AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡಕ್ಕೆ ಕಿವೀಸ್​ನ ಸ್ಟಾರ್ ಆಟಗಾರ ಎಂಟ್ರಿ?

IPL 2023 Kannada: ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ.

TV9 Web
| Edited By: |

Updated on: Mar 16, 2023 | 4:09 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಆರಂಭಕ್ಕೂ ಮುನ್ನವೇ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಿಂದ ಜಸ್​ಪ್ರೀತ್ ಬುಮ್ರಾ ಹಾಗೂ ಜ್ಯೆ ರಿಚರ್ಡ್ಸನ್ ಹೊರಗುಳಿದ ಬೆನ್ನಲ್ಲೇ, ಇದೀಗ ಆರ್​ಸಿಬಿ ತಂಡದಿಂದ ವಿಲ್ ಜಾಕ್ಸ್ ಹೊರನಡೆದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 16 ಆರಂಭಕ್ಕೂ ಮುನ್ನವೇ ಕೆಲ ತಂಡಗಳಿಂದ ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಿಂದ ಜಸ್​ಪ್ರೀತ್ ಬುಮ್ರಾ ಹಾಗೂ ಜ್ಯೆ ರಿಚರ್ಡ್ಸನ್ ಹೊರಗುಳಿದ ಬೆನ್ನಲ್ಲೇ, ಇದೀಗ ಆರ್​ಸಿಬಿ ತಂಡದಿಂದ ವಿಲ್ ಜಾಕ್ಸ್ ಹೊರನಡೆದಿದ್ದಾರೆ.

1 / 6
ಈ ಬಾರಿಯ ಹರಾಜಿನಲ್ಲಿ ಆರ್​ಸಿಬಿ ತಂಡವು ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಅವರನ್ನು 3.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಕಾಲಿಗೆ ಗಾಯವಾಗಿದ್ದರಿಂದ ಇದೀಗ ಜಾಕ್ಸ್ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಈ ಬಾರಿಯ ಹರಾಜಿನಲ್ಲಿ ಆರ್​ಸಿಬಿ ತಂಡವು ಇಂಗ್ಲೆಂಡ್ ಆಲ್​ರೌಂಡರ್ ವಿಲ್ ಜಾಕ್ಸ್ ಅವರನ್ನು 3.2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಬಾಂಗ್ಲಾದೇಶ್ ವಿರುದ್ಧದ ಸರಣಿಯ ವೇಳೆ ಕಾಲಿಗೆ ಗಾಯವಾಗಿದ್ದರಿಂದ ಇದೀಗ ಜಾಕ್ಸ್ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

2 / 6
ಇತ್ತ ವಿಲ್ ಜಾಕ್ಸ್ ಐಪಿಎಲ್​ನಿಂದ ಹೊರಬೀಳುತ್ತಿದ್ದಂತೆ ಆರ್​ಸಿಬಿ ಫ್ರಾಂಚೈಸಿ ನ್ಯೂಜಿಲೆಂಡ್ ಆಟಗಾರ ಮೈಕೆಲ್ ಬ್ರೇಸ್​ವೆಲ್ ಜೊತೆ ಮಾತುಕತೆ ನಡೆಸಿದೆ. ಈ ಬಾರಿಯ ಹರಾಜಿನಲ್ಲಿ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬ್ರೇಸ್​ವೆಲ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಇತ್ತ ವಿಲ್ ಜಾಕ್ಸ್ ಐಪಿಎಲ್​ನಿಂದ ಹೊರಬೀಳುತ್ತಿದ್ದಂತೆ ಆರ್​ಸಿಬಿ ಫ್ರಾಂಚೈಸಿ ನ್ಯೂಜಿಲೆಂಡ್ ಆಟಗಾರ ಮೈಕೆಲ್ ಬ್ರೇಸ್​ವೆಲ್ ಜೊತೆ ಮಾತುಕತೆ ನಡೆಸಿದೆ. ಈ ಬಾರಿಯ ಹರಾಜಿನಲ್ಲಿ 1 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಬ್ರೇಸ್​ವೆಲ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

3 / 6
ಇದೀಗ ವಿಲ್ ಜಾಕ್ಸ್ ಅವರ ಬದಲಿ ಆಟಗಾರನಾಗಿ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲು ಆರ್​​ಸಿಬಿ ಆಸಕ್ತಿ ಹೊಂದಿದೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್​ ತಂಡದ ಎಡಗೈ ದಾಂಡಿಗ ಆರ್​ಸಿಬಿ ತಂಡಕ್ಕೆ ಬರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇದೀಗ ವಿಲ್ ಜಾಕ್ಸ್ ಅವರ ಬದಲಿ ಆಟಗಾರನಾಗಿ ಮೈಕೆಲ್ ಬ್ರೇಸ್​ವೆಲ್ ಅವರನ್ನು ಆಯ್ಕೆ ಮಾಡಲು ಆರ್​​ಸಿಬಿ ಆಸಕ್ತಿ ಹೊಂದಿದೆ. ಇದೇ ಕಾರಣದಿಂದಾಗಿ ನ್ಯೂಜಿಲೆಂಡ್​ ತಂಡದ ಎಡಗೈ ದಾಂಡಿಗ ಆರ್​ಸಿಬಿ ತಂಡಕ್ಕೆ ಬರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

4 / 6
ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ.

ಐಪಿಎಲ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದೆ. ಇನ್ನು ಆರ್​ಸಿಬಿ ತಂಡವು ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಐಪಿಎಲ್ ಅಭಿಯಾನ ಆರಂಭಿಸಲಿದೆ.

5 / 6
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್​ವೆಲ್.

6 / 6
Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ