AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದಲ್ಲಿ 3 ಬ್ಯಾಟ್ಸ್​ಮನ್​, ಒಬ್ಬ ಬೌಲರ್ ಮತ್ತು 7 ಫೀಲ್ಡರ್​ಗಳು..!

IPL 2023 Kannada: ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಕೆಕೆಆರ್ ವಿರುದ್ಧ ಆಡಲಿದೆ. ಏಪ್ರಿಲ್ 26 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದೊಂದಿಗೆ ಆರ್​ಸಿಬಿ ದ್ವಿತಿಯಾರ್ಧ ಶುರು ಮಾಡಲಿದೆ.

ಝಾಹಿರ್ ಯೂಸುಫ್
|

Updated on:Apr 24, 2023 | 8:33 PM

Share
IPL 2023: ಈ ಸಲ ಕಪ್ ಕಮ್ದೆ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ ಸೀಸನ್ 16 ಅಭಿಯಾನ ಆರಂಭಿಸಿದ್ದ ಆರ್​ಸಿಬಿ ತಂಡದ ಲೆಕ್ಕಾಚಾರಗಳು ತಲೆ ಕೆಳಗಾಗುತ್ತಿದೆ. ಏಕೆಂದರೆ ಆಡಿರುವ 7 ಪಂದ್ಯಗಳಲ್ಲಿ ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ. ಆದರೆ ಈ ನಾಲ್ಕು ಪಂದ್ಯಗಳ ಗೆಲುವಿನ ಹಿಂದಿರುವುದು ಕೂಡ ನಾಲ್ವರು ಎಂಬುದು ವಿಶೇಷ.

IPL 2023: ಈ ಸಲ ಕಪ್ ಕಮ್ದೆ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ ಸೀಸನ್ 16 ಅಭಿಯಾನ ಆರಂಭಿಸಿದ್ದ ಆರ್​ಸಿಬಿ ತಂಡದ ಲೆಕ್ಕಾಚಾರಗಳು ತಲೆ ಕೆಳಗಾಗುತ್ತಿದೆ. ಏಕೆಂದರೆ ಆಡಿರುವ 7 ಪಂದ್ಯಗಳಲ್ಲಿ ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 4 ಮ್ಯಾಚ್​ಗಳಲ್ಲಿ ಮಾತ್ರ. ಆದರೆ ಈ ನಾಲ್ಕು ಪಂದ್ಯಗಳ ಗೆಲುವಿನ ಹಿಂದಿರುವುದು ಕೂಡ ನಾಲ್ವರು ಎಂಬುದು ವಿಶೇಷ.

1 / 9
ಅಂದರೆ ಆರ್​ಸಿಬಿ ತಂಡವು 11 ಮಂದಿಯೊಂದಿಗೆ ಕಣಕ್ಕಿಳಿಯುತ್ತಿದ್ದರೂ ತಂಡದ ಗೆಲುವಿನಲ್ಲಿ ಕೊಡುಗೆ ನೀಡುತ್ತಿರುವುದು ಕೇವಲ ನಾಲ್ವರು ಆಟಗಾರರು ಮಾತ್ರ. ಉಳಿದವರು ಕೇವಲ ಫೀಲ್ಡಿಂಗ್​ಗೆ ಸೀಮಿತವಾಗುತ್ತಿದ್ದಾರೆ.

ಅಂದರೆ ಆರ್​ಸಿಬಿ ತಂಡವು 11 ಮಂದಿಯೊಂದಿಗೆ ಕಣಕ್ಕಿಳಿಯುತ್ತಿದ್ದರೂ ತಂಡದ ಗೆಲುವಿನಲ್ಲಿ ಕೊಡುಗೆ ನೀಡುತ್ತಿರುವುದು ಕೇವಲ ನಾಲ್ವರು ಆಟಗಾರರು ಮಾತ್ರ. ಉಳಿದವರು ಕೇವಲ ಫೀಲ್ಡಿಂಗ್​ಗೆ ಸೀಮಿತವಾಗುತ್ತಿದ್ದಾರೆ.

2 / 9
ಏಕೆಂದರೆ ಏಳು ಪಂದ್ಯಗಳನ್ನು ಮುಗಿಸಿರುವ ಆರ್​ಸಿಬಿ ಬ್ಯಾಟಿಂಗ್ ಲೈನಪ್​ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಅವಲಂಭಿಸಿದೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

ಏಕೆಂದರೆ ಏಳು ಪಂದ್ಯಗಳನ್ನು ಮುಗಿಸಿರುವ ಆರ್​ಸಿಬಿ ಬ್ಯಾಟಿಂಗ್ ಲೈನಪ್​ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಅವಲಂಭಿಸಿದೆ. ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು.

3 / 9
ಈ 7 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 279 ರನ್​ ಕಲೆಹಾಕಿದರೆ, ಗ್ಲೆನ್ ಮ್ಯಾಕ್ಸ್​ವೆಲ್ 253 ರನ್​ಗಳಿಸಿದ್ದಾರೆ. ಹಾಗೆಯೇ ಫಾಫ್ ಡುಪ್ಲೆಸಿಸ್ 7 ಪಂದ್ಯಗಳಲ್ಲಿ 405 ರನ್​ ಬಾರಿಸಿ ಅಮೋಘ ಪ್ರದರ್ಶನ ನೀಡಿದ್ದಾರೆ. ಈ ಮೂವರನ್ನು ಹೊರತುಪಡಿಸಿದರೆ ಉಳಿದ ಯಾವುದೇ ಬ್ಯಾಟ್ಸ್​ಮನ್ 7 ಪಂದ್ಯಗಳಿಂದ​ 70 ರನ್​ ಕೂಡ ಕಲೆಹಾಕಿಲ್ಲ ಎಂಬುದೇ ಅಚ್ಚರಿ.

ಈ 7 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 279 ರನ್​ ಕಲೆಹಾಕಿದರೆ, ಗ್ಲೆನ್ ಮ್ಯಾಕ್ಸ್​ವೆಲ್ 253 ರನ್​ಗಳಿಸಿದ್ದಾರೆ. ಹಾಗೆಯೇ ಫಾಫ್ ಡುಪ್ಲೆಸಿಸ್ 7 ಪಂದ್ಯಗಳಲ್ಲಿ 405 ರನ್​ ಬಾರಿಸಿ ಅಮೋಘ ಪ್ರದರ್ಶನ ನೀಡಿದ್ದಾರೆ. ಈ ಮೂವರನ್ನು ಹೊರತುಪಡಿಸಿದರೆ ಉಳಿದ ಯಾವುದೇ ಬ್ಯಾಟ್ಸ್​ಮನ್ 7 ಪಂದ್ಯಗಳಿಂದ​ 70 ರನ್​ ಕೂಡ ಕಲೆಹಾಕಿಲ್ಲ ಎಂಬುದೇ ಅಚ್ಚರಿ.

4 / 9
ದಿನೇಶ್ ಕಾರ್ತಿಕ್ 7 ಪಂದ್ಯಗಳಿಂದ ಒಟ್ಟು 61 ರನ್​ಗಳಿಸಿದರೆ, ಶಹಬಾಝ್ ಅಹ್ಮದ್ 40 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಮಹಿಪಾಲ್ ಲೋಮ್ರರ್ 5 ಪಂದ್ಯಗಳಿಂದ 41 ರನ್​ ಕಲೆಹಾಕಿದರೆ, ಸುಯಶ್ ಪ್ರಭುದೇಸಾಯಿ 3 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 19 ರನ್​ ಮಾತ್ರ. ಅಂದರೆ ಇಲ್ಲಿ ಆರ್​ಸಿಬಿ ಗೆಲುವಿನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳಿಂದ ಯಾವುದೇ ಕೊಡುಗೆಯಿಲ್ಲ ಎಂಬುದೇ ಸತ್ಯ.

ದಿನೇಶ್ ಕಾರ್ತಿಕ್ 7 ಪಂದ್ಯಗಳಿಂದ ಒಟ್ಟು 61 ರನ್​ಗಳಿಸಿದರೆ, ಶಹಬಾಝ್ ಅಹ್ಮದ್ 40 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಮಹಿಪಾಲ್ ಲೋಮ್ರರ್ 5 ಪಂದ್ಯಗಳಿಂದ 41 ರನ್​ ಕಲೆಹಾಕಿದರೆ, ಸುಯಶ್ ಪ್ರಭುದೇಸಾಯಿ 3 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 19 ರನ್​ ಮಾತ್ರ. ಅಂದರೆ ಇಲ್ಲಿ ಆರ್​ಸಿಬಿ ಗೆಲುವಿನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳಿಂದ ಯಾವುದೇ ಕೊಡುಗೆಯಿಲ್ಲ ಎಂಬುದೇ ಸತ್ಯ.

5 / 9
ಇನ್ನು ಬೌಲಿಂಗ್ ವಿಭಾಗದಲ್ಲೂ ಇದೇ ಕಥೆ. ಮೊಹಮ್ಮದ್ ಸಿರಾಜ್ ಅವರನ್ನು ಹೊರತುಪಡಿಸಿದರೆ ಉಳಿದ ಯಾವುದೇ ಬೌಲರ್​ಗಳು ಪರಿಣಾಮಕಾರಿಯಾಗುತ್ತಿಲ್ಲ. 7 ಪಂದ್ಯಗಳಿಂದ ಸಿರಾಜ್ ಒಟ್ಟು 13 ವಿಕೆಟ್ ಪಡೆದಿರುವುದು ಬಿಟ್ಟರೆ ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ.

ಇನ್ನು ಬೌಲಿಂಗ್ ವಿಭಾಗದಲ್ಲೂ ಇದೇ ಕಥೆ. ಮೊಹಮ್ಮದ್ ಸಿರಾಜ್ ಅವರನ್ನು ಹೊರತುಪಡಿಸಿದರೆ ಉಳಿದ ಯಾವುದೇ ಬೌಲರ್​ಗಳು ಪರಿಣಾಮಕಾರಿಯಾಗುತ್ತಿಲ್ಲ. 7 ಪಂದ್ಯಗಳಿಂದ ಸಿರಾಜ್ ಒಟ್ಟು 13 ವಿಕೆಟ್ ಪಡೆದಿರುವುದು ಬಿಟ್ಟರೆ ಉಳಿದವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರುತ್ತಿಲ್ಲ.

6 / 9
ಇನ್ನು ಹರ್ಷಲ್ ಪಟೇಲ್ 10 ವಿಕೆಟ್ ಕಬಳಿಸಿದರೂ ಪ್ರತಿ ಓವರ್​ನಲ್ಲಿ 9.77 ಸರಾಸರಿಯಲ್ಲಿ ರನ್ ನೀಡಿದ್ದಾರೆ. ಹಾಗೆಯೇ ಇನ್ನುಳಿದ ಯಾವುದೇ ಬೌಲರ್​ 5 ಕ್ಕಿಂತ ಹೆಚ್ಚಿನ ವಿಕೆಟ್ ಕೂಡ ಕಬಳಿಸಿಲ್ಲ ಎಂಬುದೇ ಅಚ್ಚರಿ.

ಇನ್ನು ಹರ್ಷಲ್ ಪಟೇಲ್ 10 ವಿಕೆಟ್ ಕಬಳಿಸಿದರೂ ಪ್ರತಿ ಓವರ್​ನಲ್ಲಿ 9.77 ಸರಾಸರಿಯಲ್ಲಿ ರನ್ ನೀಡಿದ್ದಾರೆ. ಹಾಗೆಯೇ ಇನ್ನುಳಿದ ಯಾವುದೇ ಬೌಲರ್​ 5 ಕ್ಕಿಂತ ಹೆಚ್ಚಿನ ವಿಕೆಟ್ ಕೂಡ ಕಬಳಿಸಿಲ್ಲ ಎಂಬುದೇ ಅಚ್ಚರಿ.

7 / 9
ಅಂದರೆ ಇಲ್ಲಿ ಆರ್​ಸಿಬಿ ತಂಡದ ಗೆಲುವಿನಲ್ಲಿ ಬ್ಯಾಟಿಂಗ್ ಮೂಲಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅಮೂಲ್ಯ ಕೊಡುಗೆ ನೀಡುತ್ತಿದ್ದರೆ, ಬೌಲಿಂಗ್​ ಮೂಲಕ ಮೊಹಮ್ಮದ್ ಸಿರಾಜ್ ಮಿಂಚುತ್ತಿದ್ದಾರೆ. ಉಳಿದ 7 ಮಂದಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಹ ಪರಿಸ್ಥಿತಿ ತಲೆದೂರಿದೆ.

ಅಂದರೆ ಇಲ್ಲಿ ಆರ್​ಸಿಬಿ ತಂಡದ ಗೆಲುವಿನಲ್ಲಿ ಬ್ಯಾಟಿಂಗ್ ಮೂಲಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅಮೂಲ್ಯ ಕೊಡುಗೆ ನೀಡುತ್ತಿದ್ದರೆ, ಬೌಲಿಂಗ್​ ಮೂಲಕ ಮೊಹಮ್ಮದ್ ಸಿರಾಜ್ ಮಿಂಚುತ್ತಿದ್ದಾರೆ. ಉಳಿದ 7 ಮಂದಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಹ ಪರಿಸ್ಥಿತಿ ತಲೆದೂರಿದೆ.

8 / 9
ಇದೇ ಪರಿಸ್ಥಿತಿ ಮುಂದುವರೆದರೆ ಆರ್​ಸಿಬಿ ಮುಂದಿನ ಹಂತಕ್ಕೇರುವುದು ಕೂಡ ಕಷ್ಟಸಾಧ್ಯ. ಏಕೆಂದರೆ ಈ ನಾಲ್ವರಲ್ಲಿ ಇಬ್ಬರು ಕೈ ಕೊಟ್ಟರೂ ಆರ್​ಸಿಬಿಗೆ ಸೋಲು ಕಟ್ಟಿಟ್ಟ ಬುತ್ತಿ. ಇದಕ್ಕೆ ಉತ್ತಮ ಉದಾಹರಣೆ ಕೆಕೆಆರ್ ವಿರುದ್ಧದ ಹೀನಾಯ ಸೋಲು. ಹೀಗಾಗಿ ದ್ವಿತಿಯಾರ್ಧದ ಆರಂಭಕ್ಕೂ ಮುನ್ನ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಎಚ್ಚೆತ್ತುಕೊಳ್ಳುವುದು ಉತ್ತಮ.

ಇದೇ ಪರಿಸ್ಥಿತಿ ಮುಂದುವರೆದರೆ ಆರ್​ಸಿಬಿ ಮುಂದಿನ ಹಂತಕ್ಕೇರುವುದು ಕೂಡ ಕಷ್ಟಸಾಧ್ಯ. ಏಕೆಂದರೆ ಈ ನಾಲ್ವರಲ್ಲಿ ಇಬ್ಬರು ಕೈ ಕೊಟ್ಟರೂ ಆರ್​ಸಿಬಿಗೆ ಸೋಲು ಕಟ್ಟಿಟ್ಟ ಬುತ್ತಿ. ಇದಕ್ಕೆ ಉತ್ತಮ ಉದಾಹರಣೆ ಕೆಕೆಆರ್ ವಿರುದ್ಧದ ಹೀನಾಯ ಸೋಲು. ಹೀಗಾಗಿ ದ್ವಿತಿಯಾರ್ಧದ ಆರಂಭಕ್ಕೂ ಮುನ್ನ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್ ಎಚ್ಚೆತ್ತುಕೊಳ್ಳುವುದು ಉತ್ತಮ.

9 / 9

Published On - 8:29 pm, Mon, 24 April 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?