AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಹೀಗಾದ್ರೆ ರಾಜಸ್ಥಾನ್ ರಾಯಲ್ಸ್​ ಕೂಡ ಪ್ಲೇಆಫ್​ಗೆ ಪ್ರವೇಶಿಸಬಹುದು..!

IPL 2023 Kannada: ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ ಹಾಗೂ ಆರ್​ಸಿಬಿಯನ್ನು ಗುಜರಾತ್ ಟೈಟಾನ್ಸ್ ಸೋಲಿಸಿದರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 20, 2023 | 2:58 PM

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳ ಫಲಿತಾಂಶದ ಬೆನ್ನಲ್ಲೇ ಈ ಬಾರಿ ಪ್ಲೇಆಫ್ ಆಡುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ.

IPL 2023: ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಪಂದ್ಯಗಳ ಫಲಿತಾಂಶದ ಬೆನ್ನಲ್ಲೇ ಈ ಬಾರಿ ಪ್ಲೇಆಫ್ ಆಡುವ 4 ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ.

1 / 8
ಇದುವರೆಗೆ ಒಟ್ಟು 66 ಪಂದ್ಯಗಳು ಮುಗಿದರೂ ಪ್ಲೇಆಫ್ ಪ್ರವೇಶಿಸಿರುವುದು ಗುಜರಾತ್ ಟೈಟಾನ್ಸ್ ಮಾತ್ರ. ಇನ್ನುಳಿದ 3 ಸ್ಥಾನಗಳಿಗಾಗಿ 6 ತಂಗಳ ನಡುವೆ ಪೈಪೋಟಿ ಇದೆ ಎಂಬುದು ವಿಶೇಷ. ಆದರೆ ಈ ಪೈಪೋಟಿಯಲ್ಲಿ ಇತರೆ ತಂಡಗಳ ಫಲಿತಾಂಶ ಬಹಳ ಮುಖ್ಯವಾಗಿ ಪರಿಣಮಿಸಿದೆ.

ಇದುವರೆಗೆ ಒಟ್ಟು 66 ಪಂದ್ಯಗಳು ಮುಗಿದರೂ ಪ್ಲೇಆಫ್ ಪ್ರವೇಶಿಸಿರುವುದು ಗುಜರಾತ್ ಟೈಟಾನ್ಸ್ ಮಾತ್ರ. ಇನ್ನುಳಿದ 3 ಸ್ಥಾನಗಳಿಗಾಗಿ 6 ತಂಗಳ ನಡುವೆ ಪೈಪೋಟಿ ಇದೆ ಎಂಬುದು ವಿಶೇಷ. ಆದರೆ ಈ ಪೈಪೋಟಿಯಲ್ಲಿ ಇತರೆ ತಂಡಗಳ ಫಲಿತಾಂಶ ಬಹಳ ಮುಖ್ಯವಾಗಿ ಪರಿಣಮಿಸಿದೆ.

2 / 8
ಅಂದರೆ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಪಂದ್ಯಗಳನ್ನು ಗೆದ್ದುಕೊಂಡರೆ ಪ್ಲೇಆಫ್ ಪ್ರವೇಶಿಸುವುದು ಖಚಿತ. ಹಾಗೆಯೇ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡಗಳು ಮುಂದಿನ ಪಂದ್ಯ ಗೆದ್ದರೆ, ಹೆಚ್ಚು ನೆಟ್ ರನ್ ರೇಟ್​ ಹೊಂದಿರುವ ತಂಡ ಅಗ್ರ-4 ರಲ್ಲಿ ಸ್ಥಾನ ಪಡೆಯಲಿದೆ.

ಅಂದರೆ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಪಂದ್ಯಗಳನ್ನು ಗೆದ್ದುಕೊಂಡರೆ ಪ್ಲೇಆಫ್ ಪ್ರವೇಶಿಸುವುದು ಖಚಿತ. ಹಾಗೆಯೇ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡಗಳು ಮುಂದಿನ ಪಂದ್ಯ ಗೆದ್ದರೆ, ಹೆಚ್ಚು ನೆಟ್ ರನ್ ರೇಟ್​ ಹೊಂದಿರುವ ತಂಡ ಅಗ್ರ-4 ರಲ್ಲಿ ಸ್ಥಾನ ಪಡೆಯಲಿದೆ.

3 / 8
ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ ಹಾಗೂ ಆರ್​ಸಿಬಿಯನ್ನು ಗುಜರಾತ್ ಟೈಟಾನ್ಸ್ ಸೋಲಿಸಿದರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

ಒಂದು ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ ಗೆದ್ದರೆ ಹಾಗೂ ಆರ್​ಸಿಬಿಯನ್ನು ಗುಜರಾತ್ ಟೈಟಾನ್ಸ್ ಸೋಲಿಸಿದರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

4 / 8
ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್​ಗೆ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶ ಬಹಳ ಮುಖ್ಯ.

ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್​ಗೆ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡಗಳ ಮುಂದಿನ ಪಂದ್ಯಗಳ ಫಲಿತಾಂಶ ಬಹಳ ಮುಖ್ಯ.

5 / 8
ಇಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದರೆ ರಾಜಸ್ಥಾನ್ ರಾಯಲ್ಸ್ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವನ್ನು ಎದುರು ನೋಡಲಿದೆ.

ಇಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದರೆ ರಾಜಸ್ಥಾನ್ ರಾಯಲ್ಸ್ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯವನ್ನು ಎದುರು ನೋಡಲಿದೆ.

6 / 8
ಏಕೆಂದರೆ ಮುಂದಿನ ಪಂದ್ಯದಲ್ಲಿ ಮುಂಬೈ ಸೋತರೆ, ರಾಜಸ್ಥಾನ್ ರಾಯಲ್ಸ್ ಪಾಲಿಗೆ ಗುಜರಾತ್ ಟೈಟಾನ್ಸ್ ಗೆಲ್ಲಬೇಕು. ಒಂದು ವೇಳೆ ಆರ್​ಸಿಬಿ ತಂಡದ ವಿರುದ್ಧ 6 ರನ್​ಗಳಿಂದ ಅಥವಾ 4 ಬಾಲ್​ಗಳು ಬಾಕಿಯಿರುವಂತೆ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ.

ಏಕೆಂದರೆ ಮುಂದಿನ ಪಂದ್ಯದಲ್ಲಿ ಮುಂಬೈ ಸೋತರೆ, ರಾಜಸ್ಥಾನ್ ರಾಯಲ್ಸ್ ಪಾಲಿಗೆ ಗುಜರಾತ್ ಟೈಟಾನ್ಸ್ ಗೆಲ್ಲಬೇಕು. ಒಂದು ವೇಳೆ ಆರ್​ಸಿಬಿ ತಂಡದ ವಿರುದ್ಧ 6 ರನ್​ಗಳಿಂದ ಅಥವಾ 4 ಬಾಲ್​ಗಳು ಬಾಕಿಯಿರುವಂತೆ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ರಾಜಸ್ಥಾನ್ ರಾಯಲ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ.

7 / 8
ಇದೇ ಕಾರಣದಿಂದಾಗಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡದ ಸೋಲನ್ನು ಎದುರು ನೋಡುತ್ತಿದೆ. ಹೀಗಾದಲ್ಲಿ ರಾಜಸ್ಥಾನ್ ರಾಯಲ್ಸ್  ಪ್ಲೇಆಫ್​ಗೆ ಅಚ್ಚರಿಯ ಎಂಟ್ರಿ ಕೊಡಲಿದೆ.

ಇದೇ ಕಾರಣದಿಂದಾಗಿ ಇದೀಗ ರಾಜಸ್ಥಾನ್ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ತಂಡದ ಸೋಲನ್ನು ಎದುರು ನೋಡುತ್ತಿದೆ. ಹೀಗಾದಲ್ಲಿ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್​ಗೆ ಅಚ್ಚರಿಯ ಎಂಟ್ರಿ ಕೊಡಲಿದೆ.

8 / 8
Follow us
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ