AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಬೆಂಕಿ ಬೌಲಿಂಗ್​ಗೆ ತತ್ತರಿಸಿದ ರಾಜಸ್ಥಾನ್ ರಾಯಲ್ಸ್

IPL 2023 RR vs RCB: ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ 44 ಎಸೆತಗಳಲ್ಲಿ 55 ರನ್ ಬಾರಿಸಿ ಡುಪ್ಲೆಸಿಸ್ ಔಟಾದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್​ವೆಲ್ 33 ಎಸೆತಗಳಲ್ಲಿ 54 ರನ್ ಚಚ್ಚಿದರು.

TV9 Web
| Updated By: ಝಾಹಿರ್ ಯೂಸುಫ್|

Updated on:May 14, 2023 | 6:39 PM

Share
IPL 2023 RR vs RCB: ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.

IPL 2023 RR vs RCB: ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡವು ತನ್ನ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.

1 / 9
ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಉಭಯ ತಂಡಗಳ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಆರ್​ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

2 / 9
ಪವರ್​ಪ್ಲೇನಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ ಆರ್​ಸಿಬಿ ಆರಂಭಿಕರು ಕಲೆಹಾಕಿದ್ದು ಕೇವಲ 42 ರನ್​ಗಳು ಮಾತ್ರ. ಇದಾದ ಬಳಿಕ 19 ಎಸೆತಗಳಲ್ಲಿ 18 ರನ್​ಗಳಿಸಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿ ಔಟಾದರು.

ಪವರ್​ಪ್ಲೇನಲ್ಲಿ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ ಆರ್​ಸಿಬಿ ಆರಂಭಿಕರು ಕಲೆಹಾಕಿದ್ದು ಕೇವಲ 42 ರನ್​ಗಳು ಮಾತ್ರ. ಇದಾದ ಬಳಿಕ 19 ಎಸೆತಗಳಲ್ಲಿ 18 ರನ್​ಗಳಿಸಿದ್ದ ವಿರಾಟ್ ಕೊಹ್ಲಿ ಕ್ಯಾಚ್ ನೀಡಿ ಔಟಾದರು.

3 / 9
ಮತ್ತೊಂದೆಡೆ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ 44 ಎಸೆತಗಳಲ್ಲಿ 55 ರನ್ ಬಾರಿಸಿ ಡುಪ್ಲೆಸಿಸ್ ಔಟಾದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್​ವೆಲ್ 33 ಎಸೆತಗಳಲ್ಲಿ 54 ರನ್ ಚಚ್ಚಿದರು. ಪರಿಣಾಮ ಆರ್​ಸಿಬಿ ತಂಡದ ಮೊತ್ತ 5 ವಿಕೆಟ್ ನಷ್ಟಕ್ಕೆ 171 ಕ್ಕೆ ಬಂದು ನಿಂತಿತು.

ಮತ್ತೊಂದೆಡೆ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ 44 ಎಸೆತಗಳಲ್ಲಿ 55 ರನ್ ಬಾರಿಸಿ ಡುಪ್ಲೆಸಿಸ್ ಔಟಾದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮ್ಯಾಕ್ಸ್​ವೆಲ್ 33 ಎಸೆತಗಳಲ್ಲಿ 54 ರನ್ ಚಚ್ಚಿದರು. ಪರಿಣಾಮ ಆರ್​ಸಿಬಿ ತಂಡದ ಮೊತ್ತ 5 ವಿಕೆಟ್ ನಷ್ಟಕ್ಕೆ 171 ಕ್ಕೆ ಬಂದು ನಿಂತಿತು.

4 / 9
172 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್​ಗೆ ಮೊದಲ ಓವರ್​ನಲ್ಲೇ ಮೊಹಮ್ಮದ್ ಸಿರಾಜ್ ಬಿಗ್ ಶಾಕ್ ನೀಡಿದರು. ಪ್ರಥಮ ಓವರ್​ನ 2ನೇ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ (0) ವಿಕೆಟ್ ಪಡೆದ ಸಿರಾಜ್ ಆರ್​ಸಿಬಿ ತಂಡಕ್ಕೆ ಆರಂಭಿಕ ಯಶಸ್ಸು ತಂದು ಕೊಟ್ಟರು.

172 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ರಾಜಸ್ಥಾನ್ ರಾಯಲ್ಸ್​ಗೆ ಮೊದಲ ಓವರ್​ನಲ್ಲೇ ಮೊಹಮ್ಮದ್ ಸಿರಾಜ್ ಬಿಗ್ ಶಾಕ್ ನೀಡಿದರು. ಪ್ರಥಮ ಓವರ್​ನ 2ನೇ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ (0) ವಿಕೆಟ್ ಪಡೆದ ಸಿರಾಜ್ ಆರ್​ಸಿಬಿ ತಂಡಕ್ಕೆ ಆರಂಭಿಕ ಯಶಸ್ಸು ತಂದು ಕೊಟ್ಟರು.

5 / 9
ಇದರ ಬೆನ್ನಲ್ಲೇ ವೇಯ್ನ್ ಪಾರ್ನೆಲ್ ಜೋಸ್ ಬಟ್ಲರ್​ (0) ಹಾಗೂ ಸಂಜು ಸ್ಯಾಮ್ಸನ್​ (4) ಪೆವಿಲಿಯನ್ ಹಾದಿ ತೋರಿಸಿದರು. ಇನ್ನು ಬ್ರೇಸ್​ವೆಲ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ವಿಕೆಟ್ ಕಬಳಿಸಿದರು.

ಇದರ ಬೆನ್ನಲ್ಲೇ ವೇಯ್ನ್ ಪಾರ್ನೆಲ್ ಜೋಸ್ ಬಟ್ಲರ್​ (0) ಹಾಗೂ ಸಂಜು ಸ್ಯಾಮ್ಸನ್​ (4) ಪೆವಿಲಿಯನ್ ಹಾದಿ ತೋರಿಸಿದರು. ಇನ್ನು ಬ್ರೇಸ್​ವೆಲ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ವಿಕೆಟ್ ಕಬಳಿಸಿದರು.

6 / 9
7 ಓವರ್​ನಲ್ಲಿ ಕೇವಲ 31 ರನ್​ಗಳಿಸಿ 6 ವಿಕೆಟ್ ಕಳೆದುಕೊಂಡು ರಾಜಸ್ಥಾನ್ ರಾಯಲ್ಸ್ ಸೋಲಿನ ಸುಳಿಗೆ ಸಿಲುಕಿದರು. ಇತ್ತ ಸಂಪೂರ್ಣ ಮೇಲುಗೈ ಸಾಧಿಸಿ ಆರ್​ಸಿಬಿ ಶಿಮ್ರಾನ್ ಹೆಟ್ಮೆಯರ್ (35) ವಿಕೆಟ್ ಪಡೆಯುವ ಮೂಲಕ ಗೆಲುವನ್ನು ಖಚಿತಪಡಿಸಿದರು.

7 ಓವರ್​ನಲ್ಲಿ ಕೇವಲ 31 ರನ್​ಗಳಿಸಿ 6 ವಿಕೆಟ್ ಕಳೆದುಕೊಂಡು ರಾಜಸ್ಥಾನ್ ರಾಯಲ್ಸ್ ಸೋಲಿನ ಸುಳಿಗೆ ಸಿಲುಕಿದರು. ಇತ್ತ ಸಂಪೂರ್ಣ ಮೇಲುಗೈ ಸಾಧಿಸಿ ಆರ್​ಸಿಬಿ ಶಿಮ್ರಾನ್ ಹೆಟ್ಮೆಯರ್ (35) ವಿಕೆಟ್ ಪಡೆಯುವ ಮೂಲಕ ಗೆಲುವನ್ನು ಖಚಿತಪಡಿಸಿದರು.

7 / 9
ಅಂತಿಮವಾಗಿ 10.3 ಓವರ್​ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಆರ್​ಸಿಬಿ ತಂಡವು 112 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಅಂತಿಮವಾಗಿ 10.3 ಓವರ್​ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಆರ್​ಸಿಬಿ ತಂಡವು 112 ರನ್​ಗಳ ಭರ್ಜರಿ ಜಯ ಸಾಧಿಸಿದೆ.

8 / 9
ಆರ್​ಸಿಬಿ ಪರ ವೇಯ್ನ್ ಪಾರ್ನೆಲ್​ 3 ಓವರ್​ಗಳಲ್ಲಿ 10 ರನ್ ನೀಡಿ 3 ವಿಕೆಟ್ ಪಡೆದರೆ, ಮೈಕೆಲ್ ಬ್ರೇಸ್​ವೆಲ್, ಕರ್ಣ್​ ಶರ್ಮಾ ತಲಾ 2 ವಿಕೆಟ್ ಹಾಗೂ ಸಿರಾಜ್, ಮ್ಯಾಕ್ಸ್​ವೆಲ್ ತಲಾ 1 ವಿಕೆಟ್ ಕಬಳಿಸಿ ಮಿಂಚಿದರು.

ಆರ್​ಸಿಬಿ ಪರ ವೇಯ್ನ್ ಪಾರ್ನೆಲ್​ 3 ಓವರ್​ಗಳಲ್ಲಿ 10 ರನ್ ನೀಡಿ 3 ವಿಕೆಟ್ ಪಡೆದರೆ, ಮೈಕೆಲ್ ಬ್ರೇಸ್​ವೆಲ್, ಕರ್ಣ್​ ಶರ್ಮಾ ತಲಾ 2 ವಿಕೆಟ್ ಹಾಗೂ ಸಿರಾಜ್, ಮ್ಯಾಕ್ಸ್​ವೆಲ್ ತಲಾ 1 ವಿಕೆಟ್ ಕಬಳಿಸಿ ಮಿಂಚಿದರು.

9 / 9

Published On - 6:23 pm, Sun, 14 May 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!