AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashid Khan: ಹ್ಯಾಟ್ರಿಕ್ ವಿಕೆಟ್ ಉರುಳಿಸಿ ವಿಶ್ವ ದಾಖಲೆ ಬರೆದ ರಶೀದ್ ಖಾನ್

IPL 2023 Kannada: ಈ ಹ್ಯಾಟ್ರಿಕ್ ವಿಕೆಟ್ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲಿ ಸೋತಿರುವುದು ವಿಶೇಷ. ಈ ಪಂದ್ಯದ ಕೊನೆಯ ಓವರ್​ನಲ್ಲಿ ಕೆಕೆಆರ್​ಗೆ ಗೆಲ್ಲಲು 29 ರನ್​ಗಳ ಅವಶ್ಯಕತೆಯಿತ್ತು.

TV9 Web
| Edited By: |

Updated on: Apr 09, 2023 | 8:30 PM

Share
IPL 2023 Rashid Khan Hat-Trick: ಅಹಮದಾಬಾದ್​ನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರಶೀದ್ ಖಾನ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ವಿಶೇಷ.

IPL 2023 Rashid Khan Hat-Trick: ಅಹಮದಾಬಾದ್​ನಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ರಶೀದ್ ಖಾನ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ವಿಶೇಷ.

1 / 8
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ಪರ ವೆಂಕಟೇಶ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 40 ಎಸೆತಗಳಲ್ಲಿ 5 ಸಿಕ್ಸ್ ಹಾಗು 8 ಫೋರ್​ನೊಂದಿಗೆ ವೆಂಕಟೇಶ್ ಅಯ್ಯರ್ 83 ರನ್​ಗಳಿಸಿ ಔಟಾಗಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ಪರ ವೆಂಕಟೇಶ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 40 ಎಸೆತಗಳಲ್ಲಿ 5 ಸಿಕ್ಸ್ ಹಾಗು 8 ಫೋರ್​ನೊಂದಿಗೆ ವೆಂಕಟೇಶ್ ಅಯ್ಯರ್ 83 ರನ್​ಗಳಿಸಿ ಔಟಾಗಿದ್ದರು.

2 / 8
ಈ ಹಂತದಲ್ಲಿ ಕೆಕೆಆರ್ ತಂಡಕ್ಕೆ ಗೆಲ್ಲಲು 4 ಓವರ್​ಗಳಲ್ಲಿ 50 ರನ್​ಗಳ ಗುರಿಯಿತ್ತು. ಆದರೆ 17ನೇ ಓವರ್ ಎಸೆದ ರಶೀದ್ ಖಾನ್ ಮೊದಲ ಎಸೆತದಲ್ಲೇ ಆ್ಯಂಡ್ರೆ ರಸೆಲ್ (1) ಅವರ ವಿಕೆಟ್ ಪಡೆದರು. ಇನ್ನು ಮರು ಎಸೆತದಲ್ಲೇ ಸುನಿಲ್ ನರೈಲ್ (0) ಕ್ಯಾಚ್ ನೀಡಿ ನಿರ್ಗಮಿಸಿದರು.

ಈ ಹಂತದಲ್ಲಿ ಕೆಕೆಆರ್ ತಂಡಕ್ಕೆ ಗೆಲ್ಲಲು 4 ಓವರ್​ಗಳಲ್ಲಿ 50 ರನ್​ಗಳ ಗುರಿಯಿತ್ತು. ಆದರೆ 17ನೇ ಓವರ್ ಎಸೆದ ರಶೀದ್ ಖಾನ್ ಮೊದಲ ಎಸೆತದಲ್ಲೇ ಆ್ಯಂಡ್ರೆ ರಸೆಲ್ (1) ಅವರ ವಿಕೆಟ್ ಪಡೆದರು. ಇನ್ನು ಮರು ಎಸೆತದಲ್ಲೇ ಸುನಿಲ್ ನರೈಲ್ (0) ಕ್ಯಾಚ್ ನೀಡಿ ನಿರ್ಗಮಿಸಿದರು.

3 / 8
ಆ ಬಳಿಕ ಬಂದ ಶಾರ್ದೂಲ್ ಠಾಕೂರ್ (0) ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ರಶೀದ್ ಖಾನ್ ಹ್ಯಾಟ್ರಿಕ್ ಸಾಧನೆ ಮಾಡಿದರು.

ಆ ಬಳಿಕ ಬಂದ ಶಾರ್ದೂಲ್ ಠಾಕೂರ್ (0) ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ರಶೀದ್ ಖಾನ್ ಹ್ಯಾಟ್ರಿಕ್ ಸಾಧನೆ ಮಾಡಿದರು.

4 / 8
ವಿಶೇಷ ಎಂದರೆ ಇದು ರಶೀದ್ ಖಾನ್ ಅವರ ಮೊದಲ ಐಪಿಎಲ್ ಹ್ಯಾಟ್ರಿಕ್ ವಿಕೆಟ್. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಅಫ್ಘಾನಿಸ್ತಾನ್ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

ವಿಶೇಷ ಎಂದರೆ ಇದು ರಶೀದ್ ಖಾನ್ ಅವರ ಮೊದಲ ಐಪಿಎಲ್ ಹ್ಯಾಟ್ರಿಕ್ ವಿಕೆಟ್. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಅಫ್ಘಾನಿಸ್ತಾನ್ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

5 / 8
ರಶೀದ್ ಖಾನ್ ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದರು. ಅಲ್ಲದೆ ಕೆರಿಬಿಯನ್ ಪ್ರೀಮಿಯರ್ ಲೀಗ್, ಬಿಗ್ ಬ್ಯಾಷ್​ ಲೀಗ್​ನಲ್ಲೂ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದರು.

ರಶೀದ್ ಖಾನ್ ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದರು. ಅಲ್ಲದೆ ಕೆರಿಬಿಯನ್ ಪ್ರೀಮಿಯರ್ ಲೀಗ್, ಬಿಗ್ ಬ್ಯಾಷ್​ ಲೀಗ್​ನಲ್ಲೂ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ದರು.

6 / 8
ಇದೀಗ ಐಪಿಎಲ್​ನಲ್ಲೂ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 4 ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೂಲಕ ರಶೀದ್ ಖಾನ್ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಇದೀಗ ಐಪಿಎಲ್​ನಲ್ಲೂ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 4 ಬಾರಿ ಹ್ಯಾಟ್ರಿಕ್ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಈ ಮೂಲಕ ರಶೀದ್ ಖಾನ್ ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

7 / 8
ಈ ಹ್ಯಾಟ್ರಿಕ್ ವಿಕೆಟ್ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲಿ ಸೋತಿರುವುದು ವಿಶೇಷ. ಈ ಪಂದ್ಯದ ಕೊನೆಯ ಓವರ್​ನಲ್ಲಿ ಕೆಕೆಆರ್​ಗೆ ಗೆಲ್ಲಲು 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್​ ಎಸೆದ ಅಂತಿಮ ಓವರ್​ನಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

ಈ ಹ್ಯಾಟ್ರಿಕ್ ವಿಕೆಟ್ ಹೊರತಾಗಿಯೂ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲಿ ಸೋತಿರುವುದು ವಿಶೇಷ. ಈ ಪಂದ್ಯದ ಕೊನೆಯ ಓವರ್​ನಲ್ಲಿ ಕೆಕೆಆರ್​ಗೆ ಗೆಲ್ಲಲು 29 ರನ್​ಗಳ ಅವಶ್ಯಕತೆಯಿತ್ತು. ಯಶ್ ದಯಾಳ್​ ಎಸೆದ ಅಂತಿಮ ಓವರ್​ನಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

8 / 8
TV9 Web
TV9 Web

TV9 Kannada

Read More
Follow Us
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್