Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಂಕಿ ಅಂಶಗಳ ಪ್ರಕಾರ CSK ತಂಡವೇ ಬಲಿಷ್ಠ, ಆದರೆ RCB…

RCB vs CSK Head to Head: ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠೆಯ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 16, 2023 | 8:31 PM

IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

IPL 2023 RCB vs CSK: ಐಪಿಎಲ್​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 7
ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

ಉಭಯ ತಂಡಗಳ ಅಭಿಮಾನಿಗಳಿಗೆ ಪ್ರತಿಷ್ಠಿತ ವಿಷಯವಾಗಿರುವ ಈ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಲೆಕ್ಕಚಾರಗಳು ಈಗಾಗಲೇ ಶುರುವಾಗಿದೆ. ಇಲ್ಲಿ ಮೇಲ್ನೋಟಕ್ಕೆ ಎರಡೂ ತಂಡಗಳು ಬಲಿಷ್ಠವಾಗಿದ್ದರೂ ಅಂಕಿ ಅಂಶಗಳು ಹೇಳೋದೇ ಬೇರೆ.

2 / 7
ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

ಅಂದರೆ ಆರ್​ಸಿಬಿ ಹಾಗೂ ಸಿಎಸ್​ಕೆ ತಂಡಗಳು ಐಪಿಎಲ್​ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 10 ಬಾರಿ ಮಾತ್ರ. ಇನ್ನು ಒಂದು ಪಂದ್ಯವು ರದ್ದಾಗಿತ್ತು. ಅಂದರೆ 30 ಪಂದ್ಯಗಳಲ್ಲಿ 19 ಬಾರಿ ಜಯ ಸಾಧಿಸಿರುವ ಸಿಎಸ್​ಕೆ ತಂಡವು ಮೇಲುಗೈ ಹೊಂದಿದೆ.

3 / 7
 ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

ಇದಾಗ್ಯೂ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವು ಚೆನ್ನೈ ವಿರುದ್ಧ ಅತ್ಯುತ್ತಮ ಪ್ರದರ್ಶನವನ್ನೇ ನೀಡಿತ್ತು. ಐಪಿಎಲ್ 2022 ರಲ್ಲಿ ಮೊದಲ ಪಂದ್ಯದಲ್ಲಿ ಸಿಎಸ್​ಕೆ 23 ರನ್​ಗಳಿಂದ ಜಯಗಳಿಸಿದರೆ, 2ನೇ ಪಂದ್ಯದಲ್ಲಿ 13 ರನ್​ಗಳಿಂದ ಗೆದ್ದು ಆರ್​ಸಿಬಿ ಸೇಡು ತೀರಿಸಿಕೊಂಡಿತ್ತು.

4 / 7
ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

ಈ ಬಾರಿ ಕೂಡ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ಈ ಸಲ ಪಂದ್ಯ ನಡೆಯುತ್ತಿರುವುದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ಇಲ್ಲಿ ಆಡಲಾಗಿರುವ 3 ಪಂದ್ಯಗಳಲ್ಲೂ ಆರ್​ಸಿಬಿ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದೆ. ಚಿನ್ನಸ್ವಾಮಿ ಪಿಚ್​ನಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್​ನಿಂದ ವಿರೋಚಿತ ಸೋಲೋಪ್ಪಿಕೊಂಡಿತು. ಇನ್ನು 3ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 23 ರನ್​ಗಳ ಭರ್ಜರಿ ಜಯ ಸಾಧಿಸಿತು.

5 / 7
ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

ಇದೀಗ ಡೆಲ್ಲಿ ವಿರುದ್ಧದ ಗೆಲುವಿನ ಲಯದಲ್ಲಿರುವ ಆರ್​ಸಿಬಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲ್ಲುವ ಆತ್ಮವಿಶ್ವಾಸದಲ್ಲಿದೆ. ಅತ್ತ ಸಿಎಸ್​ಕೆ ತಂಡವು ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಪರಾಜಯಗೊಂಡಿದ್ದು, ಹೀಗಾಗಿ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ತವಕದಲ್ಲಿದೆ.

6 / 7
ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

ಒಟ್ಟಿನಲ್ಲಿ ಅಂಕಿ ಅಂಶಗಳ ಪ್ರಕಾರ ಸಿಎಸ್​ಕೆ ತಂಡವು ಮೇಲುಗೈ ಹೊಂದಿದ್ದರೂ, ಪ್ರಸ್ತುತ ಆರ್​ಸಿಬಿ ತಂಡದ ಫಾರ್ಮ್​ ಗಮನಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವೇ ಬಲಿಷ್ಠ ಎನ್ನಬಹುದು.

7 / 7
Follow us
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!