AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಪಾಲಿಗೆ ಮುಂದಿನ ಪಂದ್ಯ ಯಾಕೆ ಅಷ್ಟೊಂದು ಮುಖ್ಯ ಗೊತ್ತಾ?

IPL 2023 Kannada: ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 12, 2023 | 10:07 PM

IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 14 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 14 ರಂದು ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ.

1 / 7
ಏಕೆಂದರೆ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ 12 ಅಂಕಗಳನ್ನು ಸಂಪಾದಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುಂದಿನ ಪಂದ್ಯದಲ್ಲಿ ಸೋಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ.

ಏಕೆಂದರೆ ಪ್ಲೇಆಫ್​ ರೇಸ್​ನಲ್ಲಿರುವ ಎರಡೂ ತಂಡಗಳಿಗೂ ಈ ಪಂದ್ಯದಲ್ಲಿ ಜಯಗಳಿಸಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ 12 ಅಂಕಗಳನ್ನು ಸಂಪಾದಿಸಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುಂದಿನ ಪಂದ್ಯದಲ್ಲಿ ಸೋಲಿಸಿದರೆ ಆರ್​ಸಿಬಿ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ.

2 / 7
ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಅಲ್ಲದೆ ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದು.

ಈ ಮೂಲಕ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರುವ ಅವಕಾಶ ಆರ್​ಸಿಬಿ ತಂಡಕ್ಕೆ ಸಿಗಲಿದೆ. ಅಲ್ಲದೆ ಆರ್​ಸಿಬಿ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಮಾತ್ರ ಪ್ಲೇಆಫ್ ರೇಸ್​ನಲ್ಲಿ ಉಳಿದುಕೊಳ್ಳಬಹುದು.

3 / 7
ಅದರಲ್ಲೂ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರಲು ಸುವರ್ಣಾವಕಾಶ ದೊರೆಯಲಿದೆ.

ಅದರಲ್ಲೂ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ 5ನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್​ ತಂಡವು ಮುಂದಿನ 3 ಪಂದ್ಯಗಳಲ್ಲಿ ಒಂದರಲ್ಲಿ ಸೋತರೆ, ಆರ್​ಸಿಬಿ ತಂಡಕ್ಕೆ ಪ್ಲೇಆಫ್ ಹಂತಕ್ಕೇರಲು ಸುವರ್ಣಾವಕಾಶ ದೊರೆಯಲಿದೆ.

4 / 7
ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೇಲೇರಬಹುದು. ಅಲ್ಲದೆ ಸನ್​​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ ಹಂತಕ್ಕೇರುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು.

ಅದರಂತೆ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೇಲೇರಬಹುದು. ಅಲ್ಲದೆ ಸನ್​​ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ ಹಂತಕ್ಕೇರುವ ಅವಕಾಶವನ್ನು ಸೃಷ್ಟಿಸಿಕೊಳ್ಳಬಹುದು.

5 / 7
ಇಲ್ಲಿ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್​ನೊಂದಿಗೆ ಗೆಲ್ಲುವ ಮೂಲಕ ಆರ್​ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶ ಇರಲಿದೆ. ಒಂದು ಆರ್​ಆರ್ ವಿರುದ್ಧ ಆರ್​ಸಿಬಿ ಸೋತರೆ ಪ್ಲೇಆಫ್ ಆಸೆ ಬಹುತೇಕ ಕಮರಲಿದೆ.

ಇಲ್ಲಿ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ನೆಟ್ ರನ್​ ರೇಟ್ ಟಾರ್ಗೆಟ್​ನೊಂದಿಗೆ ಗೆಲ್ಲುವ ಮೂಲಕ ಆರ್​ಸಿಬಿಗೆ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶ ಇರಲಿದೆ. ಒಂದು ಆರ್​ಆರ್ ವಿರುದ್ಧ ಆರ್​ಸಿಬಿ ಸೋತರೆ ಪ್ಲೇಆಫ್ ಆಸೆ ಬಹುತೇಕ ಕಮರಲಿದೆ.

6 / 7
ಹೀಗಾಗಿ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಲೇಬೇಕು. ಅಲ್ಲದೆ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕು.

ಹೀಗಾಗಿ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸೋಲುಣಿಸಲೇಬೇಕು. ಅಲ್ಲದೆ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್ ಹೆಚ್ಚಿಸಿಕೊಳ್ಳಬೇಕು.

7 / 7
Follow us
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ