AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಇಂದು ವಿರಾಟ್ ಕೊಹ್ಲಿ ಶತಕ ಬಾರಿಸಿದ್ರೆ, ಅದು ಗಂಗೂಲಿಗೆ ಕೊಡುವ ದೊಡ್ಡ ಗೌರವ: ಶ್ರೀಶಾಂತ್

IPL 2023 Kannada: ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿರುವ ಗಂಗೂಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: May 06, 2023 | 3:58 PM

IPL 2023: ಐಪಿಎಲ್​ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ರೆ, ಅದು ಸೌರವ್ ಗಂಗೂಲಿಗೆ ನೀಡುವ ದೊಡ್ಡ ಗೌರವ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಶ್ರೀಶಾಂತ್.

IPL 2023: ಐಪಿಎಲ್​ನ 50ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದ್ರೆ, ಅದು ಸೌರವ್ ಗಂಗೂಲಿಗೆ ನೀಡುವ ದೊಡ್ಡ ಗೌರವ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಶ್ರೀಶಾಂತ್.

1 / 8
ಈ ಬಗ್ಗೆ ಮಾತನಾಡಿರುವ ಶ್ರೀಶಾಂತ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಸೌರವ್ ಗಂಗೂಲಿಗೆ ಪರಿಪೂರ್ಣ ಗೌರವ ನೀಡುವ ಅವಕಾಶ ಹೊಂದಿದ್ದಾರೆ. ಒಂದು ವೇಳೆ ಅವರು ಈ ಪಂದ್ಯದಲ್ಲಿ ಶತಕ ಸಿಡಿಸಿದ್ರೆ, ಅದು ದಾದಾಗೆ ಕೊಹ್ಲಿ ನೀಡುವ ಅತಿ ದೊಡ್ಡ ಗೌರವಾಗಿರಲಿದೆ ಎಂದು ಶ್ರೀಶಾಂತ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಶ್ರೀಶಾಂತ್, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಸೌರವ್ ಗಂಗೂಲಿಗೆ ಪರಿಪೂರ್ಣ ಗೌರವ ನೀಡುವ ಅವಕಾಶ ಹೊಂದಿದ್ದಾರೆ. ಒಂದು ವೇಳೆ ಅವರು ಈ ಪಂದ್ಯದಲ್ಲಿ ಶತಕ ಸಿಡಿಸಿದ್ರೆ, ಅದು ದಾದಾಗೆ ಕೊಹ್ಲಿ ನೀಡುವ ಅತಿ ದೊಡ್ಡ ಗೌರವಾಗಿರಲಿದೆ ಎಂದು ಶ್ರೀಶಾಂತ್ ಹೇಳಿದ್ದಾರೆ.

2 / 8
ಮೇಲ್ನೋಟಕ್ಕೆ ಶ್ರೀಶಾಂತ್ ಅವರ ಈ ಹೇಳಿಕೆಯು ಕಿಚಾಯಿಸಿದಂತಿದೆ. ಏಕೆಂದರೆ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ವೈಮನಸ್ಸಿದೆ. ಹೀಗಾಗಿ ಕೊಹ್ಲಿ ಶತಕ ಸಿಡಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೆಂಟರ್ ಆಗಿರುವ ಗಂಗೂಲಿಗೆ ತಿರುಗೇಟು ನೀಡಬಹುದು ಎಂದು ಶ್ರೀಶಾಂತ್ ಪರೋಕ್ಷವಾಗಿ ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಶ್ರೀಶಾಂತ್ ಅವರ ಈ ಹೇಳಿಕೆಯು ಕಿಚಾಯಿಸಿದಂತಿದೆ. ಏಕೆಂದರೆ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ವೈಮನಸ್ಸಿದೆ. ಹೀಗಾಗಿ ಕೊಹ್ಲಿ ಶತಕ ಸಿಡಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೆಂಟರ್ ಆಗಿರುವ ಗಂಗೂಲಿಗೆ ತಿರುಗೇಟು ನೀಡಬಹುದು ಎಂದು ಶ್ರೀಶಾಂತ್ ಪರೋಕ್ಷವಾಗಿ ತಿಳಿಸಿದ್ದಾರೆ.

3 / 8
ಇದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಫೀಲ್ಡಿಂಗ್ ಮಾಡುವಾಗ ಗಂಗೂಲಿಯನ್ನು ಗುರಾಯಿಸಿದ್ದರು. ಅಲ್ಲದೆ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಮತ್ತು ಗಂಗೂಲಿ ಹಸ್ತಲಾಘವ ಮಾಡಿರಲಿಲ್ಲ. ಇದರೊಂದಿಗೆ ಇಬ್ಬರ ನಡುವಣ ಶೀತಮ ಸಮರ ಕೂಡ ಬಹಿರಂಗವಾಗಿತ್ತು.

ಇದಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಫೀಲ್ಡಿಂಗ್ ಮಾಡುವಾಗ ಗಂಗೂಲಿಯನ್ನು ಗುರಾಯಿಸಿದ್ದರು. ಅಲ್ಲದೆ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಮತ್ತು ಗಂಗೂಲಿ ಹಸ್ತಲಾಘವ ಮಾಡಿರಲಿಲ್ಲ. ಇದರೊಂದಿಗೆ ಇಬ್ಬರ ನಡುವಣ ಶೀತಮ ಸಮರ ಕೂಡ ಬಹಿರಂಗವಾಗಿತ್ತು.

4 / 8
ಅಂದಹಾಗೆ ಈ ಶೀತಲ ಸಮರಕ್ಕೆ ಮುಖ್ಯ ಕಾರಣ 2021 ರಲ್ಲಿ ವಿರಾಟ್ ಕೊಹ್ಲಿಯನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ವಜಾಗೊಳಿಸಿದ್ದು. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದದ್ದು ಸೌರವ್ ಗಂಗೂಲಿ.

ಅಂದಹಾಗೆ ಈ ಶೀತಲ ಸಮರಕ್ಕೆ ಮುಖ್ಯ ಕಾರಣ 2021 ರಲ್ಲಿ ವಿರಾಟ್ ಕೊಹ್ಲಿಯನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ವಜಾಗೊಳಿಸಿದ್ದು. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದದ್ದು ಸೌರವ್ ಗಂಗೂಲಿ.

5 / 8
ಅಂದು ನಾಯಕತ್ವದಿಂದ ಕೆಳಗಿಳಿಸುವ ತಮ್ಮ ನಿರ್ಧಾರವನ್ನು ವಿರಾಟ್ ಕೊಹ್ಲಿಗೆ ತಿಳಿಸಲಾಗಿದೆ ಎಂದು ಸೌರವ್ ಗಂಗೂಲಿ ತಿಳಿಸಿದ್ದರು. ಆದರೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ತಂಡದ ನಾಯಕತ್ವದಿಂದ ತೆಗೆದುಹಾಕುವ ಬಗ್ಗೆ ಮುಂಚಿತವಾಗಿ ತಿಳಿಸದೆ ಬಿಸಿಸಿಐ ಸುಳ್ಳು ಹೇಳಿದೆ ಎಂದು ಆರೋಪಿಸಿದ್ದರು.

ಅಂದಹಾಗೆ ಟೀಮ್ ಇಂಡಿಯಾ ನಾಯಕತ್ವದಿಂದ ಕೆಳಗಿಳಿಸಿದ ಬಳಿಕ ವಿರಾಟ್ ಕೊಹ್ಲಿ ಹಾಗೂ ಅಂದಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಶೀತಲ ಸಮರ ಶುರುವಾಗಿತ್ತು. ಇದೀಗ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಗಂಗೂಲಿ ಕೆಳಗಿಳಿದಿದ್ದಾರೆ. ಅಲ್ಲದೆ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಾಗ್ಯೂ ಕೊಹ್ಲಿ-ದಾದಾ ನಡುವಣ ಮುನಿಸು ಮಾತ್ರ ಕೊನೆಗೊಂಡಿಲ್ಲ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

6 / 8
ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಒಂದೂವರೆ ಗಂಟೆಗಳ ಮೊದಲು ಚೇತನ್ ಶರ್ಮಾ ಅವರು ದೂರವಾಣಿ ಮೂಲಕ ಈ ಕ್ರಮದ ಬಗ್ಗೆ ತಿಳಿಸಿದ್ದರು ಎಂದು ಕೊಹ್ಲಿ ಹೇಳಿದ್ದರು. ಈ ಹೇಳಿಕೆಯ ಬಳಿಕ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವಿಚಾರ ಬಹಿರಂಗವಾಗಿತ್ತು.

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ತಂಡವನ್ನು ಆಯ್ಕೆ ಮಾಡುವ ಒಂದೂವರೆ ಗಂಟೆಗಳ ಮೊದಲು ಚೇತನ್ ಶರ್ಮಾ ಅವರು ದೂರವಾಣಿ ಮೂಲಕ ಈ ಕ್ರಮದ ಬಗ್ಗೆ ತಿಳಿಸಿದ್ದರು ಎಂದು ಕೊಹ್ಲಿ ಹೇಳಿದ್ದರು. ಈ ಹೇಳಿಕೆಯ ಬಳಿಕ ವಿರಾಟ್ ಕೊಹ್ಲಿ ಹಾಗೂ ಸೌರವ್ ಗಂಗೂಲಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವಿಚಾರ ಬಹಿರಂಗವಾಗಿತ್ತು.

7 / 8
ಇದೀಗ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿರುವ ಗಂಗೂಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರ ನಡುವೆ ಆರ್​ಸಿಬಿ-ಡೆಲ್ಲಿ ನಡುವಣ ಪಂದ್ಯದ ವೇಳೆ ಇಬ್ಬರು ಮತ್ತೆ ಮುಖಾಮುಖಿಯಾಗಿದ್ದು, ಇದಾಗ್ಯೂ ಕೊಹ್ಲಿ-ದಾದಾ ಹಸ್ತಲಾಘವ ಮಾಡದಿರಲಿಲ್ಲ. ಇದೀಗ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯ ನಡೆಯುತ್ತಿದೆ. ಇದೇ ವೇಳೆ ಶ್ರೀಶಾಂತ್ ಅವರ ಶತಕದ ಗೌರವದ ಹೇಳಿಕೆಯು ಎಲ್ಲರ ಗಮನ ಸೆಳೆದಿದೆ.

ಇದೀಗ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿರುವ ಗಂಗೂಲಿ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರ ನಡುವೆ ಆರ್​ಸಿಬಿ-ಡೆಲ್ಲಿ ನಡುವಣ ಪಂದ್ಯದ ವೇಳೆ ಇಬ್ಬರು ಮತ್ತೆ ಮುಖಾಮುಖಿಯಾಗಿದ್ದು, ಇದಾಗ್ಯೂ ಕೊಹ್ಲಿ-ದಾದಾ ಹಸ್ತಲಾಘವ ಮಾಡದಿರಲಿಲ್ಲ. ಇದೀಗ ಮತ್ತೊಮ್ಮೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯ ನಡೆಯುತ್ತಿದೆ. ಇದೇ ವೇಳೆ ಶ್ರೀಶಾಂತ್ ಅವರ ಶತಕದ ಗೌರವದ ಹೇಳಿಕೆಯು ಎಲ್ಲರ ಗಮನ ಸೆಳೆದಿದೆ.

8 / 8
Follow us
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ