AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: KKR ವಿರುದ್ಧದ 6 ವರ್ಷಗಳ ಹಳೆಯ ಸೇಡು ತೀರಿಸಿಕೊಳ್ಳುತ್ತಾ RCB

IPL 2023 Kannada: ಆರ್​ಸಿಬಿ ಕಲೆಹಾಕಿದ 213 ರನ್​ಗಳ ಗುರಿಯನ್ನು ಬೆನ್ನತ್ತಿದ ಕೆಕೆಆರ್ 203 ರನ್​ಗಳಿಸಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತ್ತು.

TV9 Web
| Edited By: |

Updated on: Apr 05, 2023 | 7:23 PM

Share
IPL 2023, RCB vs KKR: ಅದು 2017, ಏಪ್ರಿಲ್ 23...ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ 27 ಪಂದ್ಯಗಳಲ್ಲಿ ಕೆಕೆಆರ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 19.3 ಓವರ್​ಗಳಲ್ಲಿ 131 ರನ್​ಗಳಿಗೆ ಸರ್ವಪತನ ಕಂಡಿತು.

IPL 2023, RCB vs KKR: ಅದು 2017, ಏಪ್ರಿಲ್ 23...ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ 27 ಪಂದ್ಯಗಳಲ್ಲಿ ಕೆಕೆಆರ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 19.3 ಓವರ್​ಗಳಲ್ಲಿ 131 ರನ್​ಗಳಿಗೆ ಸರ್ವಪತನ ಕಂಡಿತು.

1 / 7
ಇತ್ತ ಮಾರಕ ದಾಳಿ ಸಂಘಟಿಸಿದ ಆರ್​ಸಿಬಿ ತಂಡವು ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ಸುಲಭ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹೀನಾಯವಾಗಿ ಸೋಲೊಪ್ಪಿಕೊಂಡಿತ್ತು.

ಇತ್ತ ಮಾರಕ ದಾಳಿ ಸಂಘಟಿಸಿದ ಆರ್​ಸಿಬಿ ತಂಡವು ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ಸುಲಭ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹೀನಾಯವಾಗಿ ಸೋಲೊಪ್ಪಿಕೊಂಡಿತ್ತು.

2 / 7
ಹೌದು, ಅಂದು ಕೆಕೆಆರ್ ಕರಾರುವಾಕ್ ದಾಳಿಗೆ ಕಂಗೆಟ್ಟ ಆರ್​ಸಿಬಿ ತಂಡವು 9.4 ಓವರ್​ಗಳಲ್ಲಿ 49 ರನ್​ಗಳಿಗೆ ಆಲೌಟ್ ಆಗಿತ್ತು. ಇದು ಐಪಿಎಲ್ ಇತಿಹಾಸದಲ್ಲೇ ತಂಡವೊಂದು ಕಲೆಹಾಕಿದ ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಇದೀಗ ಇದೇ ಮೈದಾನದಲ್ಲಿ ಮತ್ತೆ ಆರ್​ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿದೆ.

ಹೌದು, ಅಂದು ಕೆಕೆಆರ್ ಕರಾರುವಾಕ್ ದಾಳಿಗೆ ಕಂಗೆಟ್ಟ ಆರ್​ಸಿಬಿ ತಂಡವು 9.4 ಓವರ್​ಗಳಲ್ಲಿ 49 ರನ್​ಗಳಿಗೆ ಆಲೌಟ್ ಆಗಿತ್ತು. ಇದು ಐಪಿಎಲ್ ಇತಿಹಾಸದಲ್ಲೇ ತಂಡವೊಂದು ಕಲೆಹಾಕಿದ ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಇದೀಗ ಇದೇ ಮೈದಾನದಲ್ಲಿ ಮತ್ತೆ ಆರ್​ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲು ಸಜ್ಜಾಗಿದೆ.

3 / 7
ಆದರೆ ಈ ಬಾರಿ ಕೂಡ ಆರ್​ಸಿಬಿಗೆ ಗೆಲುವು ಸುಲಭವಲ್ಲ. ಏಕೆಂದರೆ ಕೆಕೆಆರ್​ ತಂಡವು ತವರಿನಲ್ಲಿ ಅತ್ಯಂತ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಇದಕ್ಕೆ ಸಾಕ್ಷಿಯೇ ಈ ಹಿಂದಿನ ಫಲಿತಾಂಶಗಳು. ಈ ಮೈದಾನದಲ್ಲಿ ಕೊನೆಯ ಬಾರಿ ಆರ್​ಸಿಬಿ ಹಾಗೂ ಕೆಕೆಆರ್ ಮುಖಾಮುಖಿಯಾಗಿದ್ದು 2019 ರಲ್ಲಿ. ಅಂದು ಆರ್​ಸಿಬಿ ಕಲೆಹಾಕಿದ 213 ರನ್​ಗಳ ಗುರಿಯನ್ನು ಬೆನ್ನತ್ತಿದ ಕೆಕೆಆರ್ 203 ರನ್​ಗಳಿಸಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತ್ತು.

ಆದರೆ ಈ ಬಾರಿ ಕೂಡ ಆರ್​ಸಿಬಿಗೆ ಗೆಲುವು ಸುಲಭವಲ್ಲ. ಏಕೆಂದರೆ ಕೆಕೆಆರ್​ ತಂಡವು ತವರಿನಲ್ಲಿ ಅತ್ಯಂತ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಇದಕ್ಕೆ ಸಾಕ್ಷಿಯೇ ಈ ಹಿಂದಿನ ಫಲಿತಾಂಶಗಳು. ಈ ಮೈದಾನದಲ್ಲಿ ಕೊನೆಯ ಬಾರಿ ಆರ್​ಸಿಬಿ ಹಾಗೂ ಕೆಕೆಆರ್ ಮುಖಾಮುಖಿಯಾಗಿದ್ದು 2019 ರಲ್ಲಿ. ಅಂದು ಆರ್​ಸಿಬಿ ಕಲೆಹಾಕಿದ 213 ರನ್​ಗಳ ಗುರಿಯನ್ನು ಬೆನ್ನತ್ತಿದ ಕೆಕೆಆರ್ 203 ರನ್​ಗಳಿಸಿ ವಿರೋಚಿತವಾಗಿ ಸೋಲೊಪ್ಪಿಕೊಂಡಿತ್ತು.

4 / 7
ಇನ್ನು ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆರ್​ಸಿಬಿ ಆಡಿರುವ 9 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಬಾರಿ. ವಿಶೇಷ ಎಂದರೆ ಈ ಮೂರು ಪಂದ್ಯಗಳಲ್ಲೂ ಕೆಕೆಆರ್ ತಂಡದಿಂದ ಅತ್ಯುತ್ತಮ ಪ್ರದರ್ಶನ ಮೂಡಿಬಂದಿತ್ತು. ಇನ್ನು ಉಭಯ ತಂಡಗಳು ಆಡಿರುವ 30 ಪಂದ್ಯಗಳಲ್ಲಿ ಕೆಕೆಆರ್ 16 ಬಾರಿ ಜಯ ಸಾಧಿಸಿದೆ.

ಇನ್ನು ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆರ್​ಸಿಬಿ ಆಡಿರುವ 9 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 3 ಬಾರಿ. ವಿಶೇಷ ಎಂದರೆ ಈ ಮೂರು ಪಂದ್ಯಗಳಲ್ಲೂ ಕೆಕೆಆರ್ ತಂಡದಿಂದ ಅತ್ಯುತ್ತಮ ಪ್ರದರ್ಶನ ಮೂಡಿಬಂದಿತ್ತು. ಇನ್ನು ಉಭಯ ತಂಡಗಳು ಆಡಿರುವ 30 ಪಂದ್ಯಗಳಲ್ಲಿ ಕೆಕೆಆರ್ 16 ಬಾರಿ ಜಯ ಸಾಧಿಸಿದೆ.

5 / 7
ಇದೀಗ ಏಪ್ರಿಲ್ 6 ರಂದು ನಡೆಯಲಿರುವ ಐಪಿಎಲ್​ನ 9ನೇ ಪಂದ್ಯದ ಮೂಲಕ 3 ವರ್ಷಗಳ ಬಳಿಕ ಮತ್ತೆ ಆರ್​ಸಿಬಿ ಹಾಗೂ ಕೆಕೆಆರ್ ತಂಡಗಳು ಈಡನ್ ಗಾರ್ಡನ್ಸ್​ ಮೈದಾನದಲ್ಲಿ ಮುಖಾಮುಖಿಯಾಗುತ್ತಿದೆ. ಇದರ ಬೆನ್ನಲ್ಲೇ 6 ವರ್ಷಗಳ ಹೀನಾಯ ಸೋಲಿನ ಸ್ಕೋರ್​ ಬೋರ್ಡ್​ ಕೂಡ ಮುನ್ನಲೆಗೆ ಬಂದಿದೆ.

ಇದೀಗ ಏಪ್ರಿಲ್ 6 ರಂದು ನಡೆಯಲಿರುವ ಐಪಿಎಲ್​ನ 9ನೇ ಪಂದ್ಯದ ಮೂಲಕ 3 ವರ್ಷಗಳ ಬಳಿಕ ಮತ್ತೆ ಆರ್​ಸಿಬಿ ಹಾಗೂ ಕೆಕೆಆರ್ ತಂಡಗಳು ಈಡನ್ ಗಾರ್ಡನ್ಸ್​ ಮೈದಾನದಲ್ಲಿ ಮುಖಾಮುಖಿಯಾಗುತ್ತಿದೆ. ಇದರ ಬೆನ್ನಲ್ಲೇ 6 ವರ್ಷಗಳ ಹೀನಾಯ ಸೋಲಿನ ಸ್ಕೋರ್​ ಬೋರ್ಡ್​ ಕೂಡ ಮುನ್ನಲೆಗೆ ಬಂದಿದೆ.

6 / 7
ಇದರ ಬೆನ್ನಲ್ಲೇ ಈ ಬಾರಿ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವು ಆರು ವರ್ಷಗಳ ಹಳೆಯ ಹೀನಾಯ ಸೋಲಿನ ಸೇಡು ತೀರಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಅಲ್ಲದೆ ಕೆಕೆಆರ್ ಅನ್ನು ತವರಿನಲ್ಲೇ ಈ ಹೀನಾಯವಾಗಿ ಮಣಿಸಿ ಹಳೆಯ ಲೆಕ್ಕ ಚುಕ್ತಾ ಮಾಡಲಿ ಎಂಬುದಷ್ಟೇ ಆರ್​ಸಿಬಿ ಅಭಿಮಾನಿಗಳ ಆಶಯ.

ಇದರ ಬೆನ್ನಲ್ಲೇ ಈ ಬಾರಿ ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿದಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವು ಆರು ವರ್ಷಗಳ ಹಳೆಯ ಹೀನಾಯ ಸೋಲಿನ ಸೇಡು ತೀರಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಅಲ್ಲದೆ ಕೆಕೆಆರ್ ಅನ್ನು ತವರಿನಲ್ಲೇ ಈ ಹೀನಾಯವಾಗಿ ಮಣಿಸಿ ಹಳೆಯ ಲೆಕ್ಕ ಚುಕ್ತಾ ಮಾಡಲಿ ಎಂಬುದಷ್ಟೇ ಆರ್​ಸಿಬಿ ಅಭಿಮಾನಿಗಳ ಆಶಯ.

7 / 7
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!