AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಹಿಂದೆಂದೂ ಕಂಡರಿಯದ ಚೇಸಿಂಗ್: ಐಪಿಎಲ್​ನಲ್ಲಿ ದಾಖಲೆ ನಿರ್ಮಿಸಿದ ರಿಂಕು ಸಿಂಗ್

Rinku Singh Record: ಯಶ್ ದಯಾಳ್ ಎಸೆದ ಕೊನೆಯ ಓವರ್​ನ 5 ಎಸೆತಗಳಿಗೆ ಬ್ಯಾಕ್ ಟು ಬ್ಯಾಕ್ 5 ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟರು.

TV9 Web
| Edited By: |

Updated on: Apr 10, 2023 | 7:15 AM

Share
IPL 2023: ಕೊನೆಯ ಓವರ್​ನಲ್ಲಿ 29 ರನ್​ಗಳ ಗುರಿ...ಸ್ಟ್ರೈಕ್​ನಲ್ಲಿ ಉಮೇಶ್ ಯಾದವ್...ಗೆಲುವಿನ ವಿಶ್ವಾಸದಲ್ಲಿ ಗುಜರಾತ್ ಟೈಟಾನ್ಸ್...ಸೋಲುವ ಭೀತಿಯಲ್ಲಿ ಕೊಲ್ಕತ್ತಾ ನೈಟ್​ ರೈಡರ್ಸ್...ಯಶ್ ದಯಾಳ್ ಎಸೆದ ಕೊನೆಯ ಓವರ್​ನ ಮೊದಲ ಎಸೆತದಲ್ಲಿ ಉಮೇಶ್ ಯಾದವ್ 1 ರನ್​ ತೆಗೆದರು....ಆ ಬಳಿಕ ನಡೆದಿದ್ದು ಈಗ ಇತಿಹಾಸ.

IPL 2023: ಕೊನೆಯ ಓವರ್​ನಲ್ಲಿ 29 ರನ್​ಗಳ ಗುರಿ...ಸ್ಟ್ರೈಕ್​ನಲ್ಲಿ ಉಮೇಶ್ ಯಾದವ್...ಗೆಲುವಿನ ವಿಶ್ವಾಸದಲ್ಲಿ ಗುಜರಾತ್ ಟೈಟಾನ್ಸ್...ಸೋಲುವ ಭೀತಿಯಲ್ಲಿ ಕೊಲ್ಕತ್ತಾ ನೈಟ್​ ರೈಡರ್ಸ್...ಯಶ್ ದಯಾಳ್ ಎಸೆದ ಕೊನೆಯ ಓವರ್​ನ ಮೊದಲ ಎಸೆತದಲ್ಲಿ ಉಮೇಶ್ ಯಾದವ್ 1 ರನ್​ ತೆಗೆದರು....ಆ ಬಳಿಕ ನಡೆದಿದ್ದು ಈಗ ಇತಿಹಾಸ.

1 / 7
ಹೌದು, ಐಪಿಎಲ್​ ಇತಿಹಾಸದಲ್ಲೇ ಹಿಂದೆಂದೂ ಕಂಡಿಯರದ ಚೇಸಿಂಗ್​ಗೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಸಾಕ್ಷಿಯಾಗಿತ್ತು. ಕೊನೆಯ 5 ಎಸೆತಗಳಲ್ಲಿ 28 ರನ್​ಗಳ ಗುರಿಯನ್ನು ರಿಂಕು ಸಿಂಗ್ ನಿರಾಯಾಸವಾಗಿ ಚಚ್ಚಿ ಬಿಸಾಕಿದ್ದರು. ಇದು ಈಗ ಐತಿಹಾಸಿಕ ದಾಖಲೆ ಎಂಬುದು ವಿಶೇಷ.

ಹೌದು, ಐಪಿಎಲ್​ ಇತಿಹಾಸದಲ್ಲೇ ಹಿಂದೆಂದೂ ಕಂಡಿಯರದ ಚೇಸಿಂಗ್​ಗೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಸಾಕ್ಷಿಯಾಗಿತ್ತು. ಕೊನೆಯ 5 ಎಸೆತಗಳಲ್ಲಿ 28 ರನ್​ಗಳ ಗುರಿಯನ್ನು ರಿಂಕು ಸಿಂಗ್ ನಿರಾಯಾಸವಾಗಿ ಚಚ್ಚಿ ಬಿಸಾಕಿದ್ದರು. ಇದು ಈಗ ಐತಿಹಾಸಿಕ ದಾಖಲೆ ಎಂಬುದು ವಿಶೇಷ.

2 / 7
ಯಶ್ ದಯಾಳ್ ಎಸೆದ ಕೊನೆಯ ಓವರ್​ನ 5 ಎಸೆತಗಳಿಗೆ ಬ್ಯಾಕ್ ಟು ಬ್ಯಾಕ್ 5 ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದರು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಕೊನೆಯ ಓವರ್​ನಲ್ಲಿ ಅತ್ಯಧಿಕ ರನ್​ ಬಾರಿಸಿ ಪಂದ್ಯ ಗೆದ್ದ ದಾಖಲೆ ಕೊಲ್ಕತ್ತಾ ನೈಟ್​ ರೈಡರ್ಸ್ ಪಾಲಾಯಿತು.

ಯಶ್ ದಯಾಳ್ ಎಸೆದ ಕೊನೆಯ ಓವರ್​ನ 5 ಎಸೆತಗಳಿಗೆ ಬ್ಯಾಕ್ ಟು ಬ್ಯಾಕ್ 5 ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ಭರ್ಜರಿ ಜಯ ತಂದುಕೊಟ್ಟಿದ್ದರು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಕೊನೆಯ ಓವರ್​ನಲ್ಲಿ ಅತ್ಯಧಿಕ ರನ್​ ಬಾರಿಸಿ ಪಂದ್ಯ ಗೆದ್ದ ದಾಖಲೆ ಕೊಲ್ಕತ್ತಾ ನೈಟ್​ ರೈಡರ್ಸ್ ಪಾಲಾಯಿತು.

3 / 7
ಇದಕ್ಕೂ ಮುನ್ನ ಈ ದಾಖಲೆ ರೈಸಿಂಗ್ ಪುಣೆ ಜೈಂಟ್ಸ್ ಹೆಸರಿನಲ್ಲಿತ್ತು. 2016 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೊನೆಯ ಓವರ್​ನಲ್ಲಿ 23 ರನ್​ಗಳನ್ನು ಬಾರಿಸಿ ಗೆದ್ದುಕೊಂಡಿದ್ದು ದಾಖಲೆಯಾಗಿತ್ತು.

ಇದಕ್ಕೂ ಮುನ್ನ ಈ ದಾಖಲೆ ರೈಸಿಂಗ್ ಪುಣೆ ಜೈಂಟ್ಸ್ ಹೆಸರಿನಲ್ಲಿತ್ತು. 2016 ರಲ್ಲಿ ರೈಸಿಂಗ್ ಪುಣೆ ಜೈಂಟ್ಸ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಕೊನೆಯ ಓವರ್​ನಲ್ಲಿ 23 ರನ್​ಗಳನ್ನು ಬಾರಿಸಿ ಗೆದ್ದುಕೊಂಡಿದ್ದು ದಾಖಲೆಯಾಗಿತ್ತು.

4 / 7
ಇದೀಗ ರಿಂಕು ಸಿಂಗ್ ಕೊನೆಯ ಓವರ್​ನ 5 ಎಸೆತಗಳಲ್ಲಿ 30 ರನ್​ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಕೊನೆಯ ಓವರ್​ನಲ್ಲಿ 31 ರನ್​ ಕಲೆಹಾಕುವ ಮೂಲಕ ಅಂತಿಮ ಓವರ್​ನಲ್ಲಿ ಅತೀ ಹೆಚ್ಚು ರನ್​ಗಳ ಗುರಿ ಬೆನ್ನತ್ತಿ ಗೆದ್ದ ವಿಶೇಷ ದಾಖಲೆಯನ್ನು ಕೆಕೆಆರ್ ತನ್ನದಾಗಿಸಿಕೊಂಡಿದೆ.

ಇದೀಗ ರಿಂಕು ಸಿಂಗ್ ಕೊನೆಯ ಓವರ್​ನ 5 ಎಸೆತಗಳಲ್ಲಿ 30 ರನ್​ ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಕೊನೆಯ ಓವರ್​ನಲ್ಲಿ 31 ರನ್​ ಕಲೆಹಾಕುವ ಮೂಲಕ ಅಂತಿಮ ಓವರ್​ನಲ್ಲಿ ಅತೀ ಹೆಚ್ಚು ರನ್​ಗಳ ಗುರಿ ಬೆನ್ನತ್ತಿ ಗೆದ್ದ ವಿಶೇಷ ದಾಖಲೆಯನ್ನು ಕೆಕೆಆರ್ ತನ್ನದಾಗಿಸಿಕೊಂಡಿದೆ.

5 / 7
ಇದಲ್ಲದೆ ಐಪಿಎಲ್​ನಲ್ಲಿ ಒಂದೇ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿದ ಸಿಕ್ಸರ್ ಸರದಾರರ ಪಟ್ಟಿಗೂ ರಿಂಕು ಸಿಂಗ್ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್, ರಾಹುಲ್ ತೆವಾಠಿಯಾ, ರವೀಂದ್ರ ಜಡೇಜಾ ಮಾತ್ರ ಒಂದೇ ಓವರ್​ನಲ್ಲಿ 5 ಸಿಕ್ಸ್​ಗಳನ್ನು ಸಿಡಿಸಿದ್ದರು. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ರಿಂಕು ಸಿಂಗ್.

ಇದಲ್ಲದೆ ಐಪಿಎಲ್​ನಲ್ಲಿ ಒಂದೇ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿದ ಸಿಕ್ಸರ್ ಸರದಾರರ ಪಟ್ಟಿಗೂ ರಿಂಕು ಸಿಂಗ್ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್, ರಾಹುಲ್ ತೆವಾಠಿಯಾ, ರವೀಂದ್ರ ಜಡೇಜಾ ಮಾತ್ರ ಒಂದೇ ಓವರ್​ನಲ್ಲಿ 5 ಸಿಕ್ಸ್​ಗಳನ್ನು ಸಿಡಿಸಿದ್ದರು. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ರಿಂಕು ಸಿಂಗ್.

6 / 7
ಹಾಗೆಯೇ ಐಪಿಎಲ್​ನ ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಪಂದ್ಯವನ್ನು ಗೆಲ್ಲಿಸಿಕೊಟ್ಟ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ರಿಂಕು ಸಿಂಗ್ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಅಂತಿಮ ಓವರ್​ನಲ್ಲಿ ಅಬ್ಬರಿಸುವ ಮೂಲಕ ರಿಂಕು ಸಿಂಗ್ ಇದೀಗ ಹಲವು ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ.

ಹಾಗೆಯೇ ಐಪಿಎಲ್​ನ ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಪಂದ್ಯವನ್ನು ಗೆಲ್ಲಿಸಿಕೊಟ್ಟ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ರಿಂಕು ಸಿಂಗ್ ಪಾತ್ರರಾಗಿದ್ದಾರೆ. ಒಟ್ಟಿನಲ್ಲಿ ಅಂತಿಮ ಓವರ್​ನಲ್ಲಿ ಅಬ್ಬರಿಸುವ ಮೂಲಕ ರಿಂಕು ಸಿಂಗ್ ಇದೀಗ ಹಲವು ದಾಖಲೆಗಳನ್ನು ನಿರ್ಮಿಸಿರುವುದು ವಿಶೇಷ.

7 / 7
Follow Us
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ