AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್ 2023 ಹರಾಜಿಗೂ ಮುನ್ನ ಎಲ್ಲ 10 ಫ್ರಾಂಚೈಸಿ ಬಿಡುಗಡೆ ಮಾಡಲಿರುವ ಆಟಗಾರರ ಪಟ್ಟಿ ಇಲ್ಲಿದೆ

IPL 2023 Retention: ಕೆಲ ಐಪಿಎಲ್ ಫ್ರಾಂಚೈಸಿಗಳು ಅಧಿಕೃತವಾಗಿ ಆಟಗಾರರನ್ನು ಬಿಡುಗಡೆ ಮಾಡಿದ ಬಗ್ಗೆ ಹಾಗೂ ಟ್ರೇಡ್ ಮಾಡಿರುವ ಬಗ್ಗೆ ಮಾಹಿತಿ ಹೊರಹಾಕಿದೆ. ಇಂದು ಸಂಜೆ ಎಲ್ಲ 10 ತಂಡಗಳ ಸಂಪೂರ್ಣ ಚಿತ್ರಣ ಸಿಗಲಿದೆ.

TV9 Web
| Updated By: Vinay Bhat|

Updated on:Nov 15, 2022 | 11:16 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 2022ಕ್ಕೆ ಎಲ್ಲಾ 10 ಫ್ರಾಂಚೈಸಿಗಳು ಭರ್ಜರಿ ಸಿದ್ಧತೆ ಶುರುಮಾಡಿಕೊಂಡಿದೆ. ಇದೇ ಡಿಸೆಂಬರ್ 23 ರಂದು ಕೇರಳದ ಕೊಚ್ಚಿಯಲ್ಲಿ ಮಿನಿ ಹರಾಜು ಪ್ರಕ್ರಿಯೆ ಏರ್ಪಡಿಸಲಾಗಿದ್ದು ಇದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ತಮಗೆ ಅಗತ್ಯವಿಲ್ಲದ ಆಟಗಾರರನ್ನು ಬಿಡುಗಡೆ ಮಾಡಲು ಹೇಳಿತ್ತು. ಇಂದು ನವೆಂಬರ್ 15 ಇದಕ್ಕೆ ಕೊನೆಯ ದಿನವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 2023ಕ್ಕೆ ಎಲ್ಲಾ 10 ಫ್ರಾಂಚೈಸಿಗಳು ಭರ್ಜರಿ ಸಿದ್ಧತೆ ಶುರುಮಾಡಿಕೊಂಡಿದೆ. ಇದೇ ಡಿಸೆಂಬರ್ 23 ರಂದು ಕೇರಳದ ಕೊಚ್ಚಿಯಲ್ಲಿ ಮಿನಿ ಹರಾಜು ಪ್ರಕ್ರಿಯೆ ಏರ್ಪಡಿಸಲಾಗಿದ್ದು ಇದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ತಮಗೆ ಅಗತ್ಯವಿಲ್ಲದ ಆಟಗಾರರನ್ನು ಬಿಡುಗಡೆ ಮಾಡಲು ಹೇಳಿತ್ತು. ಇಂದು ನವೆಂಬರ್ 15 ಇದಕ್ಕೆ ಕೊನೆಯ ದಿನವಾಗಿದೆ.

1 / 11
ಕೆಲ ಫ್ರಾಂಚೈಸಿಗಳು ಅಧಿಕೃತವಾಗಿ ಆಟಗಾರರನ್ನು ಬಿಡುಗಡೆ ಮಾಡಿದ ಬಗ್ಗೆ ಹಾಗೂ ಟ್ರೇಡ್ ಮಾಡಿರುವ ಬಗ್ಗೆ ಮಾಹಿತಿ ಹೊರಹಾಕಿದೆ. ಇಂದು ಸಂಜೆ ಎಲ್ಲ 10 ತಂಡಗಳ ಸಂಪೂರ್ಣ ಚಿತ್ರಣ ಸಿಗಲಿದೆ. ಆದರೆ, ಇದಕ್ಕೂ ಮುನ್ನ ಯಾವ ಫ್ರಾಂಚೈಸಿ ಯಾವ ಆಟಗಾರರನ್ನು ಉಳಿಸಿಕೊಂಡಿದೆ ಎಂಬ ಸುದ್ದಿ ಮೂಲಗಳಿಂದ ತಿಳಿದುಬಂದಿದೆ.

ಕೆಲ ಫ್ರಾಂಚೈಸಿಗಳು ಅಧಿಕೃತವಾಗಿ ಆಟಗಾರರನ್ನು ಬಿಡುಗಡೆ ಮಾಡಿದ ಬಗ್ಗೆ ಹಾಗೂ ಟ್ರೇಡ್ ಮಾಡಿರುವ ಬಗ್ಗೆ ಮಾಹಿತಿ ಹೊರಹಾಕಿದೆ. ಇಂದು ಸಂಜೆ ಎಲ್ಲ 10 ತಂಡಗಳ ಸಂಪೂರ್ಣ ಚಿತ್ರಣ ಸಿಗಲಿದೆ. ಆದರೆ, ಇದಕ್ಕೂ ಮುನ್ನ ಯಾವ ಫ್ರಾಂಚೈಸಿ ಯಾವ ಆಟಗಾರರನ್ನು ಉಳಿಸಿಕೊಂಡಿದೆ ಎಂಬ ಸುದ್ದಿ ಮೂಲಗಳಿಂದ ತಿಳಿದುಬಂದಿದೆ.

2 / 11
ಮೂಲಗಳ ಪ್ರಕಾರ ಆರ್​ಸಿಬಿ ತನ್ನ ತಂಡದಲ್ಲಿದ್ದ ನಾಲ್ಕು ಆಟಗಾರರನ್ನು ಬಿಡುಗಡೆ ಮಾಡಿದೆ ಎಂದು ವರದಿ ಆಗಿದೆ. ಐಪಿಎಲ್ 2022 ರಲ್ಲಿ ಕಮಾಲ್ ಮಾಡದ ಸಿದ್ಧಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲೆ ಹಾಗೂ ಆಕಾಶ್ ದೀಪ್ ಅವರನ್ನು ಆರ್​ಸಿಬಿ ತಂಡದಿಂದ ಕೈಬಿಟ್ಟಿದೆ. ಆರ್​ಸಿಬಿ ಉಳಿದಿಕೊಂಡ ಆಟಗಾರರು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್ ಹಾಗೂ ರಜತ್ ಪಾಟಿದಾರ್ ಅವರನ್ನು ತನ್ನಲ್ಲೇ ಉಳಿಸಿಕೊಂಡಿದೆ.

ಮೂಲಗಳ ಪ್ರಕಾರ ಆರ್​ಸಿಬಿ ತನ್ನ ತಂಡದಲ್ಲಿದ್ದ ನಾಲ್ಕು ಆಟಗಾರರನ್ನು ಬಿಡುಗಡೆ ಮಾಡಿದೆ ಎಂದು ವರದಿ ಆಗಿದೆ. ಐಪಿಎಲ್ 2022 ರಲ್ಲಿ ಕಮಾಲ್ ಮಾಡದ ಸಿದ್ಧಾರ್ಥ್ ಕೌಲ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲೆ ಹಾಗೂ ಆಕಾಶ್ ದೀಪ್ ಅವರನ್ನು ಆರ್​ಸಿಬಿ ತಂಡದಿಂದ ಕೈಬಿಟ್ಟಿದೆ. ಆರ್​ಸಿಬಿ ಉಳಿದಿಕೊಂಡ ಆಟಗಾರರು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್ ಹಾಗೂ ರಜತ್ ಪಾಟಿದಾರ್ ಅವರನ್ನು ತನ್ನಲ್ಲೇ ಉಳಿಸಿಕೊಂಡಿದೆ.

3 / 11
ಮುಂಬೈ ಇಂಡಿಯನ್ಸ್ ತಂಡ 5 ಆಟಗಾರರನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕೈರೊನ್‌ ಪೊಲಾರ್ಡ್‌ ಹೆಸರು ಕೂಡ ಇರುವುದು ಅಚ್ಚರಿ ಮೂಡಿಸಿದೆ. ಇವರ ಜೊತೆಗೆ ಫ್ಯಾಬಿಯನ್‌ ಆಲೆನ್‌, ಟೈಮಲ್‌ ಮಿಲ್ಸ್‌, ಮಯಾಂಕ್‌ ಮಾರ್ಕಂಡೆ ಹಾಗೂ ಹೃತಿಕ್‌ ಶೋಕಿನ್‌ ಅವರನ್ನು ಮುಂಬೈ ರಿಲೀಸ್ ಮಾಡಿದೆ.

ಮುಂಬೈ ಇಂಡಿಯನ್ಸ್ ತಂಡ 5 ಆಟಗಾರರನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕೈರೊನ್‌ ಪೊಲಾರ್ಡ್‌ ಹೆಸರು ಕೂಡ ಇರುವುದು ಅಚ್ಚರಿ ಮೂಡಿಸಿದೆ. ಇವರ ಜೊತೆಗೆ ಫ್ಯಾಬಿಯನ್‌ ಆಲೆನ್‌, ಟೈಮಲ್‌ ಮಿಲ್ಸ್‌, ಮಯಾಂಕ್‌ ಮಾರ್ಕಂಡೆ ಹಾಗೂ ಹೃತಿಕ್‌ ಶೋಕಿನ್‌ ಅವರನ್ನು ಮುಂಬೈ ರಿಲೀಸ್ ಮಾಡಿದೆ.

4 / 11
ಪಂಜಾಬ್ ಕಿಂಗ್ಸ್ ತಂಡ ಅಚ್ಚರಿ ಎಂಬಂತೆ ಮಯಾಂಕ್ ಅಗರ್ವಾಲ್, ಶಾರುಖ್ ಖಾನ್ ಮತ್ತು ವೆಸ್ಟ್ ಇಂಡೀಸ್ ಆಲ್ ರೌಂಡರ್ ಓಡಿಯನ್ ಸ್ಮಿತ್ಅವರನ್ನು ತಂಡದಿಂದ ಕೈಬಿಡಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ. ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಭಾನುಕಾ ರಾಜಪಕ್ಸೆ, ಅರ್ಶ್‌ದೀಪ್ ಸಿಂಗ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್ ಹಾಗೂ ಸಂದೀಪ್ ಶರ್ಮಾ ಅವರನ್ನು ಉಳಿಸಿಕೊಂಡಿದೆಯಂತೆ.

ಪಂಜಾಬ್ ಕಿಂಗ್ಸ್ ತಂಡ ಅಚ್ಚರಿ ಎಂಬಂತೆ ಮಯಾಂಕ್ ಅಗರ್ವಾಲ್, ಶಾರುಖ್ ಖಾನ್ ಮತ್ತು ವೆಸ್ಟ್ ಇಂಡೀಸ್ ಆಲ್ ರೌಂಡರ್ ಓಡಿಯನ್ ಸ್ಮಿತ್ಅವರನ್ನು ತಂಡದಿಂದ ಕೈಬಿಡಲು ಸಜ್ಜಾಗಿದ್ದಾರೆ ಎಂದು ವರದಿಯಾಗಿದೆ. ಶಿಖರ್ ಧವನ್, ಜಾನಿ ಬೈರ್‌ಸ್ಟೋವ್, ಭಾನುಕಾ ರಾಜಪಕ್ಸೆ, ಅರ್ಶ್‌ದೀಪ್ ಸಿಂಗ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಕಗಿಸೊ ರಬಾಡ, ನಾಥನ್ ಎಲ್ಲಿಸ್, ರಾಹುಲ್ ಚಾಹರ್ ಹಾಗೂ ಸಂದೀಪ್ ಶರ್ಮಾ ಅವರನ್ನು ಉಳಿಸಿಕೊಂಡಿದೆಯಂತೆ.

5 / 11
ಇತ್ತ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕ್ರಿಸ್ ಜೋರ್ಡಾನ್, ಆಡಮ್ ಮಿಲ್ನೆ, ನಾರಾಯಣ್ ಜಗದೀಶನ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ತಂಡದಿಂದ ಕೈಬಿಟ್ಟಿದೆ. ಅಂತೆಯೆ ಗುಜರಾತ್ ಟೈಟಾನ್ಸ್ ಬಿಡುಗಡೆ ಮಾಡಿದ ಆಟಗಾರರು ಮ್ಯಾಥ್ಯೂ ವೇಡ್, ವಿಜಯ್ ಶಂಕರ್, ಗುರುಕೀರತ್ ಮನ್ ಸಿಂಗ್, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ನೂರ್ ಅಹ್ಮದ್, ಸಾಯಿ ಕಿಶೋರ್, ವರುಣ್ ಆರುಣ್ ಆಗಿದ್ದಾರೆ.

ಇತ್ತ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕ್ರಿಸ್ ಜೋರ್ಡಾನ್, ಆಡಮ್ ಮಿಲ್ನೆ, ನಾರಾಯಣ್ ಜಗದೀಶನ್ ಮತ್ತು ಮಿಚೆಲ್ ಸ್ಯಾಂಟ್ನರ್ ಅವರನ್ನು ತಂಡದಿಂದ ಕೈಬಿಟ್ಟಿದೆ. ಅಂತೆಯೆ ಗುಜರಾತ್ ಟೈಟಾನ್ಸ್ ಬಿಡುಗಡೆ ಮಾಡಿದ ಆಟಗಾರರು ಮ್ಯಾಥ್ಯೂ ವೇಡ್, ವಿಜಯ್ ಶಂಕರ್, ಗುರುಕೀರತ್ ಮನ್ ಸಿಂಗ್, ಜಯಂತ್ ಯಾದವ್, ಪ್ರದೀಪ್ ಸಾಂಗ್ವಾನ್, ನೂರ್ ಅಹ್ಮದ್, ಸಾಯಿ ಕಿಶೋರ್, ವರುಣ್ ಆರುಣ್ ಆಗಿದ್ದಾರೆ.

6 / 11
ಲಕ್ನೋ ಸೂಪರ್ ಜೈಂಟ್ಸ್ ತಂಡ ಜೇಸನ್ ಹೋಲ್ಡರ್, ಮನೀಶ್ ಪಾಂಡೆ ಮತ್ತು ಮರ್ಕಸ್ ಸ್ಟೋಯಿನಿಸ್ ಅವರನ್ನು ರಿಲೀಸ್ ಮಾಡಲಿದೆ. ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ಎವಿನ್ ಲೂಯಿಸ್, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹ್ಸಿನ್ ಖಾನ್, ಆಯುಷ್ ಬದೋನಿ ತಂಡದಲ್ಲಿ ಇರಲಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ ತಂಡ ಜೇಸನ್ ಹೋಲ್ಡರ್, ಮನೀಶ್ ಪಾಂಡೆ ಮತ್ತು ಮರ್ಕಸ್ ಸ್ಟೋಯಿನಿಸ್ ಅವರನ್ನು ರಿಲೀಸ್ ಮಾಡಲಿದೆ. ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ಎವಿನ್ ಲೂಯಿಸ್, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹ್ಸಿನ್ ಖಾನ್, ಆಯುಷ್ ಬದೋನಿ ತಂಡದಲ್ಲಿ ಇರಲಿದ್ದಾರೆ.

7 / 11
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು: ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ರೋವ್‌ಮನ್ ಪೊವೆಲ್, ಅಕ್ಸರ್ ಪಟೇಲ್, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಅನ್ರಿಚ್ ನಾರ್ಟ್ಜೆ, ಕುಲದೀಪ್ ಯಾದವ್. ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿದ ಆಟಗಾರರು: ಶಾರ್ದೂಲ್ ಠಾಕೂರ್, ಟಿಮ್ ಸಿಫೆರ್ಟ್, ಕೆಎಸ್ ಭರತ್, ಮನ್ ದೀಪ್ ಸಿಂಗ್ ಹಾಗೂ ಅಶ್ವಿನ್ ಹೆಬ್ಬಾರ್ ವರನ್ನು ರಿಲೀಸ್ ಮಾಡಿದೆ.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡಿರುವ ಆಟಗಾರರು: ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ರೋವ್‌ಮನ್ ಪೊವೆಲ್, ಅಕ್ಸರ್ ಪಟೇಲ್, ಮಿಚೆಲ್ ಮಾರ್ಷ್, ಸರ್ಫರಾಜ್ ಖಾನ್, ಅನ್ರಿಚ್ ನಾರ್ಟ್ಜೆ, ಕುಲದೀಪ್ ಯಾದವ್. ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿದ ಆಟಗಾರರು: ಶಾರ್ದೂಲ್ ಠಾಕೂರ್, ಟಿಮ್ ಸಿಫೆರ್ಟ್, ಕೆಎಸ್ ಭರತ್, ಮನ್ ದೀಪ್ ಸಿಂಗ್ ಹಾಗೂ ಅಶ್ವಿನ್ ಹೆಬ್ಬಾರ್ ವರನ್ನು ರಿಲೀಸ್ ಮಾಡಿದೆ.

8 / 11
ರಾಜಸ್ಥಾನ ರಾಯಲ್ಸ್ ತಂಡದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಆದರೆ, ಕನ್ನಡಿಗ ದೇವದತ್ ಪಡಿಕ್ಕಲ್ ಅವರನ್ನು ಬಿಡುಗಡೆ ಮಾಡಲು ತಂಡ ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ. ಉಳಿದಂತೆ ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಲ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ಜೇಮ್ಸ್ ನೀಶಮ್, ಪ್ರಸಿದ್ಧ್ ಕೃಷ್ಣ, ಒಬೆದ್ ಮೆಕಾಯ್ ತಂಡದಲ್ಲಿ ಇರಲಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಆದರೆ, ಕನ್ನಡಿಗ ದೇವದತ್ ಪಡಿಕ್ಕಲ್ ಅವರನ್ನು ಬಿಡುಗಡೆ ಮಾಡಲು ತಂಡ ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ. ಉಳಿದಂತೆ ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಲ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ಜೇಮ್ಸ್ ನೀಶಮ್, ಪ್ರಸಿದ್ಧ್ ಕೃಷ್ಣ, ಒಬೆದ್ ಮೆಕಾಯ್ ತಂಡದಲ್ಲಿ ಇರಲಿದ್ದಾರೆ.

9 / 11
ಕೋಲ್ಕತ್ತಾ ನೈಟ್ ರೈಡರ್ಸ್ ಶಾರ್ದೂಲ್ ಠಾಕೂರ್ ಅವರನ್ನು ಟ್ರೇಡಿಂಗ್ ಮೂಲಕ ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇವರನ್ನು ಖರೀದಿಸಲು ಕೆಕೆಆರ್ ಜೊತೆಗೆ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಂದೆ ಬಂದವು. ಆದರೆ ಅಂತಿಮವಾಗಿ ಶಾರ್ದೂಲ್ ಕೆಕೆಆರ್ ಪಾಲಾಗಿದ್ದಾರೆ. ಇವರ ಜೊತೆಗೆ ಲೂಕಿ ಫರ್ಗುಸನ್ ಮತ್ತು ರೆಹ್ಮಾನುಲ್ಲ ಗುರ್ಬಜ್ ಕೂಡ ಕೆಕೆಆರ್ ಸೇರಿಕೊಂಡಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್ ಶಾರ್ದೂಲ್ ಠಾಕೂರ್ ಅವರನ್ನು ಟ್ರೇಡಿಂಗ್ ಮೂಲಕ ತನ್ನ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇವರನ್ನು ಖರೀದಿಸಲು ಕೆಕೆಆರ್ ಜೊತೆಗೆ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಂದೆ ಬಂದವು. ಆದರೆ ಅಂತಿಮವಾಗಿ ಶಾರ್ದೂಲ್ ಕೆಕೆಆರ್ ಪಾಲಾಗಿದ್ದಾರೆ. ಇವರ ಜೊತೆಗೆ ಲೂಕಿ ಫರ್ಗುಸನ್ ಮತ್ತು ರೆಹ್ಮಾನುಲ್ಲ ಗುರ್ಬಜ್ ಕೂಡ ಕೆಕೆಆರ್ ಸೇರಿಕೊಂಡಿದ್ದಾರೆ.

10 / 11
ಸನ್​ರೈಸರ್ಸ್ ಹೈದರಾಬಾದ್ ತಂಡ ಕೇನ್ ವಿಲಿಯಮ್ಸನ್ ಮತ್ತು ನಿಕೋಲಸ್ ಪೂರನ್ ಅವರನ್ನು ತಂಡದಿಂದ ಕೈಬಿಡುವ ತೀರ್ಮಾನ ಮಾಡಿಕೊಂಡಿದೆಯಂತೆ.

ಸನ್​ರೈಸರ್ಸ್ ಹೈದರಾಬಾದ್ ತಂಡ ಕೇನ್ ವಿಲಿಯಮ್ಸನ್ ಮತ್ತು ನಿಕೋಲಸ್ ಪೂರನ್ ಅವರನ್ನು ತಂಡದಿಂದ ಕೈಬಿಡುವ ತೀರ್ಮಾನ ಮಾಡಿಕೊಂಡಿದೆಯಂತೆ.

11 / 11

Published On - 8:34 am, Tue, 15 November 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ