AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮೂರು ಸಂಭ್ರಮಕ್ಕೆ ಇದೇ ಕಾರಣ: ಬಡ್ಡಿ ಸಮೇತ ತಿರುಗಿಸಿ ಕೊಟ್ಟ ವಿರಾಟ್ ಕೊಹ್ಲಿ

IPL 2023 Kannada: ಈ ಸುಲಭ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ರನ್​ಗಳಿಸಲು ಪರದಾಡಿದರು. ಅದರಲ್ಲೂ ಪ್ರತಿ ವಿಕೆಟ್ ಬೀಳುತ್ತಿದ್ದಂತೆ RCB ಆಟಗಾರ ವಿರಾಟ್ ಕೊಹ್ಲಿಯ (Virat Kohli) ಸಂಭ್ರಮ ಮುಗಿಲು ಮುಟ್ಟಿತ್ತು.

TV9 Web
| Edited By: |

Updated on:May 02, 2023 | 3:56 PM

Share
IPL 2023: ಸೋಮವಾರ ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು 18 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕೇವಲ 126 ರನ್​ ಮಾತ್ರ ಕಲೆಹಾಕಿದ್ದರು.

IPL 2023: ಸೋಮವಾರ ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು 18 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕೇವಲ 126 ರನ್​ ಮಾತ್ರ ಕಲೆಹಾಕಿದ್ದರು.

1 / 8
ಈ ಸುಲಭ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ರನ್​ಗಳಿಸಲು ಪರದಾಡಿದರು. ಅದರಲ್ಲೂ ಪ್ರತಿ ವಿಕೆಟ್ ಬೀಳುತ್ತಿದ್ದಂತೆ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿಯ ಸಂಭ್ರಮ ಮುಗಿಲು ಮುಟ್ಟಿತ್ತು.

ಈ ಸುಲಭ ಗುರಿ ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ರನ್​ಗಳಿಸಲು ಪರದಾಡಿದರು. ಅದರಲ್ಲೂ ಪ್ರತಿ ವಿಕೆಟ್ ಬೀಳುತ್ತಿದ್ದಂತೆ ಆರ್​ಸಿಬಿ ಆಟಗಾರ ವಿರಾಟ್ ಕೊಹ್ಲಿಯ ಸಂಭ್ರಮ ಮುಗಿಲು ಮುಟ್ಟಿತ್ತು.

2 / 8
ಪ್ರತಿ ಸಂಭ್ರಮದಲ್ಲೂ ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಟಾರ್ಗೆಟ್ ಮಾಡಿದ್ದರು. ಅದರಲ್ಲೂ ಕೆಲವೊಮ್ಮೆ ಲಕ್ನೋ ತಂಡದ ಡಗೌಟ್​ನತ್ತ ಮುಖ ಮಾಡಿ ಆಕ್ರೋಶಭರಿತರಾಗಿ ಸಂಭ್ರಮಿಸಿದ್ದರು. ಕೊಹ್ಲಿಯ ಇಂತಹ ಸಂಭ್ರಮಕ್ಕೆ ಮುಖ್ಯ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ನೋ ಆಟಗಾರರ ಸಂಭ್ರಮ.

ಪ್ರತಿ ಸಂಭ್ರಮದಲ್ಲೂ ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಟಾರ್ಗೆಟ್ ಮಾಡಿದ್ದರು. ಅದರಲ್ಲೂ ಕೆಲವೊಮ್ಮೆ ಲಕ್ನೋ ತಂಡದ ಡಗೌಟ್​ನತ್ತ ಮುಖ ಮಾಡಿ ಆಕ್ರೋಶಭರಿತರಾಗಿ ಸಂಭ್ರಮಿಸಿದ್ದರು. ಕೊಹ್ಲಿಯ ಇಂತಹ ಸಂಭ್ರಮಕ್ಕೆ ಮುಖ್ಯ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಲಕ್ನೋ ಆಟಗಾರರ ಸಂಭ್ರಮ.

3 / 8
ಹೌದು, ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​​ 1 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಈ ವೇಳೆ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದ ನಿಕೋಲಸ್ ಪೂರನ್ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಸಂಭ್ರಮಿಸಿದ್ದರು.

ಹೌದು, ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​​ 1 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಈ ವೇಳೆ ಸ್ಪೋಟಕ ಬ್ಯಾಟಿಂಗ್ ನಡೆಸಿದ್ದ ನಿಕೋಲಸ್ ಪೂರನ್ ಫ್ಲೈಯಿಂಗ್ ಕಿಸ್ ನೀಡುವ ಮೂಲಕ ಸಂಭ್ರಮಿಸಿದ್ದರು.

4 / 8
ಇನ್ನು ಪಂದ್ಯ ಗೆಲ್ಲುತ್ತಿದ್ದಂತೆ ರವಿ ಬಿಷ್ಣೋಯ್ ಕೂಡ ಕ್ಯಾಮೆರಾ ನೋಡಿ ಕುಣಿದು ಕುಪ್ಪಳಿಸಿದರು. ಅಲ್ಲದೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಟಾರ್ಗೆಟ್ ಮಾಡಿದ್ದರು.

ಇನ್ನು ಪಂದ್ಯ ಗೆಲ್ಲುತ್ತಿದ್ದಂತೆ ರವಿ ಬಿಷ್ಣೋಯ್ ಕೂಡ ಕ್ಯಾಮೆರಾ ನೋಡಿ ಕುಣಿದು ಕುಪ್ಪಳಿಸಿದರು. ಅಲ್ಲದೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳನ್ನು ಟಾರ್ಗೆಟ್ ಮಾಡಿದ್ದರು.

5 / 8
ಗೆಲುವಿನ ಸಂಭ್ರಮದ ನಡುವೆ ಗಂಭೀರ್ ಆರ್​ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು. ಇದೆಲ್ಲವನ್ನೂ ವೀಕ್ಷಿಸುತ್ತಾ ಅಂದು ವಿರಾಟ್ ಕೊಹ್ಲಿ ಮೈದಾನದಿಂದ ಹೊರ ನಡೆದಿದ್ದರು.

ಗೆಲುವಿನ ಸಂಭ್ರಮದ ನಡುವೆ ಗಂಭೀರ್ ಆರ್​ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು. ಇದೆಲ್ಲವನ್ನೂ ವೀಕ್ಷಿಸುತ್ತಾ ಅಂದು ವಿರಾಟ್ ಕೊಹ್ಲಿ ಮೈದಾನದಿಂದ ಹೊರ ನಡೆದಿದ್ದರು.

6 / 8
ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರು ಮೈದಾನದಲ್ಲೇ ಬಗ್ಗು ಬಡಿಯುವ ಮೂಲಕ ಕಿಂಗ್ ಕೊಹ್ಲಿ ತಿರುಗೇಟು ನೀಡಿದ್ದಾರೆ. ಅದು ಕೂಡ ಗೌತಮ್ ಗಂಭೀರ್​ ಅವರ ಸೈಲೆನ್ಸ್ ಸಂಭ್ರಮ...ನಿಕೋಲಸ್ ಪೂರನ್​ರ ಫ್ಲೈ ಕಿಸ್ ಸೆಲೆಬ್ರೇಷನ್ ಹಾಗೂ ರವಿ ಬಿಷ್ಣೋಯ್ ಅವರ ಆಕ್ರೋಶಭರಿತ ಸಂಭ್ರಮದ ಮೂಲಕ ಎಂಬುದು ವಿಶೇಷ.

ಇದೀಗ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರು ಮೈದಾನದಲ್ಲೇ ಬಗ್ಗು ಬಡಿಯುವ ಮೂಲಕ ಕಿಂಗ್ ಕೊಹ್ಲಿ ತಿರುಗೇಟು ನೀಡಿದ್ದಾರೆ. ಅದು ಕೂಡ ಗೌತಮ್ ಗಂಭೀರ್​ ಅವರ ಸೈಲೆನ್ಸ್ ಸಂಭ್ರಮ...ನಿಕೋಲಸ್ ಪೂರನ್​ರ ಫ್ಲೈ ಕಿಸ್ ಸೆಲೆಬ್ರೇಷನ್ ಹಾಗೂ ರವಿ ಬಿಷ್ಣೋಯ್ ಅವರ ಆಕ್ರೋಶಭರಿತ ಸಂಭ್ರಮದ ಮೂಲಕ ಎಂಬುದು ವಿಶೇಷ.

7 / 8
ಇದೀಗ ವಿರಾಟ್ ಕೊಹ್ಲಿಯ ಈ ಭರ್ಜರಿ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್​ಗೆ ಬಡ್ಡಿ ಸಮೇತ ಈಗ ತಿರುಗಿಸಿಕೊಟ್ಟಿದ್ದಾರೆ ಎಂದು ಆರ್​ಸಿಬಿ ಅಭಿಮಾನಿಗಳು ಈ ಸಂಭ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದೀಗ ವಿರಾಟ್ ಕೊಹ್ಲಿಯ ಈ ಭರ್ಜರಿ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಿಂಗ್ ಕೊಹ್ಲಿ ಲಕ್ನೋ ಸೂಪರ್ ಜೈಂಟ್ಸ್​ಗೆ ಬಡ್ಡಿ ಸಮೇತ ಈಗ ತಿರುಗಿಸಿಕೊಟ್ಟಿದ್ದಾರೆ ಎಂದು ಆರ್​ಸಿಬಿ ಅಭಿಮಾನಿಗಳು ಈ ಸಂಭ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

8 / 8

Published On - 3:56 pm, Tue, 2 May 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್