AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Playoffs: ಪ್ಲೇಆಫ್ ಚಾನ್ಸ್​: ಮಧ್ಯಾಹ್ನ ಮುಂಬೈ ಇಂಡಿಯನ್ಸ್​ಗೆ, ರಾತ್ರಿ RCBಗೆ..!

IPL 2023 Kannada: ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ.

TV9 Web
| Edited By: |

Updated on: May 20, 2023 | 3:57 PM

Share
IPL 2023: ಐಪಿಎಲ್​ನ ಲೀಗ್ ಹಂತದ ಮುಕ್ತಾಯವು ರೋಚಕಘಟ್ಟದತ್ತ ಬಂದು ನಿಂತಿದೆ. ಇದುವರೆಗಿನ 66 ಪಂದ್ಯಗಳ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿರುವುದು ಗುಜರಾತ್ ಟೈಟಾನ್ಸ್ ಮಾತ್ರ.

IPL 2023: ಐಪಿಎಲ್​ನ ಲೀಗ್ ಹಂತದ ಮುಕ್ತಾಯವು ರೋಚಕಘಟ್ಟದತ್ತ ಬಂದು ನಿಂತಿದೆ. ಇದುವರೆಗಿನ 66 ಪಂದ್ಯಗಳ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿರುವುದು ಗುಜರಾತ್ ಟೈಟಾನ್ಸ್ ಮಾತ್ರ.

1 / 8
ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ. ಹಾಗೆಯೇ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿದರೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ. ಹಾಗೆಯೇ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿದರೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

2 / 8
ಈ ಎರಡು ಫಲಿತಾಂಶಗಳ ಬಳಿಕ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಡಲಿದೆ. ಅಂದರೆ 14 ಪಾಯಿಂಟ್ಸ್ ಹೊಂದಿರುವ ಉಭಯ ತಂಡಗಳಿಗೂ ಪ್ಲೇಆಫ್ ಪ್ರವೇಶಿಸುವ ಉತ್ತಮ ಅವಕಾಶವಿದೆ.

ಈ ಎರಡು ಫಲಿತಾಂಶಗಳ ಬಳಿಕ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಡಲಿದೆ. ಅಂದರೆ 14 ಪಾಯಿಂಟ್ಸ್ ಹೊಂದಿರುವ ಉಭಯ ತಂಡಗಳಿಗೂ ಪ್ಲೇಆಫ್ ಪ್ರವೇಶಿಸುವ ಉತ್ತಮ ಅವಕಾಶವಿದೆ.

3 / 8
ಇಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ 4ನೇ ಸ್ಥಾನಕ್ಕೇರಲಿದೆ. ಹಾಗೆಯೇ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದರೆ 16 ಅಂಕ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಬಹುದು.

ಇಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ 4ನೇ ಸ್ಥಾನಕ್ಕೇರಲಿದೆ. ಹಾಗೆಯೇ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದರೆ 16 ಅಂಕ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಬಹುದು.

4 / 8
ವಿಶೇಷ ಎಂದರೆ ಈ ಎರಡು ಪಂದ್ಯಗಳು ನಡೆಯುತ್ತಿರುವುದು ಭಾನುವಾರ. ಅಂದರೆ ಮೇ 21 ರಂದು ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.

ವಿಶೇಷ ಎಂದರೆ ಈ ಎರಡು ಪಂದ್ಯಗಳು ನಡೆಯುತ್ತಿರುವುದು ಭಾನುವಾರ. ಅಂದರೆ ಮೇ 21 ರಂದು ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.

5 / 8
ಇನ್ನು ಭಾನುವಾರ ಸಂಜೆ ಶುರುವಾಗಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು.

ಇನ್ನು ಭಾನುವಾರ ಸಂಜೆ ಶುರುವಾಗಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು.

6 / 8
ಅಂದರೆ ಇಲ್ಲಿ ಮಧ್ಯಾಹ್ನದ ಪಂದ್ಯದಲ್ಲಿ ಗೆದ್ದು ಮುಂಬೈ ಇಂಡಿಯನ್ಸ್​ಗೆ ನಾಲ್ಕನೇ ಸ್ಥಾನ ಅಲಂಕರಿಸುವ ಅವಕಾಶವಿದ್ದರೆ, ರಾತ್ರಿಯ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ 4ನೇ ಸ್ಥಾನಕ್ಕೇರುವ ಉತ್ತಮ ಅವಕಾಶ ಆರ್​ಸಿಬಿ ಮುಂದಿದೆ. ಹೀಗಾಗಿಯೇ ಐಪಿಎಲ್​ನ ಲೀಗ್ ಹಂತದ ಕೊನೆಯ 2 ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಅಂದರೆ ಇಲ್ಲಿ ಮಧ್ಯಾಹ್ನದ ಪಂದ್ಯದಲ್ಲಿ ಗೆದ್ದು ಮುಂಬೈ ಇಂಡಿಯನ್ಸ್​ಗೆ ನಾಲ್ಕನೇ ಸ್ಥಾನ ಅಲಂಕರಿಸುವ ಅವಕಾಶವಿದ್ದರೆ, ರಾತ್ರಿಯ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ 4ನೇ ಸ್ಥಾನಕ್ಕೇರುವ ಉತ್ತಮ ಅವಕಾಶ ಆರ್​ಸಿಬಿ ಮುಂದಿದೆ. ಹೀಗಾಗಿಯೇ ಐಪಿಎಲ್​ನ ಲೀಗ್ ಹಂತದ ಕೊನೆಯ 2 ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

7 / 8
ಒಂದು ವೇಳೆ 15 ಅಂಕಗಳನ್ನು ಹೊಂದಿರುವ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳಲ್ಲಿ ಒಂದು ತಂಡವು ಮುಂದಿನ ಪಂದ್ಯದಲ್ಲಿ ಸೋತರೆ, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

ಒಂದು ವೇಳೆ 15 ಅಂಕಗಳನ್ನು ಹೊಂದಿರುವ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳಲ್ಲಿ ಒಂದು ತಂಡವು ಮುಂದಿನ ಪಂದ್ಯದಲ್ಲಿ ಸೋತರೆ, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

8 / 8
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ