Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: KGF ತೂಫಾನ್: ಬರೋಬ್ಬರಿ 108 ರನ್​ಗಳು​..!

IPL 2023 Kannada: ಈ ಪಂದ್ಯದಲ್ಲಿ 4 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಟಾಪ್-5 ಆಟಗಾರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 10, 2023 | 11:33 PM

IPL 2023 RCB vs LSG Highlights: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ KGF ಬಿರುಗಾಳಿ ಎಬ್ಬಿಸಿದ್ದಾರೆ. ಈ ಬಿರುಗಾಳಿಗೆ ಸಿಕ್ಸ್​ಗಳ ಸುರಿಮಳೆಯಾಗಿರುವುದು ವಿಶೇಷ.

IPL 2023 RCB vs LSG Highlights: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ KGF ಬಿರುಗಾಳಿ ಎಬ್ಬಿಸಿದ್ದಾರೆ. ಈ ಬಿರುಗಾಳಿಗೆ ಸಿಕ್ಸ್​ಗಳ ಸುರಿಮಳೆಯಾಗಿರುವುದು ವಿಶೇಷ.

1 / 8
ಹೌದು, ಚಿನ್ನಸ್ವಾಮಿ ಮೈದಾನದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಕನ್ನಡಿಗನ ನಿರ್ಧಾರ ತಪ್ಪು ಎಂಬುದನ್ನು ವಿರಾಟ್ ಕೊಹ್ಲಿ ಆರಂಭದಲ್ಲೇ ನಿರೂಪಿಸಿದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ಆರ್​ಸಿಬಿಗೆ ಸ್ಪೋಟಕ ಆರಂಭ ಒದಗಿಸಿದರು.

ಹೌದು, ಚಿನ್ನಸ್ವಾಮಿ ಮೈದಾನದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಕನ್ನಡಿಗನ ನಿರ್ಧಾರ ತಪ್ಪು ಎಂಬುದನ್ನು ವಿರಾಟ್ ಕೊಹ್ಲಿ ಆರಂಭದಲ್ಲೇ ನಿರೂಪಿಸಿದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ ಆರ್​ಸಿಬಿಗೆ ಸ್ಪೋಟಕ ಆರಂಭ ಒದಗಿಸಿದರು.

2 / 8
ಪವರ್​ಪ್ಲೇನಲ್ಲೇ ಲಕ್ನೋ ಬೌಲರ್​ಗಳ ಬೆಂಡೆತ್ತಿದ ವಿರಾಟ್ ಕೊಹ್ಲಿ-ಫಾಫ್ ಡುಪ್ಲೆಸಿಸ್ ಜೋಡಿ 56 ರನ್​ ಕಲೆಹಾಕಿದ್ದರು. ಆ ಬಳಿಕ 44 ಎಸೆತಗಳಲ್ಲಿ 61 ರನ್​ ಬಾರಿಸಿ ಕೊಹ್ಲಿ ನಿರ್ಗಮಿಸಿದರು. ಇದಾದ ಬಳಿಕ ಜೊತೆಯಾದ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ 7 ಓವರ್​ಗಳಲ್ಲಿ 48 ರನ್​ ಕಲೆಹಾಕಿದರು.

ಪವರ್​ಪ್ಲೇನಲ್ಲೇ ಲಕ್ನೋ ಬೌಲರ್​ಗಳ ಬೆಂಡೆತ್ತಿದ ವಿರಾಟ್ ಕೊಹ್ಲಿ-ಫಾಫ್ ಡುಪ್ಲೆಸಿಸ್ ಜೋಡಿ 56 ರನ್​ ಕಲೆಹಾಕಿದ್ದರು. ಆ ಬಳಿಕ 44 ಎಸೆತಗಳಲ್ಲಿ 61 ರನ್​ ಬಾರಿಸಿ ಕೊಹ್ಲಿ ನಿರ್ಗಮಿಸಿದರು. ಇದಾದ ಬಳಿಕ ಜೊತೆಯಾದ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ 7 ಓವರ್​ಗಳಲ್ಲಿ 48 ರನ್​ ಕಲೆಹಾಕಿದರು.

3 / 8
ಇನ್ನು ಆರ್​ಸಿಬಿ ತಂಡದ ಅಸಲಿ ಆಟ ಶುರುವಾಗಿದ್ದೇ ಕೊನೆಯ 7 ಓವರ್​ಗಳಿರುವಾಗ..ಈ ಹಂತದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

ಇನ್ನು ಆರ್​ಸಿಬಿ ತಂಡದ ಅಸಲಿ ಆಟ ಶುರುವಾಗಿದ್ದೇ ಕೊನೆಯ 7 ಓವರ್​ಗಳಿರುವಾಗ..ಈ ಹಂತದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

4 / 8
ಪರಿಣಾಮ ಕೊನೆಯ 42 ಎಸೆತಗಳಲ್ಲಿ ಆರ್​ಸಿಬಿ ತಂಡ ಕಲೆಹಾಕಿದ್ದು ಬರೋಬ್ಬರಿ 108 ರನ್​ಗಳು. ಅಂದರೆ ಪ್ರತಿ ಓವರ್​ಗೆ 15.42 ಸರಾಸರಿಯಲ್ಲಿ ರನ್ ಬಾರಿಸಿದ್ದರು.

ಪರಿಣಾಮ ಕೊನೆಯ 42 ಎಸೆತಗಳಲ್ಲಿ ಆರ್​ಸಿಬಿ ತಂಡ ಕಲೆಹಾಕಿದ್ದು ಬರೋಬ್ಬರಿ 108 ರನ್​ಗಳು. ಅಂದರೆ ಪ್ರತಿ ಓವರ್​ಗೆ 15.42 ಸರಾಸರಿಯಲ್ಲಿ ರನ್ ಬಾರಿಸಿದ್ದರು.

5 / 8
ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 4 ಸಿಕ್ಸ್ ಸಿಡಿಸಿದರೆ, ಫಾಫ್ ಡುಪ್ಲೆಸಿಸ್ 5 ಸಿಕ್ಸ್ ಬಾರಿಸಿದರು. ಹಾಗೆಯೇ ಗ್ಲೆನ್ ಮ್ಯಾಕ್ಸ್​ವೆಲ್ 6 ಸಿಕ್ಸ್ ಸಿಡಿಸುವ ಮೂಲಕ ಒಂದೆಜ್ಜೆ ಮುಂದೆ ಹೋದರು.

ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ 4 ಸಿಕ್ಸ್ ಸಿಡಿಸಿದರೆ, ಫಾಫ್ ಡುಪ್ಲೆಸಿಸ್ 5 ಸಿಕ್ಸ್ ಬಾರಿಸಿದರು. ಹಾಗೆಯೇ ಗ್ಲೆನ್ ಮ್ಯಾಕ್ಸ್​ವೆಲ್ 6 ಸಿಕ್ಸ್ ಸಿಡಿಸುವ ಮೂಲಕ ಒಂದೆಜ್ಜೆ ಮುಂದೆ ಹೋದರು.

6 / 8
K (ಕೊಹ್ಲಿ) G (ಗ್ಲೆನ್ ಮ್ಯಾಕ್ಸ್​ವೆಲ್) F (ಫಾಫ್ ಡುಪ್ಲೆಸಿಸ್)..ತ್ರಿಮೂರ್ತಿಗಳ ಈ ತೂಫಾನ್ ಬ್ಯಾಟಿಂಗ್ ಪರಿಣಾಮ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಆರ್​ಸಿಬಿ ​212 ರನ್ ಕಲೆಹಾಕಿತು.

K (ಕೊಹ್ಲಿ) G (ಗ್ಲೆನ್ ಮ್ಯಾಕ್ಸ್​ವೆಲ್) F (ಫಾಫ್ ಡುಪ್ಲೆಸಿಸ್)..ತ್ರಿಮೂರ್ತಿಗಳ ಈ ತೂಫಾನ್ ಬ್ಯಾಟಿಂಗ್ ಪರಿಣಾಮ ಆರ್​ಸಿಬಿ ತಂಡವು ನಿಗದಿತ 20 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಆರ್​ಸಿಬಿ ​212 ರನ್ ಕಲೆಹಾಕಿತು.

7 / 8
ಇನ್ನು ಈ ಪಂದ್ಯದಲ್ಲಿ KGF 212 ರನ್​ ಬಾರಿಸಿದರೂ ಆರ್​ಸಿಬಿ ತಂಡಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬುದೇ ವಿಪರ್ಯಾಸ.

ಇನ್ನು ಈ ಪಂದ್ಯದಲ್ಲಿ KGF 212 ರನ್​ ಬಾರಿಸಿದರೂ ಆರ್​ಸಿಬಿ ತಂಡಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬುದೇ ವಿಪರ್ಯಾಸ.

8 / 8
Follow us
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?