AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್ ಗೆದ್ದರೆ, RCB ಎಷ್ಟು ಅಂತರದಿಂದ ಗೆಲ್ಲಬೇಕು? ಇಲ್ಲಿದೆ ಮಾಹಿತಿ

IPL 2023 Kannada: ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

TV9 Web
| Edited By: |

Updated on: May 21, 2023 | 4:22 PM

Share
IPL 2023: ಐಪಿಎಲ್​ ಸೀಸನ್ 16 ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಮುಂಬೈ ಇಂಡಿಯನ್ಸ್ - ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಆರ್​ಸಿಬಿ - ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಗಳು ಮಾತ್ರ.

IPL 2023: ಐಪಿಎಲ್​ ಸೀಸನ್ 16 ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನುಳಿದಿರುವುದು ಮುಂಬೈ ಇಂಡಿಯನ್ಸ್ - ಸನ್​ರೈಸರ್ಸ್​ ಹೈದರಾಬಾದ್ ಹಾಗೂ ಆರ್​ಸಿಬಿ - ಗುಜರಾತ್ ಟೈಟಾನ್ಸ್ ನಡುವಣ ಪಂದ್ಯಗಳು ಮಾತ್ರ.

1 / 9
ಆದರೆ ಈ ಕೊನೆಯ 2 ಪಂದ್ಯಗಳೇ ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ. ಇನ್ನುಳಿದಿರುವ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.

ಆದರೆ ಈ ಕೊನೆಯ 2 ಪಂದ್ಯಗಳೇ ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಅಂದರೆ ಈಗಾಗಲೇ ಗುಜರಾತ್ ಟೈಟಾನ್ಸ್, ಸಿಎಸ್​ಕೆ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್ ಹಂತಕ್ಕೇರಿದೆ. ಇನ್ನುಳಿದಿರುವ 4ನೇ ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವೆ ಪೈಪೋಟಿ ಏರ್ಪಟ್ಟಿದೆ.

2 / 9
ಇಲ್ಲಿ ಎಸ್​ಆರ್​ಹೆಚ್​ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ 16 ಪಾಯಿಂಟ್ಸ್​​ನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ. ಆದರೆ ಅತ್ತ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಮುಂಬೈ ಇಂಡಿಯನ್ಸ್ ಅನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಬಹುದು.

ಇಲ್ಲಿ ಎಸ್​ಆರ್​ಹೆಚ್​ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದರೆ 16 ಪಾಯಿಂಟ್ಸ್​​ನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ. ಆದರೆ ಅತ್ತ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಮುಂಬೈ ಇಂಡಿಯನ್ಸ್ ಅನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಬಹುದು.

3 / 9
ಅಂದರೆ ಇಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಅಂದರೆ ಇಲ್ಲಿ ಮುಂಬೈ ಇಂಡಿಯನ್ಸ್ ಉತ್ತಮ ನೆಟ್ ರನ್​ ರೇಟ್​ನೊಂದಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಈಗಾಗಲೇ MI vs SRH ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

4 / 9
ಅದರಂತೆ ಮುಂಬೈ ಇಂಡಿಯನ್ಸ್ ಚೇಸಿಂಗ್ ಲೆಕ್ಕಾಚಾರದೊಂದಿಗೆ ಬ್ಯಾಟಿಂಗ್​ಗೆ ಇಳಿಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ನಿರ್ದಿಷ್ಟ ಓವರ್​ಗಳಲ್ಲಿ ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಚೇಸ್ ಮಾಡಿದರೆ ಆರ್​ಸಿಬಿಗಿಂತ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬಹುದು. ಈ ಲೆಕ್ಕಾಚಾರಗಳು ಯಾವುವು, ಈ ಮಾಸ್ಟರ್​ ಪ್ಲ್ಯಾನ್​ ಆರ್​ಸಿಬಿ ಹೇಗೆ ಉತ್ತರ ನೀಡಬಹುದು ಎಂಬುದನ್ನು ನೋಡೋಣ..

ಅದರಂತೆ ಮುಂಬೈ ಇಂಡಿಯನ್ಸ್ ಚೇಸಿಂಗ್ ಲೆಕ್ಕಾಚಾರದೊಂದಿಗೆ ಬ್ಯಾಟಿಂಗ್​ಗೆ ಇಳಿಯಲಿದೆ. ಅಂದರೆ ಮುಂಬೈ ಇಂಡಿಯನ್ಸ್ ನಿರ್ದಿಷ್ಟ ಓವರ್​ಗಳಲ್ಲಿ ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಚೇಸ್ ಮಾಡಿದರೆ ಆರ್​ಸಿಬಿಗಿಂತ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬಹುದು. ಈ ಲೆಕ್ಕಾಚಾರಗಳು ಯಾವುವು, ಈ ಮಾಸ್ಟರ್​ ಪ್ಲ್ಯಾನ್​ ಆರ್​ಸಿಬಿ ಹೇಗೆ ಉತ್ತರ ನೀಡಬಹುದು ಎಂಬುದನ್ನು ನೋಡೋಣ..

5 / 9
ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಿದರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 40 ರನ್​ಗಳ ಅಂತರದಿಂದ ಗೆಲ್ಲಲೇಬೇಕು.

ಎಸ್​ಆರ್​ಹೆಚ್ ನೀಡಿದ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು ಕೇವಲ 8 ಓವರ್​ಗಳಲ್ಲಿ ಚೇಸ್ ಮಾಡಿದರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 40 ರನ್​ಗಳ ಅಂತರದಿಂದ ಗೆಲ್ಲಲೇಬೇಕು.

6 / 9
ಒಂದು ವೇಳೆ ಮುಂಬೈ ಇಂಡಿಯನ್ಸ್ ಎಸ್​ಆರ್​ಹೆಚ್​ ನೀಡಿದ ಗುರಿಯನ್ನು ಬೆನ್ನತ್ತಲು 10 ಓವರ್ ತೆಗೆದುಕೊಂಡರೆ, ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲ್ಲಬೇಕು.

ಒಂದು ವೇಳೆ ಮುಂಬೈ ಇಂಡಿಯನ್ಸ್ ಎಸ್​ಆರ್​ಹೆಚ್​ ನೀಡಿದ ಗುರಿಯನ್ನು ಬೆನ್ನತ್ತಲು 10 ಓವರ್ ತೆಗೆದುಕೊಂಡರೆ, ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 20 ರನ್​ಗಳ ಅಂತರದಿಂದ ಗೆಲ್ಲಬೇಕು.

7 / 9
ಇನ್ನು ಎಸ್​ಆರ್​​ಹೆಚ್ ತಂಡದ ಟಾರ್ಗೆಟ್​ ಅನ್ನು ಬೆನ್ನತ್ತಲು ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು 12 ಓವರ್​ ಅಥವಾ ಅದಕ್ಕಿಂತ ಹೆಚ್ಚಿನ ಓವರ್​ ತೆಗೆದುಕೊಂಡರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಸಾಕು.

ಇನ್ನು ಎಸ್​ಆರ್​​ಹೆಚ್ ತಂಡದ ಟಾರ್ಗೆಟ್​ ಅನ್ನು ಬೆನ್ನತ್ತಲು ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳು 12 ಓವರ್​ ಅಥವಾ ಅದಕ್ಕಿಂತ ಹೆಚ್ಚಿನ ಓವರ್​ ತೆಗೆದುಕೊಂಡರೆ, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದರೆ ಸಾಕು.

8 / 9
ಅಂದರೆ ಎಸ್​ಆರ್​ಹೆಚ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ 12 ಓವರ್ ಬ್ಯಾಟಿಂಗ್ ಮಾಡಿದ್ರೆ, ಅತ್ತ ಆರ್​ಸಿಬಿ ಗುಜರಾತ್ ಟೈಟಾನ್ಸ್ ಅನ್ನು ಮಣಿಸಿ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

ಅಂದರೆ ಎಸ್​ಆರ್​ಹೆಚ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ 12 ಓವರ್ ಬ್ಯಾಟಿಂಗ್ ಮಾಡಿದ್ರೆ, ಅತ್ತ ಆರ್​ಸಿಬಿ ಗುಜರಾತ್ ಟೈಟಾನ್ಸ್ ಅನ್ನು ಮಣಿಸಿ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವುದು ಖಚಿತ.

9 / 9
Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು