AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB vs GT ಪಂದ್ಯಕ್ಕೆ ಮಳೆ ಭೀತಿ: ಮ್ಯಾಚ್ ರದ್ದಾದರೆ ಯಾರಿಗೆ ಲಾಭ?

IPL 2023 Kannada: ಆರ್​ಸಿಬಿ 16 ಅಂಕಗಳನ್ನು ಕಲೆಹಾಕಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

TV9 Web
| Edited By: |

Updated on: May 20, 2023 | 10:53 PM

Share
IPL 2023 RCB vs GT: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆಯಲಿರುವ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆದ್ದು 2 ಅಂಕಗಳನ್ನು ಗಳಿಸಲೇಬೇಕಿದೆ.

IPL 2023 RCB vs GT: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆಯಲಿರುವ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿರುವ ಈ ಪಂದ್ಯದಲ್ಲಿ ಗೆದ್ದು 2 ಅಂಕಗಳನ್ನು ಗಳಿಸಲೇಬೇಕಿದೆ.

1 / 6
ಏಕೆಂದರೆ ಆರ್​ಸಿಬಿ 16 ಅಂಕಗಳನ್ನು ಕಲೆಹಾಕಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಏಕೆಂದರೆ ಆರ್​ಸಿಬಿ 16 ಅಂಕಗಳನ್ನು ಕಲೆಹಾಕಿದರೆ ಮಾತ್ರ ಪ್ಲೇಆಫ್ ಪ್ರವೇಶಿಸುವ ಅವಕಾಶ ದೊರೆಯಲಿದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯವು ಆರ್​ಸಿಬಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

2 / 6
ಆದರೆ ಅಕ್ಯುವೆದರ್​ ಮಾಹಿತಿ ಪ್ರಕಾರ, ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆ 4 ಗಂಟೆಯಿಂದ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಆದರೆ ಅಕ್ಯುವೆದರ್​ ಮಾಹಿತಿ ಪ್ರಕಾರ, ಈ ಪಂದ್ಯಕ್ಕೆ ವರುಣ ಅಡಚಣೆಯನ್ನುಂಟು ಮಾಡಲಿದೆ. ಸಂಜೆ 4 ಗಂಟೆಯಿಂದ ಮೋಡ ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

3 / 6
ಅಲ್ಲದೆ ಸಂಜೆಯಿಂದ ಮಧ್ಯರಾತ್ರಿಯವರೆಗೂ ಮೋಡ ಕವಿದ ವಾತವರಣ ಇರಲಿದ್ದು, ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಹೀಗಾಗಿಯೇ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಅಲ್ಲದೆ ಸಂಜೆಯಿಂದ ಮಧ್ಯರಾತ್ರಿಯವರೆಗೂ ಮೋಡ ಕವಿದ ವಾತವರಣ ಇರಲಿದ್ದು, ಸಂಜೆ 5 ಗಂಟೆ, 7 ಗಂಟೆ ಹಾಗೂ 9 ಗಂಟೆಯ ವೇಳೆ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಹೀಗಾಗಿಯೇ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯ ನಡೆಯಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

4 / 6
ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ಹಂಚಲಾಗುತ್ತದೆ. ಇದರಿಂದ ಆರ್​ಸಿಬಿ ಪ್ಲೇಆಫ್​ ಪ್ರವೇಶಿಸುವುದು ಅನುಮಾನ. ಏಕೆಂದರೆ ಮುಂಬೈ ಇಂಡಿಯನ್ಸ್ ನಾಳೆ ಗೆದ್ದರೆ 16 ಅಂಕಗಳನ್ನು ಸಂಪಾದಿಸಲಿದೆ. ಒಂದು ವೇಳೆ ಆರ್​ಸಿಬಿ-ಗುಜರಾತ್ ಟೈಟಾನ್ಸ್ ಪಂದ್ಯ ರದ್ದಾದರೆ, ಆರ್​ಸಿಬಿ 15 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಹಿಂದುಳಿಯಲಿದೆ. ಅತ್ತ ಮುಂಬೈ ಇಂಡಿಯನ್ಸ್ ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ. ಹೀಗಾಗಿ ಮ್ಯಾಚ್ ರದ್ದಾದರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಕೂಡ ಕಮರಲಿದೆ.

ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾದರೆ ಉಭಯ ತಂಡಗಳಿಗೆ ಒಂದೊಂದು ಅಂಕಗಳನ್ನು ಹಂಚಲಾಗುತ್ತದೆ. ಇದರಿಂದ ಆರ್​ಸಿಬಿ ಪ್ಲೇಆಫ್​ ಪ್ರವೇಶಿಸುವುದು ಅನುಮಾನ. ಏಕೆಂದರೆ ಮುಂಬೈ ಇಂಡಿಯನ್ಸ್ ನಾಳೆ ಗೆದ್ದರೆ 16 ಅಂಕಗಳನ್ನು ಸಂಪಾದಿಸಲಿದೆ. ಒಂದು ವೇಳೆ ಆರ್​ಸಿಬಿ-ಗುಜರಾತ್ ಟೈಟಾನ್ಸ್ ಪಂದ್ಯ ರದ್ದಾದರೆ, ಆರ್​ಸಿಬಿ 15 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಹಿಂದುಳಿಯಲಿದೆ. ಅತ್ತ ಮುಂಬೈ ಇಂಡಿಯನ್ಸ್ ಗೆದ್ದರೆ ಪ್ಲೇಆಫ್ ಪ್ರವೇಶಿಸಲಿದೆ. ಹೀಗಾಗಿ ಮ್ಯಾಚ್ ರದ್ದಾದರೆ ಆರ್​ಸಿಬಿ ತಂಡದ ಪ್ಲೇಆಫ್ ಕನಸು ಕೂಡ ಕಮರಲಿದೆ.

5 / 6
ಇನ್ನು ಸಾಧಾರಣ ಮಳೆಯಾದರೆ ಪಂದ್ಯ ನಡೆಯುವುದು ಖಚಿತ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂ ಮೈದಾನದಲ್ಲಿ ಸಬ್ ಏರ್​ ಸಿಸ್ಟಮ್ ಇದ್ದು, ಈ ಯಂತ್ರವು ಮೈದಾನದಲ್ಲಿ ನೀರನ್ನು ವೇಗವಾಗಿ ಹೀರಿಕೊಳ್ಳಲಿದೆ. ಅದರಂತೆ 15 ನಿಮಿಷದೊಳಗೆ ಮೈದಾನವನ್ನು ಸಂಪೂರ್ಣವಾಗಿ ಒಣಗಿಸಿ ಪಂದ್ಯಕ್ಕಾಗಿ ಸಜ್ಜುಗೊಳಿಸಬಹುದು. ಹೀಗಾಗಿ ಸಾಧಾರಣ ಮಳೆ ಬಂದರೆ ಪಂದ್ಯ ನಡೆಯುವುದು ಖಚಿತ ಎಂದೇ ಹೇಳಬಹುದು.

ಇನ್ನು ಸಾಧಾರಣ ಮಳೆಯಾದರೆ ಪಂದ್ಯ ನಡೆಯುವುದು ಖಚಿತ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂ ಮೈದಾನದಲ್ಲಿ ಸಬ್ ಏರ್​ ಸಿಸ್ಟಮ್ ಇದ್ದು, ಈ ಯಂತ್ರವು ಮೈದಾನದಲ್ಲಿ ನೀರನ್ನು ವೇಗವಾಗಿ ಹೀರಿಕೊಳ್ಳಲಿದೆ. ಅದರಂತೆ 15 ನಿಮಿಷದೊಳಗೆ ಮೈದಾನವನ್ನು ಸಂಪೂರ್ಣವಾಗಿ ಒಣಗಿಸಿ ಪಂದ್ಯಕ್ಕಾಗಿ ಸಜ್ಜುಗೊಳಿಸಬಹುದು. ಹೀಗಾಗಿ ಸಾಧಾರಣ ಮಳೆ ಬಂದರೆ ಪಂದ್ಯ ನಡೆಯುವುದು ಖಚಿತ ಎಂದೇ ಹೇಳಬಹುದು.

6 / 6
Web contact
Web contact

TV9 Kannada

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!