AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡಕ್ಕೆ ಕನ್ನಡಿಗ ಎಂಟ್ರಿ..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್.

TV9 Web
| Updated By: ಝಾಹಿರ್ ಯೂಸುಫ್|

Updated on: Apr 08, 2023 | 3:57 PM

Share
IPL 2023 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಭರ್ಜರಿಯಾಗಿ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಕೆಕೆಆರ್ ವಿರುದ್ಧ ಆಡಿದ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಿಂದ ಪ್ರಮುಖ ವೇಗದ ಬೌಲರ್ ರೀಸ್ ಟೋಪ್ಲಿ ಹೊರಬಿದ್ದಿದ್ದರು.

IPL 2023 RCB: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಭರ್ಜರಿಯಾಗಿ ಶುಭಾರಂಭ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಕೆಕೆಆರ್ ವಿರುದ್ಧ ಆಡಿದ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿತ್ತು. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಿಂದ ಪ್ರಮುಖ ವೇಗದ ಬೌಲರ್ ರೀಸ್ ಟೋಪ್ಲಿ ಹೊರಬಿದ್ದಿದ್ದರು.

1 / 8
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಟೋಪ್ಲಿ ಇದೀಗ ಐಪಿಎಲ್​ನಿಂದ ಹೊರ ನಡೆದಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಟೂರ್ನಿಯಿಂದ ಹೊರಗುಳಿದಿದ್ದರು. ಇದೀಗ ಆರ್​ಸಿಬಿ ಫ್ರಾಂಚೈಸಿಯು ಈ ಇಬ್ಬರ ಬದಲಿ ಆಟಗಾರರನ್ನು​ ತಂಡಕ್ಕೆ ಆಯ್ಕೆ ಮಾಡಿದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದ ಟೋಪ್ಲಿ ಇದೀಗ ಐಪಿಎಲ್​ನಿಂದ ಹೊರ ನಡೆದಿದ್ದಾರೆ. ಇದಕ್ಕೂ ಮುನ್ನ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಟೂರ್ನಿಯಿಂದ ಹೊರಗುಳಿದಿದ್ದರು. ಇದೀಗ ಆರ್​ಸಿಬಿ ಫ್ರಾಂಚೈಸಿಯು ಈ ಇಬ್ಬರ ಬದಲಿ ಆಟಗಾರರನ್ನು​ ತಂಡಕ್ಕೆ ಆಯ್ಕೆ ಮಾಡಿದೆ.

2 / 8
ಇಲ್ಲಿ ರೀಸ್ ಟೋಪ್ಲಿ ಬದಲಿಗೆ ಸೌತ್ ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಪುಣೆ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪರ ಕಣಕ್ಕಿಳಿದಿದ್ದ ಪಾರ್ನೆಲ್ ಇದುವರೆಗೆ 26 ಐಪಿಎಲ್​ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 26 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ವರ್ಷಗಳ ಬಳಿಕ ಮತ್ತೆ ಐಪಿಎಲ್​ನಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇಲ್ಲಿ ರೀಸ್ ಟೋಪ್ಲಿ ಬದಲಿಗೆ ಸೌತ್ ಆಫ್ರಿಕಾ ವೇಗಿ ವೇಯ್ನ್ ಪಾರ್ನೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಪುಣೆ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಪರ ಕಣಕ್ಕಿಳಿದಿದ್ದ ಪಾರ್ನೆಲ್ ಇದುವರೆಗೆ 26 ಐಪಿಎಲ್​ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 26 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ವರ್ಷಗಳ ಬಳಿಕ ಮತ್ತೆ ಐಪಿಎಲ್​ನಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

3 / 8
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್​ನಲ್ಲಿ ವೈಶಾಖ್ ವಿಜಯಕುಮಾರ್ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ಐಪಿಎಲ್​ನಲ್ಲಿ ವೈಶಾಖ್ ವಿಜಯಕುಮಾರ್ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.

4 / 8
ಕರ್ನಾಟಕ ತಂಡದ ಪ್ರಮುಖ ವೇಗ ಬೌಲರ್ ಆಗಿ ಗುರುತಿಸಿಕೊಂಡಿರುವ ವೈಶಾಖ್ 10 ಪ್ರಥಮ ದರ್ಜೆ ಪಂದ್ಯಗಳಿಂದ ಒಟ್ಟು 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹಾಗೆಯೇ 7 ಲೀಸ್ಟ್ ಎ ಪಂದ್ಯಗಳಿಂದ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ 14 ಟಿ20 ಪಂದ್ಯಗಳಿಂದ 22 ವಿಕೆಟ್ ಪಡೆದಿರುವ 26 ವರ್ಷದ ವೈಶಾಖ್ ಈ ಹಿಂದೆ ಕರ್ನಾಟಕ, ಮಂಗಳೂರು ಯುನೈಟೆಡ್ ಹಾಗೂ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದರು.

ಕರ್ನಾಟಕ ತಂಡದ ಪ್ರಮುಖ ವೇಗ ಬೌಲರ್ ಆಗಿ ಗುರುತಿಸಿಕೊಂಡಿರುವ ವೈಶಾಖ್ 10 ಪ್ರಥಮ ದರ್ಜೆ ಪಂದ್ಯಗಳಿಂದ ಒಟ್ಟು 38 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹಾಗೆಯೇ 7 ಲೀಸ್ಟ್ ಎ ಪಂದ್ಯಗಳಿಂದ 11 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಲ್ಲದೆ 14 ಟಿ20 ಪಂದ್ಯಗಳಿಂದ 22 ವಿಕೆಟ್ ಪಡೆದಿರುವ 26 ವರ್ಷದ ವೈಶಾಖ್ ಈ ಹಿಂದೆ ಕರ್ನಾಟಕ, ಮಂಗಳೂರು ಯುನೈಟೆಡ್ ಹಾಗೂ ಮೈಸೂರು ವಾರಿಯರ್ಸ್ ಪರ ಕಣಕ್ಕಿಳಿದಿದ್ದರು.

5 / 8
ಇದೀಗ ಚೊಚ್ಚಲ ಬಾರಿಗೆ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಇದರೊಂದಿಗೆ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರು ಸೇರ್ಪಡೆಯಾದಂತಾಗಿದೆ. ಇದಕ್ಕೂ ಮುನ್ನ ಹರಾಜಿನ ಮೂಲಕ ಆರ್​ಸಿಬಿ ಫ್ರಾಂಚೈಸಿಯು ಯುವ ಆಟಗಾರ ಮನೋಜ್ ಭಾಂಡಗೆ ಅವರನ್ನು ಖರೀದಿಸಿತ್ತು. ಇದೀಗ 2ನೇ ಕನ್ನಡಿಗನಾಗಿ ಆರ್​ಸಿಬಿ ತಂಡಕ್ಕೆ ವೈಶಾಖ್ ವಿಜಯಕುಮಾರ್ ಅವರ ಎಂಟ್ರಿಯಾಗಿದೆ.

ಇದೀಗ ಚೊಚ್ಚಲ ಬಾರಿಗೆ ಐಪಿಎಲ್​ನಲ್ಲಿ ಅವಕಾಶ ಪಡೆದಿದ್ದಾರೆ. ಇದರೊಂದಿಗೆ ಆರ್​ಸಿಬಿ ತಂಡದಲ್ಲಿ ಇಬ್ಬರು ಕನ್ನಡಿಗರು ಸೇರ್ಪಡೆಯಾದಂತಾಗಿದೆ. ಇದಕ್ಕೂ ಮುನ್ನ ಹರಾಜಿನ ಮೂಲಕ ಆರ್​ಸಿಬಿ ಫ್ರಾಂಚೈಸಿಯು ಯುವ ಆಟಗಾರ ಮನೋಜ್ ಭಾಂಡಗೆ ಅವರನ್ನು ಖರೀದಿಸಿತ್ತು. ಇದೀಗ 2ನೇ ಕನ್ನಡಿಗನಾಗಿ ಆರ್​ಸಿಬಿ ತಂಡಕ್ಕೆ ವೈಶಾಖ್ ವಿಜಯಕುಮಾರ್ ಅವರ ಎಂಟ್ರಿಯಾಗಿದೆ.

6 / 8
ಈ ಬಾರಿಯ ಆರ್​ಸಿಬಿ ಬಳಗಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕರ್ನಾಟಕ ವೇಗಿ ವೈಶಾಖ್​ಗೆ ತವರು ಮೈದಾನದಲ್ಲೇ ಚೊಚ್ಚಲ ಪಂದ್ಯವಾಡುವ ಅವಕಾಶ ಲಭಿಸಿದೆ. ಈ ಹಿಂದೆ ಆರ್​ಸಿಬಿ ತಂಡದಲ್ಲಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ಕನ್ನಡಿಗನನ್ನು ಆರ್​ಸಿಬಿ ಫ್ರಾಂಚೈಸಿ ಆಯ್ಕೆ ಮಾಡಿತ್ತು.

ಈ ಬಾರಿಯ ಆರ್​ಸಿಬಿ ಬಳಗಕ್ಕೆ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದ ಕರ್ನಾಟಕ ವೇಗಿ ವೈಶಾಖ್​ಗೆ ತವರು ಮೈದಾನದಲ್ಲೇ ಚೊಚ್ಚಲ ಪಂದ್ಯವಾಡುವ ಅವಕಾಶ ಲಭಿಸಿದೆ. ಈ ಹಿಂದೆ ಆರ್​ಸಿಬಿ ತಂಡದಲ್ಲಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ಕನ್ನಡಿಗನನ್ನು ಆರ್​ಸಿಬಿ ಫ್ರಾಂಚೈಸಿ ಆಯ್ಕೆ ಮಾಡಿತ್ತು.

7 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವಿಜಯಕುಮಾರ್ ವೈಶಾಖ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವಿಜಯಕುಮಾರ್ ವೈಶಾಖ್.

8 / 8
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ