AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕ್ಯಾಚ್​ ಕೈ ಚೆಲ್ಲಿ ಮ್ಯಾಚ್ ಸೋತ RCB

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಬೌಲಿಂಗ್ ಆರಂಭಿಸಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ.

TV9 Web
| Edited By: |

Updated on: Apr 26, 2023 | 11:17 PM

Share
IPL 2023 RCB vs KKR: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಕಳಪೆ ಫೀಲ್ಡಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ವಿಕೆಟ್​ಗಳ ಹುಡುಕಾಟದಲ್ಲಿದ್ದಾಗ ಬೌಲರ್​ಗಳೇ ಕ್ಯಾಚ್​ಗಳನ್ನು ಕೈಚೆಲ್ಲಿರುವುದು ಅಚ್ಚರಿ.

IPL 2023 RCB vs KKR: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಕಳಪೆ ಫೀಲ್ಡಿಂಗ್ ಪ್ರದರ್ಶಿಸಿದ್ದಾರೆ. ಅದರಲ್ಲೂ ವಿಕೆಟ್​ಗಳ ಹುಡುಕಾಟದಲ್ಲಿದ್ದಾಗ ಬೌಲರ್​ಗಳೇ ಕ್ಯಾಚ್​ಗಳನ್ನು ಕೈಚೆಲ್ಲಿರುವುದು ಅಚ್ಚರಿ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಬೌಲಿಂಗ್ ಆರಂಭಿಸಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಪವರ್​ಪ್ಲೇನಲ್ಲೇ ಅಬ್ಬರಿಸಿದ ಜೇಸನ್ ರಾಯ್-ಜಗದೀಸನ್ 6 ಓವರ್​ಗಳಲ್ಲಿ 66 ರನ್​ ಚಚ್ಚಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಬೌಲಿಂಗ್ ಆರಂಭಿಸಿದ ಆರ್​ಸಿಬಿ ಉತ್ತಮ ಆರಂಭ ಪಡೆದಿರಲಿಲ್ಲ. ಪವರ್​ಪ್ಲೇನಲ್ಲೇ ಅಬ್ಬರಿಸಿದ ಜೇಸನ್ ರಾಯ್-ಜಗದೀಸನ್ 6 ಓವರ್​ಗಳಲ್ಲಿ 66 ರನ್​ ಚಚ್ಚಿದ್ದರು.

2 / 7
ಇದಾದ ಬಳಿಕ ಕನ್ನಡಿಗ ವೈಶಾಕ್ ವಿಜಯಕುಮಾರ್ ಒಂದೇ ಓವರ್​ನಲ್ಲಿ ಜಗದೀಸನ್ (27) ಹಾಗೂ ಜೇಸನ್ ರಾಯ್ (56) ವಿಕೆಟ್ ಉರುಳಿಸಿ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಆದರೆ ಆ ಬಳಿಕ ಜೊತೆಯಾದ ವೆಂಕಟೇಶ್ ಅಯ್ಯರ್ ಹಾಗೂ ನಿತೀಶ್ ರಾಣಾ ಉತ್ತಮ ಜೊತೆಯಾಟವಾಡಿದರು.

ಇದಾದ ಬಳಿಕ ಕನ್ನಡಿಗ ವೈಶಾಕ್ ವಿಜಯಕುಮಾರ್ ಒಂದೇ ಓವರ್​ನಲ್ಲಿ ಜಗದೀಸನ್ (27) ಹಾಗೂ ಜೇಸನ್ ರಾಯ್ (56) ವಿಕೆಟ್ ಉರುಳಿಸಿ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಆದರೆ ಆ ಬಳಿಕ ಜೊತೆಯಾದ ವೆಂಕಟೇಶ್ ಅಯ್ಯರ್ ಹಾಗೂ ನಿತೀಶ್ ರಾಣಾ ಉತ್ತಮ ಜೊತೆಯಾಟವಾಡಿದರು.

3 / 7
ಆರ್​ಸಿಬಿ ಫೀಲ್ಡರ್​ಗಳು ಮಾಡಿದ ತಪ್ಪಿನಿಂದಾಗಿ ಈ ಜೋಡಿಯು ಮೂರನೇ ವಿಕೆಟ್​ಗೆ 80 ರನ್​ಗಳ ಜೊತೆಯಾಟವಾಡಿದ್ದರು. ಅಂದರೆ 13ನೇ ಓವರ್​ನಲ್ಲಿ 5 ರನ್​ಗಳಿಸಿದ್ದ ನಿತೀಶ್ ರಾಣಾ ಅವರ ಸುಲಭ ಕ್ಯಾಚ್​ ಅನ್ನು ಮೊಹಮ್ಮದ್ ಸಿರಾಜ್ ಕೈಚೆಲ್ಲಿದರು.

ಆರ್​ಸಿಬಿ ಫೀಲ್ಡರ್​ಗಳು ಮಾಡಿದ ತಪ್ಪಿನಿಂದಾಗಿ ಈ ಜೋಡಿಯು ಮೂರನೇ ವಿಕೆಟ್​ಗೆ 80 ರನ್​ಗಳ ಜೊತೆಯಾಟವಾಡಿದ್ದರು. ಅಂದರೆ 13ನೇ ಓವರ್​ನಲ್ಲಿ 5 ರನ್​ಗಳಿಸಿದ್ದ ನಿತೀಶ್ ರಾಣಾ ಅವರ ಸುಲಭ ಕ್ಯಾಚ್​ ಅನ್ನು ಮೊಹಮ್ಮದ್ ಸಿರಾಜ್ ಕೈಚೆಲ್ಲಿದರು.

4 / 7
ಇದಾದ ಬಳಿಕ 20 ರನ್​ಗಳಿಸಿದ್ದ ನಿತೀಶ್ ರಾಣಾ ಹರ್ಷಲ್ ಪಟೇಲ್ ಮತ್ತೊಂದು ಜೀವದಾನ ನೀಡಿದರು. ಸಿರಾಜ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದ ರಾಣಾ ಅವರ ಸುಲಭ ಕ್ಯಾಚ್​ ಅನ್ನು ಹರ್ಷಲ್ ಪಟೇಲ್ ಕೈಚೆಲ್ಲಿದರು.

ಇದಾದ ಬಳಿಕ 20 ರನ್​ಗಳಿಸಿದ್ದ ನಿತೀಶ್ ರಾಣಾ ಹರ್ಷಲ್ ಪಟೇಲ್ ಮತ್ತೊಂದು ಜೀವದಾನ ನೀಡಿದರು. ಸಿರಾಜ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದ ರಾಣಾ ಅವರ ಸುಲಭ ಕ್ಯಾಚ್​ ಅನ್ನು ಹರ್ಷಲ್ ಪಟೇಲ್ ಕೈಚೆಲ್ಲಿದರು.

5 / 7
ಈ ಎರಡು ಜೀವದಾನಗಳನ್ನು ಸಂಪೂರ್ಣವಾಗಿ ಬಳಸಿಕೊಂಡ ನಿತೀಶ್ ರಾಣಾ 21 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ 48 ರನ್​ ಚಚ್ಚಿದರು. ಅಲ್ಲದೆ ವೆಂಕಟೇಶ್ ಅಯ್ಯರ್ (31) ಜೊತೆಗೂಡಿ 80 ರನ್​ಗಳ ಜೊತೆಯಾಟವಾಡಿದರು. ಪರಿಣಾಮ ಕೆಕೆಆರ್ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಪೇರಿಸಿತು.

ಈ ಎರಡು ಜೀವದಾನಗಳನ್ನು ಸಂಪೂರ್ಣವಾಗಿ ಬಳಸಿಕೊಂಡ ನಿತೀಶ್ ರಾಣಾ 21 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ನೊಂದಿಗೆ 48 ರನ್​ ಚಚ್ಚಿದರು. ಅಲ್ಲದೆ ವೆಂಕಟೇಶ್ ಅಯ್ಯರ್ (31) ಜೊತೆಗೂಡಿ 80 ರನ್​ಗಳ ಜೊತೆಯಾಟವಾಡಿದರು. ಪರಿಣಾಮ ಕೆಕೆಆರ್ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಪೇರಿಸಿತು.

6 / 7
201 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡವು 8 ವಿಕೆಟ್ ನಷ್ಟಕ್ಕೆ 179 ರನ್​​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಕೆಕೆಆರ್ 21 ರನ್​ಗಳ ಜಯ ಸಾಧಿಸಿತು. ಒಂದು ವೇಳೆ ನಿತೀಶ್ ರಾಣಾ ಅವರ ವಿಕೆಟ್ ಬೇಗನೆ ಸಿಗುತ್ತಿದ್ದರೆ ಕೆಕೆಆರ್ ತಂಡವು ಒತ್ತಡಕ್ಕೆ ಒಳಗಾಗುತ್ತಿತ್ತು. ಅಲ್ಲದೆ ಮೂರನೇ ವಿಕೆಟ್​ಗೆ 80 ರನ್​ಗಳ ಭರ್ಜರಿ ಜೊತೆಯಾಟ ಕೂಡ ಮೂಡಿಬರುತ್ತಿರಲಿಲ್ಲ. ಇದರಿಂದ ಕೆಕೆಆರ್ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲದೆ ಕಡಿಮೆ ಗುರಿ ಪಡೆದು ಆರ್​ಸಿಬಿಗೆ ಗೆಲ್ಲುವ ಅವಕಾಶ ಇರುತ್ತಿತ್ತು. ಆದರೆ ಆರ್​ಸಿಬಿ ಕ್ಯಾಚ್ ಕೈಚೆಲ್ಲಿ ಮ್ಯಾಚ್ ಅನ್ನು ಕೂಡ ಕೈಚೆಲ್ಲಿದೆ ಎನ್ನಬಹುದು.

201 ರನ್​ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್​ಸಿಬಿ ತಂಡವು 8 ವಿಕೆಟ್ ನಷ್ಟಕ್ಕೆ 179 ರನ್​​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಕೆಕೆಆರ್ 21 ರನ್​ಗಳ ಜಯ ಸಾಧಿಸಿತು. ಒಂದು ವೇಳೆ ನಿತೀಶ್ ರಾಣಾ ಅವರ ವಿಕೆಟ್ ಬೇಗನೆ ಸಿಗುತ್ತಿದ್ದರೆ ಕೆಕೆಆರ್ ತಂಡವು ಒತ್ತಡಕ್ಕೆ ಒಳಗಾಗುತ್ತಿತ್ತು. ಅಲ್ಲದೆ ಮೂರನೇ ವಿಕೆಟ್​ಗೆ 80 ರನ್​ಗಳ ಭರ್ಜರಿ ಜೊತೆಯಾಟ ಕೂಡ ಮೂಡಿಬರುತ್ತಿರಲಿಲ್ಲ. ಇದರಿಂದ ಕೆಕೆಆರ್ ಬೃಹತ್ ಮೊತ್ತ ಪೇರಿಸಲು ಸಾಧ್ಯವಾಗುತ್ತಿರಲಿಲ್ಲ. ಅಲ್ಲದೆ ಕಡಿಮೆ ಗುರಿ ಪಡೆದು ಆರ್​ಸಿಬಿಗೆ ಗೆಲ್ಲುವ ಅವಕಾಶ ಇರುತ್ತಿತ್ತು. ಆದರೆ ಆರ್​ಸಿಬಿ ಕ್ಯಾಚ್ ಕೈಚೆಲ್ಲಿ ಮ್ಯಾಚ್ ಅನ್ನು ಕೂಡ ಕೈಚೆಲ್ಲಿದೆ ಎನ್ನಬಹುದು.

7 / 7
Web contact
Web contact

TV9 Kannada

Read More
Follow Us
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ