AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಗುರುವಿಗೆ ತಕ್ಕ ಶಿಷ್ಯ: ವಿರಾಟ್ ಕೊಹ್ಲಿಯ ನಡೆಗೆ ಭಾರೀ ಮೆಚ್ಚುಗೆ

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಆರಂಭ ಒದಗಿಸಿದ್ದರು.

TV9 Web
| Edited By: |

Updated on:May 06, 2023 | 9:16 PM

Share
IPL 2023: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯಕ್ಕೂ ಮುನ್ನ ದೆಹಲಿಯ ಅರುಣ್ ಜೇಟ್ಲಿ ಮೈದಾನವು ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ಕುಮಾರ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು.

IPL 2023: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯಕ್ಕೂ ಮುನ್ನ ದೆಹಲಿಯ ಅರುಣ್ ಜೇಟ್ಲಿ ಮೈದಾನವು ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ಕುಮಾರ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು.

1 / 7
ಇತ್ತ ಮೈದಾನದ ಮತ್ತೊಂದು ಬದಿಯಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದ ಕಿಂಗ್ ಕೊಹ್ಲಿ, ಅಭ್ಯಾಸ ನಿಲ್ಲಿಸಿ ಕೋಚ್​ನತ್ತ ಧಾವಿಸಿದರು. ಅಷ್ಟೇ ಅಲ್ಲದೆ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದು ಕೆಲ ಕಾಲ ಕುಶಲೋಪರಿ ನಡೆಸಿದರು.

ಇತ್ತ ಮೈದಾನದ ಮತ್ತೊಂದು ಬದಿಯಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದ ಕಿಂಗ್ ಕೊಹ್ಲಿ, ಅಭ್ಯಾಸ ನಿಲ್ಲಿಸಿ ಕೋಚ್​ನತ್ತ ಧಾವಿಸಿದರು. ಅಷ್ಟೇ ಅಲ್ಲದೆ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದು ಕೆಲ ಕಾಲ ಕುಶಲೋಪರಿ ನಡೆಸಿದರು.

2 / 7
ಇದೀಗ ಗುರು ಶಿಷ್ಯರ ಸಂಬಂಧವನ್ನು ಸಾರುವ ರಾಜ್​ಕುಮಾರ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಕೊಹ್ಲಿ ತಮ್ಮ ಬಾಲ್ಯದ ಕೋಚ್​ಗೆ ನೀಡಿದ ಗೌರವಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದೀಗ ಗುರು ಶಿಷ್ಯರ ಸಂಬಂಧವನ್ನು ಸಾರುವ ರಾಜ್​ಕುಮಾರ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಕೊಹ್ಲಿ ತಮ್ಮ ಬಾಲ್ಯದ ಕೋಚ್​ಗೆ ನೀಡಿದ ಗೌರವಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

3 / 7
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಡುಪ್ಲೆಸಿಸ್ ಹಾಗೂ ಕೊಹ್ಲಿ ಭರ್ಜರಿ ಆರಂಭ ಒದಗಿಸಿದ್ದರು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಡುಪ್ಲೆಸಿಸ್ ಹಾಗೂ ಕೊಹ್ಲಿ ಭರ್ಜರಿ ಆರಂಭ ಒದಗಿಸಿದ್ದರು.

4 / 7
ಮೊದಲ ವಿಕೆಟ್​ಗೆ 10 ಓವರ್​ಗಳಲ್ಲಿ 82 ರನ್ ಕಲೆಹಾಕುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಈ ಹಂತದಲ್ಲಿ ಡುಪ್ಲೆಸಿಸ್ (45) ಔಟಾದರು. ಇದರ ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್​ವೆಲ್ (0) ಕೂಡ ಮಿಚೆಲ್ ಮಾರ್ಷ್​ಗೆ ವಿಕೆಟ್ ಒಪ್ಪಿಸಿದರು.

ಮೊದಲ ವಿಕೆಟ್​ಗೆ 10 ಓವರ್​ಗಳಲ್ಲಿ 82 ರನ್ ಕಲೆಹಾಕುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಈ ಹಂತದಲ್ಲಿ ಡುಪ್ಲೆಸಿಸ್ (45) ಔಟಾದರು. ಇದರ ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್​ವೆಲ್ (0) ಕೂಡ ಮಿಚೆಲ್ ಮಾರ್ಷ್​ಗೆ ವಿಕೆಟ್ ಒಪ್ಪಿಸಿದರು.

5 / 7
ಮತ್ತೊಂದೆಡೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 46 ಎಸೆತಗಳಲ್ಲಿ 55 ರನ್ ಬಾರಿಸಿ 16ನೇ ಓವರ್​ನಲ್ಲಿ ಮುಕೇಶ್ ಕುಮಾರ್​ಗೆ ವಿಕೆಟ್ ಒಪ್ಪಿಸಿದರು.

ಮತ್ತೊಂದೆಡೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 46 ಎಸೆತಗಳಲ್ಲಿ 55 ರನ್ ಬಾರಿಸಿ 16ನೇ ಓವರ್​ನಲ್ಲಿ ಮುಕೇಶ್ ಕುಮಾರ್​ಗೆ ವಿಕೆಟ್ ಒಪ್ಪಿಸಿದರು.

6 / 7
ಇನ್ನೊಂದೆಡೆ ಚೊಚ್ಚಲ ಅರ್ಧಶತಕ ಬಾರಿಸುವ ಮೂಲಕ ಮಹಿಪಾಲ್ ಲೋಮ್ರರ್ ತಂಡಕ್ಕೆ ಆಸರೆಯಾದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಆರ್​ಸಿಬಿ ತಂಡವು 4 ವಿಕೆಟ್ ನಷ್ಟಕ್ಕೆ 181 ರನ್​ ಕಲೆಹಾಕಿತು.

ಇನ್ನೊಂದೆಡೆ ಚೊಚ್ಚಲ ಅರ್ಧಶತಕ ಬಾರಿಸುವ ಮೂಲಕ ಮಹಿಪಾಲ್ ಲೋಮ್ರರ್ ತಂಡಕ್ಕೆ ಆಸರೆಯಾದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಆರ್​ಸಿಬಿ ತಂಡವು 4 ವಿಕೆಟ್ ನಷ್ಟಕ್ಕೆ 181 ರನ್​ ಕಲೆಹಾಕಿತು.

7 / 7

Published On - 9:15 pm, Sat, 6 May 23

Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ