AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯದ ವೇಳೆ ಕಾಣಿಸಿಕೊಂಡ ರಿಷಭ್ ಪಂತ್

IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕರಾಗಿರುವ ರಿಷಭ್ ಪಂತ್ ಐಪಿಎಲ್‌ನಲ್ಲಿ 98 ಪಂದ್ಯಗಳಿಂದ ಒಟ್ಟು 2838 ರನ್ ಗಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 04, 2023 | 11:58 PM

Share
IPL 2023: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದ ವೇಳೆ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್​ನಲ್ಲಿ ನಡೆದ ಕಾರು ಅಪಘಾತದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿರದ ಪಂತ್, ತಮ್ಮ ತಂಡ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಬೆಂಬಲಿಸಲು ಸ್ಟೇಡಿಯಂಗೆ ಆಗಮಿಸಿದ್ದರು.

IPL 2023: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಪಂದ್ಯದ ವೇಳೆ ರಿಷಭ್ ಪಂತ್ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್​ನಲ್ಲಿ ನಡೆದ ಕಾರು ಅಪಘಾತದ ಬಳಿಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿರದ ಪಂತ್, ತಮ್ಮ ತಂಡ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಬೆಂಬಲಿಸಲು ಸ್ಟೇಡಿಯಂಗೆ ಆಗಮಿಸಿದ್ದರು.

1 / 7
ಗಾಯದಿಂದ ರಿಷಭ್ ಪಂತ್ ಬಹುತೇಕ ಚೇತರಿಸಿಕೊಂಡಿದ್ದು, ಇದಾಗ್ಯೂ ನಡೆಯಲು ಊರುಗೋಲಿನ ಅವಲಂಭಿಸುತ್ತಿದ್ದಾರೆ. ಕ್ರೀಡಾಂಗಣಕ್ಕೂ ಊರುಗೋಲಿನ ಸಹಾಯದೊಂದಿಗೆ ಆಗಮಿಸಿದ್ದ ಪಂತ್​ ಅವರನ್ನು ಅಭಿಮಾನಿಗಳು ಹರ್ಷೋದ್ಘಾರದೊಂದಿಗೆ ಸ್ವಾಗತಿಸಿದರು.

ಗಾಯದಿಂದ ರಿಷಭ್ ಪಂತ್ ಬಹುತೇಕ ಚೇತರಿಸಿಕೊಂಡಿದ್ದು, ಇದಾಗ್ಯೂ ನಡೆಯಲು ಊರುಗೋಲಿನ ಅವಲಂಭಿಸುತ್ತಿದ್ದಾರೆ. ಕ್ರೀಡಾಂಗಣಕ್ಕೂ ಊರುಗೋಲಿನ ಸಹಾಯದೊಂದಿಗೆ ಆಗಮಿಸಿದ್ದ ಪಂತ್​ ಅವರನ್ನು ಅಭಿಮಾನಿಗಳು ಹರ್ಷೋದ್ಘಾರದೊಂದಿಗೆ ಸ್ವಾಗತಿಸಿದರು.

2 / 7
ಇದೇ ವೇಳೆ ಅಭಿಮಾನಿಗಳತ್ತ ರಿಷಭ್ ಪಂತ್ ಕೈ ಬೀಸಿ ಸಂತಸ ವ್ಯಕ್ತಪಡಿಸಿದರು. ಇನ್ನು ಪಂತ್ ಅವರೊಂದಿಗೆ ಸ್ಟೇಡಿಯಂನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಕಾಣಿಕೊಂಡಿದ್ದರು.

ಇದೇ ವೇಳೆ ಅಭಿಮಾನಿಗಳತ್ತ ರಿಷಭ್ ಪಂತ್ ಕೈ ಬೀಸಿ ಸಂತಸ ವ್ಯಕ್ತಪಡಿಸಿದರು. ಇನ್ನು ಪಂತ್ ಅವರೊಂದಿಗೆ ಸ್ಟೇಡಿಯಂನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಕಾಣಿಕೊಂಡಿದ್ದರು.

3 / 7
ಇದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಡಗೌಟ್​ನಲ್ಲಿ ರಿಷಭ್ ಪಂತ್ ಅವರ ಜೆರ್ಸಿ ಪ್ರದರ್ಶಿಸಿತ್ತು. ಇದೀಗ ಖುದ್ದು ಪಂತ್ ಅವರೇ ಸ್ಟೇಡಿಯಂಗೆ ಆಗಮಿಸಿರುವುದು ನೋಡಿ ಅಭಿಮಾನಿಗಳು ಕೂಡ ಭಾವುಕರಾದರು.

ಇದಕ್ಕೂ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಡಗೌಟ್​ನಲ್ಲಿ ರಿಷಭ್ ಪಂತ್ ಅವರ ಜೆರ್ಸಿ ಪ್ರದರ್ಶಿಸಿತ್ತು. ಇದೀಗ ಖುದ್ದು ಪಂತ್ ಅವರೇ ಸ್ಟೇಡಿಯಂಗೆ ಆಗಮಿಸಿರುವುದು ನೋಡಿ ಅಭಿಮಾನಿಗಳು ಕೂಡ ಭಾವುಕರಾದರು.

4 / 7
ಕಳೆದ ವರ್ಷ ನಡೆದ ರಸ್ತೆ ಅಪಘಾತದಲ್ಲಿ ರಿಷಭ್ ಪಂತ್ ಗಾಯಗೊಂಡಿದ್ದರು. ಡಿಸೆಂಬರ್ 30 ರಂದು ದೆಹಲಿಯಿಂದ ಉತ್ತರ ಖಂಡದ ಹರಿದ್ವಾರದಲ್ಲಿರುವ ರೂರ್ಕಿಯಲ್ಲಿರುವ ತನ್ನ ಮನೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿತ್ತು. ಬಳಿಕ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು.

ಕಳೆದ ವರ್ಷ ನಡೆದ ರಸ್ತೆ ಅಪಘಾತದಲ್ಲಿ ರಿಷಭ್ ಪಂತ್ ಗಾಯಗೊಂಡಿದ್ದರು. ಡಿಸೆಂಬರ್ 30 ರಂದು ದೆಹಲಿಯಿಂದ ಉತ್ತರ ಖಂಡದ ಹರಿದ್ವಾರದಲ್ಲಿರುವ ರೂರ್ಕಿಯಲ್ಲಿರುವ ತನ್ನ ಮನೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿತ್ತು. ಬಳಿಕ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು.

5 / 7
ಕೆಲ ದಿನಗಳ ಚಿಕಿತ್ಸೆಯ ಬಳಿಕ ಪಂತ್ ಅವರನ್ನು ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಗಾಯದಿಂದ ಚೇತರಿಸಿಕೊಂಡಿರುವ ರಿಷಭ್ ಪಂತ್ ಮನೆಯಲ್ಲಿಯೇ ಶುಶ್ರೂಷೆ ಮುಂದುವರೆಸಿದ್ದಾರೆ. ಇದರ ನಡುವೆ ಐಪಿಎಲ್ ಪಂದ್ಯ ವೀಕ್ಷಿಸಲು ಆಗಮಿಸಿರುವುದು ವಿಶೇಷ.

ಕೆಲ ದಿನಗಳ ಚಿಕಿತ್ಸೆಯ ಬಳಿಕ ಪಂತ್ ಅವರನ್ನು ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಗಾಯದಿಂದ ಚೇತರಿಸಿಕೊಂಡಿರುವ ರಿಷಭ್ ಪಂತ್ ಮನೆಯಲ್ಲಿಯೇ ಶುಶ್ರೂಷೆ ಮುಂದುವರೆಸಿದ್ದಾರೆ. ಇದರ ನಡುವೆ ಐಪಿಎಲ್ ಪಂದ್ಯ ವೀಕ್ಷಿಸಲು ಆಗಮಿಸಿರುವುದು ವಿಶೇಷ.

6 / 7
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕರಾಗಿರುವ ರಿಷಭ್ ಪಂತ್  ಐಪಿಎಲ್‌ನಲ್ಲಿ 98 ಪಂದ್ಯಗಳಿಂದ ಒಟ್ಟು 2838 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕ ಮತ್ತು 15 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ. ಸದ್ಯ ಶುಶ್ರೂಷೆಯಲ್ಲಿರುವ ಪಂತ್ ಅವರು ಮತ್ತೆ ಮೈದಾನಕ್ಕಿಳಿಯಲು ಕೆಲ ತಿಂಗಳನ್ನು ತೆಗೆದುಕೊಳ್ಳಬಹುದು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕರಾಗಿರುವ ರಿಷಭ್ ಪಂತ್ ಐಪಿಎಲ್‌ನಲ್ಲಿ 98 ಪಂದ್ಯಗಳಿಂದ ಒಟ್ಟು 2838 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕ ಮತ್ತು 15 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ. ಸದ್ಯ ಶುಶ್ರೂಷೆಯಲ್ಲಿರುವ ಪಂತ್ ಅವರು ಮತ್ತೆ ಮೈದಾನಕ್ಕಿಳಿಯಲು ಕೆಲ ತಿಂಗಳನ್ನು ತೆಗೆದುಕೊಳ್ಳಬಹುದು.

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ