AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashid Khan: ಹ್ಯಾಟ್ರಿಕ್ ವಿಕೆಟ್ ಉರುಳಿಸಿ ವಿಶ್ವ ದಾಖಲೆ ಬರೆದ ರಶೀದ್ ಖಾನ್

IPL 2023 Kannada: ಈ ಹ್ಯಾಟ್ರಿಕ್ ವಿಕೆಟ್ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲಿ ಸೋತಿರುವುದು ವಿಶೇಷ. ಈ ಪಂದ್ಯದ ಕೊನೆಯ ಓವರ್​ನಲ್ಲಿ ಕೆಕೆಆರ್​ಗೆ ಗೆಲ್ಲಲು 29 ರನ್​ಗಳ ಅವಶ್ಯಕತೆಯಿತ್ತು.

TV9 Web
| Edited By: |

Updated on: Apr 09, 2023 | 8:30 PM

Share
IPL 2023 Rashid Khan Hat-Trick: ಅಹಮದಾಬಾದ್​ನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರಶೀದ್ ಖಾನ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ವಿಶೇಷ.

IPL 2023 Rashid Khan Hat-Trick: ಅಹಮದಾಬಾದ್​ನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರಶೀದ್ ಖಾನ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ವಿಶೇಷ.

1 / 8
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ಪರ ವೆಂಕಟೇಶ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 40 ಎಸೆತಗಳಲ್ಲಿ 5 ಸಿಕ್ಸ್ ಹಾಗು 8 ಫೋರ್​ನೊಂದಿಗೆ ವೆಂಕಟೇಶ್ ಅಯ್ಯರ್ 83 ರನ್​ಗಳಿಸಿ ಔಟಾಗಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ಪರ ವೆಂಕಟೇಶ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 40 ಎಸೆತಗಳಲ್ಲಿ 5 ಸಿಕ್ಸ್ ಹಾಗು 8 ಫೋರ್​ನೊಂದಿಗೆ ವೆಂಕಟೇಶ್ ಅಯ್ಯರ್ 83 ರನ್​ಗಳಿಸಿ ಔಟಾಗಿದ್ದರು.

2 / 8
ಈ ಹಂತದಲ್ಲಿ ಕೆಕೆಆರ್ ತಂಡಕ್ಕೆ ಗೆಲ್ಲಲು 4 ಓವರ್​ಗಳಲ್ಲಿ 50 ರನ್​ಗಳ ಗುರಿಯಿತ್ತು. ಆದರೆ 17ನೇ ಓವರ್ ಎಸೆದ ರಶೀದ್ ಖಾನ್ ಮೊದಲ ಎಸೆತದಲ್ಲೇ ಆ್ಯಂಡ್ರೆ ರಸೆಲ್ (1) ಅವರ ವಿಕೆಟ್ ಪಡೆದರು. ಇನ್ನು ಮರು ಎಸೆತದಲ್ಲೇ ಸುನಿಲ್ ನರೈಲ್ (0) ಕ್ಯಾಚ್ ನೀಡಿ ನಿರ್ಗಮಿಸಿದರು.

ಈ ಹಂತದಲ್ಲಿ ಕೆಕೆಆರ್ ತಂಡಕ್ಕೆ ಗೆಲ್ಲಲು 4 ಓವರ್​ಗಳಲ್ಲಿ 50 ರನ್​ಗಳ ಗುರಿಯಿತ್ತು. ಆದರೆ 17ನೇ ಓವರ್ ಎಸೆದ ರಶೀದ್ ಖಾನ್ ಮೊದಲ ಎಸೆತದಲ್ಲೇ ಆ್ಯಂಡ್ರೆ ರಸೆಲ್ (1) ಅವರ ವಿಕೆಟ್ ಪಡೆದರು. ಇನ್ನು ಮರು ಎಸೆತದಲ್ಲೇ ಸುನಿಲ್ ನರೈಲ್ (0) ಕ್ಯಾಚ್ ನೀಡಿ ನಿರ್ಗಮಿಸಿದರು.

3 / 8
ಆ ಬಳಿಕ ಬಂದ ಶಾರ್ದೂಲ್ ಠಾಕೂರ್ (0) ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ರಶೀದ್ ಖಾನ್ ಹ್ಯಾಟ್ರಿಕ್ ಸಾಧನೆ ಮಾಡಿದರು.

ಆ ಬಳಿಕ ಬಂದ ಶಾರ್ದೂಲ್ ಠಾಕೂರ್ (0) ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ರಶೀದ್ ಖಾನ್ ಹ್ಯಾಟ್ರಿಕ್ ಸಾಧನೆ ಮಾಡಿದರು.

4 / 8
ವಿಶೇಷ ಎಂದರೆ ಇದು ರಶೀದ್ ಖಾನ್ ಅವರ ಮೊದಲ ಐಪಿಎಲ್ ಹ್ಯಾಟ್ರಿಕ್ ವಿಕೆಟ್. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಅಫ್ಘಾನಿಸ್ತಾನ್ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

ವಿಶೇಷ ಎಂದರೆ ಇದು ರಶೀದ್ ಖಾನ್ ಅವರ ಮೊದಲ ಐಪಿಎಲ್ ಹ್ಯಾಟ್ರಿಕ್ ವಿಕೆಟ್. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಅಫ್ಘಾನಿಸ್ತಾನ್ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

5 / 8
ರಶೀದ್ ಖಾನ್ ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದರು. ಅಲ್ಲದೆ ಕೆರಿಬಿಯನ್ ಪ್ರೀಮಿಯರ್ ಲೀಗ್, ಬಿಗ್ ಬ್ಯಾಷ್​ ಲೀಗ್​ನಲ್ಲೂ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದರು.

ರಶೀದ್ ಖಾನ್ ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದರು. ಅಲ್ಲದೆ ಕೆರಿಬಿಯನ್ ಪ್ರೀಮಿಯರ್ ಲೀಗ್, ಬಿಗ್ ಬ್ಯಾಷ್​ ಲೀಗ್​ನಲ್ಲೂ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದರು.

6 / 8
ಇದೀಗ ಐಪಿಎಲ್​ನಲ್ಲೂ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 4 ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೂಲಕ ರಶೀದ್ ಖಾನ್ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದೀಗ ಐಪಿಎಲ್​ನಲ್ಲೂ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 4 ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೂಲಕ ರಶೀದ್ ಖಾನ್ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

7 / 8
ಈ ಹ್ಯಾಟ್ರಿಕ್ ವಿಕೆಟ್ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲಿ ಸೋತಿರುವುದು ವಿಶೇಷ. ಈ ಪಂದ್ಯದ ಕೊನೆಯ ಓವರ್​ನಲ್ಲಿ ಕೆಕೆಆರ್​ಗೆ ಗೆಲ್ಲಲು 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್​ ಎಸೆದ ಅಂತಿಮ ಓವರ್​ನಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

ಈ ಹ್ಯಾಟ್ರಿಕ್ ವಿಕೆಟ್ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲಿ ಸೋತಿರುವುದು ವಿಶೇಷ. ಈ ಪಂದ್ಯದ ಕೊನೆಯ ಓವರ್​ನಲ್ಲಿ ಕೆಕೆಆರ್​ಗೆ ಗೆಲ್ಲಲು 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್​ ಎಸೆದ ಅಂತಿಮ ಓವರ್​ನಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ