AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಬೌಲರ್​ಗಳ ಬೆಂಡೆತ್ತಿ ಭರ್ಜರಿ ದಾಖಲೆ ನಿರ್ಮಿಸಿದ ಶಾರ್ದೂಲ್ ಠಾಕೂರ್

IPL 2023 Kannada: ಈ ಪಟ್ಟಿಯಲ್ಲಿ 2012 ರಲ್ಲಿ ಅಜೇಯ 122 ರನ್​ ಬಾರಿಸಿದ ಅಂಬಾಟಿ ರಾಯುಡು-ಕೀರನ್ ಪೊಲಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.

TV9 Web
| Edited By: |

Updated on: Apr 06, 2023 | 11:53 PM

Share
IPL 2023: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಶಾರ್ದೂಲ್ ಠಾಕೂರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡವು 89 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

IPL 2023: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಶಾರ್ದೂಲ್ ಠಾಕೂರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡವು 89 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

1 / 6
ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾರ್ದೂಲ್ ಠಾಕೂರ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿದರು. 12ನೇ ಓವರ್​ವರೆಗೆ ಮೇಲುಗೈ ಸಾಧಿಸಿದ್ದ ಆರ್​ಸಿಬಿ ಬೌಲರ್​ಗಳು ಶಾರ್ದೂಲ್ ಆಗಮನದೊಂದಿಗೆ ಮಂಕಾದರು.

ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾರ್ದೂಲ್ ಠಾಕೂರ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿದರು. 12ನೇ ಓವರ್​ವರೆಗೆ ಮೇಲುಗೈ ಸಾಧಿಸಿದ್ದ ಆರ್​ಸಿಬಿ ಬೌಲರ್​ಗಳು ಶಾರ್ದೂಲ್ ಆಗಮನದೊಂದಿಗೆ ಮಂಕಾದರು.

2 / 6
ಅತ್ತ ಹೊಡಿಬಡಿ ಆಟದೊಂದಿಗೆ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದ ಶಾರ್ದೂಲ್ ಠಾಕೂರ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 29 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ನೊಂದಿಗೆ 68 ರನ್​ಗಳಿಸಿ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು.

ಅತ್ತ ಹೊಡಿಬಡಿ ಆಟದೊಂದಿಗೆ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದ ಶಾರ್ದೂಲ್ ಠಾಕೂರ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 29 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ನೊಂದಿಗೆ 68 ರನ್​ಗಳಿಸಿ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು.

3 / 6
ವಿಶೇಷ ಎಂದರೆ ಈ 68 ರನ್​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಶಾರ್ದೂಲ್ ಠಾಕೂರ್ ಪಾಲಾಗಿದೆ. ಅಲ್ಲದೆ 6 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

ವಿಶೇಷ ಎಂದರೆ ಈ 68 ರನ್​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಶಾರ್ದೂಲ್ ಠಾಕೂರ್ ಪಾಲಾಗಿದೆ. ಅಲ್ಲದೆ 6 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

4 / 6
ಇಲ್ಲದೆ ರಿಂಕು ಸಿಂಗ್ ಜೊತೆಗೂಡಿ 103 ರನ್​ಗಳ ಜೊತೆಯಾಟವಾಡುವ ಮೂಲಕ ಆರ್​ಸಿಬಿ ವಿರುದ್ಧ 6 ವಿಕೆಟ್​ಗೆ ಅತ್ಯಧಿಕ ರನ್​ಗಳಿಸಿ 2ನೇ ಜೋಡಿ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 2012 ರಲ್ಲಿ ಅಜೇಯ 122 ರನ್​ ಬಾರಿಸಿದ ಅಂಬಾಟಿ ರಾಯುಡು-ಕೀರನ್ ಪೊಲಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.

ಇಲ್ಲದೆ ರಿಂಕು ಸಿಂಗ್ ಜೊತೆಗೂಡಿ 103 ರನ್​ಗಳ ಜೊತೆಯಾಟವಾಡುವ ಮೂಲಕ ಆರ್​ಸಿಬಿ ವಿರುದ್ಧ 6 ವಿಕೆಟ್​ಗೆ ಅತ್ಯಧಿಕ ರನ್​ಗಳಿಸಿ 2ನೇ ಜೋಡಿ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 2012 ರಲ್ಲಿ ಅಜೇಯ 122 ರನ್​ ಬಾರಿಸಿದ ಅಂಬಾಟಿ ರಾಯುಡು-ಕೀರನ್ ಪೊಲಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.

5 / 6
ಇದೀಗ ಶಾರ್ದೂಲ್ ಠಾಕೂರ್ ಹಾಗೂ ರಿಂಕು ಸಿಂಗ್ 103 ರನ್​ಗಳ ಭರ್ಜರಿ ಜೊತೆಯಾಟದೊಂದಿಗೆ ಈ ವಿಶೇಷ ದಾಖಲೆ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಶಾರ್ದೂಲ್ ಠಾಕೂರ್ 2 ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

ಇದೀಗ ಶಾರ್ದೂಲ್ ಠಾಕೂರ್ ಹಾಗೂ ರಿಂಕು ಸಿಂಗ್ 103 ರನ್​ಗಳ ಭರ್ಜರಿ ಜೊತೆಯಾಟದೊಂದಿಗೆ ಈ ವಿಶೇಷ ದಾಖಲೆ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಶಾರ್ದೂಲ್ ಠಾಕೂರ್ 2 ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

6 / 6
Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್