IPL 2023: ಬೆಂಗಳೂರಿನಲ್ಲೇ ಆರ್​ಸಿಬಿ ಸೋಲಿಸಲು ಪಣತೊಟ್ಟ ಪಂತ್..!

IPL 2023: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಂಡದ ತರಬೇತಿಯ ಅವಧಿಯಲ್ಲಿ ತಂಡದೊಂದಿಗೆ ಕಾಣಿಸಿಕೊಂಡ ಪಂತ್ ಪಂದ್ಯಕ್ಕೂ ಮುನ್ನ ತಂಡವನ್ನು ಗೆಲ್ಲುವಂತೆ ಪ್ರೋತ್ಸಾಹಿಸಿದರು.

|

Updated on:Apr 14, 2023 | 8:30 PM

ಐಪಿಎಲ್​ನ 20ನೇ ಪಂದ್ಯದಲ್ಲಿ ಎರಡು ಸೋತ ತಂಡಗಳು ಮುಖಾಮುಖಿಯಾಗುತ್ತಿವೆ. ಡಬಲ್ ಹೆಡರ್ ದಿನವಾದ ಶನಿವಾರದಂದು ಮೊದಲ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ.

ಐಪಿಎಲ್​ನ 20ನೇ ಪಂದ್ಯದಲ್ಲಿ ಎರಡು ಸೋತ ತಂಡಗಳು ಮುಖಾಮುಖಿಯಾಗುತ್ತಿವೆ. ಡಬಲ್ ಹೆಡರ್ ದಿನವಾದ ಶನಿವಾರದಂದು ಮೊದಲ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೇವಿಡ್ ವಾರ್ನರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ.

1 / 7
ಇನ್ನು ಉಭಯ ತಂಡಗಳು ಈ ಟೂರ್ನಿಯಲ್ಲಿ ಸೋಲಿನ ಸರಪಳಿಗೆ ಸಿಲುಕಿದ್ದು, ಪ್ರಸಕ್ತ ಐಪಿಎಲ್‌ನಲ್ಲಿ ಆರ್‌ಸಿಬಿ ಇದುವರೆಗೆ 3 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 1ರಲ್ಲಿ ಗೆದ್ದು 2ರಲ್ಲಿ ಸೋತಿದೆ. ಮತ್ತೊಂದೆಡೆ, ವಾರ್ನರ್‌ ನಾಯಕತ್ವದ ಡೆಲ್ಲಿ ತಂಡ ಆಡಿದ 4 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಗೆಲುವು ಅವಶ್ಯಕವಾಗಿದೆ.

ಇನ್ನು ಉಭಯ ತಂಡಗಳು ಈ ಟೂರ್ನಿಯಲ್ಲಿ ಸೋಲಿನ ಸರಪಳಿಗೆ ಸಿಲುಕಿದ್ದು, ಪ್ರಸಕ್ತ ಐಪಿಎಲ್‌ನಲ್ಲಿ ಆರ್‌ಸಿಬಿ ಇದುವರೆಗೆ 3 ಪಂದ್ಯಗಳನ್ನು ಆಡಿದ್ದು, ಇದರಲ್ಲಿ 1ರಲ್ಲಿ ಗೆದ್ದು 2ರಲ್ಲಿ ಸೋತಿದೆ. ಮತ್ತೊಂದೆಡೆ, ವಾರ್ನರ್‌ ನಾಯಕತ್ವದ ಡೆಲ್ಲಿ ತಂಡ ಆಡಿದ 4 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿಲ್ಲ. ಹೀಗಾಗಿ ಉಭಯ ತಂಡಗಳಿಗೂ ಗೆಲುವು ಅವಶ್ಯಕವಾಗಿದೆ.

2 / 7
ಅದರಲ್ಲೂ ಆಡಿರುವ 4 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿರದ ಡೆಲ್ಲಿ ತಂಡಕ್ಕೆ ಗೆಲುವು ಅಗತ್ಯವಾಗಿದೆ. ಹೀಗಾಗಿ ತಂಡವನ್ನು ಹುರಿದುಂಬಿಸುವ ಸಲುವಾಗಿ ತಂಡದ ಮಾಜಿ ನಾಯಕ ರಿಷಭ್ ಪಂತ್ ಇಂಜುರಿಯ ನಡುವೆಯೂ ಡೆಲ್ಲಿ ಇಂದ ಬೆಂಗಳೂರಿಗೆ ಬಂದಿದ್ದಾರೆ.

ಅದರಲ್ಲೂ ಆಡಿರುವ 4 ಪಂದ್ಯಗಳಲ್ಲಿ ಒಂದರಲ್ಲೂ ಗೆದ್ದಿರದ ಡೆಲ್ಲಿ ತಂಡಕ್ಕೆ ಗೆಲುವು ಅಗತ್ಯವಾಗಿದೆ. ಹೀಗಾಗಿ ತಂಡವನ್ನು ಹುರಿದುಂಬಿಸುವ ಸಲುವಾಗಿ ತಂಡದ ಮಾಜಿ ನಾಯಕ ರಿಷಭ್ ಪಂತ್ ಇಂಜುರಿಯ ನಡುವೆಯೂ ಡೆಲ್ಲಿ ಇಂದ ಬೆಂಗಳೂರಿಗೆ ಬಂದಿದ್ದಾರೆ.

3 / 7
ಕಳೆದ ವರ್ಷದ ಕೊನೆಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪಂತ್, ಕ್ರಿಕೆಟ್​ನಿಂದ ಕೆಲವು ತಿಂಗಳು ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ. ಆದರೆ ಕ್ರಿಕೆಟ್​ ಮೇಲಿನ ವ್ಯಾಮೋಹದಿಂದಾಗಿ ಪಂತ್ ತನ್ನ ನೆಚ್ಚಿನ ತಂಡವನ್ನು ಪ್ರೋತ್ಸಾಹಿಸುವ ಕೆಲವನ್ನು ಮಾಡುತ್ತಿದ್ದಾರೆ.

ಕಳೆದ ವರ್ಷದ ಕೊನೆಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪಂತ್, ಕ್ರಿಕೆಟ್​ನಿಂದ ಕೆಲವು ತಿಂಗಳು ಕ್ರಿಕೆಟ್​ನಿಂದ ದೂರ ಉಳಿದಿದ್ದಾರೆ. ಆದರೆ ಕ್ರಿಕೆಟ್​ ಮೇಲಿನ ವ್ಯಾಮೋಹದಿಂದಾಗಿ ಪಂತ್ ತನ್ನ ನೆಚ್ಚಿನ ತಂಡವನ್ನು ಪ್ರೋತ್ಸಾಹಿಸುವ ಕೆಲವನ್ನು ಮಾಡುತ್ತಿದ್ದಾರೆ.

4 / 7
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಂಡದ ತರಬೇತಿಯ ಅವಧಿಯಲ್ಲಿ ತಂಡದೊಂದಿಗೆ ಕಾಣಿಸಿಕೊಂಡ ಪಂತ್ ಪಂದ್ಯಕ್ಕೂ ಮುನ್ನ ತಂಡವನ್ನು ಗೆಲ್ಲುವಂತೆ ಪ್ರೋತ್ಸಾಹಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಂಡದ ತರಬೇತಿಯ ಅವಧಿಯಲ್ಲಿ ತಂಡದೊಂದಿಗೆ ಕಾಣಿಸಿಕೊಂಡ ಪಂತ್ ಪಂದ್ಯಕ್ಕೂ ಮುನ್ನ ತಂಡವನ್ನು ಗೆಲ್ಲುವಂತೆ ಪ್ರೋತ್ಸಾಹಿಸಿದರು.

5 / 7
ಈ ಹಿಂದೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಪ್ರೋತ್ಸಾಹಿಸಲು ಪಂತ್ ಕ್ರೀಡಾಂಗಣಕ್ಕೆ ಆಗಮಿಸಿದ್ದರು.

ಈ ಹಿಂದೆ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ತಂಡವನ್ನು ಪ್ರೋತ್ಸಾಹಿಸಲು ಪಂತ್ ಕ್ರೀಡಾಂಗಣಕ್ಕೆ ಆಗಮಿಸಿದ್ದರು.

6 / 7
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗುತ್ತದೆ. ಪಂದ್ಯದ ಟಾಸ್ 3 ಗಂಟೆಗೆ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯವು ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗುತ್ತದೆ. ಪಂದ್ಯದ ಟಾಸ್ 3 ಗಂಟೆಗೆ ನಡೆಯಲಿದೆ.

7 / 7

Published On - 8:30 pm, Fri, 14 April 23

Follow us