AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಹೀಗಾದ್ರೆ, ಪಂದ್ಯ ರದ್ದಾದರೂ RCB ಪ್ಲೇಆಫ್​​ಗೆ ಪ್ರವೇಶಿಸುತ್ತೆ..!

IPL 2023 Kannada: ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

TV9 Web
| Edited By: |

Updated on: May 21, 2023 | 5:03 PM

Share
IPL 2023: ಐಪಿಎಲ್​ನ ಪ್ಲೇಆಫ್​ಗೆ ಎಂಟ್ರಿ ಕೊಡಲು ಇಂದು 2 ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡುತ್ತಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

IPL 2023: ಐಪಿಎಲ್​ನ ಪ್ಲೇಆಫ್​ಗೆ ಎಂಟ್ರಿ ಕೊಡಲು ಇಂದು 2 ತಂಡಗಳು ನಿರ್ಣಾಯಕ ಪಂದ್ಯಗಳನ್ನಾಡುತ್ತಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ 16 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸಬಹುದು.

1 / 8
ಆದರೆ ರಾತ್ರಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಫಾಫ್ ಪಡೆಯು ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

ಆದರೆ ರಾತ್ರಿ ನಡೆಯಲಿರುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯ ಸಾಧಿಸಿದರೆ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಫಾಫ್ ಪಡೆಯು ಪ್ಲೇಆಫ್ ಪ್ರವೇಶಿಸಲಿದೆ. ಆದರೀಗ ಈ ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ.

2 / 8
ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

ಬೆಂಗಳೂರಿನ ಸುತ್ತ ಮುತ್ತ ಇಂದು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದರಿಂದ ಪಂದ್ಯ ರದ್ದಾದರೆ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳಿಗೆ ಒಂದೊಂದು ಪಾಯಿಂಟ್ಸ್ ಹಂಚಲಾಗುತ್ತದೆ.

3 / 8
ಅಂದರೆ ಪಂದ್ಯ ರದ್ದಾದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್​ 15 ಆಗಲಿದೆ. ಇದರಿಂದ ಪ್ಲೇಆಫ್ ಪ್ರವೇಶಿಸಲು ಸಾಧ್ಯನಾ ಎಂದು ಪ್ರಶ್ನಿಸಿದರೆ, ಅದು ಎಸ್​ಆರ್​ಹೆಚ್​-ಮುಂಬೈ ಇಂಡಿಯನ್ಸ್ ನಡುವಣ ಫಲಿತಾಂಶದ ಮೇಲೆ ಅವಲಂಭಿತವಾಗಿರಲಿದೆ.

ಅಂದರೆ ಪಂದ್ಯ ರದ್ದಾದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್​ 15 ಆಗಲಿದೆ. ಇದರಿಂದ ಪ್ಲೇಆಫ್ ಪ್ರವೇಶಿಸಲು ಸಾಧ್ಯನಾ ಎಂದು ಪ್ರಶ್ನಿಸಿದರೆ, ಅದು ಎಸ್​ಆರ್​ಹೆಚ್​-ಮುಂಬೈ ಇಂಡಿಯನ್ಸ್ ನಡುವಣ ಫಲಿತಾಂಶದ ಮೇಲೆ ಅವಲಂಭಿತವಾಗಿರಲಿದೆ.

4 / 8
ಮುಂಬೈ ಇಂಡಿಯನ್ಸ್ ವಿರುದ್ಧ ಎಸ್​ಆರ್​ಹೆಚ್ ತಂಡ ಗೆದ್ದರೆ ಆರ್​ಸಿಬಿ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಪ್ಲಸ್​ನಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದೆ.

ಮುಂಬೈ ಇಂಡಿಯನ್ಸ್ ವಿರುದ್ಧ ಎಸ್​ಆರ್​ಹೆಚ್ ತಂಡ ಗೆದ್ದರೆ ಆರ್​ಸಿಬಿ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಏಕೆಂದರೆ ಆರ್​ಸಿಬಿ ತಂಡದ ನೆಟ್ ರನ್​ ರೇಟ್ ಪ್ಲಸ್​ನಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದೆ.

5 / 8
ಹೀಗಾಗಿ ಮುಂಬೈ ಇಂಡಿಯನ್ಸ್ ಸೋತರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಸೋತು ಮುಂಬೈ ಇಂಡಿಯನ್ಸ್ ಹೆಚ್ಚಿನ ನೆಟ್ ರನ್​ ರೇಟ್ ಪಡೆದರೂ ಆರ್​ಸಿಬಿ ಚಿಂತಿಸಬೇಕಿಲ್ಲ.

ಹೀಗಾಗಿ ಮುಂಬೈ ಇಂಡಿಯನ್ಸ್ ಸೋತರೆ ಆರ್​ಸಿಬಿ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಸೋತು ಮುಂಬೈ ಇಂಡಿಯನ್ಸ್ ಹೆಚ್ಚಿನ ನೆಟ್ ರನ್​ ರೇಟ್ ಪಡೆದರೂ ಆರ್​ಸಿಬಿ ಚಿಂತಿಸಬೇಕಿಲ್ಲ.

6 / 8
ಏಕೆಂದರೆ ಕೊನೆಯ ಪಂದ್ಯ ರದ್ದಾದರೆ ಆರ್​ಸಿಬಿಗೆ 1 ಪಾಯಿಂಟ್ಸ್​ ಸಿಗಲಿದೆ. ಇದರೊಂದಿಗೆ ಆರ್​ಸಿಬಿ ತಂಡವು 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ.

ಏಕೆಂದರೆ ಕೊನೆಯ ಪಂದ್ಯ ರದ್ದಾದರೆ ಆರ್​ಸಿಬಿಗೆ 1 ಪಾಯಿಂಟ್ಸ್​ ಸಿಗಲಿದೆ. ಇದರೊಂದಿಗೆ ಆರ್​ಸಿಬಿ ತಂಡವು 15 ಪಾಯಿಂಟ್ಸ್​ನೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಲಿದೆ.

7 / 8
ಹೀಗಾಗಿಯೇ ಪಂದ್ಯ ರದ್ದಾದರೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗೆ ಇದೆ. ಆದರೆ ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಬೇಕಷ್ಟೆ.

ಹೀಗಾಗಿಯೇ ಪಂದ್ಯ ರದ್ದಾದರೂ ಪ್ಲೇಆಫ್ ಪ್ರವೇಶಿಸುವ ಅವಕಾಶ ಆರ್​ಸಿಬಿಗೆ ಇದೆ. ಆದರೆ ಅದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲಬೇಕಷ್ಟೆ.

8 / 8
Web contact
Web contact

TV9 Kannada

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ