IPL 2023: ಕೈಕೊಟ್ಟ ಬೌಲರ್​ಗಳು: ಸೋಲಿನೊಂದಿಗೆ RCB ಅಭಿಯಾನ ಅಂತ್ಯ..!

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು.

|

Updated on:May 22, 2023 | 12:46 AM

IPL 2023: ಐಪಿಎಲ್​ ಸೀಸನ್​ 16 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಯಾನ ಅಂತ್ಯವಾಗಿದೆ. ಗುಜರಾತ್ ಟೈಟಾನ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋಲುವ ಮೂಲಕ ಆರ್​ಸಿಬಿ ಪ್ಲೇಆಫ್ ಅವಕಾಶವನ್ನು ಕೈಚೆಲ್ಲಿಕೊಂಡಿತು.

IPL 2023: ಐಪಿಎಲ್​ ಸೀಸನ್​ 16 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಯಾನ ಅಂತ್ಯವಾಗಿದೆ. ಗುಜರಾತ್ ಟೈಟಾನ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸೋಲುವ ಮೂಲಕ ಆರ್​ಸಿಬಿ ಪ್ಲೇಆಫ್ ಅವಕಾಶವನ್ನು ಕೈಚೆಲ್ಲಿಕೊಂಡಿತು.

1 / 11
ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿಗೆ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಉತ್ತಮ ಆರಂಭ ಒದಗಿಸಿದ್ದರು.

2 / 11
ಇದಾದ ಬಳಿಕ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕ ದಿಢೀರ್ ಕುಸಿತಕ್ಕೊಳಗಾದರೂ ವಿರಾಟ್ ಕೊಹ್ಲಿ ಏಕಾಂಗಿಯಾಗಿ ಇನಿಂಗ್ಸ್​ ಕಟ್ಟುವ ಜವಾಬ್ದಾರಿ ಹೆಗಲೇರಿಸಿಕೊಂಡರು. ಅದರಂತೆ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ ಕಿಂಗ್ ಕೊಹ್ಲಿ 60 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

ಇದಾದ ಬಳಿಕ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕ ದಿಢೀರ್ ಕುಸಿತಕ್ಕೊಳಗಾದರೂ ವಿರಾಟ್ ಕೊಹ್ಲಿ ಏಕಾಂಗಿಯಾಗಿ ಇನಿಂಗ್ಸ್​ ಕಟ್ಟುವ ಜವಾಬ್ದಾರಿ ಹೆಗಲೇರಿಸಿಕೊಂಡರು. ಅದರಂತೆ ಏಕಾಂಗಿಯಾಗಿ ಹೋರಾಟ ಮುಂದುವರೆಸಿದ ಕಿಂಗ್ ಕೊಹ್ಲಿ 60 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

3 / 11
ವಿರಾಟ್ ಕೊಹ್ಲಿಯ ಈ ಅಜೇಯ ಶತಕದ ನೆರವಿನಿಂದ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 197 ರನ್​ ಕಲೆಹಾಕಿತು.

ವಿರಾಟ್ ಕೊಹ್ಲಿಯ ಈ ಅಜೇಯ ಶತಕದ ನೆರವಿನಿಂದ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 197 ರನ್​ ಕಲೆಹಾಕಿತು.

4 / 11
ಇತ್ತ ಬೃಹತ್ ಪೇರಿಸಿ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿಗೆ ಮತ್ತೊಮ್ಮೆ ಪವರ್​ಪ್ಲೇನಲ್ಲೇ ಯಶಸ್ಸು ತಂದುಕೊಡುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು. ಆದರೆ ಬಳಿಕ ಜೊತೆಯಾದ ಶುಭ್​ಮನ್ ಗಿಲ್ ಹಾಗೂ ವಿಜಯ್ ಶಂಕರ್ 123 ರನ್​ಗಳ ಜೊತೆಯಾಟವಾಡಿದರು.

ಇತ್ತ ಬೃಹತ್ ಪೇರಿಸಿ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿದಿದ್ದ ಆರ್​ಸಿಬಿಗೆ ಮತ್ತೊಮ್ಮೆ ಪವರ್​ಪ್ಲೇನಲ್ಲೇ ಯಶಸ್ಸು ತಂದುಕೊಡುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು. ಆದರೆ ಬಳಿಕ ಜೊತೆಯಾದ ಶುಭ್​ಮನ್ ಗಿಲ್ ಹಾಗೂ ವಿಜಯ್ ಶಂಕರ್ 123 ರನ್​ಗಳ ಜೊತೆಯಾಟವಾಡಿದರು.

5 / 11
ವಿಕೆಟ್ ಪಡೆಯುವಲ್ಲಿ ವಿಫಲರಾದ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿ ಪರಿಣಮಿಸಿದರು. ಇದಾಗ್ಯೂ ಅಂತಿಮ ಹಂತದಲ್ಲಿ ಸತತ ವಿಕೆಟ್ ಕಬಳಿಸುವ ಮೂಲಕ ಕಂಬ್ಯಾಕ್ ಮಾಡಿದರೂ ಅದಾಗಲೇ ಗುಜರಾತ್ ಟೈಟಾನ್ಸ್​ ತಂಡವು ಗೆಲುವಿನತ್ತ ದಾಪುಗಾಲಿಟ್ಟಿತು.

ವಿಕೆಟ್ ಪಡೆಯುವಲ್ಲಿ ವಿಫಲರಾದ ಆರ್​ಸಿಬಿ ಬೌಲರ್​ಗಳು ದುಬಾರಿಯಾಗಿ ಪರಿಣಮಿಸಿದರು. ಇದಾಗ್ಯೂ ಅಂತಿಮ ಹಂತದಲ್ಲಿ ಸತತ ವಿಕೆಟ್ ಕಬಳಿಸುವ ಮೂಲಕ ಕಂಬ್ಯಾಕ್ ಮಾಡಿದರೂ ಅದಾಗಲೇ ಗುಜರಾತ್ ಟೈಟಾನ್ಸ್​ ತಂಡವು ಗೆಲುವಿನತ್ತ ದಾಪುಗಾಲಿಟ್ಟಿತು.

6 / 11
ಕೊನೆಯ 2 ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು 19 ರನ್​ಗಳ ಟಾರ್ಗೆಟ್ ಪಡೆಯಿತು. ಈ ಹಂತದಲ್ಲಿ ಹರ್ಷಲ್ ಪಟೇಲ್ ಎಸೆತದಲ್ಲಿ ಗಿಲ್ ಭರ್ಜರಿ ಸಿಕ್ಸ್ ಸಿಡಿಸಿದರು. ಅಲ್ಲದೆ ಅಂತಿಮ ಓವರ್​ಗೆ ಕೇವಲ 8 ರನ್​ಗಳ ಗುರಿಗೆ ತಂದು ನಿಲ್ಲಿಸಿದರು.

ಕೊನೆಯ 2 ಓವರ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವು 19 ರನ್​ಗಳ ಟಾರ್ಗೆಟ್ ಪಡೆಯಿತು. ಈ ಹಂತದಲ್ಲಿ ಹರ್ಷಲ್ ಪಟೇಲ್ ಎಸೆತದಲ್ಲಿ ಗಿಲ್ ಭರ್ಜರಿ ಸಿಕ್ಸ್ ಸಿಡಿಸಿದರು. ಅಲ್ಲದೆ ಅಂತಿಮ ಓವರ್​ಗೆ ಕೇವಲ 8 ರನ್​ಗಳ ಗುರಿಗೆ ತಂದು ನಿಲ್ಲಿಸಿದರು.

7 / 11
ಕೊನೆಯ ಓವರ್​ನಲ್ಲಿ ವೇಯ್ನ್ ಪಾರ್ನೆಲ್​ಗೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಶುಭ್​ಮನ್ ಗಿಲ್ 52 ಎಸೆತಗಳಲ್ಲಿ ಶತಕ ಪೂರೈಸುವುದರ ಜೊತೆಗೆ ಗುಜರಾತ್ ಟೈಟಾನ್ಸ್​ಗೆ 6 ವಿಕೆಟ್​ಗಳ ಅಮೋಘ ಗೆಲುವು ತಂದುಕೊಟ್ಟರು.

ಕೊನೆಯ ಓವರ್​ನಲ್ಲಿ ವೇಯ್ನ್ ಪಾರ್ನೆಲ್​ಗೆ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಶುಭ್​ಮನ್ ಗಿಲ್ 52 ಎಸೆತಗಳಲ್ಲಿ ಶತಕ ಪೂರೈಸುವುದರ ಜೊತೆಗೆ ಗುಜರಾತ್ ಟೈಟಾನ್ಸ್​ಗೆ 6 ವಿಕೆಟ್​ಗಳ ಅಮೋಘ ಗೆಲುವು ತಂದುಕೊಟ್ಟರು.

8 / 11
ಆರ್​ಸಿಬಿ ಪರ ವಿಜಯ್ ಕುಮಾರ್ ವೈಶಾಖ್ 4 ಓವರ್​ಗಳಲ್ಲಿ 40 ರನ್​ ನೀಡಿ 1 ವಿಕೆಟ್ ಪಡೆದರೆ, ಹೊಸ ಆಟಗಾರ ಹಿಮಾಂಶು ಶರ್ಮಾ 3 ಓವರ್​ಗಳಲ್ಲಿ 28 ರನ್ ನೀಡಿದರು. ಇನ್ನು ಹರ್ಷಲ್ ಪಟೇಲ್ 4 ಓವರ್​ಗಳಲ್ಲಿ 29 ರನ್ ನೀಡಿ 1 ವಿಕೆಟ್ ಉರುಳಿಸಿದರೆ, ವೇಯ್ನ್ ಪಾರ್ನೆಲ್ 3.1 ಓವರ್​ಗಳಲ್ಲಿ 42 ರನ್ ನೀಡಿದರು. ಹಾಗೆಯೇ ಸಿರಾಜ್ 4 ಓವರ್​ಗಳಲ್ಲಿ 32 ರನ್ ನೀಡಿ 2 ವಿಕೆಟ್ ಕಬಳಿಸಿದರು. ಅಂದರೆ ಬೌಲರ್​ಗಳ ಕಳಪೆ ಪ್ರದರ್ಶನದಿಂದಾಗಿ ಆರ್​ಸಿಬಿ ತಂಡವು 6 ವಿಕೆಟ್​ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

ಆರ್​ಸಿಬಿ ಪರ ವಿಜಯ್ ಕುಮಾರ್ ವೈಶಾಖ್ 4 ಓವರ್​ಗಳಲ್ಲಿ 40 ರನ್​ ನೀಡಿ 1 ವಿಕೆಟ್ ಪಡೆದರೆ, ಹೊಸ ಆಟಗಾರ ಹಿಮಾಂಶು ಶರ್ಮಾ 3 ಓವರ್​ಗಳಲ್ಲಿ 28 ರನ್ ನೀಡಿದರು. ಇನ್ನು ಹರ್ಷಲ್ ಪಟೇಲ್ 4 ಓವರ್​ಗಳಲ್ಲಿ 29 ರನ್ ನೀಡಿ 1 ವಿಕೆಟ್ ಉರುಳಿಸಿದರೆ, ವೇಯ್ನ್ ಪಾರ್ನೆಲ್ 3.1 ಓವರ್​ಗಳಲ್ಲಿ 42 ರನ್ ನೀಡಿದರು. ಹಾಗೆಯೇ ಸಿರಾಜ್ 4 ಓವರ್​ಗಳಲ್ಲಿ 32 ರನ್ ನೀಡಿ 2 ವಿಕೆಟ್ ಕಬಳಿಸಿದರು. ಅಂದರೆ ಬೌಲರ್​ಗಳ ಕಳಪೆ ಪ್ರದರ್ಶನದಿಂದಾಗಿ ಆರ್​ಸಿಬಿ ತಂಡವು 6 ವಿಕೆಟ್​ಗಳಿಂದ ಸೋಲೊಪ್ಪಿಕೊಳ್ಳಬೇಕಾಯಿತು.

9 / 11
ಇದರೊಂದಿಗೆ ಆಡಿರುವ 14 ಪಂದ್ಯಗಳಲ್ಲಿ 7 ಜಯ ಹಾಗೂ 7 ಸೋಲಿನೊಂದಿಗೆ ಆರ್​ಸಿಬಿ ತಂಡವು 16ನೇ ಸೀಸನ್ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

ಇದರೊಂದಿಗೆ ಆಡಿರುವ 14 ಪಂದ್ಯಗಳಲ್ಲಿ 7 ಜಯ ಹಾಗೂ 7 ಸೋಲಿನೊಂದಿಗೆ ಆರ್​ಸಿಬಿ ತಂಡವು 16ನೇ ಸೀಸನ್ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದೆ.

10 / 11
ಇತ್ತ ಆರ್​ಸಿಬಿ ಸೋಲಿನೊಂದಿಗೆ ಅತ್ತ 16 ಪಾಯಿಂಟ್ಸ್ ಕಲೆಹಾಕಿದ್ದ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿ ಪ್ಲೇಆಫ್ ಪ್ರವೇಶಿಸಿದೆ.

ಇತ್ತ ಆರ್​ಸಿಬಿ ಸೋಲಿನೊಂದಿಗೆ ಅತ್ತ 16 ಪಾಯಿಂಟ್ಸ್ ಕಲೆಹಾಕಿದ್ದ ಮುಂಬೈ ಇಂಡಿಯನ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸಿ ಪ್ಲೇಆಫ್ ಪ್ರವೇಶಿಸಿದೆ.

11 / 11

Published On - 12:44 am, Mon, 22 May 23

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ