AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಬೌಲರ್​ಗಳ ಬೆಂಡೆತ್ತಿ ಭರ್ಜರಿ ದಾಖಲೆ ನಿರ್ಮಿಸಿದ ಶಾರ್ದೂಲ್ ಠಾಕೂರ್

IPL 2023 Kannada: ಈ ಪಟ್ಟಿಯಲ್ಲಿ 2012 ರಲ್ಲಿ ಅಜೇಯ 122 ರನ್​ ಬಾರಿಸಿದ ಅಂಬಾಟಿ ರಾಯುಡು-ಕೀರನ್ ಪೊಲಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 06, 2023 | 11:53 PM

IPL 2023: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಶಾರ್ದೂಲ್ ಠಾಕೂರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡವು 89 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

IPL 2023: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಶಾರ್ದೂಲ್ ಠಾಕೂರ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡವು 89 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

1 / 6
ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾರ್ದೂಲ್ ಠಾಕೂರ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿದರು. 12ನೇ ಓವರ್​ವರೆಗೆ ಮೇಲುಗೈ ಸಾಧಿಸಿದ್ದ ಆರ್​ಸಿಬಿ ಬೌಲರ್​ಗಳು ಶಾರ್ದೂಲ್ ಆಗಮನದೊಂದಿಗೆ ಮಂಕಾದರು.

ಈ ಹಂತದಲ್ಲಿ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾರ್ದೂಲ್ ಠಾಕೂರ್ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿದರು. 12ನೇ ಓವರ್​ವರೆಗೆ ಮೇಲುಗೈ ಸಾಧಿಸಿದ್ದ ಆರ್​ಸಿಬಿ ಬೌಲರ್​ಗಳು ಶಾರ್ದೂಲ್ ಆಗಮನದೊಂದಿಗೆ ಮಂಕಾದರು.

2 / 6
ಅತ್ತ ಹೊಡಿಬಡಿ ಆಟದೊಂದಿಗೆ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದ ಶಾರ್ದೂಲ್ ಠಾಕೂರ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 29 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ನೊಂದಿಗೆ 68 ರನ್​ಗಳಿಸಿ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು.

ಅತ್ತ ಹೊಡಿಬಡಿ ಆಟದೊಂದಿಗೆ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದ ಶಾರ್ದೂಲ್ ಠಾಕೂರ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 29 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ನೊಂದಿಗೆ 68 ರನ್​ಗಳಿಸಿ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು.

3 / 6
ವಿಶೇಷ ಎಂದರೆ ಈ 68 ರನ್​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಶಾರ್ದೂಲ್ ಠಾಕೂರ್ ಪಾಲಾಗಿದೆ. ಅಲ್ಲದೆ 6 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

ವಿಶೇಷ ಎಂದರೆ ಈ 68 ರನ್​ಗಳೊಂದಿಗೆ ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ವಿರುದ್ಧ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ರನ್​ ಕಲೆಹಾಕಿದ ದಾಖಲೆ ಶಾರ್ದೂಲ್ ಠಾಕೂರ್ ಪಾಲಾಗಿದೆ. ಅಲ್ಲದೆ 6 ಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಆರ್​ಸಿಬಿ ವಿರುದ್ಧ ಅತೀ ಹೆಚ್ಚು ರನ್ ಬಾರಿಸಿದ ವಿಶೇಷ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

4 / 6
ಇಲ್ಲದೆ ರಿಂಕು ಸಿಂಗ್ ಜೊತೆಗೂಡಿ 103 ರನ್​ಗಳ ಜೊತೆಯಾಟವಾಡುವ ಮೂಲಕ ಆರ್​ಸಿಬಿ ವಿರುದ್ಧ 6 ವಿಕೆಟ್​ಗೆ ಅತ್ಯಧಿಕ ರನ್​ಗಳಿಸಿ 2ನೇ ಜೋಡಿ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 2012 ರಲ್ಲಿ ಅಜೇಯ 122 ರನ್​ ಬಾರಿಸಿದ ಅಂಬಾಟಿ ರಾಯುಡು-ಕೀರನ್ ಪೊಲಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.

ಇಲ್ಲದೆ ರಿಂಕು ಸಿಂಗ್ ಜೊತೆಗೂಡಿ 103 ರನ್​ಗಳ ಜೊತೆಯಾಟವಾಡುವ ಮೂಲಕ ಆರ್​ಸಿಬಿ ವಿರುದ್ಧ 6 ವಿಕೆಟ್​ಗೆ ಅತ್ಯಧಿಕ ರನ್​ಗಳಿಸಿ 2ನೇ ಜೋಡಿ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 2012 ರಲ್ಲಿ ಅಜೇಯ 122 ರನ್​ ಬಾರಿಸಿದ ಅಂಬಾಟಿ ರಾಯುಡು-ಕೀರನ್ ಪೊಲಾರ್ಡ್ ಅಗ್ರಸ್ಥಾನದಲ್ಲಿದ್ದಾರೆ.

5 / 6
ಇದೀಗ ಶಾರ್ದೂಲ್ ಠಾಕೂರ್ ಹಾಗೂ ರಿಂಕು ಸಿಂಗ್ 103 ರನ್​ಗಳ ಭರ್ಜರಿ ಜೊತೆಯಾಟದೊಂದಿಗೆ ಈ ವಿಶೇಷ ದಾಖಲೆ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಶಾರ್ದೂಲ್ ಠಾಕೂರ್ 2 ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

ಇದೀಗ ಶಾರ್ದೂಲ್ ಠಾಕೂರ್ ಹಾಗೂ ರಿಂಕು ಸಿಂಗ್ 103 ರನ್​ಗಳ ಭರ್ಜರಿ ಜೊತೆಯಾಟದೊಂದಿಗೆ ಈ ವಿಶೇಷ ದಾಖಲೆ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಒಟ್ಟಿನಲ್ಲಿ ಆರ್​ಸಿಬಿ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಶಾರ್ದೂಲ್ ಠಾಕೂರ್ 2 ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

6 / 6
Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ