AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಆರ್​ಸಿಬಿಗೆ ಬಿಗ್ ಶಾಕ್; ಸ್ಟಾರ್ ಬೌಲರ್​ ಲೀಗ್​​ನಿಂದ ಔಟ್! ಬದಲಿಯಾಗಿ ಬಂದಿದ್ಯಾರು ಗೊತ್ತಾ?

IPL 2023: ಈ ಆಟಗಾರ ಕಳೆದ ನಾಲ್ಕು ಸೀಸನ್​​ಗಳಲ್ಲಿ 29 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ ಒಂದು ಅರ್ಧಶತಕವನ್ನು ಮಾತ್ರ ಬಾರಿಸಿದ್ದಾರೆ.

ಪೃಥ್ವಿಶಂಕರ
|

Updated on:May 01, 2023 | 6:02 PM

ಲಕ್ನೋ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಬೌಲರ್ ಡೇವಿಡ್ ವಿಲ್ಲಿ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಲಕ್ನೋ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಬೌಲರ್ ಡೇವಿಡ್ ವಿಲ್ಲಿ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.

1 / 8
ಈಗಾಗಲೇ ಟೂರ್ನಿಯಲ್ಲಿ 42 ಪಂದ್ಯಗಳು ಮುಗಿದಿದ್ದು, ಲೀಗ್​​ನಲ್ಲಿ ಏಳು ಬೀಳುಗಳನ್ನು ಕಂಡಿರುವ ಆರ್​ಸಿಬಿಗೆ ವಿಲ್ಲಿ ಅಲಭ್ಯತೆ ಸಾಕಷ್ಟು ಹಿನ್ನಡೆಯುಂಟು ಮಾಡಿದೆ.

ಈಗಾಗಲೇ ಟೂರ್ನಿಯಲ್ಲಿ 42 ಪಂದ್ಯಗಳು ಮುಗಿದಿದ್ದು, ಲೀಗ್​​ನಲ್ಲಿ ಏಳು ಬೀಳುಗಳನ್ನು ಕಂಡಿರುವ ಆರ್​ಸಿಬಿಗೆ ವಿಲ್ಲಿ ಅಲಭ್ಯತೆ ಸಾಕಷ್ಟು ಹಿನ್ನಡೆಯುಂಟು ಮಾಡಿದೆ.

2 / 8
ಇದೀಗ ವಿಲ್ಲಿ ಬದಲಿ ಆಟಗಾರನನ್ನು ಆಯ್ಕೆ ಮಾಡಿರುವ ಆರ್​ಸಿಬಿ, ತಂಡದ ಮಾಜಿ ಆಟಗಾರನಾದ ಕೇದಾರ್ ಜಾಧವ್​​ರನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಇದೀಗ ವಿಲ್ಲಿ ಬದಲಿ ಆಟಗಾರನನ್ನು ಆಯ್ಕೆ ಮಾಡಿರುವ ಆರ್​ಸಿಬಿ, ತಂಡದ ಮಾಜಿ ಆಟಗಾರನಾದ ಕೇದಾರ್ ಜಾಧವ್​​ರನ್ನು ತಂಡಕ್ಕೆ ಸೇರಿಸಿಕೊಂಡಿದೆ.

3 / 8
ಅಚ್ಚರಿಯ ಸಂಗತಿ ಎಂದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಕೇದಾರ್ ಜಾಧವ್‌ಗೆ ಆರ್‌ಸಿಬಿ ತನ್ನ ತಂಡದಲ್ಲಿ ಸ್ಥಾನ ನೀಡಿದೆ. ಈ ಬಲಗೈ ಬ್ಯಾಟ್ಸ್‌ಮನ್ 2021 ರಲ್ಲಿ ಕೊನೆಯ ಬಾರಿಗೆ ಐಪಿಎಲ್ ಆಡಿದ್ದರು. ಈಗ ಇದ್ದಕ್ಕಿದ್ದಂತೆ ಆರ್‌ಸಿಬಿ ಅವರಿಗೆ ತನ್ನ ತಂಡದಲ್ಲಿ ಅವಕಾಶ ನೀಡಿದೆ.

ಅಚ್ಚರಿಯ ಸಂಗತಿ ಎಂದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಕೇದಾರ್ ಜಾಧವ್‌ಗೆ ಆರ್‌ಸಿಬಿ ತನ್ನ ತಂಡದಲ್ಲಿ ಸ್ಥಾನ ನೀಡಿದೆ. ಈ ಬಲಗೈ ಬ್ಯಾಟ್ಸ್‌ಮನ್ 2021 ರಲ್ಲಿ ಕೊನೆಯ ಬಾರಿಗೆ ಐಪಿಎಲ್ ಆಡಿದ್ದರು. ಈಗ ಇದ್ದಕ್ಕಿದ್ದಂತೆ ಆರ್‌ಸಿಬಿ ಅವರಿಗೆ ತನ್ನ ತಂಡದಲ್ಲಿ ಅವಕಾಶ ನೀಡಿದೆ.

4 / 8
ಐಪಿಎಲ್ ಹರಾಜಿನಲ್ಲಿ ಕೇದಾರ್ ಜಾಧವ್ ಅವರನ್ನು ಯಾವುದೇ ತಂಡ ಖರೀದಿಸಿರಲಿಲ್ಲ. ಇದಕ್ಕೆ ಕಾರಣವೂ ಇದ್ದು, ಕೇದಾರ್ ಜಾಧವ್ ಅವರಿಗೆ ಈಗ 38 ವರ್ಷ ವಯಸ್ಸಾಗಿದೆ. ಅಲ್ಲದೆ ಅವರು ಆಡಿದ ಕಳೆದ ಎರಡು ಸೀಸನ್​​ಗಳಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಈ ಹೊರತಾಗಿಯೂ ಆರ್​ಸಿಬಿ ಅವರನ್ನು ಖರೀದಿಸಿದೆ.

ಐಪಿಎಲ್ ಹರಾಜಿನಲ್ಲಿ ಕೇದಾರ್ ಜಾಧವ್ ಅವರನ್ನು ಯಾವುದೇ ತಂಡ ಖರೀದಿಸಿರಲಿಲ್ಲ. ಇದಕ್ಕೆ ಕಾರಣವೂ ಇದ್ದು, ಕೇದಾರ್ ಜಾಧವ್ ಅವರಿಗೆ ಈಗ 38 ವರ್ಷ ವಯಸ್ಸಾಗಿದೆ. ಅಲ್ಲದೆ ಅವರು ಆಡಿದ ಕಳೆದ ಎರಡು ಸೀಸನ್​​ಗಳಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಿರಲಿಲ್ಲ. ಆದರೆ ಈ ಹೊರತಾಗಿಯೂ ಆರ್​ಸಿಬಿ ಅವರನ್ನು ಖರೀದಿಸಿದೆ.

5 / 8
ಐಪಿಎಲ್ ಹರಾಜಿನಲ್ಲಿ ಮಾರಾಟವಾಗದ ಹಿನ್ನೆಲೆಯಲ್ಲಿ ಕೇದಾರ್ ಜಾಧವ್ ಕಾಮೆಂಟರಿ ಮಾಡುತ್ತಿದ್ದರು. ಈಗ ಪ್ರಶ್ನೆ ಏನೆಂದರೆ ಆರ್​ಸಿಬಿ ಕೇದಾರ್ ಜಾಧವ್ ಅವರನ್ನು ಏಕೆ ಖರೀದಿಸಿತು ಎಂಬುದು. ಡೇವಿಡ್ ವಿಲ್ಲಿ ಬದಲಿಗೆ ವಿದೇಶಿ ಆಟಗಾರರನ್ನು ಖರೀದಿಸುವ ಅವಕಾಶವಿದ್ದರೂ ಆರ್​​ಸಿಬಿ ಜಾಧವ್ ಅವರನ್ನು ಖರೀದಿಸಲು ಕಾರಣ ಅವರ ಬ್ಯಾಟಿಂಗ್.

ಐಪಿಎಲ್ ಹರಾಜಿನಲ್ಲಿ ಮಾರಾಟವಾಗದ ಹಿನ್ನೆಲೆಯಲ್ಲಿ ಕೇದಾರ್ ಜಾಧವ್ ಕಾಮೆಂಟರಿ ಮಾಡುತ್ತಿದ್ದರು. ಈಗ ಪ್ರಶ್ನೆ ಏನೆಂದರೆ ಆರ್​ಸಿಬಿ ಕೇದಾರ್ ಜಾಧವ್ ಅವರನ್ನು ಏಕೆ ಖರೀದಿಸಿತು ಎಂಬುದು. ಡೇವಿಡ್ ವಿಲ್ಲಿ ಬದಲಿಗೆ ವಿದೇಶಿ ಆಟಗಾರರನ್ನು ಖರೀದಿಸುವ ಅವಕಾಶವಿದ್ದರೂ ಆರ್​​ಸಿಬಿ ಜಾಧವ್ ಅವರನ್ನು ಖರೀದಿಸಲು ಕಾರಣ ಅವರ ಬ್ಯಾಟಿಂಗ್.

6 / 8
ವಾಸ್ತವವಾಗಿ, ಆರ್​ಸಿಬಿ ಸಮಸ್ಯೆಯೆಂದರೆ ವಿರಾಟ್, ಡುಪ್ಲೆಸಿಸ್ ಮತ್ತು ಮ್ಯಾಕ್ಸ್‌ವೆಲ್ ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟ್ಸ್‌ಮನ್ ರನ್ ಗಳಿಸುತ್ತಿಲ್ಲ. ಈ ಕೊರತೆಯನ್ನು ನೀಗಿಸಲು ಜಾಧವ್ ಅವರನ್ನು ತಂಡಕ್ಕೆ ಕರೆತಂದಿದ್ದಾರೆ. ಜಾಧವ್ ಅನುಭವ ಹೊಂದಿದ್ದು, ಸುದೀರ್ಘ ಸಿಕ್ಸರ್ ಬಾರಿಸುವುದರಲ್ಲಿ ಹೆಸರುವಾಸಿಯಾಗಿದ್ದಾರೆ.

ವಾಸ್ತವವಾಗಿ, ಆರ್​ಸಿಬಿ ಸಮಸ್ಯೆಯೆಂದರೆ ವಿರಾಟ್, ಡುಪ್ಲೆಸಿಸ್ ಮತ್ತು ಮ್ಯಾಕ್ಸ್‌ವೆಲ್ ಹೊರತುಪಡಿಸಿ, ಬೇರೆ ಯಾವುದೇ ಬ್ಯಾಟ್ಸ್‌ಮನ್ ರನ್ ಗಳಿಸುತ್ತಿಲ್ಲ. ಈ ಕೊರತೆಯನ್ನು ನೀಗಿಸಲು ಜಾಧವ್ ಅವರನ್ನು ತಂಡಕ್ಕೆ ಕರೆತಂದಿದ್ದಾರೆ. ಜಾಧವ್ ಅನುಭವ ಹೊಂದಿದ್ದು, ಸುದೀರ್ಘ ಸಿಕ್ಸರ್ ಬಾರಿಸುವುದರಲ್ಲಿ ಹೆಸರುವಾಸಿಯಾಗಿದ್ದಾರೆ.

7 / 8
ಕೇದಾರ್ ಜಾಧವ್ ಅವರ ಸಮಸ್ಯೆ ಏನೆಂದರೆ ಅವರು ಕೊನೆಯ ಬಾರಿಗೆ 2021 ರಲ್ಲಿ ಐಪಿಎಲ್ ಪಂದ್ಯವನ್ನು ಆಡಿದ್ದರು. ಈ ಆಟಗಾರ ಕಳೆದ ನಾಲ್ಕು ಸೀಸನ್​​ಗಳಲ್ಲಿ 29 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ ಒಂದು ಅರ್ಧಶತಕವನ್ನು ಮಾತ್ರ ಬಾರಿಸಿದ್ದಾರೆ. ಜಾಧವ್ 123.17ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದು, 21ಕ್ಕೂ ಕಡಿಮೆ ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

ಕೇದಾರ್ ಜಾಧವ್ ಅವರ ಸಮಸ್ಯೆ ಏನೆಂದರೆ ಅವರು ಕೊನೆಯ ಬಾರಿಗೆ 2021 ರಲ್ಲಿ ಐಪಿಎಲ್ ಪಂದ್ಯವನ್ನು ಆಡಿದ್ದರು. ಈ ಆಟಗಾರ ಕಳೆದ ನಾಲ್ಕು ಸೀಸನ್​​ಗಳಲ್ಲಿ 29 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ ಒಂದು ಅರ್ಧಶತಕವನ್ನು ಮಾತ್ರ ಬಾರಿಸಿದ್ದಾರೆ. ಜಾಧವ್ 123.17ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ್ದು, 21ಕ್ಕೂ ಕಡಿಮೆ ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ.

8 / 8

Published On - 5:59 pm, Mon, 1 May 23

Follow us
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್