AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಆರ್​ಸಿಬಿಗೆ ಬಿಗ್ ಶಾಕ್; ಸ್ಟಾರ್ ಬೌಲರ್​ ಲೀಗ್​​ನಿಂದ ಔಟ್! ಬದಲಿಯಾಗಿ ಬಂದಿದ್ಯಾರು ಗೊತ್ತಾ?

IPL 2023: ಈ ಆಟಗಾರ ಕಳೆದ ನಾಲ್ಕು ಸೀಸನ್​​ಗಳಲ್ಲಿ 29 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ ಒಂದು ಅರ್ಧಶತಕವನ್ನು ಮಾತ್ರ ಬಾರಿಸಿದ್ದಾರೆ.

ಪೃಥ್ವಿಶಂಕರ
|

Updated on:May 01, 2023 | 6:02 PM

Share
ಲಕ್ನೋ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಬೌಲರ್ ಡೇವಿಡ್ ವಿಲ್ಲಿ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಲಕ್ನೋ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಬೌಲರ್ ಡೇವಿಡ್ ವಿಲ್ಲಿ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

1 / 8
ಈಗಾಗಲೇ ಟೂರ್ನಿಯಲ್ಲಿ 42 ಪಂದ್ಯಗಳು ಮುಗಿದಿದ್ದು, ಲೀಗ್​​ನಲ್ಲಿ ಏಳು ಬೀಳುಗಳನ್ನು ಕಂಡಿರುವ ಆರ್​ಸಿಬಿಗೆ ವಿಲ್ಲಿ ಅಲಭ್ಯತೆ ಸಾಕಷ್ಟು ಹಿನ್ನಡೆಯುಂಟು ಮಾಡಿದೆ.

ಈಗಾಗಲೇ ಟೂರ್ನಿಯಲ್ಲಿ 42 ಪಂದ್ಯಗಳು ಮುಗಿದಿದ್ದು, ಲೀಗ್​​ನಲ್ಲಿ ಏಳು ಬೀಳುಗಳನ್ನು ಕಂಡಿರುವ ಆರ್​ಸಿಬಿಗೆ ವಿಲ್ಲಿ ಅಲಭ್ಯತೆ ಸಾಕಷ್ಟು ಹಿನ್ನಡೆಯುಂಟು ಮಾಡಿದೆ.

2 / 8
ಇದೀಗ ವಿಲ್ಲಿ ಬದಲಿ ಆಟಗಾರನನ್ನು ಆಯ್ಕೆ ಮಾಡಿರುವ ಆರ್​ಸಿಬಿ, ತಂಡದ ಮಾಜಿ ಆಟಗಾರನಾದ ಕೇದಾರ್ ಜಾಧವ್​​ರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಇದೀಗ ವಿಲ್ಲಿ ಬದಲಿ ಆಟಗಾರನನ್ನು ಆಯ್ಕೆ ಮಾಡಿರುವ ಆರ್​ಸಿಬಿ, ತಂಡದ ಮಾಜಿ ಆಟಗಾರನಾದ ಕೇದಾರ್ ಜಾಧವ್​​ರನ್ನು ತಂಡಕ್ಕೆ ಸೇರಿಸಿಕೊಂಡಿದೆ.

3 / 8
ಅಚ್ಚರಿಯ ಸಂಗತಿ ಎಂದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಕೇದಾರ್ ಜಾಧವ್‌ಗೆ ಆರ್‌ಸಿಬಿ ತನ್ನ ತಂಡದಲ್ಲಿ ಸ್ಥಾನ ನೀಡಿದೆ. ಈ ಬಲಗೈ ಬ್ಯಾಟ್ಸ್‌ಮನ್ 2021 ರಲ್ಲಿ ಕೊನೆಯ ಬಾರಿಗೆ ಐಪಿಎಲ್ ಆಡಿದ್ದರು. ಈಗ ಇದ್ದಕ್ಕಿದ್ದಂತೆ ಆರ್‌ಸಿಬಿ ಅವರಿಗೆ ತನ್ನ ತಂಡದಲ್ಲಿ ಅವಕಾಶ ನೀಡಿದೆ.

ಅಚ್ಚರಿಯ ಸಂಗತಿ ಎಂದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಕೇದಾರ್ ಜಾಧವ್‌ಗೆ ಆರ್‌ಸಿಬಿ ತನ್ನ ತಂಡದಲ್ಲಿ ಸ್ಥಾನ ನೀಡಿದೆ. ಈ ಬಲಗೈ ಬ್ಯಾಟ್ಸ್‌ಮನ್ 2021 ರಲ್ಲಿ ಕೊನೆಯ ಬಾರಿಗೆ ಐಪಿಎಲ್ ಆಡಿದ್ದರು. ಈಗ ಇದ್ದಕ್ಕಿದ್ದಂತೆ ಆರ್‌ಸಿಬಿ ಅವರಿಗೆ ತನ್ನ ತಂಡದಲ್ಲಿ ಅವಕಾಶ ನೀಡಿದೆ.

4 / 8
ಐಪಿಎಲ್ ಹರಾಜಿನಲ್ಲಿ ಕೇದಾರ್ ಜಾಧವ್ ಅವರನ್ನು ಯಾವುದೇ ತಂಡ ಖರೀದಿಸಿರಲಿಲ್ಲ. ಇದಕ್ಕೆ ಕಾರಣವೂ ಇದ್ದು, ಕೇದಾರ್ ಜಾಧವ್ ಅವರಿಗೆ ಈಗ 38 ವರ್ಷ ವಯಸ್ಸಾಗಿದೆ. ಅಲ್ಲದೆ ಅವರು ಆಡಿದ ಕಳೆದ ಎರಡು ಸೀಸನ್​​ಗಳಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಈ ಹೊರತಾಗಿಯೂ ಆರ್​ಸಿಬಿ ಅವರನ್ನು ಖರೀದಿಸಿದೆ.

ಐಪಿಎಲ್ ಹರಾಜಿನಲ್ಲಿ ಕೇದಾರ್ ಜಾಧವ್ ಅವರನ್ನು ಯಾವುದೇ ತಂಡ ಖರೀದಿಸಿರಲಿಲ್ಲ. ಇದಕ್ಕೆ ಕಾರಣವೂ ಇದ್ದು, ಕೇದಾರ್ ಜಾಧವ್ ಅವರಿಗೆ ಈಗ 38 ವರ್ಷ ವಯಸ್ಸಾಗಿದೆ. ಅಲ್ಲದೆ ಅವರು ಆಡಿದ ಕಳೆದ ಎರಡು ಸೀಸನ್​​ಗಳಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಈ ಹೊರತಾಗಿಯೂ ಆರ್​ಸಿಬಿ ಅವರನ್ನು ಖರೀದಿಸಿದೆ.

5 / 8
ಐಪಿಎಲ್ ಹರಾಜಿನಲ್ಲಿ ಮಾರಾಟವಾಗದ ಹಿನ್ನೆಲೆಯಲ್ಲಿ ಕೇದಾರ್ ಜಾಧವ್ ಕಾಮೆಂಟರಿ ಮಾಡುತ್ತಿದ್ದರು. ಈಗ ಪ್ರಶ್ನೆ ಏನೆಂದರೆ ಆರ್​ಸಿಬಿ ಕೇದಾರ್ ಜಾಧವ್ ಅವರನ್ನು ಏಕೆ ಖರೀದಿಸಿತು ಎಂಬುದು. ಡೇವಿಡ್ ವಿಲ್ಲಿ ಬದಲಿಗೆ ವಿದೇಶಿ ಆಟಗಾರರನ್ನು ಖರೀದಿಸುವ ಅವಕಾಶವಿದ್ದರೂ ಆರ್​​ಸಿಬಿ ಜಾಧವ್ ಅವರನ್ನು ಖರೀದಿಸಲು ಕಾರಣ ಅವರ ಬ್ಯಾಟಿಂಗ್.

ಐಪಿಎಲ್ ಹರಾಜಿನಲ್ಲಿ ಮಾರಾಟವಾಗದ ಹಿನ್ನೆಲೆಯಲ್ಲಿ ಕೇದಾರ್ ಜಾಧವ್ ಕಾಮೆಂಟರಿ ಮಾಡುತ್ತಿದ್ದರು. ಈಗ ಪ್ರಶ್ನೆ ಏನೆಂದರೆ ಆರ್​ಸಿಬಿ ಕೇದಾರ್ ಜಾಧವ್ ಅವರನ್ನು ಏಕೆ ಖರೀದಿಸಿತು ಎಂಬುದು. ಡೇವಿಡ್ ವಿಲ್ಲಿ ಬದಲಿಗೆ ವಿದೇಶಿ ಆಟಗಾರರನ್ನು ಖರೀದಿಸುವ ಅವಕಾಶವಿದ್ದರೂ ಆರ್​​ಸಿಬಿ ಜಾಧವ್ ಅವರನ್ನು ಖರೀದಿಸಲು ಕಾರಣ ಅವರ ಬ್ಯಾಟಿಂಗ್.

6 / 8
ವಾಸ್ತವವಾಗಿ, ಆರ್​ಸಿಬಿ ಸಮಸ್ಯೆಯೆಂದರೆ ವಿರಾಟ್, ಡುಪ್ಲೆಸಿಸ್ ಮತ್ತು ಮ್ಯಾಕ್ಸ್‌ವೆಲ್ ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟ್ಸ್‌ಮನ್ ರನ್ ಗಳಿಸುತ್ತಿಲ್ಲ. ಈ ಕೊರತೆಯನ್ನು ನೀಗಿಸಲು ಜಾಧವ್ ಅವರನ್ನು ತಂಡಕ್ಕೆ ಕರೆತಂದಿದ್ದಾರೆ. ಜಾಧವ್ ಅನುಭವ ಹೊಂದಿದ್ದು, ಸುದೀರ್ಘ ಸಿಕ್ಸರ್ ಬಾರಿಸುವುದರಲ್ಲಿ ಹೆಸರುವಾಸಿಯಾಗಿದ್ದಾರೆ.

ವಾಸ್ತವವಾಗಿ, ಆರ್​ಸಿಬಿ ಸಮಸ್ಯೆಯೆಂದರೆ ವಿರಾಟ್, ಡುಪ್ಲೆಸಿಸ್ ಮತ್ತು ಮ್ಯಾಕ್ಸ್‌ವೆಲ್ ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟ್ಸ್‌ಮನ್ ರನ್ ಗಳಿಸುತ್ತಿಲ್ಲ. ಈ ಕೊರತೆಯನ್ನು ನೀಗಿಸಲು ಜಾಧವ್ ಅವರನ್ನು ತಂಡಕ್ಕೆ ಕರೆತಂದಿದ್ದಾರೆ. ಜಾಧವ್ ಅನುಭವ ಹೊಂದಿದ್ದು, ಸುದೀರ್ಘ ಸಿಕ್ಸರ್ ಬಾರಿಸುವುದರಲ್ಲಿ ಹೆಸರುವಾಸಿಯಾಗಿದ್ದಾರೆ.

7 / 8
ಕೇದಾರ್ ಜಾಧವ್ ಅವರ ಸಮಸ್ಯೆ ಏನೆಂದರೆ ಅವರು ಕೊನೆಯ ಬಾರಿಗೆ 2021 ರಲ್ಲಿ ಐಪಿಎಲ್ ಪಂದ್ಯವನ್ನು ಆಡಿದ್ದರು. ಈ ಆಟಗಾರ ಕಳೆದ ನಾಲ್ಕು ಸೀಸನ್​​ಗಳಲ್ಲಿ 29 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ ಒಂದು ಅರ್ಧಶತಕವನ್ನು ಮಾತ್ರ ಬಾರಿಸಿದ್ದಾರೆ. ಜಾಧವ್ 123.17ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದು, 21ಕ್ಕೂ ಕಡಿಮೆ ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಕೇದಾರ್ ಜಾಧವ್ ಅವರ ಸಮಸ್ಯೆ ಏನೆಂದರೆ ಅವರು ಕೊನೆಯ ಬಾರಿಗೆ 2021 ರಲ್ಲಿ ಐಪಿಎಲ್ ಪಂದ್ಯವನ್ನು ಆಡಿದ್ದರು. ಈ ಆಟಗಾರ ಕಳೆದ ನಾಲ್ಕು ಸೀಸನ್​​ಗಳಲ್ಲಿ 29 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ ಒಂದು ಅರ್ಧಶತಕವನ್ನು ಮಾತ್ರ ಬಾರಿಸಿದ್ದಾರೆ. ಜಾಧವ್ 123.17ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದು, 21ಕ್ಕೂ ಕಡಿಮೆ ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

8 / 8

Published On - 5:59 pm, Mon, 1 May 23

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್