AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ರಿಷಭ್ ಪಂತ್ ಬಳಿಕ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಮತ್ತೋರ್ವ ಆಟಗಾರನಿಗೆ ಗಾಯ..!

IPL 2023 Kannada: ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​: ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್.

TV9 Web
| Edited By: |

Updated on: Feb 26, 2023 | 11:58 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೂ ಮುನ್ನ ಆಟಗಾರರ ಗಾಯದ ಸಮಸ್ಯೆಗಳು ಮುನ್ನಲೆಗೆ ಬರುತ್ತಿದೆ. ಈಗಾಗಲೇ ಅಪಘಾತದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಟೂರ್ನಿ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಮತ್ತೋರ್ವ ಆಟಗಾರ ಗಾಯಗೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೂ ಮುನ್ನ ಆಟಗಾರರ ಗಾಯದ ಸಮಸ್ಯೆಗಳು ಮುನ್ನಲೆಗೆ ಬರುತ್ತಿದೆ. ಈಗಾಗಲೇ ಅಪಘಾತದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಟೂರ್ನಿ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಮತ್ತೋರ್ವ ಆಟಗಾರ ಗಾಯಗೊಂಡಿದ್ದಾರೆ.

1 / 6
ಹೌದು, ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಯುವ ಬ್ಯಾಟರ್ ಸರ್ಫರಾಝ್ ಖಾನ್ ಅಭ್ಯಾಸದ ವೇಳೆ ಗಾಯ ಮಾಡಿಕೊಂಡಿದ್ದಾರೆ. ಡೆಲ್ಲಿ ತಂಡದ ಅಭ್ಯಾಸ ಶಿಬಿರದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಸರ್ಫರಾಝ್ ಅವರ ಎಡಗೈ ತೋರು ಬೆರಳಿಗೆ ಗಾಯವಾಗಿದೆ. ಹೀಗಾಗಿ ಅಭ್ಯಾಸವನ್ನು ನಿಲ್ಲಿಸಿದ್ದಾರೆ.

ಹೌದು, ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಯುವ ಬ್ಯಾಟರ್ ಸರ್ಫರಾಝ್ ಖಾನ್ ಅಭ್ಯಾಸದ ವೇಳೆ ಗಾಯ ಮಾಡಿಕೊಂಡಿದ್ದಾರೆ. ಡೆಲ್ಲಿ ತಂಡದ ಅಭ್ಯಾಸ ಶಿಬಿರದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಸರ್ಫರಾಝ್ ಅವರ ಎಡಗೈ ತೋರು ಬೆರಳಿಗೆ ಗಾಯವಾಗಿದೆ. ಹೀಗಾಗಿ ಅಭ್ಯಾಸವನ್ನು ನಿಲ್ಲಿಸಿದ್ದಾರೆ.

2 / 6
ಇನ್ನು ಗಾಯದ ಕಾರಣ ಸರ್ಫರಾಝ್ ಖಾನ್ ಇರಾನಿ ಕಪ್ ಟೂರ್ನಿಯಿಂಂದ ಹೊರಗುಳಿದಿದ್ದಾರೆ. ಇರಾನಿ ಕಪ್​ಗಾಗಿ ಆಯ್ಕೆ ಮಾಡಲಾದ ಶೇಷ ಭಾರತ ತಂಡದಲ್ಲಿ ಸರ್ಫರಾಝ್ ಆಯ್ಕೆಯಾಗಬೇಕಿತ್ತು. ಆದರೆ ಬೆರಳಿಗೆ ಗಾಯವಾಗಿರುವ ಕಾರಣ ಈ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇನ್ನು ಗಾಯದ ಕಾರಣ ಸರ್ಫರಾಝ್ ಖಾನ್ ಇರಾನಿ ಕಪ್ ಟೂರ್ನಿಯಿಂಂದ ಹೊರಗುಳಿದಿದ್ದಾರೆ. ಇರಾನಿ ಕಪ್​ಗಾಗಿ ಆಯ್ಕೆ ಮಾಡಲಾದ ಶೇಷ ಭಾರತ ತಂಡದಲ್ಲಿ ಸರ್ಫರಾಝ್ ಆಯ್ಕೆಯಾಗಬೇಕಿತ್ತು. ಆದರೆ ಬೆರಳಿಗೆ ಗಾಯವಾಗಿರುವ ಕಾರಣ ಈ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

3 / 6
ತೋರು ಬೆರಳಿನ ಗಾಯವು ತುಸು ಗಂಭೀರವಾಗಿದ್ದು, ಹೀಗಾಗಿ ಈಡನ್​ ಗಾರ್ಡನ್ಸ್ ಮೈದಾನದಲ್ಲಿ ಭಾನುವಾರ ನಡೆದ ಅಭ್ಯಾಸ ಪಂದ್ಯದಲ್ಲಿ ಸರ್ಫರಾಝ್ ಭಾಗವಹಿಸಿರಲಿಲ್ಲ. ಸದ್ಯ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿರುವ ಯುವ ದಾಂಡಿಗ ಮಾರ್ಚ್ 31 ರೊಳಗೆ ಗುಣಮುಖರಾಗುವ ವಿಶ್ವಾಸದಲ್ಲಿದ್ದಾರೆ.

ತೋರು ಬೆರಳಿನ ಗಾಯವು ತುಸು ಗಂಭೀರವಾಗಿದ್ದು, ಹೀಗಾಗಿ ಈಡನ್​ ಗಾರ್ಡನ್ಸ್ ಮೈದಾನದಲ್ಲಿ ಭಾನುವಾರ ನಡೆದ ಅಭ್ಯಾಸ ಪಂದ್ಯದಲ್ಲಿ ಸರ್ಫರಾಝ್ ಭಾಗವಹಿಸಿರಲಿಲ್ಲ. ಸದ್ಯ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿರುವ ಯುವ ದಾಂಡಿಗ ಮಾರ್ಚ್ 31 ರೊಳಗೆ ಗುಣಮುಖರಾಗುವ ವಿಶ್ವಾಸದಲ್ಲಿದ್ದಾರೆ.

4 / 6
ಇತ್ತ ರಿಷಭ್ ಪಂತ್ ಅವರ ಅಲಭ್ಯತೆಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸರ್ಫರಾಝ್ ಖಾನ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಣಕ್ಕಿಳಿಸುವ ಇರಾದೆಯಲ್ಲಿತ್ತು. ಇದೀಗ ಟೂರ್ನಿ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಸರ್ಫರಾಝ್ ಕೂಡ ಗಾಯಗೊಂಡಿರುವುದು ಟೀಮ್ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ.

ಇತ್ತ ರಿಷಭ್ ಪಂತ್ ಅವರ ಅಲಭ್ಯತೆಯ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸರ್ಫರಾಝ್ ಖಾನ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್​ ಆಗಿ ಕಣಕ್ಕಿಳಿಸುವ ಇರಾದೆಯಲ್ಲಿತ್ತು. ಇದೀಗ ಟೂರ್ನಿ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಸರ್ಫರಾಝ್ ಕೂಡ ಗಾಯಗೊಂಡಿರುವುದು ಟೀಮ್ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ.

5 / 6
ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​: ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಕುಲದೀಪ್ ಯಾದವ್, ವಿಕಿ ಓಸ್ಟ್ವಾಲ್, ರಿಲೀ ರೊಸೊ, ಮನೀಶ್ ಪಾಂಡೆ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ , ಫಿಲ್ ಸಾಲ್ಟ್ .

ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೀಗಿದೆ​: ಡೇವಿಡ್ ವಾರ್ನರ್, ಪೃಥ್ವಿ ಶಾ, ರಿಪಾಲ್ ಪಟೇಲ್, ರೋವ್‌ಮನ್ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಕ್ ನೋಕಿಯಾ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ, ಮುಸ್ತಫಿಜುರ್ ರೆಹಮಾನ್, ಅಮನ್ ಖಾನ್, ಕುಲದೀಪ್ ಯಾದವ್, ಕುಲದೀಪ್ ಯಾದವ್, ವಿಕಿ ಓಸ್ಟ್ವಾಲ್, ರಿಲೀ ರೊಸೊ, ಮನೀಶ್ ಪಾಂಡೆ, ಮುಖೇಶ್ ಕುಮಾರ್, ಇಶಾಂತ್ ಶರ್ಮಾ , ಫಿಲ್ ಸಾಲ್ಟ್ .

6 / 6
Web contact
Web contact

TV9 Kannada

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ