AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಂಕಿ ಅಂಶಗಳ ಪ್ರಕಾರ CSK ತಂಡವೇ ಬಲಿಷ್ಠ, ಆದರೆ RCB…

RCB vs CSK Head to Head: ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠೆಯ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ.

TV9 Web
| Edited By: |

Updated on: Apr 16, 2023 | 8:31 PM

Share
IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

2 / 7
ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

3 / 7
 ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

4 / 7
ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

5 / 7
ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

6 / 7
ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

7 / 7
Web contact
Web contact

TV9 Kannada

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ