AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಚೆನ್ನೈ ತಂಡದಲ್ಲಿ ಎಲ್ಲವೂ ಸರಿಯಿಲ್ಲ: ಜಡೇಜಾ ಮನವೊಲಿಸಲು ಮುಂದಾದ CSK ಸಿಇಒ

IPL 2023 Kannada: ಈ ಹಿಂದೆ ಕೂಡ ಜಡೇಜಾ ಸಿಎಸ್​ಕೆ ಫ್ರಾಂಚೈಸಿ ಜೊತೆ ಮುನಿಸಿಕೊಂಡಿದ್ದರು. ಇದಕ್ಕೆ ಮುಖ್ಯ ಕಾರಣ ಕಳೆದ ಸೀಸನ್​ನಲ್ಲಿ ನಾಯಕತ್ವ ನೀಡಿ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದು.

TV9 Web
| Updated By: ಝಾಹಿರ್ ಯೂಸುಫ್|

Updated on: May 25, 2023 | 8:28 PM

Share
IPL 2023: ಐಪಿಎಲ್​ ಸೀಸನ್ 16 ಇನ್ನೇನು ಮುಗಿಯಲಿದೆ ಅನ್ನುವಷ್ಟರಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ. ಈ ಸುದ್ದಿಗಳನ್ನು ಪುಷ್ಠೀಕರಿಸುವಂತಹ ಸನ್ನಿವೇಶಗಳು ಕೂಡ ಕಂಡು ಬರಲಾರಂಭಿಸಿದೆ.

IPL 2023: ಐಪಿಎಲ್​ ಸೀಸನ್ 16 ಇನ್ನೇನು ಮುಗಿಯಲಿದೆ ಅನ್ನುವಷ್ಟರಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಹರಿದಾಡಲಾರಂಭಿಸಿದೆ. ಈ ಸುದ್ದಿಗಳನ್ನು ಪುಷ್ಠೀಕರಿಸುವಂತಹ ಸನ್ನಿವೇಶಗಳು ಕೂಡ ಕಂಡು ಬರಲಾರಂಭಿಸಿದೆ.

1 / 9
ಹೌದು, ಕೆಲ ದಿನಗಳ ಹಿಂದೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವೆ ಮೈದಾನದಲ್ಲೇ ವಾಕ್ಸಮರ ನಡೆದಿತ್ತು. ಎಲ್ಲಾ ಆಟಗಾರರು ಪ್ಲೇಆಫ್ ಪ್ರವೇಶಿಸಿದ ಸಂಭ್ರಮದಲ್ಲಿದ್ದರೆ ಇತ್ತ ಧೋನಿ ಜಡೇಜಾಗೆ ಕ್ಲಾಸ್ ತೆಗೆದುಕೊಂಡಿದ್ದರು.

ಹೌದು, ಕೆಲ ದಿನಗಳ ಹಿಂದೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಹಾಗೂ ರವೀಂದ್ರ ಜಡೇಜಾ ನಡುವೆ ಮೈದಾನದಲ್ಲೇ ವಾಕ್ಸಮರ ನಡೆದಿತ್ತು. ಎಲ್ಲಾ ಆಟಗಾರರು ಪ್ಲೇಆಫ್ ಪ್ರವೇಶಿಸಿದ ಸಂಭ್ರಮದಲ್ಲಿದ್ದರೆ ಇತ್ತ ಧೋನಿ ಜಡೇಜಾಗೆ ಕ್ಲಾಸ್ ತೆಗೆದುಕೊಂಡಿದ್ದರು.

2 / 9
ಅಲ್ಲದೆ ಸಿಎಸ್​ಕೆ ನಾಯಕನ ಮಾತುಗಳನ್ನು ಆಲಿಸುತ್ತಿದ್ದ ಜಡೇಜಾ ಅವರ ಮುಖದಲ್ಲಿ ಯಾವುದೇ ನಗು ಇರಲಿಲ್ಲ. ಅಲ್ಲದೆ ನಿರಾಶಭಾವದೊಂದಿಗೆ ಅವರು ಡಗೌಟ್​ಗೆ ತೆರಳಿದ್ದರು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ  ಜಡೇಜಾ ಸೋಷಿಯಲ್ ಮೀಡಿಯಾದಲ್ಲಿ ಕರ್ಮ ರಿಟರ್ನ್ಸ್ ಎನ್ನುವ ಪೋಸ್ಟ್ ಹಂಚಿಕೊಂಡಿದ್ದರು.

ಅಲ್ಲದೆ ಸಿಎಸ್​ಕೆ ನಾಯಕನ ಮಾತುಗಳನ್ನು ಆಲಿಸುತ್ತಿದ್ದ ಜಡೇಜಾ ಅವರ ಮುಖದಲ್ಲಿ ಯಾವುದೇ ನಗು ಇರಲಿಲ್ಲ. ಅಲ್ಲದೆ ನಿರಾಶಭಾವದೊಂದಿಗೆ ಅವರು ಡಗೌಟ್​ಗೆ ತೆರಳಿದ್ದರು. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಜಡೇಜಾ ಸೋಷಿಯಲ್ ಮೀಡಿಯಾದಲ್ಲಿ ಕರ್ಮ ರಿಟರ್ನ್ಸ್ ಎನ್ನುವ ಪೋಸ್ಟ್ ಹಂಚಿಕೊಂಡಿದ್ದರು.

3 / 9
ಕರ್ಮವು ನಿಮ್ಮ ಬಳಿಗೆ ಬಂದೇ ಬರುತ್ತದೆ. ಅದು ಬೇಗನೆ ಬರಬಹುದು ಅಥವಾ ತಡವಾಗಬಹುದು. ಆದರೆ ಅದು ಖಂಡಿತವಾಗಿಯೂ ಬಂದೇ ಬರುತ್ತದೆ ಎಂಬ ಪೋಸ್ಟ್​ ಅನ್ನು ಜಡೇಜಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಈ ಪೋಸ್ಟ್​ ಅನ್ನು ಶೇರ್ ಮಾಡಿರುವ ಜಡೇಜಾ ಅವರ ಪತ್ನಿ ರಿವಾಬಾ..ನಿಮ್ಮ ಸ್ವಂತ ಹಾದಿಯನ್ನು ಅನುಸರಿಸಿ ಎಂದು ಬರೆದುಕೊಂಡಿದ್ದರು.

ಕರ್ಮವು ನಿಮ್ಮ ಬಳಿಗೆ ಬಂದೇ ಬರುತ್ತದೆ. ಅದು ಬೇಗನೆ ಬರಬಹುದು ಅಥವಾ ತಡವಾಗಬಹುದು. ಆದರೆ ಅದು ಖಂಡಿತವಾಗಿಯೂ ಬಂದೇ ಬರುತ್ತದೆ ಎಂಬ ಪೋಸ್ಟ್​ ಅನ್ನು ಜಡೇಜಾ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದರು. ಈ ಪೋಸ್ಟ್​ ಅನ್ನು ಶೇರ್ ಮಾಡಿರುವ ಜಡೇಜಾ ಅವರ ಪತ್ನಿ ರಿವಾಬಾ..ನಿಮ್ಮ ಸ್ವಂತ ಹಾದಿಯನ್ನು ಅನುಸರಿಸಿ ಎಂದು ಬರೆದುಕೊಂಡಿದ್ದರು.

4 / 9
ಇದು ಅಲ್ಲಿಗೆ ಮುಗಿಯಿತು ಅಂದುಕೊಂಡರೆ, ಐಪಿಎಲ್​ ಮೊದಲ ಕ್ವಾಲಿಫೈಯರ್ ಪಂದ್ಯದ ಬಳಿಕ ಮತ್ತೊಂದು ಘಟನೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಸಾಕ್ಷಿಯಾಯಿತು. ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಗೆದ್ದ ಬಳಿಕ ಎಲ್ಲರೂ ಸಂಭ್ರಮದಲ್ಲಿದ್ದರೆ, ಇತ್ತ ರವೀಂದ್ರ ಜಡೇಜಾ ಏಕಾಂಗಿಯಾಗಿ ತೆರಳಿದ್ದರು.

ಇದು ಅಲ್ಲಿಗೆ ಮುಗಿಯಿತು ಅಂದುಕೊಂಡರೆ, ಐಪಿಎಲ್​ ಮೊದಲ ಕ್ವಾಲಿಫೈಯರ್ ಪಂದ್ಯದ ಬಳಿಕ ಮತ್ತೊಂದು ಘಟನೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಸಾಕ್ಷಿಯಾಯಿತು. ಗುಜರಾತ್ ಟೈಟಾನ್ಸ್ ವಿರುದ್ಧ ಸಿಎಸ್​ಕೆ ಗೆದ್ದ ಬಳಿಕ ಎಲ್ಲರೂ ಸಂಭ್ರಮದಲ್ಲಿದ್ದರೆ, ಇತ್ತ ರವೀಂದ್ರ ಜಡೇಜಾ ಏಕಾಂಗಿಯಾಗಿ ತೆರಳಿದ್ದರು.

5 / 9
ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಸಿ ವಿಶ್ವನಾಥನ್ ಅವರು ಜಡೇಜಾ ಅವರನ್ನು ಸಮಾಧಾನಪಡಿಸಲು ಮುಂದಾಗಿದ್ದಾರೆ. ಕೆಲ ಕ್ಷಣಗಳ ಕಾಲ ಕಾಸಿ ವಿಶ್ವನಾಥನ್ ಅವರು ಜಡೇಜಾ ಜೊತೆ ಮಾತನಾಡಿದರು.

ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಸಿ ವಿಶ್ವನಾಥನ್ ಅವರು ಜಡೇಜಾ ಅವರನ್ನು ಸಮಾಧಾನಪಡಿಸಲು ಮುಂದಾಗಿದ್ದಾರೆ. ಕೆಲ ಕ್ಷಣಗಳ ಕಾಲ ಕಾಸಿ ವಿಶ್ವನಾಥನ್ ಅವರು ಜಡೇಜಾ ಜೊತೆ ಮಾತನಾಡಿದರು.

6 / 9
ಆದರೆ ಸಿಎಸ್​ಕೆ ಸಿಇಒ ಅವರ ಮಾತುಗಳನ್ನು ಆಲಿಸಿದ ಜಡೇಜಾ ನಿರಾಸಕ್ತಿಯಿಂದಲೇ ಸಾಗಿದರು. ಇದೀಗ ಎಲ್ಲಾ ಆಟಗಾರರು ಫೈನಲ್ ಪ್ರವೇಶಿಸಿದ ಸಂಭ್ರಮದಲ್ಲಿರುವಾಗ ಕಾಸಿ ವಿಶ್ವನಾಥನ್ ಅವರು ಜಡೇಜಾ ಅವರನ್ನು ಸಮಾಧಾನಪಡಿಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆದರೆ ಸಿಎಸ್​ಕೆ ಸಿಇಒ ಅವರ ಮಾತುಗಳನ್ನು ಆಲಿಸಿದ ಜಡೇಜಾ ನಿರಾಸಕ್ತಿಯಿಂದಲೇ ಸಾಗಿದರು. ಇದೀಗ ಎಲ್ಲಾ ಆಟಗಾರರು ಫೈನಲ್ ಪ್ರವೇಶಿಸಿದ ಸಂಭ್ರಮದಲ್ಲಿರುವಾಗ ಕಾಸಿ ವಿಶ್ವನಾಥನ್ ಅವರು ಜಡೇಜಾ ಅವರನ್ನು ಸಮಾಧಾನಪಡಿಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

7 / 9
ಇದರ ಬೆನ್ನಲ್ಲೇ ಸಿಎಸ್​ಕೆ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿ ಬರಲಾರಂಭಿಸಿದೆ. ಏಕೆಂದರೆ ಈ ಹಿಂದೆ ಕೂಡ ಜಡೇಜಾ ಸಿಎಸ್​ಕೆ ಫ್ರಾಂಚೈಸಿ ಜೊತೆ ಮುನಿಸಿಕೊಂಡಿದ್ದರು. ಇದಕ್ಕೆ ಮುಖ್ಯ ಕಾರಣ ಕಳೆದ ಸೀಸನ್​ನಲ್ಲಿ ನಾಯಕತ್ವ ನೀಡಿ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದು.

ಇದರ ಬೆನ್ನಲ್ಲೇ ಸಿಎಸ್​ಕೆ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿ ಬರಲಾರಂಭಿಸಿದೆ. ಏಕೆಂದರೆ ಈ ಹಿಂದೆ ಕೂಡ ಜಡೇಜಾ ಸಿಎಸ್​ಕೆ ಫ್ರಾಂಚೈಸಿ ಜೊತೆ ಮುನಿಸಿಕೊಂಡಿದ್ದರು. ಇದಕ್ಕೆ ಮುಖ್ಯ ಕಾರಣ ಕಳೆದ ಸೀಸನ್​ನಲ್ಲಿ ನಾಯಕತ್ವ ನೀಡಿ ಕೆಲ ಪಂದ್ಯಗಳ ಬಳಿಕ ಕಪ್ತಾನನ ಸ್ಥಾನದಿಂದ ಕೆಳಗಿಳಿಸಿದ್ದು.

8 / 9
ಇದಾದ ಬಳಿಕ ಜಡೇಜಾ ಸಿಎಸ್​ಕೆ ಪರ ಆಡುವುದಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು. ಅಂತಿಮವಾಗಿ ಸಿಎಸ್​ಕೆ ಫ್ರಾಂಚೈಸಿಯು ಸ್ಟಾರ್ ಆಲ್​ರೌಂಡರ್​ನ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಐಪಿಎಲ್​ನ ಮುಕ್ತಾಯದ ಹಂತದಲ್ಲೇ ರವೀಂದ್ರ ಜಡೇಜಾ ಹಾಗೂ ಸಿಎಸ್​ಕೆ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಕೇಳಿ ಬರಲಾರಂಭಿಸಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಇದಾದ ಬಳಿಕ ಜಡೇಜಾ ಸಿಎಸ್​ಕೆ ಪರ ಆಡುವುದಿಲ್ಲ ಎಂಬ ಸುದ್ದಿಗಳು ಕೂಡ ಹರಿದಾಡಿದ್ದವು. ಅಂತಿಮವಾಗಿ ಸಿಎಸ್​ಕೆ ಫ್ರಾಂಚೈಸಿಯು ಸ್ಟಾರ್ ಆಲ್​ರೌಂಡರ್​ನ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಐಪಿಎಲ್​ನ ಮುಕ್ತಾಯದ ಹಂತದಲ್ಲೇ ರವೀಂದ್ರ ಜಡೇಜಾ ಹಾಗೂ ಸಿಎಸ್​ಕೆ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಗಳು ಕೇಳಿ ಬರಲಾರಂಭಿಸಿರುವುದು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

9 / 9
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ