AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 RCB: ದಿಗ್ಗಜರ ಸಮಾಗಮ: ಈ ಸಲ ಕಪ್ ನಮ್ದೇ ಎಂದ RCB ಫ್ಯಾನ್ಸ್

IPL 2023 RCB Kannada: ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ.

TV9 Web
| Edited By: |

Updated on: Apr 01, 2023 | 3:30 PM

Share
IPL 2023 RCB: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ತಯಾರಿಯಲ್ಲಿದೆ. ಕಳೆದೆರಡು ದಿನಗಳಿಂದ ಬೆವರಿಳಿಸುತ್ತಿರುವ ಆರ್​ಸಿಬಿ ಆಟಗಾರರನ್ನು ಶುಕ್ರವಾರ ವಿಶೇಷ ಅತಿಥಿಯೊಬ್ಬರು ಭೇಟಿಯಾಗಿದ್ದರು. ಅದು ಕೂಡ ಕಿಂಗ್ ಕೊಹ್ಲಿಯ ಜೊತೆಗೆ ಆಗಮಿಸುವ ಮೂಲಕ ಎಂಬುದು ವಿಶೇಷ.

IPL 2023 RCB: ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ತಯಾರಿಯಲ್ಲಿದೆ. ಕಳೆದೆರಡು ದಿನಗಳಿಂದ ಬೆವರಿಳಿಸುತ್ತಿರುವ ಆರ್​ಸಿಬಿ ಆಟಗಾರರನ್ನು ಶುಕ್ರವಾರ ವಿಶೇಷ ಅತಿಥಿಯೊಬ್ಬರು ಭೇಟಿಯಾಗಿದ್ದರು. ಅದು ಕೂಡ ಕಿಂಗ್ ಕೊಹ್ಲಿಯ ಜೊತೆಗೆ ಆಗಮಿಸುವ ಮೂಲಕ ಎಂಬುದು ವಿಶೇಷ.

1 / 7
ಹೌದು, ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್​ನ ಕಿಂಗ್ ಆದರೆ, ಭಾರತದ ಫುಟ್​ಬಾಲ್ ಅಂಗಳದ ಕಿಂಗ್ ಸುನಿಲ್ ಛೆಟ್ರಿ. ಇದೀಗ ಭಾರತೀಯ ಫುಟ್​ಬಾಲ್ ತಂಡದ ನಾಯಕ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಹೌದು, ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್​ನ ಕಿಂಗ್ ಆದರೆ, ಭಾರತದ ಫುಟ್​ಬಾಲ್ ಅಂಗಳದ ಕಿಂಗ್ ಸುನಿಲ್ ಛೆಟ್ರಿ. ಇದೀಗ ಭಾರತೀಯ ಫುಟ್​ಬಾಲ್ ತಂಡದ ನಾಯಕ ಆರ್​ಸಿಬಿ ಕ್ಯಾಂಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

2 / 7
ಶುಕ್ರವಾರ ಆರ್​ಸಿಬಿ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿಯೊಂದಿಗೆ ತಂಡ ಜೆರ್ಸಿ ಧರಿಸಿ ಆಗಮಿಸಿದ ಸುನಿಲ್ ಛೆಟ್ರಿ ಆಟಗಾರರೊಂದಿಗೆ ಸಮಾಲೋಚಿಸಿದರು. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್​ಗಳನ್ನು ಹುರಿದುಂಬಿಸಿದರು.

ಶುಕ್ರವಾರ ಆರ್​ಸಿಬಿ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿಯೊಂದಿಗೆ ತಂಡ ಜೆರ್ಸಿ ಧರಿಸಿ ಆಗಮಿಸಿದ ಸುನಿಲ್ ಛೆಟ್ರಿ ಆಟಗಾರರೊಂದಿಗೆ ಸಮಾಲೋಚಿಸಿದರು. ಅಲ್ಲದೆ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಪ್ಲೇಯರ್​ಗಳನ್ನು ಹುರಿದುಂಬಿಸಿದರು.

3 / 7
ಅಷ್ಟೇ ಅಲ್ಲದೆ ಅದ್ಭುತವಾಗಿ ಫೀಲ್ಡಿಂಗ್ ಮಾಡುವ ಮೂಲಕ ಆರ್​ಸಿಬಿ ಆಟಗಾರರೇ ನಿಬ್ಬೆರಗಾಗುವಂತೆ ಮಾಡಿದರು. ಇದೇ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಕೂಡ ಬೆಂಗಳೂರಿಗ, ಆರ್​ಸಿಬಿ ನಮ್ಮ ತಂಡ ಎಂದರು.

ಅಷ್ಟೇ ಅಲ್ಲದೆ ಅದ್ಭುತವಾಗಿ ಫೀಲ್ಡಿಂಗ್ ಮಾಡುವ ಮೂಲಕ ಆರ್​ಸಿಬಿ ಆಟಗಾರರೇ ನಿಬ್ಬೆರಗಾಗುವಂತೆ ಮಾಡಿದರು. ಇದೇ ವೇಳೆ ಮಾತನಾಡಿದ ಸುನಿಲ್ ಛೆಟ್ರಿ, ನಾನು ಕೂಡ ಬೆಂಗಳೂರಿಗ, ಆರ್​ಸಿಬಿ ನಮ್ಮ ತಂಡ ಎಂದರು.

4 / 7
ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ, ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದರು.

ನಾನು ಸಹ ಬೆಂಗಳೂರು ಫುಟ್​ಬಾಲ್ ಕ್ಲಬ್​ನ ಆಟಗಾರ. ಬಿಎಫ್​ಸಿ ಜೊತೆ ಆಡಲಾರಂಭಿಸಿದಾಗಿನಿಂದ ನಾನು ಆರ್​ಸಿಬಿಯನ್ನು ಬೆಂಬಲಿಸುತ್ತಾ ಬಂದಿದ್ದೇನೆ. ಬೆಂಗಳೂರು ನಮ್ಮ ನಗರ, ಅಂದ್ರೆ ಬೆಂಗಳೂರಿನ ತಂಡ ನಮ್ಮದಲ್ಲವೇ ಎಂದರು.

5 / 7
ಇದೀಗ ಆರ್​ಸಿಬಿ ಹಂಚಿಕೊಂಡಿರುವ ಸುನಿಲ್ ಛೆಟ್ರಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆರ್​ಸಿಬಿ ತಂಡದ ಮೇಲಿನ ಅವರ ಅಭಿಮಾನಕ್ಕೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ಆರ್​ಸಿಬಿ ಹಂಚಿಕೊಂಡಿರುವ ಸುನಿಲ್ ಛೆಟ್ರಿ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಆರ್​ಸಿಬಿ ತಂಡದ ಮೇಲಿನ ಅವರ ಅಭಿಮಾನಕ್ಕೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

6 / 7
ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಬಾರಿ ಹೊಸ ಉತ್ಸಾಹದಲ್ಲಿರುವ ಆರ್​ಸಿಬಿ ಹೋಮ್​ ಗ್ರೌಂಡ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದರಿಂದ ಈ ಸಲ ಕಪ್ ನಮ್ದೇ ಎನ್ನುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಫ್ಯಾನ್ಸ್​.

ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆರ್​ಸಿಬಿ ತಂಡವು ಐಪಿಎಲ್ ಅಭಿಯಾನ ಆರಂಭಿಸಲಿದೆ. ಈ ಬಾರಿ ಹೊಸ ಉತ್ಸಾಹದಲ್ಲಿರುವ ಆರ್​ಸಿಬಿ ಹೋಮ್​ ಗ್ರೌಂಡ್​ ಮೂಲಕ ಐಪಿಎಲ್ ಅಭಿಯಾನ ಆರಂಭಿಸುತ್ತಿರುವುದರಿಂದ ಈ ಸಲ ಕಪ್ ನಮ್ದೇ ಎನ್ನುವ ವಿಶ್ವಾಸದಲ್ಲಿದ್ದಾರೆ ಆರ್​ಸಿಬಿ ಫ್ಯಾನ್ಸ್​.

7 / 7
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಸುದೀಪ್ ಸರ್ ಈ ಕೂಲಿಂಗ್ ಗ್ಲಾಸ್ ಗಿಫ್ಟ್ ಕೇಳಿದ್ರು, ಕೊಡಲ್ಲ ಅಂದೆ: ಸತೀಶ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಬಿಗ್ ಬಾಸ್ ಬಳಿಕ ಸಿನಿಮಾ ಅವಕಾಶ ಪಡೆದ ಮಲ್ಲಮ್ಮ; ಬದಲಾಯ್ತು ಲೈಫ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ