AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರಾಜಸ್ಥಾನ್ ರಾಯಲ್ಸ್​ನ ಹಿಂದಿಕ್ಕಿದ RCB: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

IPL 2023 Kannada: ಆರ್​ಸಿಬಿ ಮುಂದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಬಹುದು.

TV9 Web
| Edited By: |

Updated on:May 14, 2023 | 7:22 PM

Share
IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ 112 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವು ಅಮೋಘ ಗೆಲುವಿನೊಂದಿಗೆ ಆರ್​ಸಿಬಿ ತಂಡದ ನೆಟ್​ ರನ್​ ರೇಟ್ ಪ್ಲಸ್​ನತ್ತ ತಿರುಗಿದೆ.

IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್​ಸಿಬಿ 112 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವು ಅಮೋಘ ಗೆಲುವಿನೊಂದಿಗೆ ಆರ್​ಸಿಬಿ ತಂಡದ ನೆಟ್​ ರನ್​ ರೇಟ್ ಪ್ಲಸ್​ನತ್ತ ತಿರುಗಿದೆ.

1 / 7
ಈ ಪಂದ್ಯದ ಆರಂಭಕ್ಕೂ ಮುನ್ನ -0.345 ನೆಟ್ ರನ್ ರೇಟ್ ಹೊಂದಿದ್ದ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದರೂ 5ನೇ ಸ್ಥಾನಕ್ಕೇರುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬರೋಬ್ಬರಿ 112 ರನ್​ಗಳ ಭರ್ಜರಿ ಜಯದೊಂದಿಗೆ ಎಲ್ಲಾ ಲೆಕ್ಕಾಚಾರಗಳನ್ನು ಆರ್​ಸಿಬಿ ತಲೆಕೆಳಗಾಗಿಸಿದೆ.

ಈ ಪಂದ್ಯದ ಆರಂಭಕ್ಕೂ ಮುನ್ನ -0.345 ನೆಟ್ ರನ್ ರೇಟ್ ಹೊಂದಿದ್ದ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದರೂ 5ನೇ ಸ್ಥಾನಕ್ಕೇರುವುದು ಅನುಮಾನ ಎನ್ನಲಾಗಿತ್ತು. ಆದರೀಗ ಬರೋಬ್ಬರಿ 112 ರನ್​ಗಳ ಭರ್ಜರಿ ಜಯದೊಂದಿಗೆ ಎಲ್ಲಾ ಲೆಕ್ಕಾಚಾರಗಳನ್ನು ಆರ್​ಸಿಬಿ ತಲೆಕೆಳಗಾಗಿಸಿದೆ.

2 / 7
ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿರುವ ಆರ್​ಸಿಬಿ ಇದೀಗ +0.166 ನೆಟ್​ ರನ್​ ರೇಟ್ ಪಡೆದುಕೊಂಡಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ (+0.140) ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿರುವ ಆರ್​ಸಿಬಿ ಇದೀಗ +0.166 ನೆಟ್​ ರನ್​ ರೇಟ್ ಪಡೆದುಕೊಂಡಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ (+0.140) ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದೆ.

3 / 7
ಇನ್ನು ಆರ್​ಸಿಬಿ ಮುಂದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಬಹುದು. ಆದರೆ ಅದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಒಂದು ಪಂದ್ಯ ಸೋಲಬೇಕು.

ಇನ್ನು ಆರ್​ಸಿಬಿ ಮುಂದಿರುವುದು ಕೇವಲ 2 ಪಂದ್ಯಗಳು ಮಾತ್ರ. ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗಬಹುದು. ಆದರೆ ಅದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ಒಂದು ಪಂದ್ಯ ಸೋಲಬೇಕು.

4 / 7
ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ 14 ಅಂಕಗಳನ್ನು ಹೊಂದಿದೆ. ರೋಹಿತ್ ಶರ್ಮಾ ಪಡೆಗೆ ಇನ್ನು 2 ಪಂದ್ಯಗಳು ಬಾಕಿಯಿದ್ದು, ಇದರಲ್ಲಿ ಜಯ ಸಾಧಿಸಿದರೆ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

ಏಕೆಂದರೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ 14 ಅಂಕಗಳನ್ನು ಹೊಂದಿದೆ. ರೋಹಿತ್ ಶರ್ಮಾ ಪಡೆಗೆ ಇನ್ನು 2 ಪಂದ್ಯಗಳು ಬಾಕಿಯಿದ್ದು, ಇದರಲ್ಲಿ ಜಯ ಸಾಧಿಸಿದರೆ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ.

5 / 7
ಅಂದರೆ ಮುಂಬೈ ಇಂಡಿಯನ್ಸ್​ ಮುಂದಿನ 2 ಪಂದ್ಯಗಳನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಎಸ್​ಆರ್​ಹೆಚ್​ ವಿರುದ್ಧ ಆಡಲಿದೆ. ಪ್ರಸ್ತುತ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಪಂದ್ಯದಲ್ಲಿ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ಒಟ್ಟು 15 ಪಾಯಿಂಟ್ಸ್ ಆಗಲಿದೆ.

ಅಂದರೆ ಮುಂಬೈ ಇಂಡಿಯನ್ಸ್​ ಮುಂದಿನ 2 ಪಂದ್ಯಗಳನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಎಸ್​ಆರ್​ಹೆಚ್​ ವಿರುದ್ಧ ಆಡಲಿದೆ. ಪ್ರಸ್ತುತ 13 ಪಾಯಿಂಟ್ಸ್ ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಪಂದ್ಯದಲ್ಲಿ ಸೋತು, ಕೊನೆಯ ಪಂದ್ಯದಲ್ಲಿ ಗೆದ್ದರೆ ಒಟ್ಟು 15 ಪಾಯಿಂಟ್ಸ್ ಆಗಲಿದೆ.

6 / 7
ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಪಡೆಯಲಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಹಿಂದಿಕ್ಕಿ, 4ನೇ ಸ್ಥಾನಕ್ಕೇರುವ ಮೂಲಕ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ 2 ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ.

ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಪಡೆಯಲಿದೆ. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಹಿಂದಿಕ್ಕಿ, 4ನೇ ಸ್ಥಾನಕ್ಕೇರುವ ಮೂಲಕ ಪ್ಲೇಆಫ್ ಪ್ರವೇಶಿಸಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಮುಂದಿನ 2 ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ.

7 / 7

Published On - 7:22 pm, Sun, 14 May 23

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು