AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ‘ಇದೇ ಆರ್​ಸಿಬಿ ತಂಡದ ಎಕ್ಸ್-ಫ್ಯಾಕ್ಟರ್’; ಮಾಜಿ ಟೀಂ ಇಂಡಿಯಾ ಆಟಗಾರ

RCB: ಈ ಐಪಿಎಲ್‌ನಲ್ಲಿ, ನನ್ನ ಪ್ರಕಾರ, ಅತ್ಯುತ್ತಮ ಬೌಲಿಂಗ್ ದಾಳಿ ಹೊಂದಿರುವ ತಂಡವೆಂದರೆ ಅದು ಆರ್​ಸಿಬಿ, ಇದು ಆ ತಂಡದ ಎಕ್ಸ್-ಫ್ಯಾಕ್ಟರ್ ಎಂದು ಮಾಂಜ್ರೇಕರ್ ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಪೃಥ್ವಿಶಂಕರ
|

Updated on:Mar 27, 2023 | 4:37 PM

Share
ಪ್ರತಿ ಬಾರಿಯ ಐಪಿಎಲ್ ಆರಂಭವಾದಗಲೂ ಪ್ರಶಸ್ತಿಯ ಪ್ರಬಲ ಸ್ಪರ್ಧಿಯಾಗಿ ಅಖಾಡಕ್ಕೆ ಎಂಟ್ರಿಕೊಡುವ ಆರ್​ಸಿಬಿ ತಂಡ ಪ್ರತಿ ಬಾರಿಯೂ ನಿರ್ಣಾಯಕ ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಖಾಲಿ ಕೈಯಲ್ಲಿ ವಾಪಸ್ಸಾಗುತ್ತಿದೆ. ಇದು ಕಳೆದ 15 ಸೀಸನ್​ಗಳಲ್ಲೂ ನಡೆದಿದೆ.

ಪ್ರತಿ ಬಾರಿಯ ಐಪಿಎಲ್ ಆರಂಭವಾದಗಲೂ ಪ್ರಶಸ್ತಿಯ ಪ್ರಬಲ ಸ್ಪರ್ಧಿಯಾಗಿ ಅಖಾಡಕ್ಕೆ ಎಂಟ್ರಿಕೊಡುವ ಆರ್​ಸಿಬಿ ತಂಡ ಪ್ರತಿ ಬಾರಿಯೂ ನಿರ್ಣಾಯಕ ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಖಾಲಿ ಕೈಯಲ್ಲಿ ವಾಪಸ್ಸಾಗುತ್ತಿದೆ. ಇದು ಕಳೆದ 15 ಸೀಸನ್​ಗಳಲ್ಲೂ ನಡೆದಿದೆ.

1 / 6
ಪ್ರತಿ ಬಾರಿ ತಂಡ ಬರಿಗೈಯಲ್ಲಿ ಟೂರ್ನಿಯಿಂದ ಹೊರಬಿದ್ದಗಲೆಲ್ಲ, ತಂಡದ ಬಗ್ಗೆ ಕೇಳಿಬರುವ ಆರೋಪವೆನೆಂದರೆ, ತಂಡದಲ್ಲಿ ಬಲಿಷ್ಠ ಬೌಲಿಂಗ್ ಲೈನ್​ಅಪ್ ಇಲ್ಲ ಎಂಬುದು. ಬ್ಯಾಟಿಂಗ್ ವಿಭಾಗದಲ್ಲಿ ಸ್ಟಾರ್ ಕ್ರಿಕೆಟಿಗರ ದಂಡನ್ನೇ ಹೊಂದಿರುವ ಆರ್​ಸಿಬಿಯ ಬೌಲಿಂಗ್​ ವಿಭಾಗ ಮಾತ್ರ ಇಲ್ಲಿಯವರೆಗೆ ಕೊಂಚ ದುರ್ಬಲವಾಗಿಯೇ ಬಿಂಬಿತವಾಗಿದೆ.

ಪ್ರತಿ ಬಾರಿ ತಂಡ ಬರಿಗೈಯಲ್ಲಿ ಟೂರ್ನಿಯಿಂದ ಹೊರಬಿದ್ದಗಲೆಲ್ಲ, ತಂಡದ ಬಗ್ಗೆ ಕೇಳಿಬರುವ ಆರೋಪವೆನೆಂದರೆ, ತಂಡದಲ್ಲಿ ಬಲಿಷ್ಠ ಬೌಲಿಂಗ್ ಲೈನ್​ಅಪ್ ಇಲ್ಲ ಎಂಬುದು. ಬ್ಯಾಟಿಂಗ್ ವಿಭಾಗದಲ್ಲಿ ಸ್ಟಾರ್ ಕ್ರಿಕೆಟಿಗರ ದಂಡನ್ನೇ ಹೊಂದಿರುವ ಆರ್​ಸಿಬಿಯ ಬೌಲಿಂಗ್​ ವಿಭಾಗ ಮಾತ್ರ ಇಲ್ಲಿಯವರೆಗೆ ಕೊಂಚ ದುರ್ಬಲವಾಗಿಯೇ ಬಿಂಬಿತವಾಗಿದೆ.

2 / 6
ಆದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ನಡೆದ ಮಿನಿ ಹರಾಜಿನಲ್ಲಿ ವೇಗಿಗಳ ಮೇಲೆ ಗುರಿ ಇಟ್ಟ ಆರ್​ಸಿಬಿ ಉತ್ತಮ ಬೌಲಿಂಗ್ ಅಟ್ಯಾಕ್ ಸಿದ್ದಪಡಿಸಿಕೊಂಡಿದೆ. ಇದಕ್ಕೆ ಪೂರಕವಾಗಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರು ಕೂಡ ಆರ್​ಸಿಬಿಯ ಬೌಲಿಂಗ್​ ವಿಭಾಗದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

ಆದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ನಡೆದ ಮಿನಿ ಹರಾಜಿನಲ್ಲಿ ವೇಗಿಗಳ ಮೇಲೆ ಗುರಿ ಇಟ್ಟ ಆರ್​ಸಿಬಿ ಉತ್ತಮ ಬೌಲಿಂಗ್ ಅಟ್ಯಾಕ್ ಸಿದ್ದಪಡಿಸಿಕೊಂಡಿದೆ. ಇದಕ್ಕೆ ಪೂರಕವಾಗಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರು ಕೂಡ ಆರ್​ಸಿಬಿಯ ಬೌಲಿಂಗ್​ ವಿಭಾಗದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

3 / 6
ಐಪಿಎಲ್ ಆರಂಭಕ್ಕೂ ಮುನ್ನ ಈ ಬಗ್ಗೆ ಮಾತನಾಡಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ಆರಂಭಕ್ಕೂ ಮುನ್ನ ಈ ಬಗ್ಗೆ ಮಾತನಾಡಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಅತ್ಯುತ್ತಮ ಬೌಲಿಂಗ್ ದಾಳಿಯನ್ನು ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

4 / 6
ಮುಂದುವರೆದು ಮಾತನಾಡಿರುವ ಸಂಜಯ್, ಆರ್​ಸಿಬಿ ವೇಗದ ಬೌಲಿಂಗ್‌ನಲ್ಲಿ ಡೆಪ್ತ್ ಇದೆ. (ಜೋಶ್) ಹೇಜಲ್‌ವುಡ್ ಫಿಟ್ ಆಗದಿದ್ದರೂ, ಅವರ ಬದಲಿಗೆ ರೀಸ್ ಟಾಪ್ಲಿ ಇದ್ದಾರೆ. ಸ್ಪಿನ್‌ನಲ್ಲಿ ವನಿಂದು ಹಸರಂಗ ಇದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಈಗಾಗಲೇ ತಂಡದಲ್ಲಿದ್ದಾರೆ. ಹೀಗಾಗಿ ಆರ್​ಸಿಬಿಯ ಬೌಲಿಂಗ್ ಪರಿಪೂರ್ಣವಾಗಿದೆ. ಇದರೊಂದಿಗೆ ಮ್ಯಾಕ್ಸ್‌ವೆಲ್ ಕೂಡ ಬೌಲಿಂಗ್ ಮಾಡಬಲ್ಲರು. ಹೀಗಾಗಿ ಈ ಐಪಿಎಲ್‌ನಲ್ಲಿ, ನನ್ನ ಪ್ರಕಾರ, ಅತ್ಯುತ್ತಮ ಬೌಲಿಂಗ್ ದಾಳಿ ಹೊಂದಿರುವ ತಂಡವೆಂದರೆ ಅದು ಆರ್​ಸಿಬಿ, ಇದು ಆ ತಂಡದ ಎಕ್ಸ್-ಫ್ಯಾಕ್ಟರ್ ಎಂದು ಮಾಂಜ್ರೇಕರ್ ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಮುಂದುವರೆದು ಮಾತನಾಡಿರುವ ಸಂಜಯ್, ಆರ್​ಸಿಬಿ ವೇಗದ ಬೌಲಿಂಗ್‌ನಲ್ಲಿ ಡೆಪ್ತ್ ಇದೆ. (ಜೋಶ್) ಹೇಜಲ್‌ವುಡ್ ಫಿಟ್ ಆಗದಿದ್ದರೂ, ಅವರ ಬದಲಿಗೆ ರೀಸ್ ಟಾಪ್ಲಿ ಇದ್ದಾರೆ. ಸ್ಪಿನ್‌ನಲ್ಲಿ ವನಿಂದು ಹಸರಂಗ ಇದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಈಗಾಗಲೇ ತಂಡದಲ್ಲಿದ್ದಾರೆ. ಹೀಗಾಗಿ ಆರ್​ಸಿಬಿಯ ಬೌಲಿಂಗ್ ಪರಿಪೂರ್ಣವಾಗಿದೆ. ಇದರೊಂದಿಗೆ ಮ್ಯಾಕ್ಸ್‌ವೆಲ್ ಕೂಡ ಬೌಲಿಂಗ್ ಮಾಡಬಲ್ಲರು. ಹೀಗಾಗಿ ಈ ಐಪಿಎಲ್‌ನಲ್ಲಿ, ನನ್ನ ಪ್ರಕಾರ, ಅತ್ಯುತ್ತಮ ಬೌಲಿಂಗ್ ದಾಳಿ ಹೊಂದಿರುವ ತಂಡವೆಂದರೆ ಅದು ಆರ್​ಸಿಬಿ, ಇದು ಆ ತಂಡದ ಎಕ್ಸ್-ಫ್ಯಾಕ್ಟರ್ ಎಂದು ಮಾಂಜ್ರೇಕರ್ ಸ್ಟಾರ್ ಸ್ಪೋರ್ಟ್ಸ್‌ನೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

5 / 6
ವಾಸ್ತವವಾಗಿ ಆರ್​ಸಿಬಿ ಬೌಲಿಂಗ್ ವಿಭಾಗ ಹೇಗಿದೆ ಎಂಬುದನ್ನು ನೋಡುವುದಾದರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್ ಮತ್ತು ಟೋಪ್ಲಿಯಂತಹ ಸ್ಟಾರ್ ಆಟಗಾರರಾಗಿದ್ದಾರೆ.

ವಾಸ್ತವವಾಗಿ ಆರ್​ಸಿಬಿ ಬೌಲಿಂಗ್ ವಿಭಾಗ ಹೇಗಿದೆ ಎಂಬುದನ್ನು ನೋಡುವುದಾದರೆ, ವೇಗದ ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ದಾರ್ಥ್ ಕೌಲ್ ಮತ್ತು ಟೋಪ್ಲಿಯಂತಹ ಸ್ಟಾರ್ ಆಟಗಾರರಾಗಿದ್ದಾರೆ.

6 / 6

Published On - 4:37 pm, Mon, 27 March 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ