ್ದರೂ ಇನ್ನು 14 ಪಾಯಿಂಟ್ಸ್ ಮಾತ್ರ ಗಳಿಸಲಿದೆ.

ಆದರೀಗ ಪಂಜಾಬ್ ಕಿಂಗ್ಸ್ ಸೋತಿದ್ದರಿಂದ ಆರ್​ಸಿಬಿ ತಂಡದ ಹಾದಿ ಮತ್ತಷ್ಟು ಸುಗಮವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್ ತಂಡ ಕೊನೆಯ ಪಂದ್ಯದಲ್ಲಿ ಗೆದ್ದರೂ ಇನ್ನು 14 ಪಾಯಿಂಟ್ಸ್ ಮಾತ್ರ ಗಳಿಸಲಿದೆ.

3 / 8
ಇತ್ತ ಆರ್​ಸಿಬಿ ತನ್ನ ಮುಂದಿನ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಆರ್​ಸಿಬಿಗೆ ಮುಂಬೈ ಇಂಡಿಯನ್ಸ್ ತಂಡದಿಂದ ಪೈಪೋಟಿ ಎದುರಾಗಲಿದೆ.

ಇತ್ತ ಆರ್​ಸಿಬಿ ತನ್ನ ಮುಂದಿನ 2 ಪಂದ್ಯಗಳನ್ನು ಗೆದ್ದು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು. ಆದರೆ ಇಲ್ಲಿ ಆರ್​ಸಿಬಿಗೆ ಮುಂಬೈ ಇಂಡಿಯನ್ಸ್ ತಂಡದಿಂದ ಪೈಪೋಟಿ ಎದುರಾಗಲಿದೆ.

4 / 8
ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಕೊನೆಯ ಪಂದ್ಯದಲ್ಲಿ ಗೆದ್ದರೆ 16 ಪಾಯಿಂಟ್ಸ್​ಗಳಿಸಲಿದೆ. ಈ ಮೂಲಕ ಪ್ಲೇಆಫ್​ಗೆ ಪ್ರವೇಶಿಸುವ ಉತ್ತಮ ಅವಕಾಶ ಹೊಂದಿದೆ.

ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 14 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಕೊನೆಯ ಪಂದ್ಯದಲ್ಲಿ ಗೆದ್ದರೆ 16 ಪಾಯಿಂಟ್ಸ್​ಗಳಿಸಲಿದೆ. ಈ ಮೂಲಕ ಪ್ಲೇಆಫ್​ಗೆ ಪ್ರವೇಶಿಸುವ ಉತ್ತಮ ಅವಕಾಶ ಹೊಂದಿದೆ.

5 / 8
ಇತ್ತ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಇಲ್ಲಿ ಮುಂಬೈ ಇಂಡಿಯನ್ಸ್​ಗಿಂತ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಉತ್ತಮವಾಗಿದ್ದರೆ ಮಾತ್ರ ಫಾಫ್ ಡುಪ್ಲೆಸಿಸ್ ಪಡೆ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

ಇತ್ತ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಇಲ್ಲಿ ಮುಂಬೈ ಇಂಡಿಯನ್ಸ್​ಗಿಂತ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಉತ್ತಮವಾಗಿದ್ದರೆ ಮಾತ್ರ ಫಾಫ್ ಡುಪ್ಲೆಸಿಸ್ ಪಡೆ 4ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

6 / 8
ಆದರೆ ಇಲ್ಲಿ ಆರ್​ಸಿಬಿ ಲೀಗ್ ಹಂತದ ಕೊನೆಯ ಪಂದ್ಯವಾಡಲಿದೆ. ಇದುವೇ ಫಾಫ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ 16 ಅಂಕಗಳನ್ನು ಪಡೆದರೂ, ಆರ್​ಸಿಬಿ ಗುಜರಾತ್ ವಿರುದ್ಧದ ಕೊನೆಯ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್ ಮಾಡಿ ಗೆಲ್ಲಲು ಉತ್ತಮ ಅವಕಾಶವಿದೆ.

ಆದರೆ ಇಲ್ಲಿ ಆರ್​ಸಿಬಿ ಲೀಗ್ ಹಂತದ ಕೊನೆಯ ಪಂದ್ಯವಾಡಲಿದೆ. ಇದುವೇ ಫಾಫ್ ಪಡೆಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಮುಂಬೈ ಇಂಡಿಯನ್ಸ್ 16 ಅಂಕಗಳನ್ನು ಪಡೆದರೂ, ಆರ್​ಸಿಬಿ ಗುಜರಾತ್ ವಿರುದ್ಧದ ಕೊನೆಯ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್ ಮಾಡಿ ಗೆಲ್ಲಲು ಉತ್ತಮ ಅವಕಾಶವಿದೆ.

7 / 8
ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಬಹುದು.

ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸುವ ಮೂಲಕ ಆರ್​ಸಿಬಿ ತಂಡವು ಪ್ಲೇಆಫ್​ಗೆ ಪ್ರವೇಶಿಸಬಹುದು.

8 / 8
Follow us
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು