AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರಾಜೀವ್ ಗಾಂಧಿ ಸ್ಟೇಡಿಯಂ…RCB ಗೆ ಭಯ ಶುರು..!

IPL 2023 Kannada: ಉಭಯ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದು 2019 ರಲ್ಲಿ. ಈ ವೇಳೆ SRH ತಂಡವು RCB ವಿರುದ್ಧ 231 ರನ್​ ಬಾರಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: May 17, 2023 | 7:21 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ SRH ತಂಡಕ್ಕೆ ಈ ಪಂದ್ಯ ಔಪಚಾರಿಕ. ಆದರೆ ಪ್ಲೇಆಫ್ ರೇಸ್​ನಲ್ಲಿರುವ RCB ಪಾಲಿಗೆ ಇದು ನಿರ್ಣಾಯಕ ಪಂದ್ಯ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿರುವ SRH ತಂಡಕ್ಕೆ ಈ ಪಂದ್ಯ ಔಪಚಾರಿಕ. ಆದರೆ ಪ್ಲೇಆಫ್ ರೇಸ್​ನಲ್ಲಿರುವ RCB ಪಾಲಿಗೆ ಇದು ನಿರ್ಣಾಯಕ ಪಂದ್ಯ.

1 / 7
ಅಂದರೆ ಈ ಪಂದ್ಯದಲ್ಲಿ RCB ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಈ ಪಂದ್ಯದಲ್ಲಿ ಗೆದ್ದು, ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಸೋಲುಣಿಸಿದರೆ ನೆಟ್​ ರನ್​ ರೇಟ್​ ನೆರವಿನೊಂದಿಗೆ RCB ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿಯೇ SRH ವಿರುದ್ಧ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿದೆ.

ಅಂದರೆ ಈ ಪಂದ್ಯದಲ್ಲಿ RCB ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ. ಈ ಪಂದ್ಯದಲ್ಲಿ ಗೆದ್ದು, ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಸೋಲುಣಿಸಿದರೆ ನೆಟ್​ ರನ್​ ರೇಟ್​ ನೆರವಿನೊಂದಿಗೆ RCB ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿಯೇ SRH ವಿರುದ್ಧ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿದೆ.

2 / 7
ಆದರೆ ಈ ಪಂದ್ಯವು SRH ತಂಡದ ತವರು ಮೈದಾನ ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ಇದೀಗ RCB ತಂಡದ ಚಿಂತೆಯನ್ನು ಹೆಚ್ಚಿಸಿದೆ. ಇದಕ್ಕೆ ಮುಖ್ಯ ಕಾರಣ ಈ ಮೈದಾನದಲ್ಲಿನ ಆರ್​ಸಿಬಿ ತಂಡದ ಪ್ರದರ್ಶನ.

ಆದರೆ ಈ ಪಂದ್ಯವು SRH ತಂಡದ ತವರು ಮೈದಾನ ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ಇದೀಗ RCB ತಂಡದ ಚಿಂತೆಯನ್ನು ಹೆಚ್ಚಿಸಿದೆ. ಇದಕ್ಕೆ ಮುಖ್ಯ ಕಾರಣ ಈ ಮೈದಾನದಲ್ಲಿನ ಆರ್​ಸಿಬಿ ತಂಡದ ಪ್ರದರ್ಶನ.

3 / 7
ರಾಜೀವ್​ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಆದರೆ ಈ ವೇಳೆ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯ ರದ್ದಾಗಿತ್ತು. ಅಂದರೆ ಆಡಿರುವ 9 ಪಂದ್ಯಗಳಲ್ಲಿ 7 ರಲ್ಲಿ ಸೋಲನುಭವಿಸಿದೆ.

ರಾಜೀವ್​ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್​ಸಿಬಿ ಇದುವರೆಗೆ 10 ಪಂದ್ಯಗಳನ್ನಾಡಿದೆ. ಆದರೆ ಈ ವೇಳೆ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. ಇನ್ನು ಒಂದು ಪಂದ್ಯ ರದ್ದಾಗಿತ್ತು. ಅಂದರೆ ಆಡಿರುವ 9 ಪಂದ್ಯಗಳಲ್ಲಿ 7 ರಲ್ಲಿ ಸೋಲನುಭವಿಸಿದೆ.

4 / 7
ಇನ್ನು ಉಭಯ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದು 2019 ರಲ್ಲಿ. ಈ ವೇಳೆ ಎಸ್​ಆರ್​ಹೆಚ್ ತಂಡವು ಆರ್​ಸಿಬಿ ವಿರುದ್ಧ 231 ರನ್​ ಬಾರಿಸಿತ್ತು. ಅಷ್ಟೇ ಅಲ್ಲದೆ ಆರ್​ಸಿಬಿಯನ್ನು ಕೇವಲ 113 ರನ್​ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತ್ತು.

ಇನ್ನು ಉಭಯ ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದು 2019 ರಲ್ಲಿ. ಈ ವೇಳೆ ಎಸ್​ಆರ್​ಹೆಚ್ ತಂಡವು ಆರ್​ಸಿಬಿ ವಿರುದ್ಧ 231 ರನ್​ ಬಾರಿಸಿತ್ತು. ಅಷ್ಟೇ ಅಲ್ಲದೆ ಆರ್​ಸಿಬಿಯನ್ನು ಕೇವಲ 113 ರನ್​ಗಳಿಗೆ ಆಲೌಟ್ ಮಾಡಿ ಭರ್ಜರಿ ಜಯ ಸಾಧಿಸಿತ್ತು.

5 / 7
ಹಾಗೆಯೇ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಕೊನೆಯ ಬಾರಿ ಜಯ ಸಾಧಿಸಿದ್ದು 2015 ರಲ್ಲಿ. ಅದು ಕೂಡ ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ. ಹೀಗಾಗಿಯೇ ಎಸ್​​ಆರ್​ಹೆಚ್​ ಮೈದಾನವು ಆರ್​ಸಿಬಿ ಪಾಲಿಗೆ ನತದೃಷ್ಟ ಎಂದು ಬಣ್ಣಿಸಲಾಗುತ್ತದೆ.

ಹಾಗೆಯೇ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡವು ಕೊನೆಯ ಬಾರಿ ಜಯ ಸಾಧಿಸಿದ್ದು 2015 ರಲ್ಲಿ. ಅದು ಕೂಡ ಡಕ್​ವರ್ಥ್ ಲೂಯಿಸ್ ನಿಯಮದ ಪ್ರಕಾರ. ಹೀಗಾಗಿಯೇ ಎಸ್​​ಆರ್​ಹೆಚ್​ ಮೈದಾನವು ಆರ್​ಸಿಬಿ ಪಾಲಿಗೆ ನತದೃಷ್ಟ ಎಂದು ಬಣ್ಣಿಸಲಾಗುತ್ತದೆ.

6 / 7
ಇದೀಗ ಇದೇ ಮೈದಾನದಲ್ಲಿ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿರುವುದು ಹೊಸ ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ಕಳೆದ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿ ಹೊಸ ಹುಮ್ಮಸ್ಸಿನಲ್ಲಿರುವ ಆರ್​ಸಿಬಿ ಈ ಪಂದ್ಯವನ್ನು ಕೂಡ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ಇದೀಗ ಇದೇ ಮೈದಾನದಲ್ಲಿ ನಿರ್ಣಾಯಕ ಪಂದ್ಯದಲ್ಲಿ ಆರ್​ಸಿಬಿ ತಂಡವು ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿರುವುದು ಹೊಸ ಚಿಂತೆಗೆ ಕಾರಣವಾಗಿದೆ. ಇದಾಗ್ಯೂ ಕಳೆದ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿ ಹೊಸ ಹುಮ್ಮಸ್ಸಿನಲ್ಲಿರುವ ಆರ್​ಸಿಬಿ ಈ ಪಂದ್ಯವನ್ನು ಕೂಡ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

7 / 7
Follow us
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ