IPL 2023 Playoffs: ಪ್ಲೇಆಫ್ ಚಾನ್ಸ್​: ಮಧ್ಯಾಹ್ನ ಮುಂಬೈ ಇಂಡಿಯನ್ಸ್​ಗೆ, ರಾತ್ರಿ RCBಗೆ..!

IPL 2023 Kannada: ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ.

| Updated By: ಝಾಹಿರ್ ಯೂಸುಫ್

Updated on: May 20, 2023 | 3:57 PM

IPL 2023: ಐಪಿಎಲ್​ನ ಲೀಗ್ ಹಂತದ ಮುಕ್ತಾಯವು ರೋಚಕಘಟ್ಟದತ್ತ ಬಂದು ನಿಂತಿದೆ. ಇದುವರೆಗಿನ 66 ಪಂದ್ಯಗಳ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿರುವುದು ಗುಜರಾತ್ ಟೈಟಾನ್ಸ್ ಮಾತ್ರ.

IPL 2023: ಐಪಿಎಲ್​ನ ಲೀಗ್ ಹಂತದ ಮುಕ್ತಾಯವು ರೋಚಕಘಟ್ಟದತ್ತ ಬಂದು ನಿಂತಿದೆ. ಇದುವರೆಗಿನ 66 ಪಂದ್ಯಗಳ ಪ್ಲೇಆಫ್ ಪ್ರವೇಶವನ್ನು ಖಚಿತಪಡಿಸಿಕೊಂಡಿರುವುದು ಗುಜರಾತ್ ಟೈಟಾನ್ಸ್ ಮಾತ್ರ.

1 / 8
ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ. ಹಾಗೆಯೇ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿದರೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

ಇನ್ನುಳಿದ 3 ಸ್ಥಾನಗಳಿಗಾಗಿ ಒಟ್ಟು 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನದಲ್ಲಿರುವ ಸಿಎಸ್​ಕೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದೆ. ಹಾಗೆಯೇ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿದರೆ ಪ್ಲೇಆಫ್​ಗೆ ಪ್ರವೇಶಿಸಲಿದೆ.

2 / 8
ಈ ಎರಡು ಫಲಿತಾಂಶಗಳ ಬಳಿಕ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಡಲಿದೆ. ಅಂದರೆ 14 ಪಾಯಿಂಟ್ಸ್ ಹೊಂದಿರುವ ಉಭಯ ತಂಡಗಳಿಗೂ ಪ್ಲೇಆಫ್ ಪ್ರವೇಶಿಸುವ ಉತ್ತಮ ಅವಕಾಶವಿದೆ.

ಈ ಎರಡು ಫಲಿತಾಂಶಗಳ ಬಳಿಕ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಡಲಿದೆ. ಅಂದರೆ 14 ಪಾಯಿಂಟ್ಸ್ ಹೊಂದಿರುವ ಉಭಯ ತಂಡಗಳಿಗೂ ಪ್ಲೇಆಫ್ ಪ್ರವೇಶಿಸುವ ಉತ್ತಮ ಅವಕಾಶವಿದೆ.

3 / 8
ಇಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ 4ನೇ ಸ್ಥಾನಕ್ಕೇರಲಿದೆ. ಹಾಗೆಯೇ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದರೆ 16 ಅಂಕ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಬಹುದು.

ಇಲ್ಲಿ ಮುಂಬೈ ಇಂಡಿಯನ್ಸ್ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆದ್ದರೆ 16 ಪಾಯಿಂಟ್ಸ್​ನೊಂದಿಗೆ 4ನೇ ಸ್ಥಾನಕ್ಕೇರಲಿದೆ. ಹಾಗೆಯೇ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಜಯ ಸಾಧಿಸಿದರೆ 16 ಅಂಕ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಬಹುದು.

4 / 8
ವಿಶೇಷ ಎಂದರೆ ಈ ಎರಡು ಪಂದ್ಯಗಳು ನಡೆಯುತ್ತಿರುವುದು ಭಾನುವಾರ. ಅಂದರೆ ಮೇ 21 ರಂದು ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.

ವಿಶೇಷ ಎಂದರೆ ಈ ಎರಡು ಪಂದ್ಯಗಳು ನಡೆಯುತ್ತಿರುವುದು ಭಾನುವಾರ. ಅಂದರೆ ಮೇ 21 ರಂದು ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿದೆ. ಇದರಲ್ಲಿ ಮುಂಬೈ ಗೆದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಬಹುದು.

5 / 8
ಇನ್ನು ಭಾನುವಾರ ಸಂಜೆ ಶುರುವಾಗಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು.

ಇನ್ನು ಭಾನುವಾರ ಸಂಜೆ ಶುರುವಾಗಲಿರುವ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಆರ್​ಸಿಬಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆಯಬಹುದು.

6 / 8
ಅಂದರೆ ಇಲ್ಲಿ ಮಧ್ಯಾಹ್ನದ ಪಂದ್ಯದಲ್ಲಿ ಗೆದ್ದು ಮುಂಬೈ ಇಂಡಿಯನ್ಸ್​ಗೆ ನಾಲ್ಕನೇ ಸ್ಥಾನ ಅಲಂಕರಿಸುವ ಅವಕಾಶವಿದ್ದರೆ, ರಾತ್ರಿಯ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ 4ನೇ ಸ್ಥಾನಕ್ಕೇರುವ ಉತ್ತಮ ಅವಕಾಶ ಆರ್​ಸಿಬಿ ಮುಂದಿದೆ. ಹೀಗಾಗಿಯೇ ಐಪಿಎಲ್​ನ ಲೀಗ್ ಹಂತದ ಕೊನೆಯ 2 ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಅಂದರೆ ಇಲ್ಲಿ ಮಧ್ಯಾಹ್ನದ ಪಂದ್ಯದಲ್ಲಿ ಗೆದ್ದು ಮುಂಬೈ ಇಂಡಿಯನ್ಸ್​ಗೆ ನಾಲ್ಕನೇ ಸ್ಥಾನ ಅಲಂಕರಿಸುವ ಅವಕಾಶವಿದ್ದರೆ, ರಾತ್ರಿಯ ಪಂದ್ಯದಲ್ಲಿ ಗೆದ್ದು ಬೀಗುವ ಮೂಲಕ 4ನೇ ಸ್ಥಾನಕ್ಕೇರುವ ಉತ್ತಮ ಅವಕಾಶ ಆರ್​ಸಿಬಿ ಮುಂದಿದೆ. ಹೀಗಾಗಿಯೇ ಐಪಿಎಲ್​ನ ಲೀಗ್ ಹಂತದ ಕೊನೆಯ 2 ಪಂದ್ಯಗಳಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

7 / 8
ಒಂದು ವೇಳೆ 15 ಅಂಕಗಳನ್ನು ಹೊಂದಿರುವ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳಲ್ಲಿ ಒಂದು ತಂಡವು ಮುಂದಿನ ಪಂದ್ಯದಲ್ಲಿ ಸೋತರೆ, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

ಒಂದು ವೇಳೆ 15 ಅಂಕಗಳನ್ನು ಹೊಂದಿರುವ ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳಲ್ಲಿ ಒಂದು ತಂಡವು ಮುಂದಿನ ಪಂದ್ಯದಲ್ಲಿ ಸೋತರೆ, ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಗೆದ್ದು ಒಟ್ಟು 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ.

8 / 8
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ